Homeಮುಖಪುಟಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

ಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

- Advertisement -
- Advertisement -

ತರಾವರಿ ಪುಸ್ತಕಗಳ ಗ್ರಂಥಾಲಯವಿರುವ ಕಟಿಂಗ್ ಶಾಪಿನ ಫೋಟೋವೊಂದು ವೈರಲ್ ಆಗಿ ಓಡಾಡುತ್ತಿತ್ತು. ಮೇಲುನೋಟಕ್ಕೆ ಇದೊಂದು ಪೋಟೋಶಾಪ್ ಮಾಡಿದ ಫೇಕ್ ಫೋಟೋ ಇರಬೇಕು ಅಂದುಕೊಂಡೆ. ನಂತರ ಇದನ್ನು ಪರಿಶೀಲಿಸಲು ಗೂಗಲ್ ಮಾಡಿದಾಗ,  ಈ ಫೋಟೋದ ನಿಜದ ಕಥೆ ಹೇಳುವ ಹಿಂದೂ ಪತ್ರಿಕೆಯ ವರದಿಯೊಂದು ಕಾಣಿಸಿತು. ಈ ಫೋಟೋದ ಬಗೆಗಿನ ಕುತೂಹಲಕಾರಿ ಸಂಗತಿ ತಿಳಿಯಲೆಂದು ವರದಿಯನ್ನು ಅನುವಾದಿಸಿದ್ದೇನೆ.

ಪೊನ್ನ ಮರಿಯಪ್ಪ ಹದಿನೆಂಟು ವರ್ಷ ದಿನಗೂಲಿ ಮಾಡಿ ಅದರಲ್ಲಿ ಒಂದಷ್ಟು ಹಣವನ್ನು ಉಳಿತಾಯ ಮಾಡುತ್ತಾನೆ. ಈ ಹಣದಲ್ಲಿ ತನ್ನ ಬಹುದಿನದ ಕನಸಾದ ತನ್ನದೇ `ಸುರೇಶ್ ಬ್ಯೂಟಿ ಸೆಂಟರ್’ ಹೆಸರಿನ ಕಟಿಂಗ್ ಶಾಪೊಂದನ್ನು ತಮಿಳುನಾಡಿನ ತೂತುಕುಡಿ ಜಿಲ್ಲೆಯ ಮಿಲ್ಲೆರ್ ಪುರಂ ನಲ್ಲಿ 2014 ರಲ್ಲಿ ತೆರೆಯುತ್ತಾನೆ.

ಸಹಜವಾಗಿ ಕಟಿಂಗ್ ಮಾಡಿಸಲು ಬಂದವರು ತಮ್ಮ ಸರತಿ ಬರುವ ತನಕ ಕಾಯಬೇಕಾಗಿತ್ತು. ಈ ಅವಧಿಯಲ್ಲಿ ಎಲ್ಲರೂ ತಮ್ಮ ಮೊಬೈಲಿನಲ್ಲಿ ಮುಳುಗಿರುತ್ತಿದ್ದರು. ಕೆಲವರು ಶಾಪಲ್ಲಿನ ಟಿವಿ ನೋಡುತ್ತಿದ್ದರು. ಹೀಗಿರುವಾಗ ಮರಿಯಪ್ಪನಿಗೆ ಸರತಿ ಬರುವ ತನಕ ಕಾಯುವವರ ಕೈಗೆ ಪುಸ್ತಕಗಳನ್ನು ಯಾಕೆ ಕೊಡಬಾರದು ಎನ್ನುವ ಯೋಚನೆ ಹೊಳೆಯುತ್ತದೆ. ಮರುದಿನವೇ ತನ್ನ ಶಾಪಿನಿಂದ ಟಿ.ವಿಯನ್ನು ತೆಗೆಯುತ್ತಾನೆ. ಆಗ ಟಿವಿ ಇಟ್ಟಿದ್ದ ಜಾಗದಲ್ಲಿ  ದಿನ ಪತ್ರಿಕೆಗಳ ಜತೆ 5 ಪುಸ್ತಕಗಳನ್ನು ಇಡುತ್ತಾರೆ. ಈ ಐದೂ ಪುಸ್ತಕಗಳು ಕಾರ್ಲ್ ಮಾರ್ಕ್ಸ್, ಅಬ್ರಾಹಂ ಲಿಂಕನ್, ಪೆರಿಯಾರ್, ಅಣ್ಣಾದೊರೈ, ಅಬ್ದುಲ್ ಕಲಾಮ್ ಕುರಿತಾದ ಆತ್ಮಕಥನ/ಜೀವನ ಚರಿತ್ರೆಗಳು.  ಕೆಲವೇ ದಿನಗಳಲ್ಲಿ ಮೊಬೈಲ್ ನೋಡುವವರು ಈ ಪುಸ್ತಕಗಳನ್ನು ಹಿಡಿದು ತಿರುವಿಹಾಕಿ ಹಾಗೆ ಪುಸ್ತಕದ ಜಾಗಕ್ಕೆ ಇಡತೊಡಗಿದರು, ಕೆಲವರು ಚೂರು ಚೂರು ಓದತೊಡಗಿದರು. ಇದು ಮರಿಯಪ್ಪನ ಖುಷಿಯನ್ನು ಇಮ್ಮಡಿಗೊಳಿಸಿತು.

ಆ ನಂತರ ಮರಿಯಪ್ಪ ಹಳೆ ಪುಸ್ತಕ ಮಾರುವವರಲ್ಲಿ, ಹೆಚ್ಚು ರಿಯಾಯಿತಿ ದರದಲ್ಲಿ ಮಾರುವ ಪುಸ್ತಕ ಮೇಳಗಳಲ್ಲಿ ಪುಸ್ತಕಗಳನ್ನು ಕೊಂಡು ತನ್ನ ಶಾಪಿಗೆ ತರತೊಡಗುತ್ತಾನೆ. 2015 ರ ಕೊನೆಗೆ ಶಾಪಿನ ಒಂದು ಗೋಡೆಯನ್ನು ಪುಸ್ತಕಗಳ ಕಪಾಟಿಗಾಗಿ ಸಿದ್ದಗೊಳಿಸುತ್ತಾನೆ. ತತ್ವಶಾಸ್ತ್ರ, ವಿಜ್ಞಾನ, ಜನಪದ ಕತೆ, ಧರ್ಮ, ನೀತಿಕತೆಗಳು, ಮಕ್ಕಳಿಗೆ ಬೇಕಾಗುವ ರಮ್ಯ ಕಥೆಗಳು ಹೀಗೆ ಹಲವು ವೈವಿಧ್ಯಮಯ 250 ಪುಸ್ತಗಳು ಸೇರ್ಪಡೆಗೊಳ್ಳುತ್ತವೆ.

“ಶಾಪಿಗೆ ಬಂದು ಅವರ ಸರತಿ ಬರುವವರೆಗೆ ಕಾಯುವ ಗಿರಾಕಿಗಳನ್ನು ದಯವಿಟ್ಟು ಮೊಬೈಲ್ ಬಳಸಬೇಡಿ, ಇಲ್ಲಿ ಒಳ್ಳೊಳ್ಳೆ ಪುಸ್ತಕಗಳಿವೆ ಕಟಿಂಗ್ ಮಾಡಿಸಿಕೊಳ್ಳುವ ತನಕ ಪುಸ್ತಕ ಓದಿ” ಎಂದು ಆತ್ಮೀಯವಾಗಿ ಕೇಳಿಕೊಳ್ಳುವೆ. ಈ ತನಕ ಯಾರೂ ನನ್ನ ಮಾತನ್ನು ಮೀರಿಲ್ಲ. ಅದು ನನಗೆ ಖುಷಿಕೊಡುತ್ತದೆ ಎನ್ನುತ್ತಾನೆ ಮರಿಯಪ್ಪ.

ಶಾಲಾ ಮಕ್ಕಳು ಬಂದಾಗ, ನೀವು ಪುಸ್ತಕ ಓದುವುದು ಮಾತ್ರವಲ್ಲ, ನೀವು ಓದಿದ ಭಾಗದ ಮುಖ್ಯಾಂಶಗಳನ್ನು ಬರೆದು ಹೋಗಿ ಎಂದು ಹೇಳುತ್ತಾರೆ. ಹೀಗೆ ವಿವರ ಟಿಪ್ಪಣಿ ಪರಿಚಯ ಬರೆಯುವುದಕ್ಕಾಗಿ 2018 ರಿಂದ ಒಂದು ದಾಖಲಾತಿ ಪುಸ್ತಕವನ್ನೂ ಇಟ್ಟಿದ್ದಾರೆ. ಅದರಲ್ಲಿ ಪುಸ್ತಕ ಓದಿದವರು ಅಭಿಪ್ರಾಯ ಬರೆದು ಹೋಗುತ್ತಾರೆ. ಈತನಕ 300 ವಿದ್ಯಾರ್ಥಿಗಳು ತಾವು ಓದಿದ ಪುಸ್ತಕದ ಬಗ್ಗೆ ಅಭಿಪ್ರಾಯ, ತಮ್ಮ ಹೆಸರು ಮತ್ತು ಶಾಲೆಯ ವಿಳಾಸವನ್ನು ಬರೆದು ಹೋಗಿದ್ದಾರೆ.

ಕನಿಷ್ಠ ಒಂದು ಪುಸ್ತಕದ 10 ಪುಟ ಓದಿ, ಅದರ ಬಗ್ಗೆ ಒಂದು ಟಿಪ್ಪಣಿ ಬರೆದರೆ ಹೇರ್ ಕಟ್ ಗೆ 80 ರೂ ಇದ್ದರೆ.  30 ರೂ ರಿಯಾಯಿತಿ ಕೊಡುವುದಾಗಿ ಹೇಳಿ 2020 ರ ಹೊಸ ವರ್ಷವನ್ನು ಆಚರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮರಿಯಪ್ಪನವರ ಸಲೂನ್ ಲೈಬ್ರರಿಯ ಫೋಟೋ ವೈರಲ್ ಆಗುವುದಕ್ಕಿಂತ ಮೊದಲು ಆರು ವರ್ಷ ಯಾವುದೇ ಪ್ರಚಾರ ಬಯಸದೆ ಮರಿಯಪ್ಪ ತನ್ನ ಸಲೂನಲ್ಲಿ ಓದು ಅಭಿಯಾನ ಶುರುಮಾಡಿದ್ದರು. ಮರಿಯಪ್ಪನ ಪುಸ್ತಕ ಪ್ರೀತಿ ನೋಡಿ ಪ್ರಸಿದ್ಧ ಪುಸ್ತಕ ಪ್ರಕಾಶನ Hatchette Indiaದವರು ಒಂದಷ್ಟು ಇಂಗ್ಲೀಷ್ ಪುಸ್ತಕಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ. ಇದರಿಂದ ಆ ತನಕ ಬರಿ ತಮಿಳು ಪುಸ್ತಕ ಇಟ್ಟಿದ್ದ ಮರಿಯಪ್ಪ ಇದೀಗ ಇಂಗ್ಲೀಷ್ ಪುಸ್ತಕಗಳನ್ನು ಇಟ್ಟಿದ್ದಾರೆ. ತೂತುಕುಡಿ ಎಂ.ಪಿ. ಕನಿಮೋಜಿ ಯವರು 50 ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ಮರಿಯಪ್ಪನ ಸಲೂನಿನಲ್ಲಿ 900 ರಷ್ಟು ವೈವಿಧ್ಯಮಯ ತಮಿಳು, ಇಂಗ್ಲೀಷ್ ಪುಸ್ತಕಗಳ ಸಂಗ್ರಹವಾಗಿದೆ. ನಿರಂತರವಾಗಿ ಓದುತ್ತಿದ್ದರೆ ಹೊಸ ಹೊಸ ಆಲೋಚನೆಗಳು ಬರುತ್ತವೆ ಎಂದು ಮರಿಯಪ್ಪ ಹೇಳುತ್ತಾರೆ.

ತನ್ನ ವಿದ್ಯಭ್ಯಾಸ ಕುಂಟಿತವಾದರೂ ಬೇರೆಯವರು ಓದಬೇಕು, ಓದಿ ಜ್ಞಾನ ಸಂಪಾದಿಸಬೇಕೆಂದು ಕನಸುವ ಪೊನ್ನ ಮರಿಯಪ್ಪನವರ ನಡೆಯಿಂದ  ಸೆಲೂನ್ ಶಾಪ್ ನ ಸ್ಥಾಪಿತ ಕಲ್ಪನೆಯನ್ನೆ ಹೊಡೆದು ಹಾಕಿದ್ದಾರೆ.

  • (ಕೃಪೆ): ದ ಹಿಂದು
  • ಮೂಲ: ಸೋಮ ಬಸು
  • ಅನುವಾದ: ಅರುಣ್ ಜೋಳದಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...