Homeಮುಖಪುಟಹೋರ್ಡಿಂಗ್ ಸಮರ: ಅತ್ಯಾಚಾರ ಆರೋಪವಿರುವ ಬಿಜೆಪಿಗರ ಹೋರ್ಡಿಂಗ್ ಹಾಕಿಸಿದ ಸಮಾಜವಾದಿ ಪಕ್ಷ

ಹೋರ್ಡಿಂಗ್ ಸಮರ: ಅತ್ಯಾಚಾರ ಆರೋಪವಿರುವ ಬಿಜೆಪಿಗರ ಹೋರ್ಡಿಂಗ್ ಹಾಕಿಸಿದ ಸಮಾಜವಾದಿ ಪಕ್ಷ

- Advertisement -
- Advertisement -

ಬಿಜೆಪಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಮತ್ತು ಅತ್ಯಾಚಾರ ಆರೋಪಿಯಾದ ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ್ ಫೋಟೋಗಳಿರುವ ಹೋರ್ಡಿಂಗ್ ಅನ್ನು ಹಾಕಲಾಗಿದ್ದು, ಇದನ್ನು ಸಮಾಜವಾದಿ ನಾಯಕರೊಬ್ಬರು ಮಾಡಿದ್ದಾರೆ ಎನ್ನಲಾಗಿದೆ. ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದ ಆರೋಪಿಗಳೆಂದು ಆರೋಪಿಸಿ ಸರ್ಕಾರ ಹಾಕಲಾಗಿರುವ ಹೋರ್ಡಿಂಗ್ ಪಕ್ಕದಲ್ಲೇ ಈ ಬ್ಯಾನರ್ ಹಾಕಲಾಗಿದೆ.

ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರ ಐ.ಪಿ.ಸಿಂಗ್ ಅವರು “ಇದು ಈ ರಾಜ್ಯದ ಅಪರಾಧಿಗಳು, ಇವರಿಂದ ದೂರವಿರಿ” ಎಂಬ ಶೀರ್ಷಿಕೆಯಲ್ಲಿ ಕುಲದೀಪ್ ಸೆಂಗಾರ್ ಮತ್ತು ಚಿನ್ಮಯಾನಂದ್ ಅವರ ವಿರುದ್ಧದ ಆರೋಪಗಳ ವಿವರವಿರುವ ಹಾಗೂ ಅವರ ಫೋಟೋಗಳ ಸಹಿತವಿರುವ ಬ್ಯಾನರನ್ನು ರಾತ್ರಿ ಹಾಕಿದ್ದರು. ಬೆಳಿಗ್ಗೆ ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.

“ಪ್ರತಿಭಟನಾಕಾರರಿಗೆ ಯಾವುದೇ ಖಾಸಗಿತನ ಇಲ್ಲದಿರುವಾಗ ಹಾಗೂ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನ ಸೂಚನೆಯ ಹೊರತಾಗಿಯೂ ಆದಿತ್ಯನಾಥ್ ಸರ್ಕಾರವು ಹೋರ್ಡಿಂಗ್‌ಗಳನ್ನು ತೆಗೆದುಹಾಕದಿದ್ದಾಗ, ಲೋಹಿಯಾ ಜಂಕ್ಷನ್‌ನಲ್ಲಿ ನ್ಯಾಯಾಲಯಗಳ ಹೆಸರಿಸಿದ ಕೆಲವು ಅಪರಾಧಿಗಳ ಪೋಸ್ಟರನ್ನು ನಾನು ಕೂಡ ‘ಹೆಣ್ಣುಮಕ್ಕಳು ಹುಷಾರಾಗಿರಿ’ ಎಂದು ಸಾರ್ವಜನಿಕರ ಮಾಹಿತಿಗಾಗಿ ಹಾಕಿದ್ದೇನೆ” ಎಂದು ಐಪಿ ಸಿಂಗ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಮೇಲೆ ಉನ್ನಾವೊದಲ್ಲಿ ಹದಿಹರೆಯದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪವಿದೆ. ಮಾಜಿ ಬಿಜೆಪಿ ನಾಯಕರಾಗಿರುವ ಚಿನ್ಮಯಾನಂದ್ ಅವರನ್ನು ಶಹಜಹಾನ್‌ಪುರದಲ್ಲಿ ತನ್ನ ಶಿಕ್ಷಣ ಸಂಸ್ಥೆಯ ಕಾನೂನು ವಿದ್ಯಾರ್ಥಿಯನ್ನು ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಬಂಧಿಸಲಾಗಿದೆ.

ಪೌರತ್ವ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದ ಆರೋಪಿಗಳೆಂದು ಆರೋಪಿಸಿ ಹಾಕಲಾಗಿರುವ ಹೋರ್ಡಿಂಗ್‌ಗಳನ್ನು ಕೂಡಲೇ ತೆಗೆದುಹಾಕಬೇಕೆಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟಲ್ಲಿ ಪ್ರಶ್ನಿಸಿತ್ತು. ಸುಪ್ರೀಂ ಕೋರ್ಟ್‌ ಸಹ ತೆಗೆದುಹಾಕಲು ತಾಕೀತು ಮಾಡಿದೆ. ಆದರೂ ಯೋಗಿ ಸರ್ಕಾರ ಹೋರ್ಡಿಂಗ್‌ ತೆರವುಗೊಳಿಸಿಲ್ಲ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...