Homeಮುಖಪುಟಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

ಪುರುಷ ಪ್ರಧಾನ ನೈತಿಕತೆ ಪ್ರಶ್ನಿಸಿ ನಟಿ ಸಮಂತಾ ಪೋಸ್ಟ್‌; ಆರೋಪಗಳಿಗೆ ಸ್ಪಷ್ಟನೆ

- Advertisement -
- Advertisement -

ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ನಡುವಿನ ವಿವಾಹ ಸಂಬಂಧವನ್ನು ಇಬ್ಬರು ನಿರ್ಧರಿಸಿ ಕೊನೆಗೊಳಿಸಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರೂ ಸ್ಪಷ್ಟವಾಗಿ ಮಾಹಿತಿಯನ್ನು ನೀಡಿದ್ದಾರೆ. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ನಟಿ ಸಮಂತಾ ಅವರದ್ದೇ ತಪ್ಪು ಎನ್ನುವಂತೆ ಟೀಕಿಸಲಾಗುತ್ತಿದೆ.

ನಟಿಯ ಬಾಲಿವುಡ್ ಪ್ರವೇಶ, ಫ್ಯಾಮಿಲಿ ಮ್ಯಾನ್-2 ವೆಬ್‌ ಸೀರೀಸ್‌ನಲ್ಲಿನ ಬೋಲ್ಡ್ ದೃಶ್ಯಗಳು ಮತ್ತು ಡಿಸೈನರ್‌ ಜೊತೆಗಿನ ಚಿತ್ರಗಳನ್ನು ಶೇರ್‌ ಮಾಡುತ್ತಾ ಸಂಬಂಧ ಕೊನೆಗೊಳ್ಳು ಇವುಗಳೇ ಕಾರಣ ಎಂದು ಬಿಂಬಿಸಲಾಗುತ್ತಿದೆ.

10 ವರ್ಷಗಳಿಗೂ ಹೆಚ್ಚಿನ ಸ್ನೇಹ, 4 ವರ್ಷದ ದಾಂಪತ್ಯ ಕೊನೆಗೊಂಡ ಬಗ್ಗೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಲವು ಮಂದಿ ಟೀಕೆ ಕೂಡ ಮಾಡಿದ್ದಾರೆ. ಇವುಗಳಿಗೆ ಉತ್ತರವಾಗಿ ಶುಕ್ರವಾರ (ಅ.08) ಇನ್ಸ್ಟಾಗ್ರಾಮ್ ವೇದಿಕೆಯಲ್ಲಿ ಗುಡ್ ಮಾರ್ನಿಂಗ್ ಜೊತೆಗೆ ಕೆಲವು ಸಾಲುಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಪ್ರೀತಿಯಷ್ಟೇ ಬಯಸಿದ್ದು; 200 ಕೋಟಿ ರೂ. ಜೀವನಾಂಶ ನಿರಾಕರಿಸಿದ ನಟಿ ಸಮಂತಾ!

 

ಶುಕ್ರವಾರ ಬೆಳಿಗ್ಗೆ, ಸಮಂತಾ ರುತ್ ಪ್ರಭು ಲೇಖಕಿ ಫರೀಡಾ ಡಿ ಅವರ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. “ಕೆಲವು ವಿಷಯಗಳಲ್ಲಿ ನಿರಂತರವಾಗಿ ಮಹಿಳೆಯರು ಮಾತ್ರ ನೈತಿಕವಾಗಿ ಪ್ರಶ್ನಾರ್ಹವಾಗಿದ್ದರೇ, ಅದೇ ಕೆಲಸ ಪುರುಷ ಮಾಡಿದಾಗ ನೈತಿಕವಾಗಿ ಪ್ರಶ್ನಿಸಲ್ಪಡುವುದಿಲ್ಲ ಎಂದರೆ, ನಾವು ನಮ್ಮ ಸಮಾಜದಲ್ಲಿ ಮೂಲಭೂತವಾಗಿ ಯಾವುದೇ ನೈತಿಕತೆಯನ್ನು ಹೊಂದಿಲ್ಲ” ಎಂದಿದ್ದಾರೆ.

Samantha removes 'Akkineni' from Twitter, Instagram user names

ತೆಲುಗು ನಟ ನಾಗ ಚೈತನ್ಯ ಜತೆಗಿನ ಮದುವೆ ಮುರಿದು ವಿಚ್ಛೇದನ ಪಡೆದುಕೊಂಡ ಬಳಿಕ ನಟಿ ಸಮಂತಾ ರುತ್ ಪ್ರಭು ಅವರ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಲಾಗಿತ್ತು. “ಸುಮಂತಾ ಅವರಿಗೆ ಬೇರೆ ಸಂಬಂಧವಿತ್ತು. ಅವರು ಗರ್ಭಪಾತ ಮಾಡಿಸಿಕೊಂಡಿದ್ದಾರೆ” ಎಂದೆಲ್ಲ ಸುದ್ದಿ ಹಬ್ಬಿಸಲಾಗಿತ್ತು. ಇದಕ್ಕೂ ಸ್ಪಷ್ಟನೆ ನೀಡಿರುವ ಸಮಂತಾ, ಈ ಆರೋಪಗಳಿಗೆ ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಸಂದರ್ಭದಲ್ಲಿ ನನ್ನ ಜತೆಗಿರುವ ಎಲ್ಲರಿಗೂ ಧನ್ಯವಾದಗಳು, ನನ್ನ ಬಗ್ಗೆ ಹಲವು ಊಹಾಪೋಹಗಳನ್ನು ಹರಡಲಾಗಿದೆ. ನನಗೆ ಬೇರೆ ಸಂಬಂಧವಿತ್ತು, ನಾನು ಗರ್ಭಪಾತ ಮಾಡಿಸಿಕೊಂಡಿದ್ದೆ, ನನಗೆ ಮಕ್ಕಳು ಬೇಕಿರಲಿಲ್ಲ ಮತ್ತು ನಾನು ಅವಕಾಶವಾದಿಯಾಗಿದ್ದೆ ಎಂದೆಲ್ಲ ಹೇಳಲಾಗಿದೆ. ಆದರೆ ಅವೆಲ್ಲವೂ ನಿಜವಲ್ಲ. ವಿಚ್ಛೇದನದ ನೋವೇ ದೊಡ್ಡದಾಗಿದೆ. ಅದರ ಜತೆಗೆ ಇಂತಹ ಮಾತುಗಳಿಂದ ನನ್ನ ಮನಸ್ಸನ್ನು ಘಾಸಿಗೊಳಿಸಲಾಗುತ್ತಿದೆ. ಇದಕ್ಕೆ ನಾನು ಅವಕಾಶ ಕೊಡುವುದಿಲ್ಲ. ನನ್ನ ಬಗೆಗಿನ ವದಂತಿಗಳೆಲ್ಲವೂ ಸುಳ್ಳು ಎಂದು ಹೇಳುತ್ತಿದ್ದೇನೆ. ಇದರಿಂದ ಹೊರಬರಲು ನನಗೆ ಇನ್ನಷ್ಟು ಸಮಯ ಬೇಕಿದೆ” ಎಂದು ಸುಮಂತಾ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಅಕ್ಟೋಬರ್‌ 2 ರಂದು ಸಮಂತಾ ಪ್ರಭು ಹಾಗೂ ನಾಗಚೈತನ್ಯ ವಿಚ್ಛೇದನ ಪಡೆದಿರುವುದಾಗಿ ತಮ್ಮ ಇನ್ಸ್‌ಸ್ಟಾಗ್ರಾಮ್‌ ಖಾತೆಯಲ್ಲಿ ತಿಳಿಸಿ, ಹಲವು ದಿನಗಳ ವದಂತಿಗೆ ಅಂತ್ಯ ಹಾಡಿದ್ದರು.

“ಸಾಕಷ್ಟು ಆಲೋಚಿಸಿ ಈ ನಿರ್ಧಾರ ಕೈಗೊಂಡಿದ್ದೇವೆ. ನಾವು ಸ್ವಂತ ಮಾರ್ಗಗಳನ್ನು ಅನುಸರಿಸಲು ಹಾಗೂ ಗಂಡ, ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ಅದು ನಮ್ಮ ಸಂಬಂಧದ ಮೂಲ ಸೆಲೆಯಾಗಿತ್ತು. ಅದು ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಉಳಿಸಿಕೊಳ್ಳುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮಗೆ ಸಹಕರಿಸಬೇಕು, ನಾವು ಮುಂದುವರಿಯಲು ನಮಗೆ ಖಾಸಗಿತನವನ್ನು ನೀಡಬೇಕು” ಎಂದು ಬರೆದುಕೊಂಡಿದ್ದರು.

ವಿಚ್ಛೇದನ ಪಡೆದಿರುವ ಸಮಂತಾ ಅವರು ಐವತ್ತು ಕೋಟಿ ರೂ. ಜೀವನಾಂಶವನ್ನು ಪಡೆಯುತ್ತಾರೆ ಎಂಬ ವರದಿಗಳಾಗಿದ್ದವು. ಆದರೆ, ಅದನ್ನು ಸಮಂತಾ ನಿರಾಕರಿಸಿದ್ದಾರೆ. ಅಧಿಕೃತ ಮೂಲವೊಂದರ ಪ್ರಕಾರ ಸಮಂತಾ ಅವರಿಗೆ 200 ಕೋಟಿ ರೂ.ಗಿಂ ಹೆಚ್ಚು ಜೀವನಾಂಶದ ಅವಕಾಶ ಬಂದಿತ್ತು. ಆದರೆ ತನ್ನ ಸಂಬಂಧವನ್ನು ಕೊನೆಗೊಳಿಸಲು ಆಕೆ ಒಂದು ರೂಪಾಯಿ ಕೂಡ ಬಯಸಿಲ್ಲ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಸಮಂತಾ ಹಾಗೂ ನಾಗಚೈತನ್ಯ ಅವರ ನಡುವೆ 2010ರಲ್ಲಿ ‘ಯೇ ಮಾಯಾ ಚೇಸವೆ’ ಸಿನಿಮಾದಲ್ಲಿ ಕೆಲಸ ಮಾಡುವಾಗ ಗೆಳೆತನ ಆರಂಭವಾಗಿತ್ತು. 2017ರಲ್ಲಿ ವಿವಾಹವಾಗಿದ್ದರು.


ಇದನ್ನೂ ಓದಿ: ಅಕ್ಟೋಬರ್‌ನಲ್ಲಿ ಒಟಿಟಿ ವೇದಿಕೆಯಲ್ಲಿ ಸಿಗಲಿರುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...