Homeಮುಖಪುಟಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

ಪ್ರಾದೇಶಿಕ ಪಕ್ಷಗಳ ಆಸ್ತಿಗಳಲ್ಲಿ ಗಣನೀಯ ಹೆಚ್ಚಳ: ಮೊದಲ ಸ್ಥಾನದಲ್ಲಿರುವ ಸಮಾಜವಾದಿ ಪಕ್ಷ

- Advertisement -
- Advertisement -

ಪ್ರಾದೇಶಿಕ ಪಕ್ಷಗಳ ಪೈಕಿ ಸಮಾಜವಾದಿ ಪಕ್ಷವು ಭಾರತದ ಅತ್ಯಂತ ಶ್ರೀಮಂತ ಪಕ್ಷವಾಗಿದೆ. 2021-22ರಲ್ಲಿ ಅಖಿಲೇಶ್‌ ಯಾದವ್‌ ನಾಯಕತ್ವದ ಉತ್ತರಪ್ರದೇಶದ ಸಮಾಜವಾದಿ ಪಕ್ಷವು ಅತಿ ಹೆಚ್ಚು ಆಸ್ತಿಯನ್ನು ಹೊಂದಿದ್ದು, ಭಾರತದ ಶ್ರೀಮಂತ ಪ್ರಾದೇಶಿಕ ಪಕ್ಷವಾಗಿದೆ ಎಂದು ಪ್ರಜಾಸತ್ತಾತ್ಮಕ ಸುಧಾರಣಾ ಚಿಂತಕರ ಚಾವಡಿ ವರದಿ ತಿಳಿಸಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಪ್ರಕಾರ, 2020-21ರ ಹಣಕಾಸು ವರ್ಷದಲ್ಲಿ  ಸಮಾಜವಾದಿ ಪಕ್ಷವು ಒಟ್ಟು 561.46 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ. ಇದು 2021-22ರಲ್ಲಿ 568.369 ಕೋಟಿಗೆ ಹೆಚ್ಚಳವಾಗಿದೆ ಅಂದರೆ ಸಮಾಜವಾದಿ ಪಕ್ಷದ ಆಸ್ತಿಯಲ್ಲಿ 1.23 ಶೇಕಡಾ ಹೆಚ್ಚಳವಾಗಿದೆ.

ತೆಲಂಗಾಣದ ಚಂದ್ರಶೇಖರ್‌ ರಾವ್‌ ಅವರ ಭಾರತ್ ರಾಷ್ಟ್ರ ಸಮಿತಿ ಪಕ್ಷವು ದೇಶದ ಎರಡನೇ ಶ್ರೀಮಂತ  ಪ್ರಾದೇಶಿಕ ಪಕ್ಷವಾಗಿದ್ದು, 2020-21ರ ಆರ್ಥಿಕ ವರ್ಷದಲ್ಲಿ 319.55 ಕೋಟಿ ರೂ. ಆಸ್ತಿಯನ್ನು ಪಕ್ಷವು ಹೊಂದಿತ್ತು. ಆ ಬಳಿಕ 2021-22ರ ಆರ್ಥಿಕ ವರ್ಷದಲ್ಲಿ 512.24 ಕೋಟಿ ರೂ.ಗಳ ಒಟ್ಟು ಆಸ್ತಿಯನ್ನು ಬಿಆರ್‌ಎಸ್ ಘೋಷಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಡಿಎಂಕೆ, ಬಿಜೆಡಿ ಮತ್ತು ಜೆಡಿ(ಯು) ಪಕ್ಷಗಳ ಒಟ್ಟು ಆಸ್ತಿ ಶೇ.95ರಷ್ಟು ಹೆಚ್ಚಿದೆ. ದ್ರಾವಿಡ ಮುನ್ನೇತ್ರ ಕಳಗಂ 2020-21ರಲ್ಲಿ 115.708 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ  399 ಕೋಟಿ ರೂ.ಗೆ ಹೆಚ್ಚಳವಾಗಿದೆ ಅಂದರೆ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಆಸ್ತಿಯಲ್ಲಿ  244.88ರಷ್ಟು ಹೆಚ್ಚಳವಾಗಿದೆ.

ಬಿಜು ಜನತಾ ದಳವು 2020-21ರಲ್ಲಿ 194 ಕೋಟಿ ರೂ. ಆಸ್ತಿಯನ್ನು ಘೋಷಿಸಿತ್ತು. ಇದು 2021-22ರಲ್ಲಿ ಶೇ.143 ರಷ್ಟು ಏರಿಕೆಯಾಗಿ 474 ಕೋಟಿ ರೂ.ಗೆ ತಲುಪಿದೆ. ಜೆಡಿ(ಯುಎಸ್) 2020-21ರಲ್ಲಿ 86 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿತ್ತು. 2022ರಲ್ಲಿ ಶೇಕಡ 95ಕ್ಕಿಂತ ಹೆಚ್ಚು ಅಂದರೆ 168 ಕೋಟಿ ರೂ. ಆಸ್ತಿಯನ್ನು ಘೋಷಿಸಿದೆ.

ಆಮ್ ಆದ್ಮಿ ಪಕ್ಷದ ಒಟ್ಟು ಆಸ್ತಿಯು 2020-21 ಮತ್ತು 2021-22ರ ನಡುವೆ 21.82 ಕೋಟಿಯಿಂದ 37.477 ಕೋಟಿಗೆ ಅಂದರೆ 71.76 ಶೇಕಡಾ ಹೆಚ್ಚಾಗಿದೆ. ಎಐಎಡಿಎಂಕೆ ಮತ್ತು ಟಿಡಿಪಿ ಪಕ್ಷಗಳು ಮಾತ್ರ ಟಾಪ್ 10 ಪ್ರಾದೇಶಿಕ ಪಕ್ಷಗಳ ಪೈಕಿ ತಮ್ಮ ಘೋಷಿತ ಆಸ್ತಿಯಲ್ಲಿ ಈ ಬಾರಿ ಇಳಿಕೆ ತೋರಿಸಿವೆ.

2020-21 ಮತ್ತು 2021-22ರ ನಡುವೆ ಎಐಎಡಿಎಂಕೆ ಆಸ್ತಿ 260.166 ಕೋಟಿ ರೂ.ನಿಂದ 256.13 ಕೋಟಿ ರೂ.ಗೆ ಮತ್ತು ಟಿಡಿಪಿಯ ಆಸ್ತಿ 133.423 ಕೋಟಿಯಿಂದ 129.372 ಕೋಟಿಗೆ ಇಳಿಕೆಯಾಗಿದೆ.

ಇದನ್ನು ಓದಿ: 8 ಭಾರತೀಯರಿಗೆ ಮರಣದಂಡನೆ: ಕತಾರ್ ದೊರೆ ಜೊತೆ ಮೋದಿ ವಿಷಯ ಪ್ರಸ್ತಾಪಿಸಿಲ್ಲ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...