Homeಮುಖಪುಟಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

- Advertisement -
- Advertisement -

ಸಂಭಾಲ್: ಇಲ್ಲಿನ ಆಲಂ ಸರಾಯ್‌ನಲ್ಲಿರುವ ಸುದೀರ್ಘ ಇತಿಹಾಸವಿರುವ ಶಿಕ್ಷಣ ಸಂಸ್ಥೆ ಆಜಾದ್ ಜನ್ನತ್ ನಿಶಾ ಶಾಲೆಯ ಕಟ್ಟಡವನ್ನು ನೆಲಸಮಗೊಳಿಸದಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.

46 ವರ್ಷಗಳ ಹಿಂದೆ ಭೂಮಿ ಮಾರಾಟ ಮಾಡಿದವರ ಕಾನೂನುಬದ್ಧ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಈ ದಾವೆಗೆ ಸ್ಥಳೀಯ ಹಿಂದೂತ್ವ ಗುಂಪುಗಳ ಬೆಂಬಲವೂ ಇತ್ತು ಎಂದು ಹಿಂದಿನ ಮೂಲಗಳಿಂದ ತಿಳಿದುಬಂದಿದೆ.

ಆಲಂ ಸರಾಯ್‌ನಲ್ಲಿರುವ ಆಜಾದ್ ಜನ್ನತ್ ನಿಶಾ ಶಾಲೆಯ ವ್ಯವಸ್ಥಾಪಕ ಮೊಹಮ್ಮದ್ ಶಹವೇಜ್ ಆಲಂ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 1979ರಿಂದ ತಾನೇ ಭೂಮಿಯ ನಿಜವಾದ ಮಾಲೀಕ ಎಂದು ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದರು.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಹರ್ವೀರ್ ಸಿಂಗ್ ಅವರನ್ನೊಳಗೊಂಡ ಪೀಠವು ಶಾಲಾ ಕಟ್ಟಡವನ್ನು ನೆಲಸಮಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು, ಸಂಸ್ಥೆಯ ಶಾಂತಿಯುತ ಕಾರ್ಯನಿರ್ವಹಣೆಗೆ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶಿಸಿದೆ.

ಈ ಸಮಸ್ಯೆಯು 2025ರ ಜನವರಿ 13ರಂದು ಪ್ರಾರಂಭವಾಯಿತು. ಅಂದು ಜಿಲ್ಲಾಧಿಕಾರಿ, ಉಪವಿಭಾಗೀಯ ದಂಡಾಧಿಕಾರಿ, ಪೊಲೀಸ್ ಪಡೆ ಮತ್ತು ತಹಸೀಲ್ದಾರ್, ಲೇಖಪಾಲ್, ನಾಯಬ್ ಲೇಖಪಾಲ್ ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಭೂಮಿಯ ಮಾಲೀಕತ್ವವನ್ನು ಪ್ರತಿಪಾದಿಸಿದವರೊಂದಿಗೆ ಶಾಲಾ ಆವರಣಕ್ಕೆ ಆಗಮಿಸಿ, ಮಾಲೀಕರಿಗೆ ಬೆದರಿಕೆ ಹಾಕಲು ಮುಂದಾದರು.

ತಮ್ಮ ತಂದೆ 1979ರ ಜನವರಿ 8ರಂದು ನೋಂದಾಯಿತ ಮಾರಾಟ ಪತ್ರದ ಮೂಲಕ ಗಂಗಾ ಪ್ರಸಾದ್ ಮತ್ತು ಹರ್ ಪ್ರಸಾದ್ ಅವರಿಂದ ಭೂಮಿಯನ್ನು ಖರೀದಿಸಿದ್ದರು. ಆದರೆ ಈಗ ಅವರ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ಶಾಲಾ ವ್ಯವಸ್ಥಾಪಕರು ವಾದಿಸಿದ್ದಾರೆ.

ಉತ್ತರಪ್ರದೇಶ ಮಂಡಳಿಗೆ ಸಂಯೋಜಿತವಾಗಿರುವ ಈ ಶಾಲೆಯು ಪ್ರಸ್ತುತ ನರ್ಸರಿಯಿಂದ 10ನೇ ತರಗತಿಯವರೆಗೆ ತರಗತಿಗಳನ್ನು ನಡೆಸುತ್ತಿದೆ. ದಶಕಗಳಿಂದ ಶಾಂತಿಯುತವಾಗಿ, ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುತ್ತಿದೆ.

2025ರ ಜನವರಿಯಿಂದ ಜೂನ್‌ವರೆಗೆ ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಯಾವುದೇ ಕಾನೂನುಬದ್ಧ ಆದೇಶವಿಲ್ಲದೆ ಶಾಲಾ ಆವರಣಕ್ಕೆ ಭೇಟಿ ನೀಡಿ, ಕಾಲಕಾಲಕ್ಕೆ ಮಾಲೀಕರಿಗೆ ಬೆದರಿಕೆ ಹಾಕುವುದನ್ನು ಮುಂದುವರೆಸಿದ್ದರು ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.

2025ರ ಮೇ 15ರಂದು ಆಡಳಿತವು ಶಾಲೆಯ ಮುಖ್ಯ ದ್ವಾರದ ಜೊತೆಗೆ ಹಲವು ತರಗತಿ ಕೊಠಡಿಗಳನ್ನು ನೆಲಸಮಗೊಳಿಸಿದ್ದು, ಇದರಿಂದ ಸುಮಾರು ₹30 ಲಕ್ಷ ರೂ. ಮೌಲ್ಯದ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಅರ್ಜಿದಾರರ ಮಾಲೀಕತ್ವದಲ್ಲಿರುವ ಶಾಲೆಗೆ ಹೋಗುವ ದಾರಿಯನ್ನೂ ಒಳಗೊಂಡಂತೆ ಶಾಲಾ ಭೂಮಿಯ ಕೆಲವು ಭಾಗಗಳನ್ನು ವಶಪಡಿಸಿಕೊಳ್ಳಲಾಗಿತ್ತು.

2024ರ ನವೆಂಬರ್‌ನಲ್ಲಿ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ನಂತರ ಕೋಮು ಉದ್ವಿಗ್ನತೆಗಳು ಹೆಚ್ಚಾದಾಗ ಈ ವಿವಾದ ಮತ್ತಷ್ಟು ಉಲ್ಬಣಗೊಂಡಿದೆ ಎಂದು APCR ಪ್ರತಿಪಾದಿಸಿದೆ.

ಶಾಲಾ ಕಟ್ಟಡವನ್ನು ನೆಲಸಮಗೊಳಿಸುವ ಯಾವುದೇ ಯೋಜನೆ ಪ್ರಸ್ತುತ ಇಲ್ಲ ಎಂದು ರಾಜ್ಯದ ಪರ ವಾದ ಮಂಡಿಸಿದ ವಕೀಲ ಗೋಪಾಲ್ ಸಕ್ಸೇನಾ ಅವರು ಸ್ಪಷ್ಟಪಡಿಸಿದರು. ಭವಿಷ್ಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಬೇಕಾದರೂ ಕಾನೂನುಬದ್ಧ ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...