Homeಮುಖಪುಟಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

ಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

- Advertisement -
- Advertisement -

ತರಾವರಿ ಪುಸ್ತಕಗಳ ಗ್ರಂಥಾಲಯವಿರುವ ಕಟಿಂಗ್ ಶಾಪಿನ ಫೋಟೋವೊಂದು ವೈರಲ್ ಆಗಿ ಓಡಾಡುತ್ತಿತ್ತು. ಮೇಲುನೋಟಕ್ಕೆ ಇದೊಂದು ಪೋಟೋಶಾಪ್ ಮಾಡಿದ ಫೇಕ್ ಫೋಟೋ ಇರಬೇಕು ಅಂದುಕೊಂಡೆ. ನಂತರ ಇದನ್ನು ಪರಿಶೀಲಿಸಲು ಗೂಗಲ್ ಮಾಡಿದಾಗ,  ಈ ಫೋಟೋದ ನಿಜದ ಕಥೆ ಹೇಳುವ ಹಿಂದೂ ಪತ್ರಿಕೆಯ ವರದಿಯೊಂದು ಕಾಣಿಸಿತು. ಈ ಫೋಟೋದ ಬಗೆಗಿನ ಕುತೂಹಲಕಾರಿ ಸಂಗತಿ ತಿಳಿಯಲೆಂದು ವರದಿಯನ್ನು ಅನುವಾದಿಸಿದ್ದೇನೆ.

ಪೊನ್ನ ಮರಿಯಪ್ಪ ಹದಿನೆಂಟು ವರ್ಷ ದಿನಗೂಲಿ ಮಾಡಿ ಅದರಲ್ಲಿ ಒಂದಷ್ಟು ಹಣವನ್ನು ಉಳಿತಾಯ ಮಾಡುತ್ತಾನೆ. ಈ ಹಣದಲ್ಲಿ ತನ್ನ ಬಹುದಿನದ ಕನಸಾದ ತನ್ನದೇ `ಸುರೇಶ್ ಬ್ಯೂಟಿ ಸೆಂಟರ್’ ಹೆಸರಿನ ಕಟಿಂಗ್ ಶಾಪೊಂದನ್ನು ತಮಿಳುನಾಡಿನ ತೂತುಕುಡಿ ಜಿಲ್ಲೆಯ ಮಿಲ್ಲೆರ್ ಪುರಂ ನಲ್ಲಿ 2014 ರಲ್ಲಿ ತೆರೆಯುತ್ತಾನೆ.

ಸಹಜವಾಗಿ ಕಟಿಂಗ್ ಮಾಡಿಸಲು ಬಂದವರು ತಮ್ಮ ಸರತಿ ಬರುವ ತನಕ ಕಾಯಬೇಕಾಗಿತ್ತು. ಈ ಅವಧಿಯಲ್ಲಿ ಎಲ್ಲರೂ ತಮ್ಮ ಮೊಬೈಲಿನಲ್ಲಿ ಮುಳುಗಿರುತ್ತಿದ್ದರು. ಕೆಲವರು ಶಾಪಲ್ಲಿನ ಟಿವಿ ನೋಡುತ್ತಿದ್ದರು. ಹೀಗಿರುವಾಗ ಮರಿಯಪ್ಪನಿಗೆ ಸರತಿ ಬರುವ ತನಕ ಕಾಯುವವರ ಕೈಗೆ ಪುಸ್ತಕಗಳನ್ನು ಯಾಕೆ ಕೊಡಬಾರದು ಎನ್ನುವ ಯೋಚನೆ ಹೊಳೆಯುತ್ತದೆ. ಮರುದಿನವೇ ತನ್ನ ಶಾಪಿನಿಂದ ಟಿ.ವಿಯನ್ನು ತೆಗೆಯುತ್ತಾನೆ. ಆಗ ಟಿವಿ ಇಟ್ಟಿದ್ದ ಜಾಗದಲ್ಲಿ  ದಿನ ಪತ್ರಿಕೆಗಳ ಜತೆ 5 ಪುಸ್ತಕಗಳನ್ನು ಇಡುತ್ತಾರೆ. ಈ ಐದೂ ಪುಸ್ತಕಗಳು ಕಾರ್ಲ್ ಮಾರ್ಕ್ಸ್, ಅಬ್ರಾಹಂ ಲಿಂಕನ್, ಪೆರಿಯಾರ್, ಅಣ್ಣಾದೊರೈ, ಅಬ್ದುಲ್ ಕಲಾಮ್ ಕುರಿತಾದ ಆತ್ಮಕಥನ/ಜೀವನ ಚರಿತ್ರೆಗಳು.  ಕೆಲವೇ ದಿನಗಳಲ್ಲಿ ಮೊಬೈಲ್ ನೋಡುವವರು ಈ ಪುಸ್ತಕಗಳನ್ನು ಹಿಡಿದು ತಿರುವಿಹಾಕಿ ಹಾಗೆ ಪುಸ್ತಕದ ಜಾಗಕ್ಕೆ ಇಡತೊಡಗಿದರು, ಕೆಲವರು ಚೂರು ಚೂರು ಓದತೊಡಗಿದರು. ಇದು ಮರಿಯಪ್ಪನ ಖುಷಿಯನ್ನು ಇಮ್ಮಡಿಗೊಳಿಸಿತು.

ಆ ನಂತರ ಮರಿಯಪ್ಪ ಹಳೆ ಪುಸ್ತಕ ಮಾರುವವರಲ್ಲಿ, ಹೆಚ್ಚು ರಿಯಾಯಿತಿ ದರದಲ್ಲಿ ಮಾರುವ ಪುಸ್ತಕ ಮೇಳಗಳಲ್ಲಿ ಪುಸ್ತಕಗಳನ್ನು ಕೊಂಡು ತನ್ನ ಶಾಪಿಗೆ ತರತೊಡಗುತ್ತಾನೆ. 2015 ರ ಕೊನೆಗೆ ಶಾಪಿನ ಒಂದು ಗೋಡೆಯನ್ನು ಪುಸ್ತಕಗಳ ಕಪಾಟಿಗಾಗಿ ಸಿದ್ದಗೊಳಿಸುತ್ತಾನೆ. ತತ್ವಶಾಸ್ತ್ರ, ವಿಜ್ಞಾನ, ಜನಪದ ಕತೆ, ಧರ್ಮ, ನೀತಿಕತೆಗಳು, ಮಕ್ಕಳಿಗೆ ಬೇಕಾಗುವ ರಮ್ಯ ಕಥೆಗಳು ಹೀಗೆ ಹಲವು ವೈವಿಧ್ಯಮಯ 250 ಪುಸ್ತಗಳು ಸೇರ್ಪಡೆಗೊಳ್ಳುತ್ತವೆ.

“ಶಾಪಿಗೆ ಬಂದು ಅವರ ಸರತಿ ಬರುವವರೆಗೆ ಕಾಯುವ ಗಿರಾಕಿಗಳನ್ನು ದಯವಿಟ್ಟು ಮೊಬೈಲ್ ಬಳಸಬೇಡಿ, ಇಲ್ಲಿ ಒಳ್ಳೊಳ್ಳೆ ಪುಸ್ತಕಗಳಿವೆ ಕಟಿಂಗ್ ಮಾಡಿಸಿಕೊಳ್ಳುವ ತನಕ ಪುಸ್ತಕ ಓದಿ” ಎಂದು ಆತ್ಮೀಯವಾಗಿ ಕೇಳಿಕೊಳ್ಳುವೆ. ಈ ತನಕ ಯಾರೂ ನನ್ನ ಮಾತನ್ನು ಮೀರಿಲ್ಲ. ಅದು ನನಗೆ ಖುಷಿಕೊಡುತ್ತದೆ ಎನ್ನುತ್ತಾನೆ ಮರಿಯಪ್ಪ.

ಶಾಲಾ ಮಕ್ಕಳು ಬಂದಾಗ, ನೀವು ಪುಸ್ತಕ ಓದುವುದು ಮಾತ್ರವಲ್ಲ, ನೀವು ಓದಿದ ಭಾಗದ ಮುಖ್ಯಾಂಶಗಳನ್ನು ಬರೆದು ಹೋಗಿ ಎಂದು ಹೇಳುತ್ತಾರೆ. ಹೀಗೆ ವಿವರ ಟಿಪ್ಪಣಿ ಪರಿಚಯ ಬರೆಯುವುದಕ್ಕಾಗಿ 2018 ರಿಂದ ಒಂದು ದಾಖಲಾತಿ ಪುಸ್ತಕವನ್ನೂ ಇಟ್ಟಿದ್ದಾರೆ. ಅದರಲ್ಲಿ ಪುಸ್ತಕ ಓದಿದವರು ಅಭಿಪ್ರಾಯ ಬರೆದು ಹೋಗುತ್ತಾರೆ. ಈತನಕ 300 ವಿದ್ಯಾರ್ಥಿಗಳು ತಾವು ಓದಿದ ಪುಸ್ತಕದ ಬಗ್ಗೆ ಅಭಿಪ್ರಾಯ, ತಮ್ಮ ಹೆಸರು ಮತ್ತು ಶಾಲೆಯ ವಿಳಾಸವನ್ನು ಬರೆದು ಹೋಗಿದ್ದಾರೆ.

ಕನಿಷ್ಠ ಒಂದು ಪುಸ್ತಕದ 10 ಪುಟ ಓದಿ, ಅದರ ಬಗ್ಗೆ ಒಂದು ಟಿಪ್ಪಣಿ ಬರೆದರೆ ಹೇರ್ ಕಟ್ ಗೆ 80 ರೂ ಇದ್ದರೆ.  30 ರೂ ರಿಯಾಯಿತಿ ಕೊಡುವುದಾಗಿ ಹೇಳಿ 2020 ರ ಹೊಸ ವರ್ಷವನ್ನು ಆಚರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮರಿಯಪ್ಪನವರ ಸಲೂನ್ ಲೈಬ್ರರಿಯ ಫೋಟೋ ವೈರಲ್ ಆಗುವುದಕ್ಕಿಂತ ಮೊದಲು ಆರು ವರ್ಷ ಯಾವುದೇ ಪ್ರಚಾರ ಬಯಸದೆ ಮರಿಯಪ್ಪ ತನ್ನ ಸಲೂನಲ್ಲಿ ಓದು ಅಭಿಯಾನ ಶುರುಮಾಡಿದ್ದರು. ಮರಿಯಪ್ಪನ ಪುಸ್ತಕ ಪ್ರೀತಿ ನೋಡಿ ಪ್ರಸಿದ್ಧ ಪುಸ್ತಕ ಪ್ರಕಾಶನ Hatchette Indiaದವರು ಒಂದಷ್ಟು ಇಂಗ್ಲೀಷ್ ಪುಸ್ತಕಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ. ಇದರಿಂದ ಆ ತನಕ ಬರಿ ತಮಿಳು ಪುಸ್ತಕ ಇಟ್ಟಿದ್ದ ಮರಿಯಪ್ಪ ಇದೀಗ ಇಂಗ್ಲೀಷ್ ಪುಸ್ತಕಗಳನ್ನು ಇಟ್ಟಿದ್ದಾರೆ. ತೂತುಕುಡಿ ಎಂ.ಪಿ. ಕನಿಮೋಜಿ ಯವರು 50 ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ಮರಿಯಪ್ಪನ ಸಲೂನಿನಲ್ಲಿ 900 ರಷ್ಟು ವೈವಿಧ್ಯಮಯ ತಮಿಳು, ಇಂಗ್ಲೀಷ್ ಪುಸ್ತಕಗಳ ಸಂಗ್ರಹವಾಗಿದೆ. ನಿರಂತರವಾಗಿ ಓದುತ್ತಿದ್ದರೆ ಹೊಸ ಹೊಸ ಆಲೋಚನೆಗಳು ಬರುತ್ತವೆ ಎಂದು ಮರಿಯಪ್ಪ ಹೇಳುತ್ತಾರೆ.

ತನ್ನ ವಿದ್ಯಭ್ಯಾಸ ಕುಂಟಿತವಾದರೂ ಬೇರೆಯವರು ಓದಬೇಕು, ಓದಿ ಜ್ಞಾನ ಸಂಪಾದಿಸಬೇಕೆಂದು ಕನಸುವ ಪೊನ್ನ ಮರಿಯಪ್ಪನವರ ನಡೆಯಿಂದ  ಸೆಲೂನ್ ಶಾಪ್ ನ ಸ್ಥಾಪಿತ ಕಲ್ಪನೆಯನ್ನೆ ಹೊಡೆದು ಹಾಕಿದ್ದಾರೆ.

  • (ಕೃಪೆ): ದ ಹಿಂದು
  • ಮೂಲ: ಸೋಮ ಬಸು
  • ಅನುವಾದ: ಅರುಣ್ ಜೋಳದಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...