Homeಮುಖಪುಟಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

ಸಂಭಾಲ್: ಅಲಹಾಬಾದ್ ಹೈಕೋರ್ಟ್‌ನಿಂದ ಆಜಾದ್ ಜನ್ನತ್ ನಿಶಾ ಶಾಲೆಯ ನೆಲಸಮಕ್ಕೆ ತಡೆ

- Advertisement -
- Advertisement -

ಸಂಭಾಲ್: ಇಲ್ಲಿನ ಆಲಂ ಸರಾಯ್‌ನಲ್ಲಿರುವ ಸುದೀರ್ಘ ಇತಿಹಾಸವಿರುವ ಶಿಕ್ಷಣ ಸಂಸ್ಥೆ ಆಜಾದ್ ಜನ್ನತ್ ನಿಶಾ ಶಾಲೆಯ ಕಟ್ಟಡವನ್ನು ನೆಲಸಮಗೊಳಿಸದಂತೆ ಅಲಹಾಬಾದ್ ಹೈಕೋರ್ಟ್ ಉತ್ತರಪ್ರದೇಶ ಸರ್ಕಾರಕ್ಕೆ ಮಹತ್ವದ ಆದೇಶ ನೀಡಿದೆ.

46 ವರ್ಷಗಳ ಹಿಂದೆ ಭೂಮಿ ಮಾರಾಟ ಮಾಡಿದವರ ಕಾನೂನುಬದ್ಧ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸಿ, ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದ ಹಿನ್ನೆಲೆಯಲ್ಲಿ ಈ ಆದೇಶ ಬಂದಿದೆ. ಈ ದಾವೆಗೆ ಸ್ಥಳೀಯ ಹಿಂದೂತ್ವ ಗುಂಪುಗಳ ಬೆಂಬಲವೂ ಇತ್ತು ಎಂದು ಹಿಂದಿನ ಮೂಲಗಳಿಂದ ತಿಳಿದುಬಂದಿದೆ.

ಆಲಂ ಸರಾಯ್‌ನಲ್ಲಿರುವ ಆಜಾದ್ ಜನ್ನತ್ ನಿಶಾ ಶಾಲೆಯ ವ್ಯವಸ್ಥಾಪಕ ಮೊಹಮ್ಮದ್ ಶಹವೇಜ್ ಆಲಂ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. 1979ರಿಂದ ತಾನೇ ಭೂಮಿಯ ನಿಜವಾದ ಮಾಲೀಕ ಎಂದು ಅವರು ತಮ್ಮ ಅರ್ಜಿಯಲ್ಲಿ ಪ್ರತಿಪಾದಿಸಿದ್ದರು.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಹರ್ವೀರ್ ಸಿಂಗ್ ಅವರನ್ನೊಳಗೊಂಡ ಪೀಠವು ಶಾಲಾ ಕಟ್ಟಡವನ್ನು ನೆಲಸಮಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದು, ಸಂಸ್ಥೆಯ ಶಾಂತಿಯುತ ಕಾರ್ಯನಿರ್ವಹಣೆಗೆ ಯಾವುದೇ ರೀತಿಯಲ್ಲಿ ಹಸ್ತಕ್ಷೇಪ ಮಾಡದಂತೆ ನಿರ್ದೇಶಿಸಿದೆ.

ಈ ಸಮಸ್ಯೆಯು 2025ರ ಜನವರಿ 13ರಂದು ಪ್ರಾರಂಭವಾಯಿತು. ಅಂದು ಜಿಲ್ಲಾಧಿಕಾರಿ, ಉಪವಿಭಾಗೀಯ ದಂಡಾಧಿಕಾರಿ, ಪೊಲೀಸ್ ಪಡೆ ಮತ್ತು ತಹಸೀಲ್ದಾರ್, ಲೇಖಪಾಲ್, ನಾಯಬ್ ಲೇಖಪಾಲ್ ಸೇರಿದಂತೆ ಸ್ಥಳೀಯ ಅಧಿಕಾರಿಗಳು, ಭೂಮಿಯ ಮಾಲೀಕತ್ವವನ್ನು ಪ್ರತಿಪಾದಿಸಿದವರೊಂದಿಗೆ ಶಾಲಾ ಆವರಣಕ್ಕೆ ಆಗಮಿಸಿ, ಮಾಲೀಕರಿಗೆ ಬೆದರಿಕೆ ಹಾಕಲು ಮುಂದಾದರು.

ತಮ್ಮ ತಂದೆ 1979ರ ಜನವರಿ 8ರಂದು ನೋಂದಾಯಿತ ಮಾರಾಟ ಪತ್ರದ ಮೂಲಕ ಗಂಗಾ ಪ್ರಸಾದ್ ಮತ್ತು ಹರ್ ಪ್ರಸಾದ್ ಅವರಿಂದ ಭೂಮಿಯನ್ನು ಖರೀದಿಸಿದ್ದರು. ಆದರೆ ಈಗ ಅವರ ಉತ್ತರಾಧಿಕಾರಿಗಳು ಆಸ್ತಿಯ ಮಾಲೀಕತ್ವವನ್ನು ಪ್ರತಿಪಾದಿಸುತ್ತಿದ್ದಾರೆ ಎಂದು ಶಾಲಾ ವ್ಯವಸ್ಥಾಪಕರು ವಾದಿಸಿದ್ದಾರೆ.

ಉತ್ತರಪ್ರದೇಶ ಮಂಡಳಿಗೆ ಸಂಯೋಜಿತವಾಗಿರುವ ಈ ಶಾಲೆಯು ಪ್ರಸ್ತುತ ನರ್ಸರಿಯಿಂದ 10ನೇ ತರಗತಿಯವರೆಗೆ ತರಗತಿಗಳನ್ನು ನಡೆಸುತ್ತಿದೆ. ದಶಕಗಳಿಂದ ಶಾಂತಿಯುತವಾಗಿ, ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸುತ್ತಿದೆ.

2025ರ ಜನವರಿಯಿಂದ ಜೂನ್‌ವರೆಗೆ ಸ್ಥಳೀಯ ನಾಯಕರು ಮತ್ತು ಅಧಿಕಾರಿಗಳು ಯಾವುದೇ ಕಾನೂನುಬದ್ಧ ಆದೇಶವಿಲ್ಲದೆ ಶಾಲಾ ಆವರಣಕ್ಕೆ ಭೇಟಿ ನೀಡಿ, ಕಾಲಕಾಲಕ್ಕೆ ಮಾಲೀಕರಿಗೆ ಬೆದರಿಕೆ ಹಾಕುವುದನ್ನು ಮುಂದುವರೆಸಿದ್ದರು ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (APCR) ಹೊರಡಿಸಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.

2025ರ ಮೇ 15ರಂದು ಆಡಳಿತವು ಶಾಲೆಯ ಮುಖ್ಯ ದ್ವಾರದ ಜೊತೆಗೆ ಹಲವು ತರಗತಿ ಕೊಠಡಿಗಳನ್ನು ನೆಲಸಮಗೊಳಿಸಿದ್ದು, ಇದರಿಂದ ಸುಮಾರು ₹30 ಲಕ್ಷ ರೂ. ಮೌಲ್ಯದ ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ, ಅರ್ಜಿದಾರರ ಮಾಲೀಕತ್ವದಲ್ಲಿರುವ ಶಾಲೆಗೆ ಹೋಗುವ ದಾರಿಯನ್ನೂ ಒಳಗೊಂಡಂತೆ ಶಾಲಾ ಭೂಮಿಯ ಕೆಲವು ಭಾಗಗಳನ್ನು ವಶಪಡಿಸಿಕೊಳ್ಳಲಾಗಿತ್ತು.

2024ರ ನವೆಂಬರ್‌ನಲ್ಲಿ ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ನಂತರ ಕೋಮು ಉದ್ವಿಗ್ನತೆಗಳು ಹೆಚ್ಚಾದಾಗ ಈ ವಿವಾದ ಮತ್ತಷ್ಟು ಉಲ್ಬಣಗೊಂಡಿದೆ ಎಂದು APCR ಪ್ರತಿಪಾದಿಸಿದೆ.

ಶಾಲಾ ಕಟ್ಟಡವನ್ನು ನೆಲಸಮಗೊಳಿಸುವ ಯಾವುದೇ ಯೋಜನೆ ಪ್ರಸ್ತುತ ಇಲ್ಲ ಎಂದು ರಾಜ್ಯದ ಪರ ವಾದ ಮಂಡಿಸಿದ ವಕೀಲ ಗೋಪಾಲ್ ಸಕ್ಸೇನಾ ಅವರು ಸ್ಪಷ್ಟಪಡಿಸಿದರು. ಭವಿಷ್ಯದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಬೇಕಾದರೂ ಕಾನೂನುಬದ್ಧ ಪ್ರಕ್ರಿಯೆಗಳನ್ನು ಅನುಸರಿಸಲಾಗುವುದು ಎಂದು ಅವರು ನ್ಯಾಯಾಲಯಕ್ಕೆ ಭರವಸೆ ನೀಡಿದರು.

ಕೇರಳ | ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಗುಂಪು ವಿಚಾರಣೆ: ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...