Homeಮುಖಪುಟಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

ಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

- Advertisement -
- Advertisement -

ಪ್ರಾದೇಶಿಕ ಪಕ್ಷಗಳ ಪೈಕಿ ಸಮಾಜವಾದಿ ಪಕ್ಷವು ಭಾರತದ ಅತ್ಯಂತ ಶ್ರೀಮಂತ ಪಕ್ಷವಾಗಿದೆ. 2021-22ರಲ್ಲಿ ಅಖಿಲೇಶ್‌ ಯಾದವ್‌ ನಾಯಕತ್ವದ ಉತ್ತರಪ್ರದೇಶದ ಸಮಾಜವಾದಿ ಪಕ್ಷವು ಅತಿ ಹೆಚ್ಚು ಆಸ್ತಿಯನ್ನು ಹೊಂದಿದ್ದು, ಭಾರತದ ಶ್ರೀಮಂತ ಪ್ರಾದೇಶಿಕ ಪಕ್ಷವಾಗಿದೆ ಎಂದು ಪ್ರಜಾಸತ್ತಾತ್ಮಕ ಸುಧಾರಣಾ ಚಿಂತಕರ ಚಾವಡಿ ವರದಿ ತಿಳಿಸಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ, 2020-21ರ ಹಣಕಾಸು ವರ್ಷದಲ್ಲಿ  ಸಮಾಜವಾದಿ ಪಕ್ಷವು ಒಟ್ಟು 561.46 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ. ಇದು 2021-22ರಲ್ಲಿ 568.369 ಕೋಟಿಗೆ ಹೆಚ್ಚಳವಾಗಿದೆ ಅಂದರೆ ಸಮಾಜವಾದಿ ಪಕ್ಷದ ಆಸ್ತಿಯಲ್ಲಿ 1.23 ಶೇಕಡಾ ಹೆಚ್ಚಳವಾಗಿದೆ.

ತೆಲಂಗಾಣದ ಚಂದ್ರಶೇಖರ್‌ ರಾವ್‌ ಅವರ ಭಾರತ್ ರಾಷ್ಟ್ರ ಸಮಿತಿ ಪಕ್ಷವು ದೇಶದ ಎರಡನೇ ಶ್ರೀಮಂತ  ಪ್ರಾದೇಶಿಕ ಪಕ್ಷವಾಗಿದ್ದು, 2020-21ರ ಆರ್ಥಿಕ ವರ್ಷದಲ್ಲಿ 319.55 ಕೋಟಿ ರೂ. ಆಸ್ತಿಯನ್ನು ಪಕ್ಷವು ಹೊಂದಿತ್ತು. ಆ ಬಳಿಕ 2021-22ರ ಆರ್ಥಿಕ ವರ್ಷದಲ್ಲಿ 512.24 ಕೋಟಿ ರೂ.ಗಳ ಒಟ್ಟು ಆಸ್ತಿಯನ್ನು ಬಿಆರ್‌ಎಸ್ ಘೋಷಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಡಿಎಂಕೆ, ಬಿಜೆಡಿ ಮತ್ತು ಜೆಡಿ(ಯು) ಪಕ್ಷಗಳ ಒಟ್ಟು ಆಸ್ತಿ ಶೇ.95ರಷ್ಟು ಹೆಚ್ಚಿದೆ. ದ್ರಾವಿಡ ಮುನ್ನೇತ್ರ ಕಳಗಂ 2020-21ರಲ್ಲಿ 115.708 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ  399 ಕೋಟಿ ರೂ.ಗೆ ಹೆಚ್ಚಳವಾಗಿದೆ ಅಂದರೆ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಆಸ್ತಿಯಲ್ಲಿ  244.88ರಷ್ಟು ಹೆಚ್ಚಳವಾಗಿದೆ.

ಬಿಜು ಜನತಾ ದಳವು 2020-21ರಲ್ಲಿ 194 ಕೋಟಿ ರೂ. ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ ಶೇ.143 ರಷ್ಟು ಏರಿಕೆಯಾಗಿ 474 ಕೋಟಿ ರೂ.ಗೆ ತಲುಪಿದೆ. ಜೆಡಿ(ಯುಎಸ್) 2020-21ರಲ್ಲಿ 86 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. 2022ರಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂದರೆ 168 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ.

ಆಮ್ ಆದ್ಮಿ ಪಕ್ಷದ ಒಟ್ಟು ಆಸ್ತಿಯು 2020-21 ಮತ್ತು 2021-22ರ ನಡುವೆ 21.82 ಕೋಟಿಯಿಂದ 37.477 ಕೋಟಿಗೆ ಅಂದರೆ 71.76 ಶೇಕಡಾ ಹೆಚ್ಚಾಗಿದೆ. ಎಐಎಡಿಎಂಕೆ ಮತ್ತು ಟಿಡಿಪಿ ಪಕ್ಷಗಳು ಮಾತ್ರ ಟಾಪ್ 10 ಪ್ರಾದೇಶಿಕ ಪಕ್ಷಗಳ ಪೈಕಿ ತಮ್ಮ ಘೋಷಿತ ಆಸ್ತಿಯಲ್ಲಿ ಈ ಬಾರಿ ಇಳಿಕೆ ತೋರಿಸಿವೆ.

2020-21 ಮತ್ತು 2021-22ರ ನಡುವೆ ಎಐಎಡಿಎಂಕೆ ಆಸ್ತಿ 260.166 ಕೋಟಿ ರೂ.ನಿಂದ 256.13 ಕೋಟಿ ರೂ.ಗೆ ಮತ್ತು ಟಿಡಿಪಿಯ ಆಸ್ತಿ 133.423 ಕೋಟಿಯಿಂದ 129.372 ಕೋಟಿಗೆ ಇಳಿಕೆಯಾಗಿದೆ.

ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...