Homeಮುಖಪುಟಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

- Advertisement -
- Advertisement -

ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ನಡುವಿನ ವಿವಾಹ ಸಂಬಂಧವನ್ನು ಇಬ್ಬರು ನಿರ್ಧರಿಸಿ ಕೊನೆಗೊಳಿಸಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರೂ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ನಟಿ ಸಮಂತಾ ಅವರದ್ದೇ ತಪ್ಪು ಎನ್ನುವಂತೆ ಟೀಕಿಸಲಾಗುತ್ತಿದೆ.

ನಟಿಯ ಬಾಲಿವುಡ್ ಪ್ರವೇಶ, ಫ್ಯಾಮಿಲಿ ಮ್ಯಾನ್-2 ವೆಬ್‌ ಸೀರೀಸ್‌ನಲ್ಲಿನ ಬೋಲ್ಡ್ ದೃಶ್ಯಗಳು ಮತ್ತು ಡಿಸೈನರ್‌ ಜೊತೆಗಿನ ಚಿತ್ರಗಳನ್ನು ಶೇರ್‌ ಮಾಡುತ್ತಾ ಸಂಬಂಧ ಕೊನೆಗೊಳ್ಳು ಇವುಗಳೇ ಕಾರಣ ಎಂದು ಬಿಂಬಿಸಲಾಗುತ್ತಿದೆ.

10 ವರ್ಷಗಳಿಗೂ ಹೆಚ್ಚಿನ ಸ್ನೇಹ, 4 ವರ್ಷದ ದಾಂಪತ್ಯ ಕೊನೆಗೊಂಡ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಲವು ಮಂದಿ ಟೀಕೆ ಕೂಡ ಮಾಡಿದ್ದಾರೆ. ಇವುಗಳಿಗೆ ಉತ್ತರವಾಗಿ ಶುಕ್ರವಾರ (ಅ.08) ಇನ್ಸ್ಟಾಗ್ರಾಮ್ ವೇದಿಕೆಯಲ್ಲಿ ಗುಡ್ ಮಾರ್ನಿಂಗ್ ಜೊತೆಗೆ ಕೆಲವು ಸಾಲುಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

 

ಶುಕ್ರವಾರ ಬೆಳಿಗ್ಗೆ, ಸಮಂತಾ ರುತ್ ಪ್ರಭು ಲೇಖಕಿ ಫರೀಡಾ ಡಿ ಅವರ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. “ಕೆಲವು ವಿಷಯಗಳಲ್ಲಿ ನಿರಂತರವಾಗಿ ಮಹಿಳೆಯರು ಮಾತ್ರ ನೈತಿಕವಾಗಿ ಪ್ರಶ್ನಾರ್ಹವಾಗಿದ್ದರೇ, ಅದೇ ಕೆಲಸ ಪುರುಷ ಮಾಡಿದಾಗ ನೈತಿಕವಾಗಿ ಪ್ರಶ್ನಿಸಲ್ಪಡುವುದಿಲ್ಲ ಎಂದರೆ, ನಾವು ನಮ್ಮ ಸಮಾಜದಲ್ಲಿ ಮೂಲಭೂತವಾಗಿ ಯಾವುದೇ ನೈತಿಕತೆಯನ್ನು ಹೊಂದಿಲ್ಲ” ಎಂದಿದ್ದಾರೆ.

Samantha removes 'Akkineni' from Twitter, Instagram user names

ತೆಲುಗು ನಟ ನಾಗ ಚೈತನ್ಯ ಜತೆಗಿನ ಮದುವೆ ಮುರಿದು ವಿಚ್ಛೇದನ ಪಡೆದುಕೊಂಡ ಬಳಿಕ ನಟಿ ಸಮಂತಾ ರುತ್ ಪ್ರಭು ಅವರ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗಿತ್ತು. “ಸುಮಂತಾ ಅವರಿಗೆ ಬೇರೆ ಸಂಬಂಧವಿತ್ತು. ಅವರು ಗರ್ಭಪಾತ ಮಾಡಿಸಿಕೊಂಡಿದ್ದಾರೆ” ಎಂದೆಲ್ಲ ಸುದ್ದಿ ಹಬ್ಬಿಸಲಾಗಿತ್ತು. ಇದಕ್ಕೂ ಸ್ಪಷ್ಟನೆ ನೀಡಿರುವ ಸಮಂತಾ, ಈ ಆರೋಪಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸಂದರ್ಭದಲ್ಲಿ ನನ್ನ ಜತೆಗಿರುವ ಎಲ್ಲರಿಗೂ ಧನ್ಯವಾದಗಳು, ನನ್ನ ಬಗ್ಗೆ ಹಲವು ಊಹಾಪೋಹಗಳನ್ನು ಹರಡಲಾಗಿದೆ. ನನಗೆ ಬೇರೆ ಸಂಬಂಧವಿತ್ತು, ನಾನು ಗರ್ಭಪಾತ ಮಾಡಿಸಿಕೊಂಡಿದ್ದೆ, ನನಗೆ ಮಕ್ಕಳು ಬೇಕಿರಲಿಲ್ಲ ಮತ್ತು ನಾನು ಅವಕಾಶವಾದಿಯಾಗಿದ್ದೆ ಎಂದೆಲ್ಲ ಹೇಳಲಾಗಿದೆ. ಆದರೆ ಅವೆಲ್ಲವೂ ನಿಜವಲ್ಲ. ವಿಚ್ಛೇದನದ ನೋವೇ ದೊಡ್ಡದಾಗಿದೆ. ಅದರ ಜತೆಗೆ ಇಂತಹ ಮಾತುಗಳಿಂದ ನನ್ನ ಮನಸ್ಸನ್ನು ಘಾಸಿಗೊಳಿಸಲಾಗುತ್ತಿದೆ. ಇದಕ್ಕೆ ನಾನು ಅವಕಾಶ ಕೊಡುವುದಿಲ್ಲ. ನನ್ನ ಬಗೆಗಿನ ವದಂತಿಗಳೆಲ್ಲವೂ ಸುಳ್ಳು ಎಂದು ಹೇಳುತ್ತಿದ್ದೇನೆ. ಇದರಿಂದ ಹೊರಬರಲು ನನಗೆ ಇನ್ನಷ್ಟು ಸಮಯ ಬೇಕಿದೆ” ಎಂದು ಸುಮಂತಾ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಕ್ಟೋಬರ್‌ 2 ರಂದು ಸಮಂತಾ ಪ್ರಭು ಹಾಗೂ ನಾಗಚೈತನ್ಯ ವಿಚ್ಛೇದನ ಪಡೆದಿರುವುದಾಗಿ ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಿಳಿಸಿ, ಹಲವು ದಿನಗಳ ವದಂತಿಗೆ ಅಂತ್ಯ ಹಾಡಿದ್ದರು.

“ಸಾಕಷ್ಟು ಆಲೋಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ನಾವು ಸ್ವಂತ ಮಾರ್ಗಗಳನ್ನು ಅನುಸರಿಸಲು ಹಾಗೂ ಗಂಡ, ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ಅದು ನಮ್ಮ ಸಂಬಂಧದ ಮೂಲ ಸೆಲೆಯಾಗಿತ್ತು. ಅದು ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮಗೆ ಸಹಕರಿಸಬೇಕು, ನಾವು ಮುಂದುವರಿಯಲು ನಮಗೆ ಖಾಸಗಿತನವನ್ನು ನೀಡಬೇಕು” ಎಂದು ಬರೆದುಕೊಂಡಿದ್ದರು.

ವಿಚ್ಛೇದನ ಪಡೆದಿರುವ ಸಮಂತಾ ಅವರು ಐವತ್ತು ಕೋಟಿ ರೂ. ಜೀವನಾಂಶವನ್ನು ಪಡೆಯುತ್ತಾರೆ ಎಂಬ ವರದಿಗಳಾಗಿದ್ದವು. ಆದರೆ, ಅದನ್ನು ಸಮಂತಾ ನಿರಾಕರಿಸಿದ್ದಾರೆ. ಅಧಿಕೃತ ಮೂಲವೊಂದರ ಪ್ರಕಾರ ಸಮಂತಾ ಅವರಿಗೆ 200 ಕೋಟಿ ರೂ.ಗಿಂ ಹೆಚ್ಚು ಜೀವನಾಂಶದ ಅವಕಾಶ ಬಂದಿತ್ತು. ಆದರೆ ತನ್ನ ಸಂಬಂಧವನ್ನು ಕೊನೆಗೊಳಿಸಲು ಆಕೆ ಒಂದು ರೂಪಾಯಿ ಕೂಡ ಬಯಸಿಲ್ಲ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಸಮಂತಾ ಹಾಗೂ ನಾಗಚೈತನ್ಯ ಅವರ ನಡುವೆ 2010ರಲ್ಲಿ ‘ಯೇ ಮಾಯಾ ಚೇಸವೆ’ ಸಿನಿಮಾದಲ್ಲಿ ಕೆಲಸ ಮಾಡುವಾಗ ಗೆಳೆತನ ಆರಂಭವಾಗಿತ್ತು. 2017ರಲ್ಲಿ ವಿವಾಹವಾಗಿದ್ದರು.


ಇದನ್ನೂ ಓದಿ: ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...