Homeಮುಖಪುಟಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

ಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

- Advertisement -
- Advertisement -

ತೆಲುಗಿನ ಅದ್ಭುತ ಜೋಡಿ ಎಂದೇ ಖ್ಯಾತವಾಗಿದ್ದ ಸಮಂತಾ ಪ್ರಭು ಹಾಗೂ ನಾಗಚೈತನ್ಯ ಅವರು ವಿಚ್ಛೇದನ ಪಡೆದಿದ್ದಾರೆ. ಇಬ್ಬರೂ ವಿಚ್ಛೇದನಾ ಪಡೆದಿರುವುದಾಗಿ ಸಮಂತಾ ಅವರು ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಸಮಂತಾ ಹೀಗೆ ಬರೆದುಕೊಂಡಿದ್ದಾರೆ: “ಸಾಕಷ್ಟು ಆಲೋಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ನಾವು ಸ್ವಂತ ಮಾರ್ಗಗಳನ್ನು ಅನುಸರಿಸಲು ಹಾಗೂ ಗಂಡ, ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ಅದು ನಮ್ಮ ಸಂಬಂಧದ ಮೂಲಸೆಲೆಯಾಗಿತ್ತು. ಅದು ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮಗೆ ಸಹಕರಿಸಬೇಕು, ನಾವು ಮುಂದುವರಿಯಲು ನಮಗೆ ಖಾಸಗಿತನವನ್ನು ನೀಡಬೇಕು” ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ


ವಿಚ್ಛೇದನ ಪಡೆದಿರುವ ಸಮಂತಾ ಅವರು ಐವತ್ತು ಕೋಟಿ ರೂ. ಜೀವನಾಂಶವನ್ನು ಪಡೆಯುತ್ತಾರೆ ಎಂಬ ವರದಿಗಳಾಗಿದ್ದು, ಅದನ್ನು ಸಮಂತಾ ನಿರಾಕರಿಸಿದ್ದಾರೆ. ಅಧಿಕೃತ ಮೂಲವೊಂದರ ಪ್ರಕಾರ ಸಮಂತಾ ಅವರಿಗೆ 200 ಕೋಟಿ ರೂ.ಗಿಂ ಹೆಚ್ಚು ಜೀವನಾಂಶದ ಅವಕಾಶ ಬಂದಿತ್ತು. ಆದರೆ ತನ್ನ ಸಂಬಂಧವನ್ನು ಕೊನೆಗೊಳಿಸಲು ಸಮಂತಾ ಒಂದು ರೂಪಾಯಿ ಕೂಡ ಬಯಸಿಲ್ಲ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

“ಹೃದಯ ಘಾಸಿಗೊಂಡ ಮತ್ತು ದಿಗ್ಭ್ರಮೆಯಾದ ಸಮಂತಾ ಅವರಿಗೆ ಈ ವಿವಾಹದಿಂದ ಪ್ರೀತಿ ಮತ್ತು ಒಡನಾಟ ಮಾತ್ರ ಬೇಕಿತ್ತು. ಆದರೆ ಈಗ ಅದು ಮುಗಿದಿದೆ. ಸಮಂತಾ ಅವರಿಗೆ ಪ್ರೀತಿ ಮತ್ತು ಒಡನಾಟದ ಹೊರತಾಗಿ ಬೇರೇನೂ ಅಗತ್ಯವಿರಲಿಲ್ಲ” ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಸಮಂತಾ ಹಾಗೂ ನಾಗಚೈತನ್ಯ ಅವರ ನಡುವಿನ ಪ್ರೀತಿ 2010ರಲ್ಲಿ ‘ಯೇ ಮಾಯಾ ಚೇಸವೆ’ ಸಿನಿಮಾದಲ್ಲಿ ಕೆಲಸ ಮಾಡುವಾಗ ಆರಂಭವಾಗಿತ್ತು. 2017ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗೆ ಈ ಜೋಡಿಯ ನಡುವೆ ಬಿರುಕು ಮೂಡಿರುವ ವಿಷಯಗಳು ಹರಿದಾಡಿದ್ದವು.  ಸಮಂತಾ ಅಕ್ಕಿನೇನಿ ಎಂಬುದನ್ನು ‘ಎಸ್‌’ ಎಂಬುದಾಗಿ ಅವರು ಬದಲಿಸಿದ್ದರಿಂದ ವಿಚ್ಛೇದನ ಕುರಿತು ಸುದ್ದಿಗಳು ಹರಿದಾಡಿದ್ದವು. ಚೈತನ್ಯ ಅವರ ಕುಟುಂಬವು ಅಮೀರ್‌ ಖಾನ್‌ ಅವರಿಗೆ ಆಯೋಜಿಸಿದ್ದ ಔತಣ ಕೂಟವು ಈ ಅನುಮಾನಗಳಿಗೆ ಬಲ ನೀಡಿತ್ತು. ಈಗ ವಿಚ್ಛೇದನ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಇದನ್ನೂ ಓದಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ಈ ಆಘಾತದಿಂದ ಹೊರ ಬರಲು ಸಮಂತಾ ಅವರು ತಮ್ಮ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ತನ್ನ ವೈಯಕ್ತಿಕ ಜೀವನದ ಕಾರಣದಿಂದ ತನಗೆ ಸಂಬಂಧಿಸಿರುವ ಯಾವುದೇ ಪ್ರಾಜೆಕ್ಟ್‌ ನರಳಬಾರದು ಎಂದು  ಸಮಂತಾ ಬಯಸುತ್ತಾರೆ. ಸಮಂತಾ ಅವರು ತಮ್ಮ ವೃತ್ತಿಗೆ ಬದ್ಧರಾಗಿದ್ದು, ಅದನ್ನು ಸಾಕಷ್ಟು ಪ್ರೀತಿಸುತ್ತಾರೆ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...