Homeಮುಖಪುಟಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

ಮಾದರಿ ಪುಸ್ತಕಪ್ರೇಮಿ: ಕಟಿಂಗ್ ಶಾಪ್ ನಲ್ಲಿ ಪುಟ್ಟ ಗ್ರಂಥಾಲಯ, ಪುಸ್ತಕ ಓದು ಅಭಿಯಾನ

- Advertisement -
- Advertisement -

ತರಾವರಿ ಪುಸ್ತಕಗಳ ಗ್ರಂಥಾಲಯವಿರುವ ಕಟಿಂಗ್ ಶಾಪಿನ ಫೋಟೋವೊಂದು ವೈರಲ್ ಆಗಿ ಓಡಾಡುತ್ತಿತ್ತು. ಮೇಲುನೋಟಕ್ಕೆ ಇದೊಂದು ಪೋಟೋಶಾಪ್ ಮಾಡಿದ ಫೇಕ್ ಫೋಟೋ ಇರಬೇಕು ಅಂದುಕೊಂಡೆ. ನಂತರ ಇದನ್ನು ಪರಿಶೀಲಿಸಲು ಗೂಗಲ್ ಮಾಡಿದಾಗ,  ಈ ಫೋಟೋದ ನಿಜದ ಕಥೆ ಹೇಳುವ ಹಿಂದೂ ಪತ್ರಿಕೆಯ ವರದಿಯೊಂದು ಕಾಣಿಸಿತು. ಈ ಫೋಟೋದ ಬಗೆಗಿನ ಕುತೂಹಲಕಾರಿ ಸಂಗತಿ ತಿಳಿಯಲೆಂದು ವರದಿಯನ್ನು ಅನುವಾದಿಸಿದ್ದೇನೆ.

ಪೊನ್ನ ಮರಿಯಪ್ಪ ಹದಿನೆಂಟು ವರ್ಷ ದಿನಗೂಲಿ ಮಾಡಿ ಅದರಲ್ಲಿ ಒಂದಷ್ಟು ಹಣವನ್ನು ಉಳಿತಾಯ ಮಾಡುತ್ತಾನೆ. ಈ ಹಣದಲ್ಲಿ ತನ್ನ ಬಹುದಿನದ ಕನಸಾದ ತನ್ನದೇ `ಸುರೇಶ್ ಬ್ಯೂಟಿ ಸೆಂಟರ್’ ಹೆಸರಿನ ಕಟಿಂಗ್ ಶಾಪೊಂದನ್ನು ತಮಿಳುನಾಡಿನ ತೂತುಕುಡಿ ಜಿಲ್ಲೆಯ ಮಿಲ್ಲೆರ್ ಪುರಂ ನಲ್ಲಿ 2014 ರಲ್ಲಿ ತೆರೆಯುತ್ತಾನೆ.

ಸಹಜವಾಗಿ ಕಟಿಂಗ್ ಮಾಡಿಸಲು ಬಂದವರು ತಮ್ಮ ಸರತಿ ಬರುವ ತನಕ ಕಾಯಬೇಕಾಗಿತ್ತು. ಈ ಅವಧಿಯಲ್ಲಿ ಎಲ್ಲರೂ ತಮ್ಮ ಮೊಬೈಲಿನಲ್ಲಿ ಮುಳುಗಿರುತ್ತಿದ್ದರು. ಕೆಲವರು ಶಾಪಲ್ಲಿನ ಟಿವಿ ನೋಡುತ್ತಿದ್ದರು. ಹೀಗಿರುವಾಗ ಮರಿಯಪ್ಪನಿಗೆ ಸರತಿ ಬರುವ ತನಕ ಕಾಯುವವರ ಕೈಗೆ ಪುಸ್ತಕಗಳನ್ನು ಯಾಕೆ ಕೊಡಬಾರದು ಎನ್ನುವ ಯೋಚನೆ ಹೊಳೆಯುತ್ತದೆ. ಮರುದಿನವೇ ತನ್ನ ಶಾಪಿನಿಂದ ಟಿ.ವಿಯನ್ನು ತೆಗೆಯುತ್ತಾನೆ. ಆಗ ಟಿವಿ ಇಟ್ಟಿದ್ದ ಜಾಗದಲ್ಲಿ  ದಿನ ಪತ್ರಿಕೆಗಳ ಜತೆ 5 ಪುಸ್ತಕಗಳನ್ನು ಇಡುತ್ತಾರೆ. ಈ ಐದೂ ಪುಸ್ತಕಗಳು ಕಾರ್ಲ್ ಮಾರ್ಕ್ಸ್, ಅಬ್ರಾಹಂ ಲಿಂಕನ್, ಪೆರಿಯಾರ್, ಅಣ್ಣಾದೊರೈ, ಅಬ್ದುಲ್ ಕಲಾಮ್ ಕುರಿತಾದ ಆತ್ಮಕಥನ/ಜೀವನ ಚರಿತ್ರೆಗಳು.  ಕೆಲವೇ ದಿನಗಳಲ್ಲಿ ಮೊಬೈಲ್ ನೋಡುವವರು ಈ ಪುಸ್ತಕಗಳನ್ನು ಹಿಡಿದು ತಿರುವಿಹಾಕಿ ಹಾಗೆ ಪುಸ್ತಕದ ಜಾಗಕ್ಕೆ ಇಡತೊಡಗಿದರು, ಕೆಲವರು ಚೂರು ಚೂರು ಓದತೊಡಗಿದರು. ಇದು ಮರಿಯಪ್ಪನ ಖುಷಿಯನ್ನು ಇಮ್ಮಡಿಗೊಳಿಸಿತು.

ಆ ನಂತರ ಮರಿಯಪ್ಪ ಹಳೆ ಪುಸ್ತಕ ಮಾರುವವರಲ್ಲಿ, ಹೆಚ್ಚು ರಿಯಾಯಿತಿ ದರದಲ್ಲಿ ಮಾರುವ ಪುಸ್ತಕ ಮೇಳಗಳಲ್ಲಿ ಪುಸ್ತಕಗಳನ್ನು ಕೊಂಡು ತನ್ನ ಶಾಪಿಗೆ ತರತೊಡಗುತ್ತಾನೆ. 2015 ರ ಕೊನೆಗೆ ಶಾಪಿನ ಒಂದು ಗೋಡೆಯನ್ನು ಪುಸ್ತಕಗಳ ಕಪಾಟಿಗಾಗಿ ಸಿದ್ದಗೊಳಿಸುತ್ತಾನೆ. ತತ್ವಶಾಸ್ತ್ರ, ವಿಜ್ಞಾನ, ಜನಪದ ಕತೆ, ಧರ್ಮ, ನೀತಿಕತೆಗಳು, ಮಕ್ಕಳಿಗೆ ಬೇಕಾಗುವ ರಮ್ಯ ಕಥೆಗಳು ಹೀಗೆ ಹಲವು ವೈವಿಧ್ಯಮಯ 250 ಪುಸ್ತಗಳು ಸೇರ್ಪಡೆಗೊಳ್ಳುತ್ತವೆ.

“ಶಾಪಿಗೆ ಬಂದು ಅವರ ಸರತಿ ಬರುವವರೆಗೆ ಕಾಯುವ ಗಿರಾಕಿಗಳನ್ನು ದಯವಿಟ್ಟು ಮೊಬೈಲ್ ಬಳಸಬೇಡಿ, ಇಲ್ಲಿ ಒಳ್ಳೊಳ್ಳೆ ಪುಸ್ತಕಗಳಿವೆ ಕಟಿಂಗ್ ಮಾಡಿಸಿಕೊಳ್ಳುವ ತನಕ ಪುಸ್ತಕ ಓದಿ” ಎಂದು ಆತ್ಮೀಯವಾಗಿ ಕೇಳಿಕೊಳ್ಳುವೆ. ಈ ತನಕ ಯಾರೂ ನನ್ನ ಮಾತನ್ನು ಮೀರಿಲ್ಲ. ಅದು ನನಗೆ ಖುಷಿಕೊಡುತ್ತದೆ ಎನ್ನುತ್ತಾನೆ ಮರಿಯಪ್ಪ.

ಶಾಲಾ ಮಕ್ಕಳು ಬಂದಾಗ, ನೀವು ಪುಸ್ತಕ ಓದುವುದು ಮಾತ್ರವಲ್ಲ, ನೀವು ಓದಿದ ಭಾಗದ ಮುಖ್ಯಾಂಶಗಳನ್ನು ಬರೆದು ಹೋಗಿ ಎಂದು ಹೇಳುತ್ತಾರೆ. ಹೀಗೆ ವಿವರ ಟಿಪ್ಪಣಿ ಪರಿಚಯ ಬರೆಯುವುದಕ್ಕಾಗಿ 2018 ರಿಂದ ಒಂದು ದಾಖಲಾತಿ ಪುಸ್ತಕವನ್ನೂ ಇಟ್ಟಿದ್ದಾರೆ. ಅದರಲ್ಲಿ ಪುಸ್ತಕ ಓದಿದವರು ಅಭಿಪ್ರಾಯ ಬರೆದು ಹೋಗುತ್ತಾರೆ. ಈತನಕ 300 ವಿದ್ಯಾರ್ಥಿಗಳು ತಾವು ಓದಿದ ಪುಸ್ತಕದ ಬಗ್ಗೆ ಅಭಿಪ್ರಾಯ, ತಮ್ಮ ಹೆಸರು ಮತ್ತು ಶಾಲೆಯ ವಿಳಾಸವನ್ನು ಬರೆದು ಹೋಗಿದ್ದಾರೆ.

ಕನಿಷ್ಠ ಒಂದು ಪುಸ್ತಕದ 10 ಪುಟ ಓದಿ, ಅದರ ಬಗ್ಗೆ ಒಂದು ಟಿಪ್ಪಣಿ ಬರೆದರೆ ಹೇರ್ ಕಟ್ ಗೆ 80 ರೂ ಇದ್ದರೆ.  30 ರೂ ರಿಯಾಯಿತಿ ಕೊಡುವುದಾಗಿ ಹೇಳಿ 2020 ರ ಹೊಸ ವರ್ಷವನ್ನು ಆಚರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮರಿಯಪ್ಪನವರ ಸಲೂನ್ ಲೈಬ್ರರಿಯ ಫೋಟೋ ವೈರಲ್ ಆಗುವುದಕ್ಕಿಂತ ಮೊದಲು ಆರು ವರ್ಷ ಯಾವುದೇ ಪ್ರಚಾರ ಬಯಸದೆ ಮರಿಯಪ್ಪ ತನ್ನ ಸಲೂನಲ್ಲಿ ಓದು ಅಭಿಯಾನ ಶುರುಮಾಡಿದ್ದರು. ಮರಿಯಪ್ಪನ ಪುಸ್ತಕ ಪ್ರೀತಿ ನೋಡಿ ಪ್ರಸಿದ್ಧ ಪುಸ್ತಕ ಪ್ರಕಾಶನ Hatchette Indiaದವರು ಒಂದಷ್ಟು ಇಂಗ್ಲೀಷ್ ಪುಸ್ತಕಗಳನ್ನು ಕೊಡುಗೆಯಾಗಿ ಕೊಟ್ಟಿದ್ದಾರೆ. ಇದರಿಂದ ಆ ತನಕ ಬರಿ ತಮಿಳು ಪುಸ್ತಕ ಇಟ್ಟಿದ್ದ ಮರಿಯಪ್ಪ ಇದೀಗ ಇಂಗ್ಲೀಷ್ ಪುಸ್ತಕಗಳನ್ನು ಇಟ್ಟಿದ್ದಾರೆ. ತೂತುಕುಡಿ ಎಂ.ಪಿ. ಕನಿಮೋಜಿ ಯವರು 50 ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೀಗ ಮರಿಯಪ್ಪನ ಸಲೂನಿನಲ್ಲಿ 900 ರಷ್ಟು ವೈವಿಧ್ಯಮಯ ತಮಿಳು, ಇಂಗ್ಲೀಷ್ ಪುಸ್ತಕಗಳ ಸಂಗ್ರಹವಾಗಿದೆ. ನಿರಂತರವಾಗಿ ಓದುತ್ತಿದ್ದರೆ ಹೊಸ ಹೊಸ ಆಲೋಚನೆಗಳು ಬರುತ್ತವೆ ಎಂದು ಮರಿಯಪ್ಪ ಹೇಳುತ್ತಾರೆ.

ತನ್ನ ವಿದ್ಯಭ್ಯಾಸ ಕುಂಟಿತವಾದರೂ ಬೇರೆಯವರು ಓದಬೇಕು, ಓದಿ ಜ್ಞಾನ ಸಂಪಾದಿಸಬೇಕೆಂದು ಕನಸುವ ಪೊನ್ನ ಮರಿಯಪ್ಪನವರ ನಡೆಯಿಂದ  ಸೆಲೂನ್ ಶಾಪ್ ನ ಸ್ಥಾಪಿತ ಕಲ್ಪನೆಯನ್ನೆ ಹೊಡೆದು ಹಾಕಿದ್ದಾರೆ.

  • (ಕೃಪೆ): ದ ಹಿಂದು
  • ಮೂಲ: ಸೋಮ ಬಸು
  • ಅನುವಾದ: ಅರುಣ್ ಜೋಳದಕೂಡ್ಲಿಗಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...