Homeಮುಖಪುಟಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

ಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

- Advertisement -
- Advertisement -

ತೆಲುಗಿನ ಅದ್ಭುತ ಜೋಡಿ ಎಂದೇ ಖ್ಯಾತವಾಗಿದ್ದ ಸಮಂತಾ ಪ್ರಭು ಹಾಗೂ ನಾಗಚೈತನ್ಯ ಅವರು ವಿಚ್ಛೇದನ ಪಡೆದಿದ್ದಾರೆ. ಇಬ್ಬರೂ ವಿಚ್ಛೇದನಾ ಪಡೆದಿರುವುದಾಗಿ ಸಮಂತಾ ಅವರು ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಿಳಿಸಿದ್ದಾರೆ.

ಸಮಂತಾ ಹೀಗೆ ಬರೆದುಕೊಂಡಿದ್ದಾರೆ: “ಸಾಕಷ್ಟು ಆಲೋಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ನಾವು ಸ್ವಂತ ಮಾರ್ಗಗಳನ್ನು ಅನುಸರಿಸಲು ಹಾಗೂ ಗಂಡ, ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ಅದು ನಮ್ಮ ಸಂಬಂಧದ ಮೂಲಸೆಲೆಯಾಗಿತ್ತು. ಅದು ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮಗೆ ಸಹಕರಿಸಬೇಕು, ನಾವು ಮುಂದುವರಿಯಲು ನಮಗೆ ಖಾಸಗಿತನವನ್ನು ನೀಡಬೇಕು” ಎಂದು ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ


ವಿಚ್ಛೇದನ ಪಡೆದಿರುವ ಸಮಂತಾ ಅವರು ಐವತ್ತು ಕೋಟಿ ರೂ. ಜೀವನಾಂಶವನ್ನು ಪಡೆಯುತ್ತಾರೆ ಎಂಬ ವರದಿಗಳಾಗಿದ್ದು, ಅದನ್ನು ಸಮಂತಾ ನಿರಾಕರಿಸಿದ್ದಾರೆ. ಅಧಿಕೃತ ಮೂಲವೊಂದರ ಪ್ರಕಾರ ಸಮಂತಾ ಅವರಿಗೆ 200 ಕೋಟಿ ರೂ.ಗಿಂ ಹೆಚ್ಚು ಜೀವನಾಂಶದ ಅವಕಾಶ ಬಂದಿತ್ತು. ಆದರೆ ತನ್ನ ಸಂಬಂಧವನ್ನು ಕೊನೆಗೊಳಿಸಲು ಸಮಂತಾ ಒಂದು ರೂಪಾಯಿ ಕೂಡ ಬಯಸಿಲ್ಲ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

“ಹೃದಯ ಘಾಸಿಗೊಂಡ ಮತ್ತು ದಿಗ್ಭ್ರಮೆಯಾದ ಸಮಂತಾ ಅವರಿಗೆ ಈ ವಿವಾಹದಿಂದ ಪ್ರೀತಿ ಮತ್ತು ಒಡನಾಟ ಮಾತ್ರ ಬೇಕಿತ್ತು. ಆದರೆ ಈಗ ಅದು ಮುಗಿದಿದೆ. ಸಮಂತಾ ಅವರಿಗೆ ಪ್ರೀತಿ ಮತ್ತು ಒಡನಾಟದ ಹೊರತಾಗಿ ಬೇರೇನೂ ಅಗತ್ಯವಿರಲಿಲ್ಲ” ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ಸಮಂತಾ ಹಾಗೂ ನಾಗಚೈತನ್ಯ ಅವರ ನಡುವಿನ ಪ್ರೀತಿ 2010ರಲ್ಲಿ ‘ಯೇ ಮಾಯಾ ಚೇಸವೆ’ ಸಿನಿಮಾದಲ್ಲಿ ಕೆಲಸ ಮಾಡುವಾಗ ಆರಂಭವಾಗಿತ್ತು. 2017ರಲ್ಲಿ ವಿವಾಹವಾಗಿದ್ದರು. ಇತ್ತೀಚೆಗೆ ಈ ಜೋಡಿಯ ನಡುವೆ ಬಿರುಕು ಮೂಡಿರುವ ವಿಷಯಗಳು ಹರಿದಾಡಿದ್ದವು.  ಸಮಂತಾ ಅಕ್ಕಿನೇನಿ ಎಂಬುದನ್ನು ‘ಎಸ್‌’ ಎಂಬುದಾಗಿ ಅವರು ಬದಲಿಸಿದ್ದರಿಂದ ವಿಚ್ಛೇದನ ಕುರಿತು ಸುದ್ದಿಗಳು ಹರಿದಾಡಿದ್ದವು. ಚೈತನ್ಯ ಅವರ ಕುಟುಂಬವು ಅಮೀರ್‌ ಖಾನ್‌ ಅವರಿಗೆ ಆಯೋಜಿಸಿದ್ದ ಔತಣ ಕೂಟವು ಈ ಅನುಮಾನಗಳಿಗೆ ಬಲ ನೀಡಿತ್ತು. ಈಗ ವಿಚ್ಛೇದನ ವಿಷಯವನ್ನು ಬಹಿರಂಗಪಡಿಸಲಾಗಿದೆ.

ಇದನ್ನೂ ಓದಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ಈ ಆಘಾತದಿಂದ ಹೊರ ಬರಲು ಸಮಂತಾ ಅವರು ತಮ್ಮ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದಾರೆ. ತನ್ನ ವೈಯಕ್ತಿಕ ಜೀವನದ ಕಾರಣದಿಂದ ತನಗೆ ಸಂಬಂಧಿಸಿರುವ ಯಾವುದೇ ಪ್ರಾಜೆಕ್ಟ್‌ ನರಳಬಾರದು ಎಂದು  ಸಮಂತಾ ಬಯಸುತ್ತಾರೆ. ಸಮಂತಾ ಅವರು ತಮ್ಮ ವೃತ್ತಿಗೆ ಬದ್ಧರಾಗಿದ್ದು, ಅದನ್ನು ಸಾಕಷ್ಟು ಪ್ರೀತಿಸುತ್ತಾರೆ ಎಂದು ಮೂಲಗಳು ಹೇಳಿವೆ.


ಇದನ್ನೂ ಓದಿರಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...