Homeಕರ್ನಾಟಕಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ -...

ಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ – ಡಿವೈಎಫ್‌ಐ

- Advertisement -
- Advertisement -

ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ದುಷ್ಕರ್ಮಿಗಳು ದಾಂಧಲೆ ಮೆರೆಯಲು ಮಂಗಳೂರು ನಗರದ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನೇರ ಹೊಣೆ ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಗುರುವಾರ ಆರೋಪಿಸಿದೆ. ಅನೈತಿಕ ಚಟುವಟಿಕೆಗಳಿಗೆ ಮುಕ್ತ ಅವಕಾಶಕೊಟ್ಟು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಕಾರಣಕ್ಕೆ ಮತ್ತೆ ನೈತಿಕ ಪೊಲೀಸ್ ಗಿರಿ ತಲೆಎತ್ತಿ ಮಂಗಳೂರಿನ ಮಾನವನ್ನು ಹರಾಜಿಗಿಟ್ಟಿದೆ ಎಂದು ಸಂಘಟನೆ ಆರೋಪಿಸಿದೆ. ಸೆಲೂನ್ ಮೇಲೆ ರಾಮ ಸೇನಾ

ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮತ್ತು ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್, “ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಸಾಜ್ ಪಾರ್ಲರ್, ಅಕ್ರಮ ಮರಳುಗಾರಿಕೆ, ವೇಶ್ಯಾವಾಟಿಕೆ, ಜುಗಾರಿ ಅಡ್ಡೆ, ಮಡ್ಕ ಸೇರಿದಂತೆ ಹಲವು ಬಗೆಯ ಗ್ಯಾಂಬ್ಲಿಂಗ್ ಗಳು ರಾಜಾರೋಷವಾಗಿ ನಡೆಯುತ್ತಲೆ ಇದೆ. ಈ ಬಗ್ಗೆ ಡಿವೈಎಫ್ಐ ಸಂಘಟನೆ ಪ್ರಾರಂಭದಿಂದಲೇ ಆರೋಪಿಸುತ್ತಾ ಬಂದಿದ್ದರೂ, ಈಗಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಈ ಬಗ್ಗೆ ಈವರೆಗೂ ಯಾವುದೇ ಕ್ರಮಕೈಗೊಳ್ಳದೆ ಅವುಗಳಿಗೆ ಮುಕ್ತವಾಗಿ ಅವಕಾಶಕೊಟ್ಟು ನಗರದಲ್ಲಿಂದು ಹರಾಜಕತೆಯನ್ನು ಸೃಷ್ಟಿಸಿದ್ದಾರೆ.” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರಗತಿಪರರು ನಡೆಸುವ ಜನಪರ ಹೋರಾಟಗಳಿಗೆ ಅವಕಾಶಕೊಡದೆ ವಿನಾಕಾರಣ ಕೇಸು ದಾಖಲಿಸುವ ಕಮೀಷನರ್ ಅನುಪಮ್ ಅದೇ ಸಂಘಪರಿವಾರದ ಕಾರ್ಯಕ್ರಮಕ್ಕೆ ಎಲ್ಲೆಂದರಲ್ಲಿ (ಕಾನೂನು ನಿಯಮ ಮೀರಿ) ಅವಕಾಶ ಕಲ್ಪಿಸಿ ನೇರ ಬೆಂಬಲಿಸುತ್ತಾ ಬಂದ ಕಾರಣಕ್ಕೆ ಇಂದು ರಾಮ ಸೇನೆ ಕಾರ್ಯಕರ್ತರು ಮತ್ತೆ ನಗರದಲ್ಲಿ ನೈತಿಕ ಗೂಂಡಾಗಿರಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ. ಈಗಾಗಲೇ ಒಂದಷ್ಟು ನಿಯಂತ್ರಿಸಲಾಗಿದ್ದ ಸಂಘಪಾರಿವಾರದ ನೈತಿಕ ಪೊಲೀಸ್ ಗಿರಿ ಮತ್ತೆ ಪುನರಾವರ್ತಿಸುವಲ್ಲಿ ಕಮೀಷನರ್ ಅಗ್ರವಾಲ್ ನೇರ ಹೊಣೆಯಾಗಿದ್ದು ಮಂಗಳೂರು ನಗರದ ಮಾನವನ್ನು ಮತ್ತೆ ಹರಾಜು ಹಾಕಿ ತಲೆ ತಗ್ಗಿಸುವಂತೆ ಮಾಡಿದೆ” ಎಂದು ಡಿವೈಎಫ್‌ಐ ಹೇಳಿದೆ. ಸೆಲೂನ್ ಮೇಲೆ ರಾಮ ಸೇನಾ

“ನಗರದ ಪೊಲೀಸ್ ಇಲಾಖೆಯ ವೈಫಲ್ಯತೆ ಬಗ್ಗೆ ಮತ್ತು ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಅಮಾನತುಗೊಳಿಸಿ ವರ್ಗಾಹಿಸಲು ಮುಖ್ಯಮಂತ್ರಿ, ಗೃಹ ಮಂತ್ರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಬೇಜವಾಬ್ದಾರಿಯನ್ನು ವಹಿಸಿದ್ದಾರೆ. ನಗರದ ಪೊಲೀಸ್ ಅವ್ಯವಸ್ಥೆಯನ್ನು ಸರಿಪಡಿಸದ ಕಾರಣಕ್ಕೆ ಸಂಘಪರಿವಾರದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೂಲಕ ನಗರದಲ್ಲಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ” ಎಂದು ಸಂಘಟನೆ ಹೇಳಿದೆ.

ಈ ಎಲ್ಲಾ ಬೆಳವಣೆಗೆ ಮಂಗಳೂರು ನಗರದಲ್ಲಿ ಮತ್ತೆ ಅಶಾಂತಿ ಸೃಷ್ಟಿಸಿ ಸಾಮಾರಸ್ಯ ಕದಡಲು ಅವಕಾಶ ಮಾಡಿಕೊಡುವಂತಹ ಬೆಳವಣೆಗೆಗೂ ಕಾಂಗ್ರೇಸ್ ಸರಕಾರವೂ ನೇರ ಹೊಣೆ ಹೊರಬೇಕಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಕರ್ನಾಟಕ ರಾಜ್ಯ ಸರಕಾರ ಈ ಕೂಡಲೇ ಎಚ್ಚೆತ್ತು ರಾಮ ಸೇನೆ ನಡೆಸಿದ ದಾಂಧಲೆ ನೈತಿಕಪೊಲೀಸ್ ಗಿರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿರುವ ಡಿವೈಎಫ್‌ಐ,  ಮಂಗಳೂರು ನಗರದಲ್ಲಿ ಹದಗೆಟ್ಟಿರುವ ಪೊಲೀಸ್ ವ್ಯವಸ್ಥೆಯನ್ನು ಸರಿಪಡಿಸಬೇಕು. ಅಕ್ರಮ ಚಟುವಟಿಕೆ ನಿಯಂತ್ರಿಸಲಾಗದ ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಕೂಡಲೇ ಅಮಾನತುಗೊಳಿಸಿ ವರ್ಗಾಹಿಸಬೇಕು” ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಇದನ್ನೂಓದಿ:  ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...