Homeಮುಖಪುಟಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

- Advertisement -
- Advertisement -

ಸಂಭಾಲ್: ಇಲ್ಲಿನ ಆಲಂ ಸರಾಯ್‌ನಲ್ಲಿರುವ ಸುದೀರ್ಘ ಇತಿಹಾಸವಿರುವ ಶಿಕ್ಷಣ ಸಂಸ್ಥೆ ಆಜಾದ್ ಜನ್ನತ್ ನಿಶಾ ಶಾಲೆಯ ಕಟ್ಟಡವನ್ನು ನೆಲಸಮಗೊಳಿಸದಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.

46 ವರ್ಷಗಳ ಹಿಂದೆ ಭೂಮಿ ಮಾರಾಟ ಮಾಡಿದವರ ಕಾನೂನುಬದ್ಧ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಈ ದಾವೆಗೆ ಸ್ಥಳೀಯ ಹಿಂದೂತ್ವ ಗುಂಪುಗಳ ಬೆಂಬಲವೂ ಇತ್ತು ಎಂದು ಹಿಂದಿನ ಮೂಲಗಳಿಂದ ತಿಳಿದುಬಂದಿದೆ.

ಆಲಂ ಸರಾಯ್‌ನಲ್ಲಿರುವ ಆಜಾದ್ ಜನ್ನತ್ ನಿಶಾ ಶಾಲೆಯ ವ್ಯವಸ್ಥಾಪಕ ಮೊಹಮ್ಮದ್ ಶಹವೇಜ್ ಆಲಂ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 1979ರಿಂದ ತಾನೇ ಭೂಮಿಯ ನಿಜವಾದ ಮಾಲೀಕ ಎಂದು ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದರು.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಹರ್ವೀರ್ ಸಿಂಗ್ ಅವರನ್ನೊಳಗೊಂಡ ಪೀಠವು ಶಾಲಾ ಕಟ್ಟಡವನ್ನು ನೆಲಸಮಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು, ಸಂಸ್ಥೆಯ ಶಾಂತಿಯುತ ಕಾರ್ಯನಿರ್ವಹಣೆಗೆ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶಿಸಿದೆ.

ಈ ಸಮಸ್ಯೆಯು 2025ರ ಜನವರಿ 13ರಂದು ಪ್ರಾರಂಭವಾಯಿತು. ಅಂದು ಜಿಲ್ಲಾಧಿಕಾರಿ, ಉಪವಿಭಾಗೀಯ ದಂಡಾಧಿಕಾರಿ, ಪೊಲೀಸ್ ಪಡೆ ಮತ್ತು ತಹಸೀಲ್ದಾರ್, ಲೇಖಪಾಲ್, ನಾಯಬ್ ಲೇಖಪಾಲ್ ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಭೂಮಿಯ ಮಾಲೀಕತ್ವವನ್ನು ಪ್ರತಿಪಾದಿಸಿದವರೊಂದಿಗೆ ಶಾಲಾ ಆವರಣಕ್ಕೆ ಆಗಮಿಸಿ, ಮಾಲೀಕರಿಗೆ ಬೆದರಿಕೆ ಹಾಕಲು ಮುಂದಾದರು.

ತಮ್ಮ ತಂದೆ 1979ರ ಜನವರಿ 8ರಂದು ನೋಂದಾಯಿತ ಮಾರಾಟ ಪತ್ರದ ಮೂಲಕ ಗಂಗಾ ಪ್ರಸಾದ್ ಮತ್ತು ಹರ್ ಪ್ರಸಾದ್ ಅವರಿಂದ ಭೂಮಿಯನ್ನು ಖರೀದಿಸಿದ್ದರು. ಆದರೆ ಈಗ ಅವರ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ಶಾಲಾ ವ್ಯವಸ್ಥಾಪಕರು ವಾದಿಸಿದ್ದಾರೆ.

ಉತ್ತರಪ್ರದೇಶ ಮಂಡಳಿಗೆ ಸಂಯೋಜಿತವಾಗಿರುವ ಈ ಶಾಲೆಯು ಪ್ರಸ್ತುತ ನರ್ಸರಿಯಿಂದ 10ನೇ ತರಗತಿಯವರೆಗೆ ತರಗತಿಗಳನ್ನು ನಡೆಸುತ್ತಿದೆ. ದಶಕಗಳಿಂದ ಶಾಂತಿಯುತವಾಗಿ, ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುತ್ತಿದೆ.

2025ರ ಜನವರಿಯಿಂದ ಜೂನ್‌ವರೆಗೆ ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಯಾವುದೇ ಕಾನೂನುಬದ್ಧ ಆದೇಶವಿಲ್ಲದೆ ಶಾಲಾ ಆವರಣಕ್ಕೆ ಭೇಟಿ ನೀಡಿ, ಕಾಲಕಾಲಕ್ಕೆ ಮಾಲೀಕರಿಗೆ ಬೆದರಿಕೆ ಹಾಕುವುದನ್ನು ಮುಂದುವರೆಸಿದ್ದರು ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.

2025ರ ಮೇ 15ರಂದು ಆಡಳಿತವು ಶಾಲೆಯ ಮುಖ್ಯ ದ್ವಾರದ ಜೊತೆಗೆ ಹಲವು ತರಗತಿ ಕೊಠಡಿಗಳನ್ನು ನೆಲಸಮಗೊಳಿಸಿದ್ದು, ಇದರಿಂದ ಸುಮಾರು ₹30 ಲಕ್ಷ ರೂ. ಮೌಲ್ಯದ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಅರ್ಜಿದಾರರ ಮಾಲೀಕತ್ವದಲ್ಲಿರುವ ಶಾಲೆಗೆ ಹೋಗುವ ದಾರಿಯನ್ನೂ ಒಳಗೊಂಡಂತೆ ಶಾಲಾ ಭೂಮಿಯ ಕೆಲವು ಭಾಗಗಳನ್ನು ವಶಪಡಿಸಿಕೊಳ್ಳಲಾಗಿತ್ತು.

2024ರ ನವೆಂಬರ್‌ನಲ್ಲಿ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ನಂತರ ಕೋಮು ಉದ್ವಿಗ್ನತೆಗಳು ಹೆಚ್ಚಾದಾಗ ಈ ವಿವಾದ ಮತ್ತಷ್ಟು ಉಲ್ಬಣಗೊಂಡಿದೆ ಎಂದು APCR ಪ್ರತಿಪಾದಿಸಿದೆ.

ಶಾಲಾ ಕಟ್ಟಡವನ್ನು ನೆಲಸಮಗೊಳಿಸುವ ಯಾವುದೇ ಯೋಜನೆ ಪ್ರಸ್ತುತ ಇಲ್ಲ ಎಂದು ರಾಜ್ಯದ ಪರ ವಾದ ಮಂಡಿಸಿದ ವಕೀಲ ಗೋಪಾಲ್ ಸಕ್ಸೇನಾ ಅವರು ಸ್ಪಷ್ಟಪಡಿಸಿದರು. ಭವಿಷ್ಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಬೇಕಾದರೂ ಕಾನೂನುಬದ್ಧ ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...