Homeಮುಖಪುಟಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

- Advertisement -
- Advertisement -

1878ರಲ್ಲಿ, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸರ್ ರಾಬರ್ಟ್ ಸ್ಟುವರ್ಟ್ ಅವರು, 16ನೇ ಶತಮಾನದ ಮೊಘಲ್ ಯುಗದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯನ್ನು 100 ವರ್ಷಗಳಿಗೂ ಹೆಚ್ಚು ಕಾಲ ಮಸೀದಿಯಾಗಿ ಬಳಸಲಾಗುತ್ತಿತ್ತು ಎಂದು ತೀರ್ಪು ನೀಡಿದ್ದರು. ಇದು ಮೂಲತಃ ಹಿಂದೂ ದೇವಾಲಯವಾಗಿತ್ತು ಎಂಬ ವಾದವನ್ನು ಅವರು ತಿರಸ್ಕರಿಸಿದ್ದರು. ಮಸೀದಿ ಸಮಿತಿಯ ಪರವಾಗಿ ಬಂದ ತೀರ್ಪು, ಮುಸ್ಲಿಂ ಅರ್ಜಿದಾರರು 12 ವರ್ಷಗಳಿಗೂ ಹೆಚ್ಚು ಸಮಯದಿಂದ ಮಸೀದಿ ಮೇಲೆ ನಿಯಂತ್ರಣ ಹೊಂದಿದ್ದಾರೆ ಎಂಬುವುದಾಗಿ ಹೇಳಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

1875ರಲ್ಲಿ ಚೆಡಾ ಸಿಂಗ್ ಎಂಬ ಅರ್ಚಕ ಮತ್ತು ಇತರರು ಮಸೀದಿ ವಾಸ್ತವವಾಗಿ ದೇವಾಲಯವಾಗಿದ್ದು, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಅಲ್ಲಿ ಪೂಜೆ ಸಲ್ಲಿಸುತ್ತಿದ್ದರು ಎಂದು ವಾದಿಸಿ ಪ್ರಕರಣ ದಾಖಲಿಸಿದಾಗ ಕಾನೂನು ವಿವಾದ ಪ್ರಾರಂಭವಾಯಿತು. ಈ ಸ್ಥಳವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯ ವಶಕ್ಕೆ ಬರುವ ಮೊದಲು, ಪ್ರಕರಣವು ನ್ಯಾಯಾಲಯಗಳ ಮೂಲಕ ಹೋಗಿ 1878ರ ತೀರ್ಪಿನಲ್ಲಿ ಕೊನೆಗೊಂಡಿತು. ನ್ಯಾಯಾಲಯದಲ್ಲಿ, ಹಳೆಯ ಕಟ್ಟಡವು ರಾಜ್ಯದ ಆಸ್ತಿಯಾಗಿದೆ. ಆದರೆ, ಮುಸ್ಲಿಮರು ಅದನ್ನು ಮಸೀದಿಯಾಗಿ ಬಳಸುತ್ತಿದ್ದಾರೆ ಎಂದು ಎರಡೂ ಪಕ್ಷಗಳು ಒಪ್ಪಿಕೊಂಡಿತ್ತು ಎಂದು ವರದಿ ವಿವರಿಸಿದೆ.

“ಹಳೆಯ ಕಟ್ಟಡ (ಮಸೀದಿ) ಯನ್ನು ಹಿಜರಿ 933 (ಕ್ರಿ.ಶ. 1526) ರಲ್ಲಿ ದೆಹಲಿಯ ಬಾಬರ್ ಬಾದ್‌ಶಾ (ರಾಜ) ಅವಧಿಯಲ್ಲಿ ಮತ್ತು ಅವರ ಆದೇಶದ ಮೇರೆಗೆ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ್ದಾರೆ. ಸಂಭಾಲ್ ಕೋಟೆಯು ಸುಮಾರು 450 ವರ್ಷಗಳ ಹಿಂದೆ ಪೃಥ್ವಿರಾಜನ ಕಾಲದಿಂದಲೂ ಅಸ್ತಿತ್ವದಲ್ಲಿತ್ತು. ಅಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು. ಅಂದಿನಿಂದ ಅದನ್ನು ಪಟ್ಟಣದ ಜುಮ್ಮಾ ಮಸೀದಿಯಾಗಿಯೇ ಬಳಸಲಾಗುತ್ತಿದೆ. ಅದರಲ್ಲಿ ಹಿಂದೂಗಳಿಗೆ ಯಾವುದೇ ಹಕ್ಕಿಲ್ಲ ಅಥವಾ ಅದನ್ನು ಎಂದಿಗೂ ದೇವಾಲಯವಾಗಿ ಬಳಸಿಲ್ಲ” ಎಂದು ಹೈಕೋರ್ಟ್ ತೀರ್ಪು ಹೇಳಿತ್ತು ಎಂದು ವರದಿ ತಿಳಿಸಿದೆ.

ತೀರ್ಪು ನೀಡುವಾಗ ಮಸೀದಿಗೆ ಸಂಬಂಧಿಸಿದ ಐತಿಹಾಸಿಕ ಶಾಸನಗಳು ಮತ್ತು ದಾಖಲೆಗಳನ್ನು ಸಹ ಕೋರ್ಟ್ ಉಲ್ಲೇಖಿಸಿತ್ತು. ಅದರಲ್ಲಿ ಕಟ್ಟಡದ (ಮಸೀದಿಯ) ಗೋಡೆಗಳಲ್ಲಿನ ಕಲ್ಲಿನ ಶಾಸನಗಳ ಜೊತೆಗೆ, ದೆಹಲಿ ನ್ಯಾಯಾಲಯದಿಂದ ಹೊರಡಿಸಲಾದ ಪರ್ವಾನಗಳು (ಲಿಖಿತ ಸಂದೇಶಗಳು) ಮತ್ತು ಪರ್ಷಿಯನ್ ಭಾಷೆಯಲ್ಲಿರುವ ಸರಣಿ ಆದೇಶಗಳು ಒಳಗೊಂಡಿವೆ. ಈ ಆದೇಶಗಳಲ್ಲಿ ಸಂಭಾಲ್‌ನ ಪೃಥ್ವಿರಾಜ್ ಕೋಟೆಯಲ್ಲಿರುವ ಜಾಮಾ ಮಸೀದಿಯ ನಿರ್ವಹಣೆ ಕುರಿತ ನಿಬಂಧನೆಗಳಿವೆ ಎಂದು ವರದಿ ಹೇಳಿದೆ.

“ಪೃಥ್ವಿರಾಜನ ಕಾಲದ ಯಾವುದೋ ಹಳೆಯ ಹಿಂದೂ ದೇವಾಲಯವನ್ನು ಕೆಡವಿ ಅದರ ಸ್ಥಳದಲ್ಲಿ ಬಾಬರ್ ಆಡಳಿತಾವಧಿಯಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು ಅಥವಾ ಹಳೆಯ ದೇವಾಲಯವನ್ನು ಮಸೀದಿಯ ಉದ್ದೇಶಕ್ಕೆ ಬಳಸಲಾಯಿತು. ಅಂದಿನಿಂದ ಅದನ್ನು ಹಾಗೆಯೇ ಬಳಸಲಾಗುತ್ತಿದೆ. ಈ ರೀತಿ ಏನೇ ವಾದಗಳಿರಲಿ, 100 ವರ್ಷಗಳ ಕಾಲ ಅದು ಮೊಹಮ್ಮದೀಯ (ಮುಸ್ಲಿಂ) ಮಸೀದಿಯಾಗಿತ್ತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ನ್ಯಾಯಾಲಯ ಹೇಳಿತ್ತು ಎಂದು ವರದಿ ತಿಳಿಸಿದೆ.

“ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ಪ್ರಮಾಣೀಕೃತ ಪ್ರತಿಯನ್ನು ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ಸಮಿತಿಯು ನಮ್ಮೊಂದಿಗೆ ಹಂಚಿಕೊಂಡಿದೆ. ಮಸೀದಿಯ ಸದರ್ ಜಾಫರ್ ಅಲಿ, “1878ರಲ್ಲಿ ಅಲಹಾಬಾದ್ ಹೈಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿತ್ತು. ಈ ಸತ್ಯ ಗೊತ್ತಿಲ್ಲದೆ ಜಾಮಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಹೇಳುತ್ತಿರುವುದು ನಮಗೆ ಬೇಸರ ತರಿಸಿದೆ. ಮಸೀದಿಯ ಬಗ್ಗೆ ಯಾರೂ ತಪ್ಪು ಕಲ್ಪನೆಗಳನ್ನು ಹರಡದಂತೆ ನೋಡಿಕೊಳ್ಳಲು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

“1878ರಲ್ಲಿ, ಜಾಮಾ ಮಸೀದಿ ಪ್ರಕರಣದಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಅಲಹಾಬಾದ್‌ ಹೈಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿತ್ತು. ಹಾಗಾಗಿ, ಮಸೀದಿಯ ಸಮೀಕ್ಷೆಗೆ ಆದೇಶಿಸುವ ಅಧಿಕಾರ ಸಂಭಾಲ್ ನ್ಯಾಯಾಲಯಕ್ಕೆ ಇರಲಿಲ್ಲ. 1877ರಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ನೀಡಿದ ಆದೇಶಗಳ ಪ್ರಮಾಣೀಕೃತ ಪ್ರತಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ. ಆ ಸಮಯದಲ್ಲಿ, ಆಗಿನ ಮೊರಾದಾಬಾದ್‌ನ ಜಿಲ್ಲಾ ನ್ಯಾಯಾಧೀಶರು (ಆಗ ಸಂಭಾಲ್ ಮೊರಾದಾಬಾದ್‌ನ ಭಾಗವಾಗಿತ್ತು) ತಮ್ಮ ಆದೇಶವನ್ನು ನೀಡುವ ಮೊದಲು ಶಾಹಿ ಜಾಮಾ ಮಸೀದಿಗೆ ವೈಯಕ್ತಿಕವಾಗಿ ಭೇಟಿ ನೀಡಿದ್ದರು. ಆಗ ನ್ಯಾಯಾಲಯವು ಹಿಂದೂ ಪಕ್ಷಕಾರರಿಗೆ ದಂಡ ವಿಧಿಸಿತ್ತು” ಎಂದು ಮಸೀದಿ ಸಮಿತಿಯ ವಕೀಲ ತೌಫೀಕ್ ಅಹ್ಮದ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...