Homeಮುಖಪುಟಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

- Advertisement -
- Advertisement -

1878ರಲ್ಲಿ, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸರ್ ರಾಬರ್ಟ್ ಸ್ಟುವರ್ಟ್ ಅವರು, 16ನೇ ಶತಮಾನದ ಮೊಘಲ್ ಯುಗದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯನ್ನು 100 ವರ್ಷಗಳಿಗೂ ಹೆಚ್ಚು ಕಾಲ ಮಸೀದಿಯಾಗಿ ಬಳಸಲಾಗುತ್ತಿತ್ತು ಎಂದು ತೀರ್ಪು ನೀಡಿದ್ದರು. ಇದು ಮೂಲತಃ ಹಿಂದೂ ದೇವಾಲಯವಾಗಿತ್ತು ಎಂಬ ವಾದವನ್ನು ಅವರು ತಿರಸ್ಕರಿಸಿದ್ದರು. ಮಸೀದಿ ಸಮಿತಿಯ ಪರವಾಗಿ ಬಂದ ತೀರ್ಪು, ಮುಸ್ಲಿಂ ಅರ್ಜಿದಾರರು 12 ವರ್ಷಗಳಿಗೂ ಹೆಚ್ಚು ಸಮಯದಿಂದ ಮಸೀದಿ ಮೇಲೆ ನಿಯಂತ್ರಣ ಹೊಂದಿದ್ದಾರೆ ಎಂಬುವುದಾಗಿ ಹೇಳಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

1875ರಲ್ಲಿ ಚೆಡಾ ಸಿಂಗ್ ಎಂಬ ಅರ್ಚಕ ಮತ್ತು ಇತರರು ಮಸೀದಿ ವಾಸ್ತವವಾಗಿ ದೇವಾಲಯವಾಗಿದ್ದು, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಅಲ್ಲಿ ಪೂಜೆ ಸಲ್ಲಿಸುತ್ತಿದ್ದರು ಎಂದು ವಾದಿಸಿ ಪ್ರಕರಣ ದಾಖಲಿಸಿದಾಗ ಕಾನೂನು ವಿವಾದ ಪ್ರಾರಂಭವಾಯಿತು. ಈ ಸ್ಥಳವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯ ವಶಕ್ಕೆ ಬರುವ ಮೊದಲು, ಪ್ರಕರಣವು ನ್ಯಾಯಾಲಯಗಳ ಮೂಲಕ ಹೋಗಿ 1878ರ ತೀರ್ಪಿನಲ್ಲಿ ಕೊನೆಗೊಂಡಿತು. ನ್ಯಾಯಾಲಯದಲ್ಲಿ, ಹಳೆಯ ಕಟ್ಟಡವು ರಾಜ್ಯದ ಆಸ್ತಿಯಾಗಿದೆ. ಆದರೆ, ಮುಸ್ಲಿಮರು ಅದನ್ನು ಮಸೀದಿಯಾಗಿ ಬಳಸುತ್ತಿದ್ದಾರೆ ಎಂದು ಎರಡೂ ಪಕ್ಷಗಳು ಒಪ್ಪಿಕೊಂಡಿತ್ತು ಎಂದು ವರದಿ ವಿವರಿಸಿದೆ.

“ಹಳೆಯ ಕಟ್ಟಡ (ಮಸೀದಿ) ಯನ್ನು ಹಿಜರಿ 933 (ಕ್ರಿ.ಶ. 1526) ರಲ್ಲಿ ದೆಹಲಿಯ ಬಾಬರ್ ಬಾದ್‌ಶಾ (ರಾಜ) ಅವಧಿಯಲ್ಲಿ ಮತ್ತು ಅವರ ಆದೇಶದ ಮೇರೆಗೆ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ್ದಾರೆ. ಸಂಭಾಲ್ ಕೋಟೆಯು ಸುಮಾರು 450 ವರ್ಷಗಳ ಹಿಂದೆ ಪೃಥ್ವಿರಾಜನ ಕಾಲದಿಂದಲೂ ಅಸ್ತಿತ್ವದಲ್ಲಿತ್ತು. ಅಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು. ಅಂದಿನಿಂದ ಅದನ್ನು ಪಟ್ಟಣದ ಜುಮ್ಮಾ ಮಸೀದಿಯಾಗಿಯೇ ಬಳಸಲಾಗುತ್ತಿದೆ. ಅದರಲ್ಲಿ ಹಿಂದೂಗಳಿಗೆ ಯಾವುದೇ ಹಕ್ಕಿಲ್ಲ ಅಥವಾ ಅದನ್ನು ಎಂದಿಗೂ ದೇವಾಲಯವಾಗಿ ಬಳಸಿಲ್ಲ” ಎಂದು ಹೈಕೋರ್ಟ್ ತೀರ್ಪು ಹೇಳಿತ್ತು ಎಂದು ವರದಿ ತಿಳಿಸಿದೆ.

ತೀರ್ಪು ನೀಡುವಾಗ ಮಸೀದಿಗೆ ಸಂಬಂಧಿಸಿದ ಐತಿಹಾಸಿಕ ಶಾಸನಗಳು ಮತ್ತು ದಾಖಲೆಗಳನ್ನು ಸಹ ಕೋರ್ಟ್ ಉಲ್ಲೇಖಿಸಿತ್ತು. ಅದರಲ್ಲಿ ಕಟ್ಟಡದ (ಮಸೀದಿಯ) ಗೋಡೆಗಳಲ್ಲಿನ ಕಲ್ಲಿನ ಶಾಸನಗಳ ಜೊತೆಗೆ, ದೆಹಲಿ ನ್ಯಾಯಾಲಯದಿಂದ ಹೊರಡಿಸಲಾದ ಪರ್ವಾನಗಳು (ಲಿಖಿತ ಸಂದೇಶಗಳು) ಮತ್ತು ಪರ್ಷಿಯನ್ ಭಾಷೆಯಲ್ಲಿರುವ ಸರಣಿ ಆದೇಶಗಳು ಒಳಗೊಂಡಿವೆ. ಈ ಆದೇಶಗಳಲ್ಲಿ ಸಂಭಾಲ್‌ನ ಪೃಥ್ವಿರಾಜ್ ಕೋಟೆಯಲ್ಲಿರುವ ಜಾಮಾ ಮಸೀದಿಯ ನಿರ್ವಹಣೆ ಕುರಿತ ನಿಬಂಧನೆಗಳಿವೆ ಎಂದು ವರದಿ ಹೇಳಿದೆ.

“ಪೃಥ್ವಿರಾಜನ ಕಾಲದ ಯಾವುದೋ ಹಳೆಯ ಹಿಂದೂ ದೇವಾಲಯವನ್ನು ಕೆಡವಿ ಅದರ ಸ್ಥಳದಲ್ಲಿ ಬಾಬರ್ ಆಡಳಿತಾವಧಿಯಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು ಅಥವಾ ಹಳೆಯ ದೇವಾಲಯವನ್ನು ಮಸೀದಿಯ ಉದ್ದೇಶಕ್ಕೆ ಬಳಸಲಾಯಿತು. ಅಂದಿನಿಂದ ಅದನ್ನು ಹಾಗೆಯೇ ಬಳಸಲಾಗುತ್ತಿದೆ. ಈ ರೀತಿ ಏನೇ ವಾದಗಳಿರಲಿ, 100 ವರ್ಷಗಳ ಕಾಲ ಅದು ಮೊಹಮ್ಮದೀಯ (ಮುಸ್ಲಿಂ) ಮಸೀದಿಯಾಗಿತ್ತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ನ್ಯಾಯಾಲಯ ಹೇಳಿತ್ತು ಎಂದು ವರದಿ ತಿಳಿಸಿದೆ.

“ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ಪ್ರಮಾಣೀಕೃತ ಪ್ರತಿಯನ್ನು ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ಸಮಿತಿಯು ನಮ್ಮೊಂದಿಗೆ ಹಂಚಿಕೊಂಡಿದೆ. ಮಸೀದಿಯ ಸದರ್ ಜಾಫರ್ ಅಲಿ, “1878ರಲ್ಲಿ ಅಲಹಾಬಾದ್ ಹೈಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿತ್ತು. ಈ ಸತ್ಯ ಗೊತ್ತಿಲ್ಲದೆ ಜಾಮಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಹೇಳುತ್ತಿರುವುದು ನಮಗೆ ಬೇಸರ ತರಿಸಿದೆ. ಮಸೀದಿಯ ಬಗ್ಗೆ ಯಾರೂ ತಪ್ಪು ಕಲ್ಪನೆಗಳನ್ನು ಹರಡದಂತೆ ನೋಡಿಕೊಳ್ಳಲು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

“1878ರಲ್ಲಿ, ಜಾಮಾ ಮಸೀದಿ ಪ್ರಕರಣದಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಅಲಹಾಬಾದ್‌ ಹೈಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿತ್ತು. ಹಾಗಾಗಿ, ಮಸೀದಿಯ ಸಮೀಕ್ಷೆಗೆ ಆದೇಶಿಸುವ ಅಧಿಕಾರ ಸಂಭಾಲ್ ನ್ಯಾಯಾಲಯಕ್ಕೆ ಇರಲಿಲ್ಲ. 1877ರಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ನೀಡಿದ ಆದೇಶಗಳ ಪ್ರಮಾಣೀಕೃತ ಪ್ರತಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ. ಆ ಸಮಯದಲ್ಲಿ, ಆಗಿನ ಮೊರಾದಾಬಾದ್‌ನ ಜಿಲ್ಲಾ ನ್ಯಾಯಾಧೀಶರು (ಆಗ ಸಂಭಾಲ್ ಮೊರಾದಾಬಾದ್‌ನ ಭಾಗವಾಗಿತ್ತು) ತಮ್ಮ ಆದೇಶವನ್ನು ನೀಡುವ ಮೊದಲು ಶಾಹಿ ಜಾಮಾ ಮಸೀದಿಗೆ ವೈಯಕ್ತಿಕವಾಗಿ ಭೇಟಿ ನೀಡಿದ್ದರು. ಆಗ ನ್ಯಾಯಾಲಯವು ಹಿಂದೂ ಪಕ್ಷಕಾರರಿಗೆ ದಂಡ ವಿಧಿಸಿತ್ತು” ಎಂದು ಮಸೀದಿ ಸಮಿತಿಯ ವಕೀಲ ತೌಫೀಕ್ ಅಹ್ಮದ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...