Homeಮುಖಪುಟಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

- Advertisement -
- Advertisement -

1878ರಲ್ಲಿ, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸರ್ ರಾಬರ್ಟ್ ಸ್ಟುವರ್ಟ್ ಅವರು, 16ನೇ ಶತಮಾನದ ಮೊಘಲ್ ಯುಗದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯನ್ನು 100 ವರ್ಷಗಳಿಗೂ ಹೆಚ್ಚು ಕಾಲ ಮಸೀದಿಯಾಗಿ ಬಳಸಲಾಗುತ್ತಿತ್ತು ಎಂದು ತೀರ್ಪು ನೀಡಿದ್ದರು. ಇದು ಮೂಲತಃ ಹಿಂದೂ ದೇವಾಲಯವಾಗಿತ್ತು ಎಂಬ ವಾದವನ್ನು ಅವರು ತಿರಸ್ಕರಿಸಿದ್ದರು. ಮಸೀದಿ ಸಮಿತಿಯ ಪರವಾಗಿ ಬಂದ ತೀರ್ಪು, ಮುಸ್ಲಿಂ ಅರ್ಜಿದಾರರು 12 ವರ್ಷಗಳಿಗೂ ಹೆಚ್ಚು ಸಮಯದಿಂದ ಮಸೀದಿ ಮೇಲೆ ನಿಯಂತ್ರಣ ಹೊಂದಿದ್ದಾರೆ ಎಂಬುವುದಾಗಿ ಹೇಳಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

1875ರಲ್ಲಿ ಚೆಡಾ ಸಿಂಗ್ ಎಂಬ ಅರ್ಚಕ ಮತ್ತು ಇತರರು ಮಸೀದಿ ವಾಸ್ತವವಾಗಿ ದೇವಾಲಯವಾಗಿದ್ದು, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಅಲ್ಲಿ ಪೂಜೆ ಸಲ್ಲಿಸುತ್ತಿದ್ದರು ಎಂದು ವಾದಿಸಿ ಪ್ರಕರಣ ದಾಖಲಿಸಿದಾಗ ಕಾನೂನು ವಿವಾದ ಪ್ರಾರಂಭವಾಯಿತು. ಈ ಸ್ಥಳವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯ ವಶಕ್ಕೆ ಬರುವ ಮೊದಲು, ಪ್ರಕರಣವು ನ್ಯಾಯಾಲಯಗಳ ಮೂಲಕ ಹೋಗಿ 1878ರ ತೀರ್ಪಿನಲ್ಲಿ ಕೊನೆಗೊಂಡಿತು. ನ್ಯಾಯಾಲಯದಲ್ಲಿ, ಹಳೆಯ ಕಟ್ಟಡವು ರಾಜ್ಯದ ಆಸ್ತಿಯಾಗಿದೆ. ಆದರೆ, ಮುಸ್ಲಿಮರು ಅದನ್ನು ಮಸೀದಿಯಾಗಿ ಬಳಸುತ್ತಿದ್ದಾರೆ ಎಂದು ಎರಡೂ ಪಕ್ಷಗಳು ಒಪ್ಪಿಕೊಂಡಿತ್ತು ಎಂದು ವರದಿ ವಿವರಿಸಿದೆ.

“ಹಳೆಯ ಕಟ್ಟಡ (ಮಸೀದಿ) ಯನ್ನು ಹಿಜರಿ 933 (ಕ್ರಿ.ಶ. 1526) ರಲ್ಲಿ ದೆಹಲಿಯ ಬಾಬರ್ ಬಾದ್‌ಶಾ (ರಾಜ) ಅವಧಿಯಲ್ಲಿ ಮತ್ತು ಅವರ ಆದೇಶದ ಮೇರೆಗೆ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ್ದಾರೆ. ಸಂಭಾಲ್ ಕೋಟೆಯು ಸುಮಾರು 450 ವರ್ಷಗಳ ಹಿಂದೆ ಪೃಥ್ವಿರಾಜನ ಕಾಲದಿಂದಲೂ ಅಸ್ತಿತ್ವದಲ್ಲಿತ್ತು. ಅಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು. ಅಂದಿನಿಂದ ಅದನ್ನು ಪಟ್ಟಣದ ಜುಮ್ಮಾ ಮಸೀದಿಯಾಗಿಯೇ ಬಳಸಲಾಗುತ್ತಿದೆ. ಅದರಲ್ಲಿ ಹಿಂದೂಗಳಿಗೆ ಯಾವುದೇ ಹಕ್ಕಿಲ್ಲ ಅಥವಾ ಅದನ್ನು ಎಂದಿಗೂ ದೇವಾಲಯವಾಗಿ ಬಳಸಿಲ್ಲ” ಎಂದು ಹೈಕೋರ್ಟ್ ತೀರ್ಪು ಹೇಳಿತ್ತು ಎಂದು ವರದಿ ತಿಳಿಸಿದೆ.

ತೀರ್ಪು ನೀಡುವಾಗ ಮಸೀದಿಗೆ ಸಂಬಂಧಿಸಿದ ಐತಿಹಾಸಿಕ ಶಾಸನಗಳು ಮತ್ತು ದಾಖಲೆಗಳನ್ನು ಸಹ ಕೋರ್ಟ್ ಉಲ್ಲೇಖಿಸಿತ್ತು. ಅದರಲ್ಲಿ ಕಟ್ಟಡದ (ಮಸೀದಿಯ) ಗೋಡೆಗಳಲ್ಲಿನ ಕಲ್ಲಿನ ಶಾಸನಗಳ ಜೊತೆಗೆ, ದೆಹಲಿ ನ್ಯಾಯಾಲಯದಿಂದ ಹೊರಡಿಸಲಾದ ಪರ್ವಾನಗಳು (ಲಿಖಿತ ಸಂದೇಶಗಳು) ಮತ್ತು ಪರ್ಷಿಯನ್ ಭಾಷೆಯಲ್ಲಿರುವ ಸರಣಿ ಆದೇಶಗಳು ಒಳಗೊಂಡಿವೆ. ಈ ಆದೇಶಗಳಲ್ಲಿ ಸಂಭಾಲ್‌ನ ಪೃಥ್ವಿರಾಜ್ ಕೋಟೆಯಲ್ಲಿರುವ ಜಾಮಾ ಮಸೀದಿಯ ನಿರ್ವಹಣೆ ಕುರಿತ ನಿಬಂಧನೆಗಳಿವೆ ಎಂದು ವರದಿ ಹೇಳಿದೆ.

“ಪೃಥ್ವಿರಾಜನ ಕಾಲದ ಯಾವುದೋ ಹಳೆಯ ಹಿಂದೂ ದೇವಾಲಯವನ್ನು ಕೆಡವಿ ಅದರ ಸ್ಥಳದಲ್ಲಿ ಬಾಬರ್ ಆಡಳಿತಾವಧಿಯಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು ಅಥವಾ ಹಳೆಯ ದೇವಾಲಯವನ್ನು ಮಸೀದಿಯ ಉದ್ದೇಶಕ್ಕೆ ಬಳಸಲಾಯಿತು. ಅಂದಿನಿಂದ ಅದನ್ನು ಹಾಗೆಯೇ ಬಳಸಲಾಗುತ್ತಿದೆ. ಈ ರೀತಿ ಏನೇ ವಾದಗಳಿರಲಿ, 100 ವರ್ಷಗಳ ಕಾಲ ಅದು ಮೊಹಮ್ಮದೀಯ (ಮುಸ್ಲಿಂ) ಮಸೀದಿಯಾಗಿತ್ತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ನ್ಯಾಯಾಲಯ ಹೇಳಿತ್ತು ಎಂದು ವರದಿ ತಿಳಿಸಿದೆ.

“ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ಪ್ರಮಾಣೀಕೃತ ಪ್ರತಿಯನ್ನು ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ಸಮಿತಿಯು ನಮ್ಮೊಂದಿಗೆ ಹಂಚಿಕೊಂಡಿದೆ. ಮಸೀದಿಯ ಸದರ್ ಜಾಫರ್ ಅಲಿ, “1878ರಲ್ಲಿ ಅಲಹಾಬಾದ್ ಹೈಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿತ್ತು. ಈ ಸತ್ಯ ಗೊತ್ತಿಲ್ಲದೆ ಜಾಮಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಹೇಳುತ್ತಿರುವುದು ನಮಗೆ ಬೇಸರ ತರಿಸಿದೆ. ಮಸೀದಿಯ ಬಗ್ಗೆ ಯಾರೂ ತಪ್ಪು ಕಲ್ಪನೆಗಳನ್ನು ಹರಡದಂತೆ ನೋಡಿಕೊಳ್ಳಲು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

“1878ರಲ್ಲಿ, ಜಾಮಾ ಮಸೀದಿ ಪ್ರಕರಣದಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಅಲಹಾಬಾದ್‌ ಹೈಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿತ್ತು. ಹಾಗಾಗಿ, ಮಸೀದಿಯ ಸಮೀಕ್ಷೆಗೆ ಆದೇಶಿಸುವ ಅಧಿಕಾರ ಸಂಭಾಲ್ ನ್ಯಾಯಾಲಯಕ್ಕೆ ಇರಲಿಲ್ಲ. 1877ರಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ನೀಡಿದ ಆದೇಶಗಳ ಪ್ರಮಾಣೀಕೃತ ಪ್ರತಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ. ಆ ಸಮಯದಲ್ಲಿ, ಆಗಿನ ಮೊರಾದಾಬಾದ್‌ನ ಜಿಲ್ಲಾ ನ್ಯಾಯಾಧೀಶರು (ಆಗ ಸಂಭಾಲ್ ಮೊರಾದಾಬಾದ್‌ನ ಭಾಗವಾಗಿತ್ತು) ತಮ್ಮ ಆದೇಶವನ್ನು ನೀಡುವ ಮೊದಲು ಶಾಹಿ ಜಾಮಾ ಮಸೀದಿಗೆ ವೈಯಕ್ತಿಕವಾಗಿ ಭೇಟಿ ನೀಡಿದ್ದರು. ಆಗ ನ್ಯಾಯಾಲಯವು ಹಿಂದೂ ಪಕ್ಷಕಾರರಿಗೆ ದಂಡ ವಿಧಿಸಿತ್ತು” ಎಂದು ಮಸೀದಿ ಸಮಿತಿಯ ವಕೀಲ ತೌಫೀಕ್ ಅಹ್ಮದ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...