Homeಮುಖಪುಟಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

ಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

- Advertisement -
- Advertisement -

ಪ್ರಾದೇಶಿಕ ಪಕ್ಷಗಳ ಪೈಕಿ ಸಮಾಜವಾದಿ ಪಕ್ಷವು ಭಾರತದ ಅತ್ಯಂತ ಶ್ರೀಮಂತ ಪಕ್ಷವಾಗಿದೆ. 2021-22ರಲ್ಲಿ ಅಖಿಲೇಶ್‌ ಯಾದವ್‌ ನಾಯಕತ್ವದ ಉತ್ತರಪ್ರದೇಶದ ಸಮಾಜವಾದಿ ಪಕ್ಷವು ಅತಿ ಹೆಚ್ಚು ಆಸ್ತಿಯನ್ನು ಹೊಂದಿದ್ದು, ಭಾರತದ ಶ್ರೀಮಂತ ಪ್ರಾದೇಶಿಕ ಪಕ್ಷವಾಗಿದೆ ಎಂದು ಪ್ರಜಾಸತ್ತಾತ್ಮಕ ಸುಧಾರಣಾ ಚಿಂತಕರ ಚಾವಡಿ ವರದಿ ತಿಳಿಸಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ, 2020-21ರ ಹಣಕಾಸು ವರ್ಷದಲ್ಲಿ  ಸಮಾಜವಾದಿ ಪಕ್ಷವು ಒಟ್ಟು 561.46 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ. ಇದು 2021-22ರಲ್ಲಿ 568.369 ಕೋಟಿಗೆ ಹೆಚ್ಚಳವಾಗಿದೆ ಅಂದರೆ ಸಮಾಜವಾದಿ ಪಕ್ಷದ ಆಸ್ತಿಯಲ್ಲಿ 1.23 ಶೇಕಡಾ ಹೆಚ್ಚಳವಾಗಿದೆ.

ತೆಲಂಗಾಣದ ಚಂದ್ರಶೇಖರ್‌ ರಾವ್‌ ಅವರ ಭಾರತ್ ರಾಷ್ಟ್ರ ಸಮಿತಿ ಪಕ್ಷವು ದೇಶದ ಎರಡನೇ ಶ್ರೀಮಂತ  ಪ್ರಾದೇಶಿಕ ಪಕ್ಷವಾಗಿದ್ದು, 2020-21ರ ಆರ್ಥಿಕ ವರ್ಷದಲ್ಲಿ 319.55 ಕೋಟಿ ರೂ. ಆಸ್ತಿಯನ್ನು ಪಕ್ಷವು ಹೊಂದಿತ್ತು. ಆ ಬಳಿಕ 2021-22ರ ಆರ್ಥಿಕ ವರ್ಷದಲ್ಲಿ 512.24 ಕೋಟಿ ರೂ.ಗಳ ಒಟ್ಟು ಆಸ್ತಿಯನ್ನು ಬಿಆರ್‌ಎಸ್ ಘೋಷಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಡಿಎಂಕೆ, ಬಿಜೆಡಿ ಮತ್ತು ಜೆಡಿ(ಯು) ಪಕ್ಷಗಳ ಒಟ್ಟು ಆಸ್ತಿ ಶೇ.95ರಷ್ಟು ಹೆಚ್ಚಿದೆ. ದ್ರಾವಿಡ ಮುನ್ನೇತ್ರ ಕಳಗಂ 2020-21ರಲ್ಲಿ 115.708 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ  399 ಕೋಟಿ ರೂ.ಗೆ ಹೆಚ್ಚಳವಾಗಿದೆ ಅಂದರೆ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಆಸ್ತಿಯಲ್ಲಿ  244.88ರಷ್ಟು ಹೆಚ್ಚಳವಾಗಿದೆ.

ಬಿಜು ಜನತಾ ದಳವು 2020-21ರಲ್ಲಿ 194 ಕೋಟಿ ರೂ. ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ ಶೇ.143 ರಷ್ಟು ಏರಿಕೆಯಾಗಿ 474 ಕೋಟಿ ರೂ.ಗೆ ತಲುಪಿದೆ. ಜೆಡಿ(ಯುಎಸ್) 2020-21ರಲ್ಲಿ 86 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. 2022ರಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂದರೆ 168 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ.

ಆಮ್ ಆದ್ಮಿ ಪಕ್ಷದ ಒಟ್ಟು ಆಸ್ತಿಯು 2020-21 ಮತ್ತು 2021-22ರ ನಡುವೆ 21.82 ಕೋಟಿಯಿಂದ 37.477 ಕೋಟಿಗೆ ಅಂದರೆ 71.76 ಶೇಕಡಾ ಹೆಚ್ಚಾಗಿದೆ. ಎಐಎಡಿಎಂಕೆ ಮತ್ತು ಟಿಡಿಪಿ ಪಕ್ಷಗಳು ಮಾತ್ರ ಟಾಪ್ 10 ಪ್ರಾದೇಶಿಕ ಪಕ್ಷಗಳ ಪೈಕಿ ತಮ್ಮ ಘೋಷಿತ ಆಸ್ತಿಯಲ್ಲಿ ಈ ಬಾರಿ ಇಳಿಕೆ ತೋರಿಸಿವೆ.

2020-21 ಮತ್ತು 2021-22ರ ನಡುವೆ ಎಐಎಡಿಎಂಕೆ ಆಸ್ತಿ 260.166 ಕೋಟಿ ರೂ.ನಿಂದ 256.13 ಕೋಟಿ ರೂ.ಗೆ ಮತ್ತು ಟಿಡಿಪಿಯ ಆಸ್ತಿ 133.423 ಕೋಟಿಯಿಂದ 129.372 ಕೋಟಿಗೆ ಇಳಿಕೆಯಾಗಿದೆ.

ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...