Homeಮುಖಪುಟಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

ಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

- Advertisement -
- Advertisement -

ತರಾವರಿ ಪುಸ್ತಕಗಳ ಗ್ರಂಥಾಲಯವಿರುವ ಕಟಿಂಗ್ ಶಾಪಿನ ಫೋಟೋವೊಂದು ವೈರಲ್ ಆಗಿ ಓಡಾಡುತ್ತಿತ್ತು. ಮೇಲುನೋಟಕ್ಕೆ ಇದೊಂದು ಪೋಟೋಶಾಪ್ ಮಾಡಿದ ಫೇಕ್ ಫೋಟೋ ಇರಬೇಕು ಅಂದುಕೊಂಡೆ. ನಂತರ ಇದನ್ನು ಪರಿಶೀಲಿಸಲು ಗೂಗಲ್ ಮಾಡಿದಾಗ,  ಈ ಫೋಟೋದ ನಿಜದ ಕಥೆ ಹೇಳುವ ಹಿಂದೂ ಪತ್ರಿಕೆಯ ವರದಿಯೊಂದು ಕಾಣಿಸಿತು. ಈ ಫೋಟೋದ ಬಗೆಗಿನ ಕುತೂಹಲಕಾರಿ ಸಂಗತಿ ತಿಳಿಯಲೆಂದು ವರದಿಯನ್ನು ಅನುವಾದಿಸಿದ್ದೇನೆ.

ಪೊನ್ನ ಮರಿಯಪ್ಪ ಹದಿನೆಂಟು ವರ್ಷ ದಿನಗೂಲಿ ಮಾಡಿ ಅದರಲ್ಲಿ ಒಂದಷ್ಟು ಹಣವನ್ನು ಉಳಿತಾಯ ಮಾಡುತ್ತಾನೆ. ಈ ಹಣದಲ್ಲಿ ತನ್ನ ಬಹುದಿನದ ಕನಸಾದ ತನ್ನದೇ `ಸುರೇಶ್ ಬ್ಯೂಟಿ ಸೆಂಟರ್’ ಹೆಸರಿನ ಕಟಿಂಗ್ ಶಾಪೊಂದನ್ನು ತಮಿಳುನಾಡಿನ ತೂತುಕುಡಿ ಜಿಲ್ಲೆಯ ಮಿಲ್ಲೆರ್ ಪುರಂ ನಲ್ಲಿ 2014 ರಲ್ಲಿ ತೆರೆಯುತ್ತಾನೆ.

ಸಹಜವಾಗಿ ಕಟಿಂಗ್ ಮಾಡಿಸಲು ಬಂದವರು ತಮ್ಮ ಸರತಿ ಬರುವ ತನಕ ಕಾಯಬೇಕಾಗಿತ್ತು. ಈ ಅವಧಿಯಲ್ಲಿ ಎಲ್ಲರೂ ತಮ್ಮ ಮೊಬೈಲಿನಲ್ಲಿ ಮುಳುಗಿರುತ್ತಿದ್ದರು. ಕೆಲವರು ಶಾಪಲ್ಲಿನ ಟಿವಿ ನೋಡುತ್ತಿದ್ದರು. ಹೀಗಿರುವಾಗ ಮರಿಯಪ್ಪನಿಗೆ ಸರತಿ ಬರುವ ತನಕ ಕಾಯುವವರ ಕೈಗೆ ಪುಸ್ತಕಗಳನ್ನು ಯಾಕೆ ಕೊಡಬಾರದು ಎನ್ನುವ ಯೋಚನೆ ಹೊಳೆಯುತ್ತದೆ. ಮರುದಿನವೇ ತನ್ನ ಶಾಪಿನಿಂದ ಟಿ.ವಿಯನ್ನು ತೆಗೆಯುತ್ತಾನೆ. ಆಗ ಟಿವಿ ಇಟ್ಟಿದ್ದ ಜಾಗದಲ್ಲಿ  ದಿನ ಪತ್ರಿಕೆಗಳ ಜತೆ 5 ಪುಸ್ತಕಗಳನ್ನು ಇಡುತ್ತಾರೆ. ಈ ಐದೂ ಪುಸ್ತಕಗಳು ಕಾರ್ಲ್ ಮಾರ್ಕ್ಸ್, ಅಬ್ರಾಹಂ ಲಿಂಕನ್, ಪೆರಿಯಾರ್, ಅಣ್ಣಾದೊರೈ, ಅಬ್ದುಲ್ ಕಲಾಮ್ ಕುರಿತಾದ ಆತ್ಮಕಥನ/ಜೀವನ ಚರಿತ್ರೆಗಳು.  ಕೆಲವೇ ದಿನಗಳಲ್ಲಿ ಮೊಬೈಲ್ ನೋಡುವವರು ಈ ಪುಸ್ತಕಗಳನ್ನು ಹಿಡಿದು ತಿರುವಿಹಾಕಿ ಹಾಗೆ ಪುಸ್ತಕದ ಜಾಗಕ್ಕೆ ಇಡತೊಡಗಿದರು, ಕೆಲವರು ಚೂರು ಚೂರು ಓದತೊಡಗಿದರು. ಇದು ಮರಿಯಪ್ಪನ ಖುಷಿಯನ್ನು ಇಮ್ಮಡಿಗೊಳಿಸಿತು.

ಆ ನಂತರ ಮರಿಯಪ್ಪ ಹಳೆ ಪುಸ್ತಕ ಮಾರುವವರಲ್ಲಿ, ಹೆಚ್ಚು ರಿಯಾಯಿತಿ ದರದಲ್ಲಿ ಮಾರುವ ಪುಸ್ತಕ ಮೇಳಗಳಲ್ಲಿ ಪುಸ್ತಕಗಳನ್ನು ಕೊಂಡು ತನ್ನ ಶಾಪಿಗೆ ತರತೊಡಗುತ್ತಾನೆ. 2015 ರ ಕೊನೆಗೆ ಶಾಪಿನ ಒಂದು ಗೋಡೆಯನ್ನು ಪುಸ್ತಕಗಳ ಕಪಾಟಿಗಾಗಿ ಸಿದ್ದಗೊಳಿಸುತ್ತಾನೆ. ತತ್ವಶಾಸ್ತ್ರ, ವಿಜ್ಞಾನ, ಜನಪದ ಕತೆ, ಧರ್ಮ, ನೀತಿಕತೆಗಳು, ಮಕ್ಕಳಿಗೆ ಬೇಕಾಗುವ ರಮ್ಯ ಕಥೆಗಳು ಹೀಗೆ ಹಲವು ವೈವಿಧ್ಯಮಯ 250 ಪುಸ್ತಗಳು ಸೇರ್ಪಡೆಗೊಳ್ಳುತ್ತವೆ.

“ಶಾಪಿಗೆ ಬಂದು ಅವರ ಸರತಿ ಬರುವವರೆಗೆ ಕಾಯುವ ಗಿರಾಕಿಗಳನ್ನು ದಯವಿಟ್ಟು ಮೊಬೈಲ್ ಬಳಸಬೇಡಿ, ಇಲ್ಲಿ ಒಳ್ಳೊಳ್ಳೆ ಪುಸ್ತಕಗಳಿವೆ ಕಟಿಂಗ್ ಮಾಡಿಸಿಕೊಳ್ಳುವ ತನಕ ಪುಸ್ತಕ ಓದಿ” ಎಂದು ಆತ್ಮೀಯವಾಗಿ ಕೇಳಿಕೊಳ್ಳುವೆ. ಈ ತನಕ ಯಾರೂ ನನ್ನ ಮಾತನ್ನು ಮೀರಿಲ್ಲ. ಅದು ನನಗೆ ಖುಷಿಕೊಡುತ್ತದೆ ಎನ್ನುತ್ತಾನೆ ಮರಿಯಪ್ಪ.

ಶಾಲಾ ಮಕ್ಕಳು ಬಂದಾಗ, ನೀವು ಪುಸ್ತಕ ಓದುವುದು ಮಾತ್ರವಲ್ಲ, ನೀವು ಓದಿದ ಭಾಗದ ಮುಖ್ಯಾಂಶಗಳನ್ನು ಬರೆದು ಹೋಗಿ ಎಂದು ಹೇಳುತ್ತಾರೆ. ಹೀಗೆ ವಿವರ ಟಿಪ್ಪಣಿ ಪರಿಚಯ ಬರೆಯುವುದಕ್ಕಾಗಿ 2018 ರಿಂದ ಒಂದು ದಾಖಲಾತಿ ಪುಸ್ತಕವನ್ನೂ ಇಟ್ಟಿದ್ದಾರೆ. ಅದರಲ್ಲಿ ಪುಸ್ತಕ ಓದಿದವರು ಅಭಿಪ್ರಾಯ ಬರೆದು ಹೋಗುತ್ತಾರೆ. ಈತನಕ 300 ವಿದ್ಯಾರ್ಥಿಗಳು ತಾವು ಓದಿದ ಪುಸ್ತಕದ ಬಗ್ಗೆ ಅಭಿಪ್ರಾಯ, ತಮ್ಮ ಹೆಸರು ಮತ್ತು ಶಾಲೆಯ ವಿಳಾಸವನ್ನು ಬರೆದು ಹೋಗಿದ್ದಾರೆ.

ಕನಿಷ್ಠ ಒಂದು ಪುಸ್ತಕದ 10 ಪುಟ ಓದಿ, ಅದರ ಬಗ್ಗೆ ಒಂದು ಟಿಪ್ಪಣಿ ಬರೆದರೆ ಹೇರ್ ಕಟ್ ಗೆ 80 ರೂ ಇದ್ದರೆ.  30 ರೂ ರಿಯಾಯಿತಿ ಕೊಡುವುದಾಗಿ ಹೇಳಿ 2020 ರ ಹೊಸ ವರ್ಷವನ್ನು ಆಚರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮರಿಯಪ್ಪನವರ ಸಲೂನ್ ಲೈಬ್ರರಿಯ ಫೋಟೋ ವೈರಲ್ ಆಗುವುದಕ್ಕಿಂತ ಮೊದಲು ಆರು ವರ್ಷ ಯಾವುದೇ ಪ್ರಚಾರ ಬಯಸದೆ ಮರಿಯಪ್ಪ ತನ್ನ ಸಲೂನಲ್ಲಿ ಓದು ಅಭಿಯಾನ ಶುರುಮಾಡಿದ್ದರು. ಮರಿಯಪ್ಪನ ಪುಸ್ತಕ ಪ್ರೀತಿ ನೋಡಿ ಪ್ರಸಿದ್ಧ ಪುಸ್ತಕ ಪ್ರಕಾಶನ Hatchette Indiaದವರು ಒಂದಷ್ಟು ಇಂಗ್ಲೀಷ್ ಪುಸ್ತಕಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ. ಇದರಿಂದ ಆ ತನಕ ಬರಿ ತಮಿಳು ಪುಸ್ತಕ ಇಟ್ಟಿದ್ದ ಮರಿಯಪ್ಪ ಇದೀಗ ಇಂಗ್ಲೀಷ್ ಪುಸ್ತಕಗಳನ್ನು ಇಟ್ಟಿದ್ದಾರೆ. ತೂತುಕುಡಿ ಎಂ.ಪಿ. ಕನಿಮೋಜಿ ಯವರು 50 ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ಮರಿಯಪ್ಪನ ಸಲೂನಿನಲ್ಲಿ 900 ರಷ್ಟು ವೈವಿಧ್ಯಮಯ ತಮಿಳು, ಇಂಗ್ಲೀಷ್ ಪುಸ್ತಕಗಳ ಸಂಗ್ರಹವಾಗಿದೆ. ನಿರಂತರವಾಗಿ ಓದುತ್ತಿದ್ದರೆ ಹೊಸ ಹೊಸ ಆಲೋಚನೆಗಳು ಬರುತ್ತವೆ ಎಂದು ಮರಿಯಪ್ಪ ಹೇಳುತ್ತಾರೆ.

ತನ್ನ ವಿದ್ಯಭ್ಯಾಸ ಕುಂಟಿತವಾದರೂ ಬೇರೆಯವರು ಓದಬೇಕು, ಓದಿ ಜ್ಞಾನ ಸಂಪಾದಿಸಬೇಕೆಂದು ಕನಸುವ ಪೊನ್ನ ಮರಿಯಪ್ಪನವರ ನಡೆಯಿಂದ  ಸೆಲೂನ್ ಶಾಪ್ ನ ಸ್ಥಾಪಿತ ಕಲ್ಪನೆಯನ್ನೆ ಹೊಡೆದು ಹಾಕಿದ್ದಾರೆ.

  • (ಕೃಪೆ): ದ ಹಿಂದು
  • ಮೂಲ: ಸೋಮ ಬಸು
  • ಅನುವಾದ: ಅರುಣ್ ಜೋಳದಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...