Homeಕರ್ನಾಟಕಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ -...

ಸೆಲೂನ್ ಮೇಲೆ ರಾಮ ಸೇನಾ ದುಷ್ಕರ್ಮಿಗಳ ದಾಳಿಗೆ ಮಂಗಳೂರು ಪೊಲೀಸ್ ಕಮೀಷನರ್ ನೇರ ಹೊಣೆ – ಡಿವೈಎಫ್‌ಐ

- Advertisement -
- Advertisement -

ಮಂಗಳೂರಿನ ಬಿಜೈ ಬಳಿಯ ಕಲರ್ಸ್ ಯುನಿಸೆಕ್ಸ್ ಸೆಲೂನ್ ಮೇಲೆ ರಾಮ ಸೇನೆ ದುಷ್ಕರ್ಮಿಗಳು ದಾಂಧಲೆ ಮೆರೆಯಲು ಮಂಗಳೂರು ನಗರದ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನೇರ ಹೊಣೆ ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಗುರುವಾರ ಆರೋಪಿಸಿದೆ. ಅನೈತಿಕ ಚಟುವಟಿಕೆಗಳಿಗೆ ಮುಕ್ತ ಅವಕಾಶಕೊಟ್ಟು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವ ಕಾರಣಕ್ಕೆ ಮತ್ತೆ ನೈತಿಕ ಪೊಲೀಸ್ ಗಿರಿ ತಲೆಎತ್ತಿ ಮಂಗಳೂರಿನ ಮಾನವನ್ನು ಹರಾಜಿಗಿಟ್ಟಿದೆ ಎಂದು ಸಂಘಟನೆ ಆರೋಪಿಸಿದೆ. ಸೆಲೂನ್ ಮೇಲೆ ರಾಮ ಸೇನಾ

ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮತ್ತು ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್, “ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಮಸಾಜ್ ಪಾರ್ಲರ್, ಅಕ್ರಮ ಮರಳುಗಾರಿಕೆ, ವೇಶ್ಯಾವಾಟಿಕೆ, ಜುಗಾರಿ ಅಡ್ಡೆ, ಮಡ್ಕ ಸೇರಿದಂತೆ ಹಲವು ಬಗೆಯ ಗ್ಯಾಂಬ್ಲಿಂಗ್ ಗಳು ರಾಜಾರೋಷವಾಗಿ ನಡೆಯುತ್ತಲೆ ಇದೆ. ಈ ಬಗ್ಗೆ ಡಿವೈಎಫ್ಐ ಸಂಘಟನೆ ಪ್ರಾರಂಭದಿಂದಲೇ ಆರೋಪಿಸುತ್ತಾ ಬಂದಿದ್ದರೂ, ಈಗಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಈ ಬಗ್ಗೆ ಈವರೆಗೂ ಯಾವುದೇ ಕ್ರಮಕೈಗೊಳ್ಳದೆ ಅವುಗಳಿಗೆ ಮುಕ್ತವಾಗಿ ಅವಕಾಶಕೊಟ್ಟು ನಗರದಲ್ಲಿಂದು ಹರಾಜಕತೆಯನ್ನು ಸೃಷ್ಟಿಸಿದ್ದಾರೆ.” ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪ್ರಗತಿಪರರು ನಡೆಸುವ ಜನಪರ ಹೋರಾಟಗಳಿಗೆ ಅವಕಾಶಕೊಡದೆ ವಿನಾಕಾರಣ ಕೇಸು ದಾಖಲಿಸುವ ಕಮೀಷನರ್ ಅನುಪಮ್ ಅದೇ ಸಂಘಪರಿವಾರದ ಕಾರ್ಯಕ್ರಮಕ್ಕೆ ಎಲ್ಲೆಂದರಲ್ಲಿ (ಕಾನೂನು ನಿಯಮ ಮೀರಿ) ಅವಕಾಶ ಕಲ್ಪಿಸಿ ನೇರ ಬೆಂಬಲಿಸುತ್ತಾ ಬಂದ ಕಾರಣಕ್ಕೆ ಇಂದು ರಾಮ ಸೇನೆ ಕಾರ್ಯಕರ್ತರು ಮತ್ತೆ ನಗರದಲ್ಲಿ ನೈತಿಕ ಗೂಂಡಾಗಿರಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ. ಈಗಾಗಲೇ ಒಂದಷ್ಟು ನಿಯಂತ್ರಿಸಲಾಗಿದ್ದ ಸಂಘಪಾರಿವಾರದ ನೈತಿಕ ಪೊಲೀಸ್ ಗಿರಿ ಮತ್ತೆ ಪುನರಾವರ್ತಿಸುವಲ್ಲಿ ಕಮೀಷನರ್ ಅಗ್ರವಾಲ್ ನೇರ ಹೊಣೆಯಾಗಿದ್ದು ಮಂಗಳೂರು ನಗರದ ಮಾನವನ್ನು ಮತ್ತೆ ಹರಾಜು ಹಾಕಿ ತಲೆ ತಗ್ಗಿಸುವಂತೆ ಮಾಡಿದೆ” ಎಂದು ಡಿವೈಎಫ್‌ಐ ಹೇಳಿದೆ. ಸೆಲೂನ್ ಮೇಲೆ ರಾಮ ಸೇನಾ

“ನಗರದ ಪೊಲೀಸ್ ಇಲಾಖೆಯ ವೈಫಲ್ಯತೆ ಬಗ್ಗೆ ಮತ್ತು ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಅಮಾನತುಗೊಳಿಸಿ ವರ್ಗಾಹಿಸಲು ಮುಖ್ಯಮಂತ್ರಿ, ಗೃಹ ಮಂತ್ರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಕ್ರಮಕೈಗೊಳ್ಳುವಲ್ಲಿ ಬೇಜವಾಬ್ದಾರಿಯನ್ನು ವಹಿಸಿದ್ದಾರೆ. ನಗರದ ಪೊಲೀಸ್ ಅವ್ಯವಸ್ಥೆಯನ್ನು ಸರಿಪಡಿಸದ ಕಾರಣಕ್ಕೆ ಸಂಘಪರಿವಾರದ ಕಾರ್ಯಕರ್ತರು ಮತ್ತೆ ನೈತಿಕ ಪೊಲೀಸ್ ಗಿರಿ ಮೂಲಕ ನಗರದಲ್ಲಿ ಮೆರೆಯಲು ಅವಕಾಶ ಮಾಡಿಕೊಟ್ಟಂತಾಗಿದೆ” ಎಂದು ಸಂಘಟನೆ ಹೇಳಿದೆ.

ಈ ಎಲ್ಲಾ ಬೆಳವಣೆಗೆ ಮಂಗಳೂರು ನಗರದಲ್ಲಿ ಮತ್ತೆ ಅಶಾಂತಿ ಸೃಷ್ಟಿಸಿ ಸಾಮಾರಸ್ಯ ಕದಡಲು ಅವಕಾಶ ಮಾಡಿಕೊಡುವಂತಹ ಬೆಳವಣೆಗೆಗೂ ಕಾಂಗ್ರೇಸ್ ಸರಕಾರವೂ ನೇರ ಹೊಣೆ ಹೊರಬೇಕಾಗಿದೆ ಎಂದು ಡಿವೈಎಫ್‌ಐ ಹೇಳಿದೆ.

ಕರ್ನಾಟಕ ರಾಜ್ಯ ಸರಕಾರ ಈ ಕೂಡಲೇ ಎಚ್ಚೆತ್ತು ರಾಮ ಸೇನೆ ನಡೆಸಿದ ದಾಂಧಲೆ ನೈತಿಕಪೊಲೀಸ್ ಗಿರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿರುವ ಡಿವೈಎಫ್‌ಐ,  ಮಂಗಳೂರು ನಗರದಲ್ಲಿ ಹದಗೆಟ್ಟಿರುವ ಪೊಲೀಸ್ ವ್ಯವಸ್ಥೆಯನ್ನು ಸರಿಪಡಿಸಬೇಕು. ಅಕ್ರಮ ಚಟುವಟಿಕೆ ನಿಯಂತ್ರಿಸಲಾಗದ ಕಳಂಕಿತ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲರನ್ನು ಕೂಡಲೇ ಅಮಾನತುಗೊಳಿಸಿ ವರ್ಗಾಹಿಸಬೇಕು” ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಇದನ್ನೂಓದಿ:  ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ಬಂಧನ ಕೇಂದ್ರದಿಂದ ವಿದೇಶಿಯರ ಗಡೀಪಾರು ಮಾಡುವಲ್ಲಿ ಅಸ್ಸಾಂ ಸರ್ಕಾರ ವಿಫಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...