Homeಮುಖಪುಟಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ಅಪರ್ಣಾ ಯಾದವ್‌‌ ಸೇರ್ಪಡೆ ಬಿಜೆಪಿಗೆ ಬಲ ತರುತ್ತದೆ ಎಂದು ಅನೇಕ ಕನ್ನಡ ಮಾಧ್ಯಮಗಳು ವರದಿ ಮಾಡಿವೆ. ಆದರೆ ಯೂಪಿ ರಾಜ್ಯದಾಚೆಗೆ ತಿಳಿಯಬೇಕಾದ ಅನೇಕ ಸಂಗತಿಗಳಿವೆ.

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ಸೊಸೆ ಅಪರ್ಣಾ ಯಾದವ್‌ ಅವರು ಬಿಜೆಪಿ ಸೇರಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ.

ಎಸ್‌ಪಿಗೆ ಹಿನ್ನೆಡೆಯಾಗುವ ಸಾಧ್ಯತೆ ಎಂದು ಕೆಲವು ವೆಬ್‌ಸೈಟ್‌, ಪತ್ರಿಕೆಗಳು ವರದಿ ಮಾಡಿವೆ. ಸಾಮಾನ್ಯವಾಗಿ ಬಹುತೇಕ ಮಾಧ್ಯಮಗಳು, “ಮುಲಾಯಂ ಸಿಂಗ್ ಯಾದವ್ ಅವರ ಮಗ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಮಲ ಸಹೋದರ ಪ್ರತೀಕ್ ಯಾದವ್ ಅವರ ಪತ್ನಿಯೇ ಅಪರ್ಣಾ ಯಾದವ್. ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿಯ ಮಗ ಪ್ರತೀಕ್ ಯಾದವ್. ಅಖಿಲೇಶ್ ಯಾದವ್ ಮೊದಲ ಪತ್ನಿ ಮಗ” ಎಂದು ವರದಿ ಮಾಡಿವೆ. (ಕನ್ನಡ ನ್ಯೂಸ್‌ ವೆಬ್‌ಸೈಟ್‌ಗಳ ವರದಿಗಳನ್ನು ಗಮನಿಸಬಹುದು.)

ಇದರ ಜೊತೆಗೆ ಅಪರ್ಣಾ ಸಿಂಗ್ ಯಾದವ್ ಅವರ ಪರಿಚಯವನ್ನು ವರದಿಗಳಲ್ಲಿ ಗಮನಿಸಬಹುದು. “ರಾಷ್ಟ್ರದ ಸೇವೆಗಾಗಿ ಬಿಜೆಪಿ ಸೇರಿದ್ದೇನೆ” ಎಂದು ಅಪರ್ಣಾ ಹೇಳಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ನೀತಿಗಳಿಂದ ಪ್ರಭಾವಿತಳಾಗಿದ್ದೇನೆ” ಎಂದು ಅವರು ಹೇಳಿಕೊಂಡಿದ್ದಾರೆ.

“ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಯುಪಿಯ ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳುವ ವಿಚಾರಗಳಿಂದ ನಾನು ಪ್ರಭಾವಿತಳಾಗಿದ್ದೇನೆ. ಅವರ ನೀತಿಗಳು ಏನೇ ಇರಲಿ, ನಾನು ಅದಕ್ಕೆ ಬದ್ಧಳಾಗಿದ್ದೇನೆ” ಎಂದು ಇಂಡಿಯಾ ಟುಡೇಗೆ ಅಪರ್ಣಾ ತಿಳಿಸಿದ್ದಾರೆ.

ಅಪರ್ಣಾ ಯಾದವ್ ಅವರ ತಂದೆ ಅರವಿಂದ್ ಸಿಂಗ್ ಬಿಶ್ತ್ ಪತ್ರಕರ್ತರಾಗಿದ್ದಾರೆ. ಅವರ ತಾಯಿ ಲಕ್ನೋ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಅಧಿಕಾರಿ.

ಅಪರ್ಣಾ ಯಾದವ್ ಲಕ್ನೋದ ಲೊರೆಟೊ ಕಾನ್ವೆಂಟ್ ಶಾಲೆಯ ಹಳೆಯ ವಿದ್ಯಾರ್ಥಿ. ಅವರು UKಯ ಮ್ಯಾಂಚೆಸ್ಟರ್ ವಿಶ್ವವಿದ್ಯಾನಿಲಯದಿಂದ ‘ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ರಾಜಕೀಯ’ ಎಂಬ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಪರ್ಣಾ ಮತ್ತು ಪ್ರತೀಕ್ 2010ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಡಿಸೆಂಬರ್ 2011ರಲ್ಲಿ ವಿವಾಹವಾದರು.

ರಾಜಕಾರಣಿಯಾಗಿರುವುದರ ಹೊರತಾಗಿ, ಅಪರ್ಣಾ ಯಾದವ್ ಶಾಸ್ತ್ರೀಯ ಗಾಯಕಿಯೂ ಹೌದು. ಅವರು ಲಕ್ನೋದ ಭಾತಖಂಡೆ ಸಂಗೀತ ವಿಶ್ವವಿದ್ಯಾಲಯದಲ್ಲಿ ಒಂಬತ್ತು ವರ್ಷಗಳ ಕಾಲ ಶಾಸ್ತ್ರೀಯ ಸಂಗೀತವನ್ನು ಅಧ್ಯಯನ ಮಾಡಿದ್ದಾರೆ.

ವರದಿಗಳ ಪ್ರಕಾರ, ಅಪರ್ಣಾ ಯಾದವ್ ಅವರು 2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಲಕ್ನೋ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಲವು ತೋರಿದ್ದಾರೆ. ಅಖಿಲೇಶ್ ಯಾದವ್ ಉತ್ತರ ಪ್ರದೇಶ ಚುನಾವಣೆಯಲ್ಲಿ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ಇಚ್ಛಿಸಲಿಲ್ಲ. ಹೀಗಾಗಿ ಅಪರ್ಣಾ ಯಾದವ್ ಬಿಜೆಪಿಯತ್ತ ಮುಖ ಮಾಡಿದರು.

ಲಕ್ನೋ ಕ್ಯಾಂಟ್ ಬಿಜೆಪಿಯ ಭದ್ರಕೋಟೆ: ಲಕ್ನೋ ಕ್ಯಾಂಟ್ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದು ಹೇಳಲಾಗುತ್ತಿದೆ. 2017ರ ಯುಪಿ ಚುನಾವಣೆಯಲ್ಲಿ ಬಿಜೆಪಿಯ ರೀಟಾ ಬಹುಗುಣ ಜೋಶಿ ಗೆಲುವು ಸಾಧಿಸಿದ್ದರು. ಇದಾದ ನಂತರ ಆದ ಉಪಚುನಾವಣೆಯಲ್ಲಿ ಬಿಜೆಪಿಯ ಸುರೇಶ್ ತಿವಾರಿ ಶಾಸಕರಾದರು.

ಲಕ್ನೋ ಕ್ಯಾಂಟ್ ಬ್ರಾಹ್ಮಣ ಪ್ರಾಬಲ್ಯದ ಪ್ರದೇಶವಾಗಿದೆ. ಕ್ಷೇತ್ರದಲ್ಲಿ ಕನಿಷ್ಠ 1 ಲಕ್ಷ ಬ್ರಾಹ್ಮಣ ಮತದಾರರಿದ್ದಾರೆ. ಸಿಂಧಿ-ಪಂಜಾಬಿ ಮತದಾರರು ಈ ಪ್ರದೇಶದಲ್ಲಿ ಎರಡನೇ ಪ್ರಬಲ ಸಮುದಾಯವಾಗಿದ್ದರೆ, ಮುಸ್ಲಿಮರು ಸುಮಾರು 25,000 ಸಂಖ್ಯೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ಯಾದವ ಸಮುದಾಯದ 20,000 ಹಾಗೂ ಠಾಕೂರ್ ಸಮುದಾಯದ 15,000 ಮತಗಳಿವೆ.

ಇಷ್ಟು ಮಾತ್ರ ಓದಿಕೊಂಡರೆ ಅಪರ್ಣಾ ಯಾದವ್‌ ಅವರು ಬಿಜೆಪಿಗೆ ಬಲ ತುಂಬುತ್ತಾರೆಂದೂ, ಎಸ್‌ಪಿಯಲ್ಲಿ ಬಂಡಾಯ ಉಂಟಾಗಿದೆ ಎಂದೂ ಭಾವಿಸುವ ಸಾಧ್ಯತೆಗಳಿರುತ್ತವೆ. ಅಪರ್ಣಾ ಯಾದವ್‌ ಅವರು ಬಿಜೆಪಿಗೆ ಸೇರಿದ್ದರಿಂದ ಸಮಾಜವಾದಿ ಪಾರ್ಟಿಗೆ ದೊಡ್ಡ ಪ್ರಮಾಣದ ನಷ್ಟವೇನೂ ಆಗದು ಎಂದು ರಾಜಕೀಯ ವಿಶ್ಲೇಷಕರು ಊಹಿಸುತ್ತಾರೆ. ಯುಪಿಯಾಚೆಗೆ ಅಷ್ಟಾಗಿ ಚರ್ಚೆಯಾಗದ ಸಂಗತಿಯೊಂದು ಅಖಿಲೇಶ್‌ ಪರ ಜನಮತ ತರುವ ಸಾಧ್ಯತೆಯನ್ನು ರಾಜಕೀಯ ಚಿಂತಕರು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್ ಸರ್ಕಾರ ಕ್ರಿಮಿನಲ್‌ಗಳೊಂದಿಗೆ ಜೈಲ್‌-ಜೈಲ್ ಆಟವಾಡುತ್ತಿದೆ: ನರೇಂದ್ರ ಮೋದಿ

ಅಪರ್ಣಾ ಸೇರ್ಪಡೆ ಬಿಜೆಪಿಗೆ ಬಲವೇ?

ಅಪರ್ಣಾ ಸಿಂಗ್‌ ಯಾದವ್ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಎಂಬುದು ನಿರ್ವೀವಾದ. ಇದರ ಜೊತೆಗೆ ಅಪರ್ಣಾ ಅವರ ಪತಿ ಪ್ರತೀಕ್ ಅವರ ಕುರಿತೂ ತಿಳಿದುಕೊಳ್ಳಬೇಕಾಗುತ್ತದೆ.

1987ರಲ್ಲಿ ಜನಿಸಿದ ಪ್ರತೀಕ್ ಯಾದವ್ ಅವರಿಗೆ ಈಗ 34 ವರ್ಷ ವಯಸ್ಸು. ಪ್ರತೀಕ್‌ ಅವರು ಮುಲಾಯಂ ಸಿಂಗ್ ಯಾದವ್ ಅವರ ಮಲ ಮಗ ಮತ್ತು ಅಖಿಲೇಶ್ ಯಾದವ್ ಅವರ ಮಲ ಸಹೋದರ. ಮುಲಾಯಂ ಸಿಂಗ್ ತಮ್ಮ ಮೊದಲ ಪತ್ನಿ ನಿಧನರಾದ ಬಳಿಕ ಎರಡನೇ ಮದುವೆಯಾಗುತ್ತಾರೆ. ಸಾಧನಾ ಗುಪ್ತ ಅವರನ್ನು ಮುಲಾಯಂ ಸಿಂಗ್ ಯಾದವ್ ಮದುವೆಯಾಗುವ ಮುನ್ನ ಸಾಧನಾ ಗುಪ್ತ ಅವರಿಗೆ ಮೊದಲನೇ ವಿವಾಹವಾಗಿರುತ್ತದೆ. ಸಾಧನಾ ಗುಪ್ತಾ ಹಾಗೂ ಚಂದ್ರ ಗುಪ್ತಾ ಅವರಿಗೆ ಜನಿಸಿದವರು ಪ್ರತೀಕ್‌. ಸಾಧನಾ ಗುಪ್ತಾ ಅವರು 23, ಮೇ 2003ರಂದು ಮುಲಾಯಂ ಸಿಂಗ್ ಅವರನ್ನು ವಿವಾಹವಾಗುತ್ತಾರೆ.

ಮುಲಾಯಂ ಸಿಂಗ್‌ ಯಾದವ್ ಹಾಗೂ ಸಾಧನಾ ಗುಪ್ತಾ

ಹೀಗಾಗಿ ಅಪರ್ಣಾ ಯಾದವ್‌ ಅವರು ಬಿಜೆಪಿಗೆ ಸೇರಿದ ಸಂಗತಿ ಉತ್ತರ ಪ್ರದೇಶದಾಚೆಗೆ ಅತಿದೊಡ್ಡ ವಿದ್ಯಮಾನದಂತೆ ಕಂಡರೂ ಯುಪಿಯ ಗಡಿಯೊಳಗಿನ ಚರ್ಚೆಗಳೇ ಬೇರೆ ಎಂದು ಮೂಲಗಳು ಹೇಳುತ್ತದೆ.


ಇದನ್ನೂ ಓದಿರಿ: ಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಕ್ಕಮಾಯಾವತಿಯವರ ಬಹುಜನ ಸಮಾಜ ಪಕ್ಷದ ಇತ್ತೀಚಿನ ಉತ್ತರ ಪ್ರದೇಶದಲ್ಲಿನ ಸಮೀಕ್ಷೆಯನ್ನು ಎಲ್ಲಾ ಮನುವಾದಿ ಮಾಧ್ಯಮಗಳು ಮರೆಮಾಚುತ್ತವೆ ನೀವು ಕೂಡ ಮಾಯಾವತಿಯವರ ಪಕ್ಷದ ಬಗ್ಗೆ ಮಾಹಿತಿಯನ್ನೂ ಕ್ರೋಡೀಕರಿಸಿ ಒಂದು ಅಂಕಣವನ್ನು ಬರೆಯಬೇಕಾಗಿ ಮನವಿ

LEAVE A REPLY

Please enter your comment!
Please enter your name here

- Advertisment -

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...