Homeಮುಖಪುಟಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

- Advertisement -
- Advertisement -

ಸಂಭಾಲ್: ಇಲ್ಲಿನ ಆಲಂ ಸರಾಯ್‌ನಲ್ಲಿರುವ ಸುದೀರ್ಘ ಇತಿಹಾಸವಿರುವ ಶಿಕ್ಷಣ ಸಂಸ್ಥೆ ಆಜಾದ್ ಜನ್ನತ್ ನಿಶಾ ಶಾಲೆಯ ಕಟ್ಟಡವನ್ನು ನೆಲಸಮಗೊಳಿಸದಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.

46 ವರ್ಷಗಳ ಹಿಂದೆ ಭೂಮಿ ಮಾರಾಟ ಮಾಡಿದವರ ಕಾನೂನುಬದ್ಧ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಈ ದಾವೆಗೆ ಸ್ಥಳೀಯ ಹಿಂದೂತ್ವ ಗುಂಪುಗಳ ಬೆಂಬಲವೂ ಇತ್ತು ಎಂದು ಹಿಂದಿನ ಮೂಲಗಳಿಂದ ತಿಳಿದುಬಂದಿದೆ.

ಆಲಂ ಸರಾಯ್‌ನಲ್ಲಿರುವ ಆಜಾದ್ ಜನ್ನತ್ ನಿಶಾ ಶಾಲೆಯ ವ್ಯವಸ್ಥಾಪಕ ಮೊಹಮ್ಮದ್ ಶಹವೇಜ್ ಆಲಂ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 1979ರಿಂದ ತಾನೇ ಭೂಮಿಯ ನಿಜವಾದ ಮಾಲೀಕ ಎಂದು ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದರು.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಹರ್ವೀರ್ ಸಿಂಗ್ ಅವರನ್ನೊಳಗೊಂಡ ಪೀಠವು ಶಾಲಾ ಕಟ್ಟಡವನ್ನು ನೆಲಸಮಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು, ಸಂಸ್ಥೆಯ ಶಾಂತಿಯುತ ಕಾರ್ಯನಿರ್ವಹಣೆಗೆ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶಿಸಿದೆ.

ಈ ಸಮಸ್ಯೆಯು 2025ರ ಜನವರಿ 13ರಂದು ಪ್ರಾರಂಭವಾಯಿತು. ಅಂದು ಜಿಲ್ಲಾಧಿಕಾರಿ, ಉಪವಿಭಾಗೀಯ ದಂಡಾಧಿಕಾರಿ, ಪೊಲೀಸ್ ಪಡೆ ಮತ್ತು ತಹಸೀಲ್ದಾರ್, ಲೇಖಪಾಲ್, ನಾಯಬ್ ಲೇಖಪಾಲ್ ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಭೂಮಿಯ ಮಾಲೀಕತ್ವವನ್ನು ಪ್ರತಿಪಾದಿಸಿದವರೊಂದಿಗೆ ಶಾಲಾ ಆವರಣಕ್ಕೆ ಆಗಮಿಸಿ, ಮಾಲೀಕರಿಗೆ ಬೆದರಿಕೆ ಹಾಕಲು ಮುಂದಾದರು.

ತಮ್ಮ ತಂದೆ 1979ರ ಜನವರಿ 8ರಂದು ನೋಂದಾಯಿತ ಮಾರಾಟ ಪತ್ರದ ಮೂಲಕ ಗಂಗಾ ಪ್ರಸಾದ್ ಮತ್ತು ಹರ್ ಪ್ರಸಾದ್ ಅವರಿಂದ ಭೂಮಿಯನ್ನು ಖರೀದಿಸಿದ್ದರು. ಆದರೆ ಈಗ ಅವರ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ಶಾಲಾ ವ್ಯವಸ್ಥಾಪಕರು ವಾದಿಸಿದ್ದಾರೆ.

ಉತ್ತರಪ್ರದೇಶ ಮಂಡಳಿಗೆ ಸಂಯೋಜಿತವಾಗಿರುವ ಈ ಶಾಲೆಯು ಪ್ರಸ್ತುತ ನರ್ಸರಿಯಿಂದ 10ನೇ ತರಗತಿಯವರೆಗೆ ತರಗತಿಗಳನ್ನು ನಡೆಸುತ್ತಿದೆ. ದಶಕಗಳಿಂದ ಶಾಂತಿಯುತವಾಗಿ, ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುತ್ತಿದೆ.

2025ರ ಜನವರಿಯಿಂದ ಜೂನ್‌ವರೆಗೆ ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಯಾವುದೇ ಕಾನೂನುಬದ್ಧ ಆದೇಶವಿಲ್ಲದೆ ಶಾಲಾ ಆವರಣಕ್ಕೆ ಭೇಟಿ ನೀಡಿ, ಕಾಲಕಾಲಕ್ಕೆ ಮಾಲೀಕರಿಗೆ ಬೆದರಿಕೆ ಹಾಕುವುದನ್ನು ಮುಂದುವರೆಸಿದ್ದರು ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.

2025ರ ಮೇ 15ರಂದು ಆಡಳಿತವು ಶಾಲೆಯ ಮುಖ್ಯ ದ್ವಾರದ ಜೊತೆಗೆ ಹಲವು ತರಗತಿ ಕೊಠಡಿಗಳನ್ನು ನೆಲಸಮಗೊಳಿಸಿದ್ದು, ಇದರಿಂದ ಸುಮಾರು ₹30 ಲಕ್ಷ ರೂ. ಮೌಲ್ಯದ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಅರ್ಜಿದಾರರ ಮಾಲೀಕತ್ವದಲ್ಲಿರುವ ಶಾಲೆಗೆ ಹೋಗುವ ದಾರಿಯನ್ನೂ ಒಳಗೊಂಡಂತೆ ಶಾಲಾ ಭೂಮಿಯ ಕೆಲವು ಭಾಗಗಳನ್ನು ವಶಪಡಿಸಿಕೊಳ್ಳಲಾಗಿತ್ತು.

2024ರ ನವೆಂಬರ್‌ನಲ್ಲಿ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ನಂತರ ಕೋಮು ಉದ್ವಿಗ್ನತೆಗಳು ಹೆಚ್ಚಾದಾಗ ಈ ವಿವಾದ ಮತ್ತಷ್ಟು ಉಲ್ಬಣಗೊಂಡಿದೆ ಎಂದು APCR ಪ್ರತಿಪಾದಿಸಿದೆ.

ಶಾಲಾ ಕಟ್ಟಡವನ್ನು ನೆಲಸಮಗೊಳಿಸುವ ಯಾವುದೇ ಯೋಜನೆ ಪ್ರಸ್ತುತ ಇಲ್ಲ ಎಂದು ರಾಜ್ಯದ ಪರ ವಾದ ಮಂಡಿಸಿದ ವಕೀಲ ಗೋಪಾಲ್ ಸಕ್ಸೇನಾ ಅವರು ಸ್ಪಷ್ಟಪಡಿಸಿದರು. ಭವಿಷ್ಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಬೇಕಾದರೂ ಕಾನೂನುಬದ್ಧ ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...