Homeಮುಖಪುಟಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

- Advertisement -
- Advertisement -

ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ನಡುವಿನ ವಿವಾಹ ಸಂಬಂಧವನ್ನು ಇಬ್ಬರು ನಿರ್ಧರಿಸಿ ಕೊನೆಗೊಳಿಸಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರೂ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ನಟಿ ಸಮಂತಾ ಅವರದ್ದೇ ತಪ್ಪು ಎನ್ನುವಂತೆ ಟೀಕಿಸಲಾಗುತ್ತಿದೆ.

ನಟಿಯ ಬಾಲಿವುಡ್ ಪ್ರವೇಶ, ಫ್ಯಾಮಿಲಿ ಮ್ಯಾನ್-2 ವೆಬ್‌ ಸೀರೀಸ್‌ನಲ್ಲಿನ ಬೋಲ್ಡ್ ದೃಶ್ಯಗಳು ಮತ್ತು ಡಿಸೈನರ್‌ ಜೊತೆಗಿನ ಚಿತ್ರಗಳನ್ನು ಶೇರ್‌ ಮಾಡುತ್ತಾ ಸಂಬಂಧ ಕೊನೆಗೊಳ್ಳು ಇವುಗಳೇ ಕಾರಣ ಎಂದು ಬಿಂಬಿಸಲಾಗುತ್ತಿದೆ.

10 ವರ್ಷಗಳಿಗೂ ಹೆಚ್ಚಿನ ಸ್ನೇಹ, 4 ವರ್ಷದ ದಾಂಪತ್ಯ ಕೊನೆಗೊಂಡ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಲವು ಮಂದಿ ಟೀಕೆ ಕೂಡ ಮಾಡಿದ್ದಾರೆ. ಇವುಗಳಿಗೆ ಉತ್ತರವಾಗಿ ಶುಕ್ರವಾರ (ಅ.08) ಇನ್ಸ್ಟಾಗ್ರಾಮ್ ವೇದಿಕೆಯಲ್ಲಿ ಗುಡ್ ಮಾರ್ನಿಂಗ್ ಜೊತೆಗೆ ಕೆಲವು ಸಾಲುಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

 

ಶುಕ್ರವಾರ ಬೆಳಿಗ್ಗೆ, ಸಮಂತಾ ರುತ್ ಪ್ರಭು ಲೇಖಕಿ ಫರೀಡಾ ಡಿ ಅವರ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. “ಕೆಲವು ವಿಷಯಗಳಲ್ಲಿ ನಿರಂತರವಾಗಿ ಮಹಿಳೆಯರು ಮಾತ್ರ ನೈತಿಕವಾಗಿ ಪ್ರಶ್ನಾರ್ಹವಾಗಿದ್ದರೇ, ಅದೇ ಕೆಲಸ ಪುರುಷ ಮಾಡಿದಾಗ ನೈತಿಕವಾಗಿ ಪ್ರಶ್ನಿಸಲ್ಪಡುವುದಿಲ್ಲ ಎಂದರೆ, ನಾವು ನಮ್ಮ ಸಮಾಜದಲ್ಲಿ ಮೂಲಭೂತವಾಗಿ ಯಾವುದೇ ನೈತಿಕತೆಯನ್ನು ಹೊಂದಿಲ್ಲ” ಎಂದಿದ್ದಾರೆ.

Samantha removes 'Akkineni' from Twitter, Instagram user names

ತೆಲುಗು ನಟ ನಾಗ ಚೈತನ್ಯ ಜತೆಗಿನ ಮದುವೆ ಮುರಿದು ವಿಚ್ಛೇದನ ಪಡೆದುಕೊಂಡ ಬಳಿಕ ನಟಿ ಸಮಂತಾ ರುತ್ ಪ್ರಭು ಅವರ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗಿತ್ತು. “ಸುಮಂತಾ ಅವರಿಗೆ ಬೇರೆ ಸಂಬಂಧವಿತ್ತು. ಅವರು ಗರ್ಭಪಾತ ಮಾಡಿಸಿಕೊಂಡಿದ್ದಾರೆ” ಎಂದೆಲ್ಲ ಸುದ್ದಿ ಹಬ್ಬಿಸಲಾಗಿತ್ತು. ಇದಕ್ಕೂ ಸ್ಪಷ್ಟನೆ ನೀಡಿರುವ ಸಮಂತಾ, ಈ ಆರೋಪಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸಂದರ್ಭದಲ್ಲಿ ನನ್ನ ಜತೆಗಿರುವ ಎಲ್ಲರಿಗೂ ಧನ್ಯವಾದಗಳು, ನನ್ನ ಬಗ್ಗೆ ಹಲವು ಊಹಾಪೋಹಗಳನ್ನು ಹರಡಲಾಗಿದೆ. ನನಗೆ ಬೇರೆ ಸಂಬಂಧವಿತ್ತು, ನಾನು ಗರ್ಭಪಾತ ಮಾಡಿಸಿಕೊಂಡಿದ್ದೆ, ನನಗೆ ಮಕ್ಕಳು ಬೇಕಿರಲಿಲ್ಲ ಮತ್ತು ನಾನು ಅವಕಾಶವಾದಿಯಾಗಿದ್ದೆ ಎಂದೆಲ್ಲ ಹೇಳಲಾಗಿದೆ. ಆದರೆ ಅವೆಲ್ಲವೂ ನಿಜವಲ್ಲ. ವಿಚ್ಛೇದನದ ನೋವೇ ದೊಡ್ಡದಾಗಿದೆ. ಅದರ ಜತೆಗೆ ಇಂತಹ ಮಾತುಗಳಿಂದ ನನ್ನ ಮನಸ್ಸನ್ನು ಘಾಸಿಗೊಳಿಸಲಾಗುತ್ತಿದೆ. ಇದಕ್ಕೆ ನಾನು ಅವಕಾಶ ಕೊಡುವುದಿಲ್ಲ. ನನ್ನ ಬಗೆಗಿನ ವದಂತಿಗಳೆಲ್ಲವೂ ಸುಳ್ಳು ಎಂದು ಹೇಳುತ್ತಿದ್ದೇನೆ. ಇದರಿಂದ ಹೊರಬರಲು ನನಗೆ ಇನ್ನಷ್ಟು ಸಮಯ ಬೇಕಿದೆ” ಎಂದು ಸುಮಂತಾ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಕ್ಟೋಬರ್‌ 2 ರಂದು ಸಮಂತಾ ಪ್ರಭು ಹಾಗೂ ನಾಗಚೈತನ್ಯ ವಿಚ್ಛೇದನ ಪಡೆದಿರುವುದಾಗಿ ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಿಳಿಸಿ, ಹಲವು ದಿನಗಳ ವದಂತಿಗೆ ಅಂತ್ಯ ಹಾಡಿದ್ದರು.

“ಸಾಕಷ್ಟು ಆಲೋಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ನಾವು ಸ್ವಂತ ಮಾರ್ಗಗಳನ್ನು ಅನುಸರಿಸಲು ಹಾಗೂ ಗಂಡ, ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ಅದು ನಮ್ಮ ಸಂಬಂಧದ ಮೂಲ ಸೆಲೆಯಾಗಿತ್ತು. ಅದು ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮಗೆ ಸಹಕರಿಸಬೇಕು, ನಾವು ಮುಂದುವರಿಯಲು ನಮಗೆ ಖಾಸಗಿತನವನ್ನು ನೀಡಬೇಕು” ಎಂದು ಬರೆದುಕೊಂಡಿದ್ದರು.

ವಿಚ್ಛೇದನ ಪಡೆದಿರುವ ಸಮಂತಾ ಅವರು ಐವತ್ತು ಕೋಟಿ ರೂ. ಜೀವನಾಂಶವನ್ನು ಪಡೆಯುತ್ತಾರೆ ಎಂಬ ವರದಿಗಳಾಗಿದ್ದವು. ಆದರೆ, ಅದನ್ನು ಸಮಂತಾ ನಿರಾಕರಿಸಿದ್ದಾರೆ. ಅಧಿಕೃತ ಮೂಲವೊಂದರ ಪ್ರಕಾರ ಸಮಂತಾ ಅವರಿಗೆ 200 ಕೋಟಿ ರೂ.ಗಿಂ ಹೆಚ್ಚು ಜೀವನಾಂಶದ ಅವಕಾಶ ಬಂದಿತ್ತು. ಆದರೆ ತನ್ನ ಸಂಬಂಧವನ್ನು ಕೊನೆಗೊಳಿಸಲು ಆಕೆ ಒಂದು ರೂಪಾಯಿ ಕೂಡ ಬಯಸಿಲ್ಲ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಸಮಂತಾ ಹಾಗೂ ನಾಗಚೈತನ್ಯ ಅವರ ನಡುವೆ 2010ರಲ್ಲಿ ‘ಯೇ ಮಾಯಾ ಚೇಸವೆ’ ಸಿನಿಮಾದಲ್ಲಿ ಕೆಲಸ ಮಾಡುವಾಗ ಗೆಳೆತನ ಆರಂಭವಾಗಿತ್ತು. 2017ರಲ್ಲಿ ವಿವಾಹವಾಗಿದ್ದರು.


ಇದನ್ನೂ ಓದಿ: ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...