Homeಮುಖಪುಟಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ಅಪರ್ಣಾ ಯಾದವ್‌‌ ಸೇರ್ಪಡೆ ಬಿಜೆಪಿಗೆ ಬಲ ತರುತ್ತದೆ ಎಂದು ಅನೇಕ ಕನ್ನಡ ಮಾಧ್ಯಮಗಳು ವರದಿ ಮಾಡಿವೆ. ಆದರೆ ಯೂಪಿ ರಾಜ್ಯದಾಚೆಗೆ ತಿಳಿಯಬೇಕಾದ ಅನೇಕ ಸಂಗತಿಗಳಿವೆ.

- Advertisement -
- Advertisement -

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್ ಅವರ ಸೊಸೆ ಅಪರ್ಣಾ ಯಾದವ್‌ ಅವರು ಬಿಜೆಪಿ ಸೇರಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ.

ಎಸ್‌ಪಿಗೆ ಹಿನ್ನೆಡೆಯಾಗುವ ಸಾಧ್ಯತೆ ಎಂದು ಕೆಲವು ವೆಬ್‌ಸೈಟ್‌, ಪತ್ರಿಕೆಗಳು ವರದಿ ಮಾಡಿವೆ. ಸಾಮಾನ್ಯವಾಗಿ ಬಹುತೇಕ ಮಾಧ್ಯಮಗಳು, “ಮುಲಾಯಂ ಸಿಂಗ್ ಯಾದವ್ ಅವರ ಮಗ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಮಲ ಸಹೋದರ ಪ್ರತೀಕ್ ಯಾದವ್ ಅವರ ಪತ್ನಿಯೇ ಅಪರ್ಣಾ ಯಾದವ್. ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿಯ ಮಗ ಪ್ರತೀಕ್ ಯಾದವ್. ಅಖಿಲೇಶ್ ಯಾದವ್ ಮೊದಲ ಪತ್ನಿ ಮಗ” ಎಂದು ವರದಿ ಮಾಡಿವೆ. (ಕನ್ನಡ ನ್ಯೂಸ್‌ ವೆಬ್‌ಸೈಟ್‌ಗಳ ವರದಿಗಳನ್ನು ಗಮನಿಸಬಹುದು.)

ಇದರ ಜೊತೆಗೆ ಅಪರ್ಣಾ ಸಿಂಗ್ ಯಾದವ್ ಅವರ ಪರಿಚಯವನ್ನು ವರದಿಗಳಲ್ಲಿ ಗಮನಿಸಬಹುದು. “ರಾಷ್ಟ್ರದ ಸೇವೆಗಾಗಿ ಬಿಜೆಪಿ ಸೇರಿದ್ದೇನೆ” ಎಂದು ಅಪರ್ಣಾ ಹೇಳಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ನೀತಿಗಳಿಂದ ಪ್ರಭಾವಿತಳಾಗಿದ್ದೇನೆ” ಎಂದು ಅವರು ಹೇಳಿಕೊಂಡಿದ್ದಾರೆ.

“ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಯುಪಿಯ ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳುವ ವಿಚಾರಗಳಿಂದ ನಾನು ಪ್ರಭಾವಿತಳಾಗಿದ್ದೇನೆ. ಅವರ ನೀತಿಗಳು ಏನೇ ಇರಲಿ, ನಾನು ಅದಕ್ಕೆ ಬದ್ಧಳಾಗಿದ್ದೇನೆ” ಎಂದು ಇಂಡಿಯಾ ಟುಡೇಗೆ ಅಪರ್ಣಾ ತಿಳಿಸಿದ್ದಾರೆ.

ಅಪರ್ಣಾ ಯಾದವ್ ಅವರ ತಂದೆ ಅರವಿಂದ್ ಸಿಂಗ್ ಬಿಶ್ತ್ ಪತ್ರಕರ್ತರಾಗಿದ್ದಾರೆ. ಅವರ ತಾಯಿ ಲಕ್ನೋ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಅಧಿಕಾರಿ.

ಅಪರ್ಣಾ ಯಾದವ್ ಲಕ್ನೋದ ಲೊರೆಟೊ ಕಾನ್ವೆಂಟ್ ಶಾಲೆಯ ಹಳೆಯ ವಿದ್ಯಾರ್ಥಿ. ಅವರು UKಯ ಮ್ಯಾಂಚೆಸ್ಟರ್ ವಿಶ್ವವಿದ್ಯಾನಿಲಯದಿಂದ ‘ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ರಾಜಕೀಯ’ ಎಂಬ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಪರ್ಣಾ ಮತ್ತು ಪ್ರತೀಕ್ 2010ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಡಿಸೆಂಬರ್ 2011ರಲ್ಲಿ ವಿವಾಹವಾದರು.

ರಾಜಕಾರಣಿಯಾಗಿರುವುದರ ಹೊರತಾಗಿ, ಅಪರ್ಣಾ ಯಾದವ್ ಶಾಸ್ತ್ರೀಯ ಗಾಯಕಿಯೂ ಹೌದು. ಅವರು ಲಕ್ನೋದ ಭಾತಖಂಡೆ ಸಂಗೀತ ವಿಶ್ವವಿದ್ಯಾಲಯದಲ್ಲಿ ಒಂಬತ್ತು ವರ್ಷಗಳ ಕಾಲ ಶಾಸ್ತ್ರೀಯ ಸಂಗೀತವನ್ನು ಅಧ್ಯಯನ ಮಾಡಿದ್ದಾರೆ.

ವರದಿಗಳ ಪ್ರಕಾರ, ಅಪರ್ಣಾ ಯಾದವ್ ಅವರು 2022ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಲಕ್ನೋ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಒಲವು ತೋರಿದ್ದಾರೆ. ಅಖಿಲೇಶ್ ಯಾದವ್ ಉತ್ತರ ಪ್ರದೇಶ ಚುನಾವಣೆಯಲ್ಲಿ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ಇಚ್ಛಿಸಲಿಲ್ಲ. ಹೀಗಾಗಿ ಅಪರ್ಣಾ ಯಾದವ್ ಬಿಜೆಪಿಯತ್ತ ಮುಖ ಮಾಡಿದರು.

ಲಕ್ನೋ ಕ್ಯಾಂಟ್ ಬಿಜೆಪಿಯ ಭದ್ರಕೋಟೆ: ಲಕ್ನೋ ಕ್ಯಾಂಟ್ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದು ಹೇಳಲಾಗುತ್ತಿದೆ. 2017ರ ಯುಪಿ ಚುನಾವಣೆಯಲ್ಲಿ ಬಿಜೆಪಿಯ ರೀಟಾ ಬಹುಗುಣ ಜೋಶಿ ಗೆಲುವು ಸಾಧಿಸಿದ್ದರು. ಇದಾದ ನಂತರ ಆದ ಉಪಚುನಾವಣೆಯಲ್ಲಿ ಬಿಜೆಪಿಯ ಸುರೇಶ್ ತಿವಾರಿ ಶಾಸಕರಾದರು.

ಲಕ್ನೋ ಕ್ಯಾಂಟ್ ಬ್ರಾಹ್ಮಣ ಪ್ರಾಬಲ್ಯದ ಪ್ರದೇಶವಾಗಿದೆ. ಕ್ಷೇತ್ರದಲ್ಲಿ ಕನಿಷ್ಠ 1 ಲಕ್ಷ ಬ್ರಾಹ್ಮಣ ಮತದಾರರಿದ್ದಾರೆ. ಸಿಂಧಿ-ಪಂಜಾಬಿ ಮತದಾರರು ಈ ಪ್ರದೇಶದಲ್ಲಿ ಎರಡನೇ ಪ್ರಬಲ ಸಮುದಾಯವಾಗಿದ್ದರೆ, ಮುಸ್ಲಿಮರು ಸುಮಾರು 25,000 ಸಂಖ್ಯೆಯಲ್ಲಿದ್ದಾರೆ. ಕ್ಷೇತ್ರದಲ್ಲಿ ಯಾದವ ಸಮುದಾಯದ 20,000 ಹಾಗೂ ಠಾಕೂರ್ ಸಮುದಾಯದ 15,000 ಮತಗಳಿವೆ.

ಇಷ್ಟು ಮಾತ್ರ ಓದಿಕೊಂಡರೆ ಅಪರ್ಣಾ ಯಾದವ್‌ ಅವರು ಬಿಜೆಪಿಗೆ ಬಲ ತುಂಬುತ್ತಾರೆಂದೂ, ಎಸ್‌ಪಿಯಲ್ಲಿ ಬಂಡಾಯ ಉಂಟಾಗಿದೆ ಎಂದೂ ಭಾವಿಸುವ ಸಾಧ್ಯತೆಗಳಿರುತ್ತವೆ. ಅಪರ್ಣಾ ಯಾದವ್‌ ಅವರು ಬಿಜೆಪಿಗೆ ಸೇರಿದ್ದರಿಂದ ಸಮಾಜವಾದಿ ಪಾರ್ಟಿಗೆ ದೊಡ್ಡ ಪ್ರಮಾಣದ ನಷ್ಟವೇನೂ ಆಗದು ಎಂದು ರಾಜಕೀಯ ವಿಶ್ಲೇಷಕರು ಊಹಿಸುತ್ತಾರೆ. ಯುಪಿಯಾಚೆಗೆ ಅಷ್ಟಾಗಿ ಚರ್ಚೆಯಾಗದ ಸಂಗತಿಯೊಂದು ಅಖಿಲೇಶ್‌ ಪರ ಜನಮತ ತರುವ ಸಾಧ್ಯತೆಯನ್ನು ರಾಜಕೀಯ ಚಿಂತಕರು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್ ಸರ್ಕಾರ ಕ್ರಿಮಿನಲ್‌ಗಳೊಂದಿಗೆ ಜೈಲ್‌-ಜೈಲ್ ಆಟವಾಡುತ್ತಿದೆ: ನರೇಂದ್ರ ಮೋದಿ

ಅಪರ್ಣಾ ಸೇರ್ಪಡೆ ಬಿಜೆಪಿಗೆ ಬಲವೇ?

ಅಪರ್ಣಾ ಸಿಂಗ್‌ ಯಾದವ್ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಎಂಬುದು ನಿರ್ವೀವಾದ. ಇದರ ಜೊತೆಗೆ ಅಪರ್ಣಾ ಅವರ ಪತಿ ಪ್ರತೀಕ್ ಅವರ ಕುರಿತೂ ತಿಳಿದುಕೊಳ್ಳಬೇಕಾಗುತ್ತದೆ.

1987ರಲ್ಲಿ ಜನಿಸಿದ ಪ್ರತೀಕ್ ಯಾದವ್ ಅವರಿಗೆ ಈಗ 34 ವರ್ಷ ವಯಸ್ಸು. ಪ್ರತೀಕ್‌ ಅವರು ಮುಲಾಯಂ ಸಿಂಗ್ ಯಾದವ್ ಅವರ ಮಲ ಮಗ ಮತ್ತು ಅಖಿಲೇಶ್ ಯಾದವ್ ಅವರ ಮಲ ಸಹೋದರ. ಮುಲಾಯಂ ಸಿಂಗ್ ತಮ್ಮ ಮೊದಲ ಪತ್ನಿ ನಿಧನರಾದ ಬಳಿಕ ಎರಡನೇ ಮದುವೆಯಾಗುತ್ತಾರೆ. ಸಾಧನಾ ಗುಪ್ತ ಅವರನ್ನು ಮುಲಾಯಂ ಸಿಂಗ್ ಯಾದವ್ ಮದುವೆಯಾಗುವ ಮುನ್ನ ಸಾಧನಾ ಗುಪ್ತ ಅವರಿಗೆ ಮೊದಲನೇ ವಿವಾಹವಾಗಿರುತ್ತದೆ. ಸಾಧನಾ ಗುಪ್ತಾ ಹಾಗೂ ಚಂದ್ರ ಗುಪ್ತಾ ಅವರಿಗೆ ಜನಿಸಿದವರು ಪ್ರತೀಕ್‌. ಸಾಧನಾ ಗುಪ್ತಾ ಅವರು 23, ಮೇ 2003ರಂದು ಮುಲಾಯಂ ಸಿಂಗ್ ಅವರನ್ನು ವಿವಾಹವಾಗುತ್ತಾರೆ.

ಮುಲಾಯಂ ಸಿಂಗ್‌ ಯಾದವ್ ಹಾಗೂ ಸಾಧನಾ ಗುಪ್ತಾ

ಹೀಗಾಗಿ ಅಪರ್ಣಾ ಯಾದವ್‌ ಅವರು ಬಿಜೆಪಿಗೆ ಸೇರಿದ ಸಂಗತಿ ಉತ್ತರ ಪ್ರದೇಶದಾಚೆಗೆ ಅತಿದೊಡ್ಡ ವಿದ್ಯಮಾನದಂತೆ ಕಂಡರೂ ಯುಪಿಯ ಗಡಿಯೊಳಗಿನ ಚರ್ಚೆಗಳೇ ಬೇರೆ ಎಂದು ಮೂಲಗಳು ಹೇಳುತ್ತದೆ.


ಇದನ್ನೂ ಓದಿರಿ: ಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಕ್ಕಮಾಯಾವತಿಯವರ ಬಹುಜನ ಸಮಾಜ ಪಕ್ಷದ ಇತ್ತೀಚಿನ ಉತ್ತರ ಪ್ರದೇಶದಲ್ಲಿನ ಸಮೀಕ್ಷೆಯನ್ನು ಎಲ್ಲಾ ಮನುವಾದಿ ಮಾಧ್ಯಮಗಳು ಮರೆಮಾಚುತ್ತವೆ ನೀವು ಕೂಡ ಮಾಯಾವತಿಯವರ ಪಕ್ಷದ ಬಗ್ಗೆ ಮಾಹಿತಿಯನ್ನೂ ಕ್ರೋಡೀಕರಿಸಿ ಒಂದು ಅಂಕಣವನ್ನು ಬರೆಯಬೇಕಾಗಿ ಮನವಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...