Homeಮುಖಪುಟಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

- Advertisement -
- Advertisement -

1878ರಲ್ಲಿ, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸರ್ ರಾಬರ್ಟ್ ಸ್ಟುವರ್ಟ್ ಅವರು, 16ನೇ ಶತಮಾನದ ಮೊಘಲ್ ಯುಗದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯನ್ನು 100 ವರ್ಷಗಳಿಗೂ ಹೆಚ್ಚು ಕಾಲ ಮಸೀದಿಯಾಗಿ ಬಳಸಲಾಗುತ್ತಿತ್ತು ಎಂದು ತೀರ್ಪು ನೀಡಿದ್ದರು. ಇದು ಮೂಲತಃ ಹಿಂದೂ ದೇವಾಲಯವಾಗಿತ್ತು ಎಂಬ ವಾದವನ್ನು ಅವರು ತಿರಸ್ಕರಿಸಿದ್ದರು. ಮಸೀದಿ ಸಮಿತಿಯ ಪರವಾಗಿ ಬಂದ ತೀರ್ಪು, ಮುಸ್ಲಿಂ ಅರ್ಜಿದಾರರು 12 ವರ್ಷಗಳಿಗೂ ಹೆಚ್ಚು ಸಮಯದಿಂದ ಮಸೀದಿ ಮೇಲೆ ನಿಯಂತ್ರಣ ಹೊಂದಿದ್ದಾರೆ ಎಂಬುವುದಾಗಿ ಹೇಳಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

1875ರಲ್ಲಿ ಚೆಡಾ ಸಿಂಗ್ ಎಂಬ ಅರ್ಚಕ ಮತ್ತು ಇತರರು ಮಸೀದಿ ವಾಸ್ತವವಾಗಿ ದೇವಾಲಯವಾಗಿದ್ದು, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಅಲ್ಲಿ ಪೂಜೆ ಸಲ್ಲಿಸುತ್ತಿದ್ದರು ಎಂದು ವಾದಿಸಿ ಪ್ರಕರಣ ದಾಖಲಿಸಿದಾಗ ಕಾನೂನು ವಿವಾದ ಪ್ರಾರಂಭವಾಯಿತು. ಈ ಸ್ಥಳವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯ ವಶಕ್ಕೆ ಬರುವ ಮೊದಲು, ಪ್ರಕರಣವು ನ್ಯಾಯಾಲಯಗಳ ಮೂಲಕ ಹೋಗಿ 1878ರ ತೀರ್ಪಿನಲ್ಲಿ ಕೊನೆಗೊಂಡಿತು. ನ್ಯಾಯಾಲಯದಲ್ಲಿ, ಹಳೆಯ ಕಟ್ಟಡವು ರಾಜ್ಯದ ಆಸ್ತಿಯಾಗಿದೆ. ಆದರೆ, ಮುಸ್ಲಿಮರು ಅದನ್ನು ಮಸೀದಿಯಾಗಿ ಬಳಸುತ್ತಿದ್ದಾರೆ ಎಂದು ಎರಡೂ ಪಕ್ಷಗಳು ಒಪ್ಪಿಕೊಂಡಿತ್ತು ಎಂದು ವರದಿ ವಿವರಿಸಿದೆ.

“ಹಳೆಯ ಕಟ್ಟಡ (ಮಸೀದಿ) ಯನ್ನು ಹಿಜರಿ 933 (ಕ್ರಿ.ಶ. 1526) ರಲ್ಲಿ ದೆಹಲಿಯ ಬಾಬರ್ ಬಾದ್‌ಶಾ (ರಾಜ) ಅವಧಿಯಲ್ಲಿ ಮತ್ತು ಅವರ ಆದೇಶದ ಮೇರೆಗೆ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ್ದಾರೆ. ಸಂಭಾಲ್ ಕೋಟೆಯು ಸುಮಾರು 450 ವರ್ಷಗಳ ಹಿಂದೆ ಪೃಥ್ವಿರಾಜನ ಕಾಲದಿಂದಲೂ ಅಸ್ತಿತ್ವದಲ್ಲಿತ್ತು. ಅಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು. ಅಂದಿನಿಂದ ಅದನ್ನು ಪಟ್ಟಣದ ಜುಮ್ಮಾ ಮಸೀದಿಯಾಗಿಯೇ ಬಳಸಲಾಗುತ್ತಿದೆ. ಅದರಲ್ಲಿ ಹಿಂದೂಗಳಿಗೆ ಯಾವುದೇ ಹಕ್ಕಿಲ್ಲ ಅಥವಾ ಅದನ್ನು ಎಂದಿಗೂ ದೇವಾಲಯವಾಗಿ ಬಳಸಿಲ್ಲ” ಎಂದು ಹೈಕೋರ್ಟ್ ತೀರ್ಪು ಹೇಳಿತ್ತು ಎಂದು ವರದಿ ತಿಳಿಸಿದೆ.

ತೀರ್ಪು ನೀಡುವಾಗ ಮಸೀದಿಗೆ ಸಂಬಂಧಿಸಿದ ಐತಿಹಾಸಿಕ ಶಾಸನಗಳು ಮತ್ತು ದಾಖಲೆಗಳನ್ನು ಸಹ ಕೋರ್ಟ್ ಉಲ್ಲೇಖಿಸಿತ್ತು. ಅದರಲ್ಲಿ ಕಟ್ಟಡದ (ಮಸೀದಿಯ) ಗೋಡೆಗಳಲ್ಲಿನ ಕಲ್ಲಿನ ಶಾಸನಗಳ ಜೊತೆಗೆ, ದೆಹಲಿ ನ್ಯಾಯಾಲಯದಿಂದ ಹೊರಡಿಸಲಾದ ಪರ್ವಾನಗಳು (ಲಿಖಿತ ಸಂದೇಶಗಳು) ಮತ್ತು ಪರ್ಷಿಯನ್ ಭಾಷೆಯಲ್ಲಿರುವ ಸರಣಿ ಆದೇಶಗಳು ಒಳಗೊಂಡಿವೆ. ಈ ಆದೇಶಗಳಲ್ಲಿ ಸಂಭಾಲ್‌ನ ಪೃಥ್ವಿರಾಜ್ ಕೋಟೆಯಲ್ಲಿರುವ ಜಾಮಾ ಮಸೀದಿಯ ನಿರ್ವಹಣೆ ಕುರಿತ ನಿಬಂಧನೆಗಳಿವೆ ಎಂದು ವರದಿ ಹೇಳಿದೆ.

“ಪೃಥ್ವಿರಾಜನ ಕಾಲದ ಯಾವುದೋ ಹಳೆಯ ಹಿಂದೂ ದೇವಾಲಯವನ್ನು ಕೆಡವಿ ಅದರ ಸ್ಥಳದಲ್ಲಿ ಬಾಬರ್ ಆಡಳಿತಾವಧಿಯಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು ಅಥವಾ ಹಳೆಯ ದೇವಾಲಯವನ್ನು ಮಸೀದಿಯ ಉದ್ದೇಶಕ್ಕೆ ಬಳಸಲಾಯಿತು. ಅಂದಿನಿಂದ ಅದನ್ನು ಹಾಗೆಯೇ ಬಳಸಲಾಗುತ್ತಿದೆ. ಈ ರೀತಿ ಏನೇ ವಾದಗಳಿರಲಿ, 100 ವರ್ಷಗಳ ಕಾಲ ಅದು ಮೊಹಮ್ಮದೀಯ (ಮುಸ್ಲಿಂ) ಮಸೀದಿಯಾಗಿತ್ತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ನ್ಯಾಯಾಲಯ ಹೇಳಿತ್ತು ಎಂದು ವರದಿ ತಿಳಿಸಿದೆ.

“ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ಪ್ರಮಾಣೀಕೃತ ಪ್ರತಿಯನ್ನು ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ಸಮಿತಿಯು ನಮ್ಮೊಂದಿಗೆ ಹಂಚಿಕೊಂಡಿದೆ. ಮಸೀದಿಯ ಸದರ್ ಜಾಫರ್ ಅಲಿ, “1878ರಲ್ಲಿ ಅಲಹಾಬಾದ್ ಹೈಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿತ್ತು. ಈ ಸತ್ಯ ಗೊತ್ತಿಲ್ಲದೆ ಜಾಮಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಹೇಳುತ್ತಿರುವುದು ನಮಗೆ ಬೇಸರ ತರಿಸಿದೆ. ಮಸೀದಿಯ ಬಗ್ಗೆ ಯಾರೂ ತಪ್ಪು ಕಲ್ಪನೆಗಳನ್ನು ಹರಡದಂತೆ ನೋಡಿಕೊಳ್ಳಲು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

“1878ರಲ್ಲಿ, ಜಾಮಾ ಮಸೀದಿ ಪ್ರಕರಣದಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಅಲಹಾಬಾದ್‌ ಹೈಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿತ್ತು. ಹಾಗಾಗಿ, ಮಸೀದಿಯ ಸಮೀಕ್ಷೆಗೆ ಆದೇಶಿಸುವ ಅಧಿಕಾರ ಸಂಭಾಲ್ ನ್ಯಾಯಾಲಯಕ್ಕೆ ಇರಲಿಲ್ಲ. 1877ರಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ನೀಡಿದ ಆದೇಶಗಳ ಪ್ರಮಾಣೀಕೃತ ಪ್ರತಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ. ಆ ಸಮಯದಲ್ಲಿ, ಆಗಿನ ಮೊರಾದಾಬಾದ್‌ನ ಜಿಲ್ಲಾ ನ್ಯಾಯಾಧೀಶರು (ಆಗ ಸಂಭಾಲ್ ಮೊರಾದಾಬಾದ್‌ನ ಭಾಗವಾಗಿತ್ತು) ತಮ್ಮ ಆದೇಶವನ್ನು ನೀಡುವ ಮೊದಲು ಶಾಹಿ ಜಾಮಾ ಮಸೀದಿಗೆ ವೈಯಕ್ತಿಕವಾಗಿ ಭೇಟಿ ನೀಡಿದ್ದರು. ಆಗ ನ್ಯಾಯಾಲಯವು ಹಿಂದೂ ಪಕ್ಷಕಾರರಿಗೆ ದಂಡ ವಿಧಿಸಿತ್ತು” ಎಂದು ಮಸೀದಿ ಸಮಿತಿಯ ವಕೀಲ ತೌಫೀಕ್ ಅಹ್ಮದ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...