Homeಮುಖಪುಟಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

- Advertisement -
- Advertisement -

ಸಂಭಾಲ್: ಇಲ್ಲಿನ ಆಲಂ ಸರಾಯ್‌ನಲ್ಲಿರುವ ಸುದೀರ್ಘ ಇತಿಹಾಸವಿರುವ ಶಿಕ್ಷಣ ಸಂಸ್ಥೆ ಆಜಾದ್ ಜನ್ನತ್ ನಿಶಾ ಶಾಲೆಯ ಕಟ್ಟಡವನ್ನು ನೆಲಸಮಗೊಳಿಸದಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.

46 ವರ್ಷಗಳ ಹಿಂದೆ ಭೂಮಿ ಮಾರಾಟ ಮಾಡಿದವರ ಕಾನೂನುಬದ್ಧ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಈ ದಾವೆಗೆ ಸ್ಥಳೀಯ ಹಿಂದೂತ್ವ ಗುಂಪುಗಳ ಬೆಂಬಲವೂ ಇತ್ತು ಎಂದು ಹಿಂದಿನ ಮೂಲಗಳಿಂದ ತಿಳಿದುಬಂದಿದೆ.

ಆಲಂ ಸರಾಯ್‌ನಲ್ಲಿರುವ ಆಜಾದ್ ಜನ್ನತ್ ನಿಶಾ ಶಾಲೆಯ ವ್ಯವಸ್ಥಾಪಕ ಮೊಹಮ್ಮದ್ ಶಹವೇಜ್ ಆಲಂ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 1979ರಿಂದ ತಾನೇ ಭೂಮಿಯ ನಿಜವಾದ ಮಾಲೀಕ ಎಂದು ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದರು.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಹರ್ವೀರ್ ಸಿಂಗ್ ಅವರನ್ನೊಳಗೊಂಡ ಪೀಠವು ಶಾಲಾ ಕಟ್ಟಡವನ್ನು ನೆಲಸಮಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು, ಸಂಸ್ಥೆಯ ಶಾಂತಿಯುತ ಕಾರ್ಯನಿರ್ವಹಣೆಗೆ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶಿಸಿದೆ.

ಈ ಸಮಸ್ಯೆಯು 2025ರ ಜನವರಿ 13ರಂದು ಪ್ರಾರಂಭವಾಯಿತು. ಅಂದು ಜಿಲ್ಲಾಧಿಕಾರಿ, ಉಪವಿಭಾಗೀಯ ದಂಡಾಧಿಕಾರಿ, ಪೊಲೀಸ್ ಪಡೆ ಮತ್ತು ತಹಸೀಲ್ದಾರ್, ಲೇಖಪಾಲ್, ನಾಯಬ್ ಲೇಖಪಾಲ್ ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಭೂಮಿಯ ಮಾಲೀಕತ್ವವನ್ನು ಪ್ರತಿಪಾದಿಸಿದವರೊಂದಿಗೆ ಶಾಲಾ ಆವರಣಕ್ಕೆ ಆಗಮಿಸಿ, ಮಾಲೀಕರಿಗೆ ಬೆದರಿಕೆ ಹಾಕಲು ಮುಂದಾದರು.

ತಮ್ಮ ತಂದೆ 1979ರ ಜನವರಿ 8ರಂದು ನೋಂದಾಯಿತ ಮಾರಾಟ ಪತ್ರದ ಮೂಲಕ ಗಂಗಾ ಪ್ರಸಾದ್ ಮತ್ತು ಹರ್ ಪ್ರಸಾದ್ ಅವರಿಂದ ಭೂಮಿಯನ್ನು ಖರೀದಿಸಿದ್ದರು. ಆದರೆ ಈಗ ಅವರ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ಶಾಲಾ ವ್ಯವಸ್ಥಾಪಕರು ವಾದಿಸಿದ್ದಾರೆ.

ಉತ್ತರಪ್ರದೇಶ ಮಂಡಳಿಗೆ ಸಂಯೋಜಿತವಾಗಿರುವ ಈ ಶಾಲೆಯು ಪ್ರಸ್ತುತ ನರ್ಸರಿಯಿಂದ 10ನೇ ತರಗತಿಯವರೆಗೆ ತರಗತಿಗಳನ್ನು ನಡೆಸುತ್ತಿದೆ. ದಶಕಗಳಿಂದ ಶಾಂತಿಯುತವಾಗಿ, ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುತ್ತಿದೆ.

2025ರ ಜನವರಿಯಿಂದ ಜೂನ್‌ವರೆಗೆ ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಯಾವುದೇ ಕಾನೂನುಬದ್ಧ ಆದೇಶವಿಲ್ಲದೆ ಶಾಲಾ ಆವರಣಕ್ಕೆ ಭೇಟಿ ನೀಡಿ, ಕಾಲಕಾಲಕ್ಕೆ ಮಾಲೀಕರಿಗೆ ಬೆದರಿಕೆ ಹಾಕುವುದನ್ನು ಮುಂದುವರೆಸಿದ್ದರು ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.

2025ರ ಮೇ 15ರಂದು ಆಡಳಿತವು ಶಾಲೆಯ ಮುಖ್ಯ ದ್ವಾರದ ಜೊತೆಗೆ ಹಲವು ತರಗತಿ ಕೊಠಡಿಗಳನ್ನು ನೆಲಸಮಗೊಳಿಸಿದ್ದು, ಇದರಿಂದ ಸುಮಾರು ₹30 ಲಕ್ಷ ರೂ. ಮೌಲ್ಯದ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಅರ್ಜಿದಾರರ ಮಾಲೀಕತ್ವದಲ್ಲಿರುವ ಶಾಲೆಗೆ ಹೋಗುವ ದಾರಿಯನ್ನೂ ಒಳಗೊಂಡಂತೆ ಶಾಲಾ ಭೂಮಿಯ ಕೆಲವು ಭಾಗಗಳನ್ನು ವಶಪಡಿಸಿಕೊಳ್ಳಲಾಗಿತ್ತು.

2024ರ ನವೆಂಬರ್‌ನಲ್ಲಿ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ನಂತರ ಕೋಮು ಉದ್ವಿಗ್ನತೆಗಳು ಹೆಚ್ಚಾದಾಗ ಈ ವಿವಾದ ಮತ್ತಷ್ಟು ಉಲ್ಬಣಗೊಂಡಿದೆ ಎಂದು APCR ಪ್ರತಿಪಾದಿಸಿದೆ.

ಶಾಲಾ ಕಟ್ಟಡವನ್ನು ನೆಲಸಮಗೊಳಿಸುವ ಯಾವುದೇ ಯೋಜನೆ ಪ್ರಸ್ತುತ ಇಲ್ಲ ಎಂದು ರಾಜ್ಯದ ಪರ ವಾದ ಮಂಡಿಸಿದ ವಕೀಲ ಗೋಪಾಲ್ ಸಕ್ಸೇನಾ ಅವರು ಸ್ಪಷ್ಟಪಡಿಸಿದರು. ಭವಿಷ್ಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಬೇಕಾದರೂ ಕಾನೂನುಬದ್ಧ ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...