Homeಮುಖಪುಟಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

- Advertisement -
- Advertisement -

1878ರಲ್ಲಿ, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸರ್ ರಾಬರ್ಟ್ ಸ್ಟುವರ್ಟ್ ಅವರು, 16ನೇ ಶತಮಾನದ ಮೊಘಲ್ ಯುಗದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯನ್ನು 100 ವರ್ಷಗಳಿಗೂ ಹೆಚ್ಚು ಕಾಲ ಮಸೀದಿಯಾಗಿ ಬಳಸಲಾಗುತ್ತಿತ್ತು ಎಂದು ತೀರ್ಪು ನೀಡಿದ್ದರು. ಇದು ಮೂಲತಃ ಹಿಂದೂ ದೇವಾಲಯವಾಗಿತ್ತು ಎಂಬ ವಾದವನ್ನು ಅವರು ತಿರಸ್ಕರಿಸಿದ್ದರು. ಮಸೀದಿ ಸಮಿತಿಯ ಪರವಾಗಿ ಬಂದ ತೀರ್ಪು, ಮುಸ್ಲಿಂ ಅರ್ಜಿದಾರರು 12 ವರ್ಷಗಳಿಗೂ ಹೆಚ್ಚು ಸಮಯದಿಂದ ಮಸೀದಿ ಮೇಲೆ ನಿಯಂತ್ರಣ ಹೊಂದಿದ್ದಾರೆ ಎಂಬುವುದಾಗಿ ಹೇಳಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

1875ರಲ್ಲಿ ಚೆಡಾ ಸಿಂಗ್ ಎಂಬ ಅರ್ಚಕ ಮತ್ತು ಇತರರು ಮಸೀದಿ ವಾಸ್ತವವಾಗಿ ದೇವಾಲಯವಾಗಿದ್ದು, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಅಲ್ಲಿ ಪೂಜೆ ಸಲ್ಲಿಸುತ್ತಿದ್ದರು ಎಂದು ವಾದಿಸಿ ಪ್ರಕರಣ ದಾಖಲಿಸಿದಾಗ ಕಾನೂನು ವಿವಾದ ಪ್ರಾರಂಭವಾಯಿತು. ಈ ಸ್ಥಳವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯ ವಶಕ್ಕೆ ಬರುವ ಮೊದಲು, ಪ್ರಕರಣವು ನ್ಯಾಯಾಲಯಗಳ ಮೂಲಕ ಹೋಗಿ 1878ರ ತೀರ್ಪಿನಲ್ಲಿ ಕೊನೆಗೊಂಡಿತು. ನ್ಯಾಯಾಲಯದಲ್ಲಿ, ಹಳೆಯ ಕಟ್ಟಡವು ರಾಜ್ಯದ ಆಸ್ತಿಯಾಗಿದೆ. ಆದರೆ, ಮುಸ್ಲಿಮರು ಅದನ್ನು ಮಸೀದಿಯಾಗಿ ಬಳಸುತ್ತಿದ್ದಾರೆ ಎಂದು ಎರಡೂ ಪಕ್ಷಗಳು ಒಪ್ಪಿಕೊಂಡಿತ್ತು ಎಂದು ವರದಿ ವಿವರಿಸಿದೆ.

“ಹಳೆಯ ಕಟ್ಟಡ (ಮಸೀದಿ) ಯನ್ನು ಹಿಜರಿ 933 (ಕ್ರಿ.ಶ. 1526) ರಲ್ಲಿ ದೆಹಲಿಯ ಬಾಬರ್ ಬಾದ್‌ಶಾ (ರಾಜ) ಅವಧಿಯಲ್ಲಿ ಮತ್ತು ಅವರ ಆದೇಶದ ಮೇರೆಗೆ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ್ದಾರೆ. ಸಂಭಾಲ್ ಕೋಟೆಯು ಸುಮಾರು 450 ವರ್ಷಗಳ ಹಿಂದೆ ಪೃಥ್ವಿರಾಜನ ಕಾಲದಿಂದಲೂ ಅಸ್ತಿತ್ವದಲ್ಲಿತ್ತು. ಅಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು. ಅಂದಿನಿಂದ ಅದನ್ನು ಪಟ್ಟಣದ ಜುಮ್ಮಾ ಮಸೀದಿಯಾಗಿಯೇ ಬಳಸಲಾಗುತ್ತಿದೆ. ಅದರಲ್ಲಿ ಹಿಂದೂಗಳಿಗೆ ಯಾವುದೇ ಹಕ್ಕಿಲ್ಲ ಅಥವಾ ಅದನ್ನು ಎಂದಿಗೂ ದೇವಾಲಯವಾಗಿ ಬಳಸಿಲ್ಲ” ಎಂದು ಹೈಕೋರ್ಟ್ ತೀರ್ಪು ಹೇಳಿತ್ತು ಎಂದು ವರದಿ ತಿಳಿಸಿದೆ.

ತೀರ್ಪು ನೀಡುವಾಗ ಮಸೀದಿಗೆ ಸಂಬಂಧಿಸಿದ ಐತಿಹಾಸಿಕ ಶಾಸನಗಳು ಮತ್ತು ದಾಖಲೆಗಳನ್ನು ಸಹ ಕೋರ್ಟ್ ಉಲ್ಲೇಖಿಸಿತ್ತು. ಅದರಲ್ಲಿ ಕಟ್ಟಡದ (ಮಸೀದಿಯ) ಗೋಡೆಗಳಲ್ಲಿನ ಕಲ್ಲಿನ ಶಾಸನಗಳ ಜೊತೆಗೆ, ದೆಹಲಿ ನ್ಯಾಯಾಲಯದಿಂದ ಹೊರಡಿಸಲಾದ ಪರ್ವಾನಗಳು (ಲಿಖಿತ ಸಂದೇಶಗಳು) ಮತ್ತು ಪರ್ಷಿಯನ್ ಭಾಷೆಯಲ್ಲಿರುವ ಸರಣಿ ಆದೇಶಗಳು ಒಳಗೊಂಡಿವೆ. ಈ ಆದೇಶಗಳಲ್ಲಿ ಸಂಭಾಲ್‌ನ ಪೃಥ್ವಿರಾಜ್ ಕೋಟೆಯಲ್ಲಿರುವ ಜಾಮಾ ಮಸೀದಿಯ ನಿರ್ವಹಣೆ ಕುರಿತ ನಿಬಂಧನೆಗಳಿವೆ ಎಂದು ವರದಿ ಹೇಳಿದೆ.

“ಪೃಥ್ವಿರಾಜನ ಕಾಲದ ಯಾವುದೋ ಹಳೆಯ ಹಿಂದೂ ದೇವಾಲಯವನ್ನು ಕೆಡವಿ ಅದರ ಸ್ಥಳದಲ್ಲಿ ಬಾಬರ್ ಆಡಳಿತಾವಧಿಯಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು ಅಥವಾ ಹಳೆಯ ದೇವಾಲಯವನ್ನು ಮಸೀದಿಯ ಉದ್ದೇಶಕ್ಕೆ ಬಳಸಲಾಯಿತು. ಅಂದಿನಿಂದ ಅದನ್ನು ಹಾಗೆಯೇ ಬಳಸಲಾಗುತ್ತಿದೆ. ಈ ರೀತಿ ಏನೇ ವಾದಗಳಿರಲಿ, 100 ವರ್ಷಗಳ ಕಾಲ ಅದು ಮೊಹಮ್ಮದೀಯ (ಮುಸ್ಲಿಂ) ಮಸೀದಿಯಾಗಿತ್ತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ನ್ಯಾಯಾಲಯ ಹೇಳಿತ್ತು ಎಂದು ವರದಿ ತಿಳಿಸಿದೆ.

“ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ಪ್ರಮಾಣೀಕೃತ ಪ್ರತಿಯನ್ನು ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ಸಮಿತಿಯು ನಮ್ಮೊಂದಿಗೆ ಹಂಚಿಕೊಂಡಿದೆ. ಮಸೀದಿಯ ಸದರ್ ಜಾಫರ್ ಅಲಿ, “1878ರಲ್ಲಿ ಅಲಹಾಬಾದ್ ಹೈಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿತ್ತು. ಈ ಸತ್ಯ ಗೊತ್ತಿಲ್ಲದೆ ಜಾಮಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಹೇಳುತ್ತಿರುವುದು ನಮಗೆ ಬೇಸರ ತರಿಸಿದೆ. ಮಸೀದಿಯ ಬಗ್ಗೆ ಯಾರೂ ತಪ್ಪು ಕಲ್ಪನೆಗಳನ್ನು ಹರಡದಂತೆ ನೋಡಿಕೊಳ್ಳಲು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

“1878ರಲ್ಲಿ, ಜಾಮಾ ಮಸೀದಿ ಪ್ರಕರಣದಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಅಲಹಾಬಾದ್‌ ಹೈಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿತ್ತು. ಹಾಗಾಗಿ, ಮಸೀದಿಯ ಸಮೀಕ್ಷೆಗೆ ಆದೇಶಿಸುವ ಅಧಿಕಾರ ಸಂಭಾಲ್ ನ್ಯಾಯಾಲಯಕ್ಕೆ ಇರಲಿಲ್ಲ. 1877ರಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ನೀಡಿದ ಆದೇಶಗಳ ಪ್ರಮಾಣೀಕೃತ ಪ್ರತಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ. ಆ ಸಮಯದಲ್ಲಿ, ಆಗಿನ ಮೊರಾದಾಬಾದ್‌ನ ಜಿಲ್ಲಾ ನ್ಯಾಯಾಧೀಶರು (ಆಗ ಸಂಭಾಲ್ ಮೊರಾದಾಬಾದ್‌ನ ಭಾಗವಾಗಿತ್ತು) ತಮ್ಮ ಆದೇಶವನ್ನು ನೀಡುವ ಮೊದಲು ಶಾಹಿ ಜಾಮಾ ಮಸೀದಿಗೆ ವೈಯಕ್ತಿಕವಾಗಿ ಭೇಟಿ ನೀಡಿದ್ದರು. ಆಗ ನ್ಯಾಯಾಲಯವು ಹಿಂದೂ ಪಕ್ಷಕಾರರಿಗೆ ದಂಡ ವಿಧಿಸಿತ್ತು” ಎಂದು ಮಸೀದಿ ಸಮಿತಿಯ ವಕೀಲ ತೌಫೀಕ್ ಅಹ್ಮದ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...