Homeಮುಖಪುಟಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದ ನ್ಯಾಯಾಧೀಶ ವರ್ಗಾವಣೆ

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದ ನ್ಯಾಯಾಧೀಶ ವರ್ಗಾವಣೆ

- Advertisement -
- Advertisement -

ಸಂಭಾಲ್ ಹಿಂಸಾಚಾರ ಸಂಬಂಧ ಪೊಲೀಸರ ಮೇಲೆ ಎಫ್‌ಐಆರ್‌ ದಾಖಲಿಸಲು ಆದೇಶಿಸಿದ್ದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ವಿಭಾಂಶು ಸುಧೀರ್ ಸೇರಿದಂತೆ 14 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಅಲಹಾಬಾದ್ ಹೈಕೋರ್ಟ್ ಆಡಳಿತಾತ್ಮಕ ಆದೇಶ ಹೊರಡಿಸಿದೆ. ಸುಧೀರ್ ಅವರನ್ನು ಸುಲ್ತಾನ್‌ಪುರದ ಸಿವಿಲ್ ನ್ಯಾಯಾಧೀಶರಾಗಿ (ಹಿರಿಯ ವಿಭಾಗ) ವರ್ಗಾಯಿಸಲಾಗಿದೆ.

ನವೆಂಬರ್ 2024ರ ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸರ್ಕಲ್ ಆಫೀಸರ್ (ಸಿಒ) ಅನುಜ್ ಚೌಧರಿ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ನಿರ್ದೇಶನ ನೀಡಿ ಆದೇಶ ಹೊರಡಿಸಿದ ಕೆಲವೇ ದಿನಗಳಲ್ಲಿ ಸಿಜೆಎಂ ಸುಧೀರ್ ಅವರ ವರ್ಗಾವಣೆಯಾಗಿದೆ.

ನವೆಂಬರ್ 2024ರ ಸಂಭಾಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಭಾಲ್ ಸರ್ಕಲ್ ಆಫೀಸರ್ ಆಗಿದ್ದ ಅನುಜ್ ಚೌಧರಿ, ಸಂಭಾಲ್ ಕೊತ್ವಾಲಿ ಚಂದೌಸಿಯ ಆಗಿನ ಸ್ಟೇಷನ್ ಹೌಸ್ ಆಫೀಸರ್ ಅನುಜ್ ತೋಮರ್ ಮತ್ತು 15 ರಿಂದ 20 ಅಪರಿಚಿತ ಪೊಲೀಸ್ ಸಿಬ್ಬಂದಿ ವಿರುದ್ದ ಎಫ್‌ಐಆರ್ ದಾಖಲಿಸಲು ಸಿಜೆಎಂ ಸುಧೀರ್ ಅವರು ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಪೊಲೀಸರು ಕೊಲ್ಲುವ ಉದ್ದೇಶದಿಂದ ಗುಂಡಿಕ್ಕಿದ್ದು, ಇದರಿಂದ ಆಲಂ ಎಂಬ ಸ್ಥಳೀಯ ಯುವಕ ತೀವ್ರವಾಗಿ ಗಾಯಗೊಂಡಿದ್ದ. ಈ ಸಂಬಂಧ ಪೊಲೀಸರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಆತನ ತಂದೆ ಯಮೀನ್ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 173 (4) ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಸಿಜೆಎಂ ವಿಭಾಂಶು ಸುಧೀರ್ ಅವರು ಪೊಲೀಸರ ಮೇಲೆ ಎಫ್‌ಐಆರ್‌ಗೆ ಆದೇಶಿಸಿದ್ದರು.

2024ರ ನವೆಂಬರ್ 24 ರಂದು ಶಾಹಿ ಜಾಮಾ ಮಸೀದಿ ಪ್ರದೇಶದಲ್ಲಿ ನಡೆದ ಗಲಭೆಯ ಸಂದರ್ಭದಲ್ಲಿ ನನ್ನ ಮಗ ಆಲಂ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು ಎಂದು ಯಾಮೀನ್ ಆರೋಪಿಸಿದ್ದರು. ಅರ್ಜಿಯ ಪ್ರಕಾರ, ಆಲಂ ರಸ್ಕ್ ಮತ್ತು ಬಿಸ್ಕತ್ತುಗಳನ್ನು ಮಾರಾಟ ಮಾಡಲು ತೆರಳಿದ್ದಾಗ ಗಲಭೆಯ ನಡುವೆ ಸಿಲುಕಿದ್ದರು. ಪೊಲೀಸರು ಅವರ ಮೇಲೆ ಗುಂಡು ಹಾರಿಸಿದ್ದರು.

ಪ್ರತ್ಯಕ್ಷದರ್ಶಿಗಳು ಮತ್ತು ಕುಟುಂಬಸ್ಥರ ಪ್ರಕಾರ, ಹಿಂಸಾಚಾರದಲ್ಲಿ ಕನಿಷ್ಠ ಐವರು ಮುಸ್ಲಿಮರು ಸಾವನ್ನಪ್ಪಿದ್ದು, ಅವರಲ್ಲಿ ಹೆಚ್ಚಿನವರು ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ.

ಭಯದಿಂದ ನನ್ನ ಮಗ ತಲೆಮರೆಸಿಕೊಂಡು ವೈದ್ಯಕೀಯ ಚಿಕಿತ್ಸೆ ಪಡೆದಿದ್ದಾನೆ. ನಂತರ ಗುಂಡಿನ ದಾಳಿಯಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾನೆ ಎಂದು ಯಾಮೀನ್ ನ್ಯಾಯಾಲಯಕ್ಕೆ ತಿಳಿಸಿದ್ದರು.

ಜನವರಿ 9ರಂದು ನಡೆದ ವಿಚಾರಣೆಯ ನಂತರ, ನ್ಯಾಯಾಲಯವು ಎಲ್ಲಾ ಹೆಸರಿಸಲಾದ ಮತ್ತು ಹೆಸರಿಸದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಸಿಜೆಎಂ ವಿಭಾಂಶು ಸುಧೀರ್ ನಿರ್ದೇಶಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಜನ್‌ಪುರ ಹತ್ಯೆ: ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮುಸ್ಲಿಂ ಯುವಕ ಸಾವು 

"ದೇವಾಲಯದ ಬಳಿ ಇರಿತಕ್ಕೊಳಗಾಗಿದ್ದ 18 ವರ್ಷದ ಮೊಹಮ್ಮದ್ ಆಸಿಫ್ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾನೆ" ಎಂದು ಭಜನ್‌ಪುರ ಹತ್ಯೆಯ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮುಂಜಾನೆ ಈಶಾನ್ಯ ದೆಹಲಿಯ ಭಜನ್‌ಪುರ ಪ್ರದೇಶದಲ್ಲಿ 18 ವರ್ಷದ ಯುವಕನೊಬ್ಬನನ್ನು...

ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು...

ಮಹಿಳಾ ಸೇನಾಧಿಕಾರಿಗಳು ಶಾಶ್ವತ ಆಯೋಗಕ್ಕೆ ಅರ್ಹರು: ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಮಂಗಳವಾರ, ಅನಿಯಂತ್ರಿತ ಮೌಲ್ಯಮಾಪನದಿಂದಾಗಿ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮಹಿಳಾ ಕಿರು ಸೇವಾ ಆಯೋಗ (ಎಸ್‌ಎಸ್‌ಸಿ) ಅಧಿಕಾರಿಗಳು ಪೂರ್ಣ ಪಿಂಚಣಿ ಸೌಲಭ್ಯಗಳಿಗೆ ಅರ್ಹರು...

ಚುನಾವಣಾ ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ ‌’ಸೀಲ್’ ; ʼಸಿಬ್ಬಂದಿ ದೋಷʼ ಎಂದ ಆಯೋಗ!

ಕೇರಳ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಸೋಮವಾರ (ಮಾ.23) ಬಿಜೆಪಿ ರಾಜ್ಯ ಘಟಕದ ಸೀಲ್ ಹೊಂದಿರುವ ಚುನಾವಣಾ ಆಯೋಗದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ದೊಡ್ಡ ವಿವಾದಕ್ಕೆ ಕಾರಣವಾಗಿದೆ....

ಗಂಗಾ ದೋಣಿಯಲ್ಲಿ ಇಫ್ತಾರ್ ಕೂಟ: ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿ ನ್ಯಾಯಾಲಯ

ಗಂಗಾ ನದಿಯ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದ ಆರೋಪ ಹೊತ್ತಿರುವ 14 ಮುಸ್ಲಿಂ ಯುವಕರಿಗೆ ಜಾಮೀನು ನಿರಾಕರಿಸಿದ ವಾರಣಾಸಿಯ ನ್ಯಾಯಾಲಯವು, ಅವರ ಮೇಲಿನ ಅಪರಾಧಗಳು ಗಂಭೀರ ಮತ್ತು ಜಾಮೀನು ರಹಿತವಾಗಿವೆ ಎಂದು ಹೇಳಿದೆ....

100ಕ್ಕೂ ಹೆಚ್ಚು ಸೈನಿಕರಿದ್ದ ಕೊಲಂಬಿಯಾ ವಾಯುಪಡೆಯ ವಿಮಾನ ಪತನ : 66 ಮಂದಿ ಸಾವು

ದಕ್ಷಿಣ ಕೊಲಂಬಿಯಾದ ಪುತುಮಾಯೊ ಪ್ರಾಂತ್ಯದ ಪ್ಯೂರ್ಟೊ ಲೆಗುಯಿಜಾಮೊ ಎಂಬಲ್ಲಿ ಸೋಮವಾರ (ಮಾರ್ಚ್ 23) ಬೆಳಿಗ್ಗೆ ವಾಯುಪಡೆಯ ವಿಮಾನವೊಂದು ಪತನಗೊಂಡಿದ್ದು, ದುರಂತದಲ್ಲಿ ಈವರೆಗೆ ಕನಿಷ್ಠ 66 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ಯೂರ್ಟೊ...

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...