Homeಮುಖಪುಟಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

ಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

- Advertisement -
- Advertisement -

ಪ್ರಾದೇಶಿಕ ಪಕ್ಷಗಳ ಪೈಕಿ ಸಮಾಜವಾದಿ ಪಕ್ಷವು ಭಾರತದ ಅತ್ಯಂತ ಶ್ರೀಮಂತ ಪಕ್ಷವಾಗಿದೆ. 2021-22ರಲ್ಲಿ ಅಖಿಲೇಶ್‌ ಯಾದವ್‌ ನಾಯಕತ್ವದ ಉತ್ತರಪ್ರದೇಶದ ಸಮಾಜವಾದಿ ಪಕ್ಷವು ಅತಿ ಹೆಚ್ಚು ಆಸ್ತಿಯನ್ನು ಹೊಂದಿದ್ದು, ಭಾರತದ ಶ್ರೀಮಂತ ಪ್ರಾದೇಶಿಕ ಪಕ್ಷವಾಗಿದೆ ಎಂದು ಪ್ರಜಾಸತ್ತಾತ್ಮಕ ಸುಧಾರಣಾ ಚಿಂತಕರ ಚಾವಡಿ ವರದಿ ತಿಳಿಸಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ, 2020-21ರ ಹಣಕಾಸು ವರ್ಷದಲ್ಲಿ  ಸಮಾಜವಾದಿ ಪಕ್ಷವು ಒಟ್ಟು 561.46 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ. ಇದು 2021-22ರಲ್ಲಿ 568.369 ಕೋಟಿಗೆ ಹೆಚ್ಚಳವಾಗಿದೆ ಅಂದರೆ ಸಮಾಜವಾದಿ ಪಕ್ಷದ ಆಸ್ತಿಯಲ್ಲಿ 1.23 ಶೇಕಡಾ ಹೆಚ್ಚಳವಾಗಿದೆ.

ತೆಲಂಗಾಣದ ಚಂದ್ರಶೇಖರ್‌ ರಾವ್‌ ಅವರ ಭಾರತ್ ರಾಷ್ಟ್ರ ಸಮಿತಿ ಪಕ್ಷವು ದೇಶದ ಎರಡನೇ ಶ್ರೀಮಂತ  ಪ್ರಾದೇಶಿಕ ಪಕ್ಷವಾಗಿದ್ದು, 2020-21ರ ಆರ್ಥಿಕ ವರ್ಷದಲ್ಲಿ 319.55 ಕೋಟಿ ರೂ. ಆಸ್ತಿಯನ್ನು ಪಕ್ಷವು ಹೊಂದಿತ್ತು. ಆ ಬಳಿಕ 2021-22ರ ಆರ್ಥಿಕ ವರ್ಷದಲ್ಲಿ 512.24 ಕೋಟಿ ರೂ.ಗಳ ಒಟ್ಟು ಆಸ್ತಿಯನ್ನು ಬಿಆರ್‌ಎಸ್ ಘೋಷಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಡಿಎಂಕೆ, ಬಿಜೆಡಿ ಮತ್ತು ಜೆಡಿ(ಯು) ಪಕ್ಷಗಳ ಒಟ್ಟು ಆಸ್ತಿ ಶೇ.95ರಷ್ಟು ಹೆಚ್ಚಿದೆ. ದ್ರಾವಿಡ ಮುನ್ನೇತ್ರ ಕಳಗಂ 2020-21ರಲ್ಲಿ 115.708 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ  399 ಕೋಟಿ ರೂ.ಗೆ ಹೆಚ್ಚಳವಾಗಿದೆ ಅಂದರೆ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಆಸ್ತಿಯಲ್ಲಿ  244.88ರಷ್ಟು ಹೆಚ್ಚಳವಾಗಿದೆ.

ಬಿಜು ಜನತಾ ದಳವು 2020-21ರಲ್ಲಿ 194 ಕೋಟಿ ರೂ. ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ ಶೇ.143 ರಷ್ಟು ಏರಿಕೆಯಾಗಿ 474 ಕೋಟಿ ರೂ.ಗೆ ತಲುಪಿದೆ. ಜೆಡಿ(ಯುಎಸ್) 2020-21ರಲ್ಲಿ 86 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. 2022ರಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂದರೆ 168 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ.

ಆಮ್ ಆದ್ಮಿ ಪಕ್ಷದ ಒಟ್ಟು ಆಸ್ತಿಯು 2020-21 ಮತ್ತು 2021-22ರ ನಡುವೆ 21.82 ಕೋಟಿಯಿಂದ 37.477 ಕೋಟಿಗೆ ಅಂದರೆ 71.76 ಶೇಕಡಾ ಹೆಚ್ಚಾಗಿದೆ. ಎಐಎಡಿಎಂಕೆ ಮತ್ತು ಟಿಡಿಪಿ ಪಕ್ಷಗಳು ಮಾತ್ರ ಟಾಪ್ 10 ಪ್ರಾದೇಶಿಕ ಪಕ್ಷಗಳ ಪೈಕಿ ತಮ್ಮ ಘೋಷಿತ ಆಸ್ತಿಯಲ್ಲಿ ಈ ಬಾರಿ ಇಳಿಕೆ ತೋರಿಸಿವೆ.

2020-21 ಮತ್ತು 2021-22ರ ನಡುವೆ ಎಐಎಡಿಎಂಕೆ ಆಸ್ತಿ 260.166 ಕೋಟಿ ರೂ.ನಿಂದ 256.13 ಕೋಟಿ ರೂ.ಗೆ ಮತ್ತು ಟಿಡಿಪಿಯ ಆಸ್ತಿ 133.423 ಕೋಟಿಯಿಂದ 129.372 ಕೋಟಿಗೆ ಇಳಿಕೆಯಾಗಿದೆ.

ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...