Homeಮುಖಪುಟಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

- Advertisement -
- Advertisement -

1878ರಲ್ಲಿ, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸರ್ ರಾಬರ್ಟ್ ಸ್ಟುವರ್ಟ್ ಅವರು, 16ನೇ ಶತಮಾನದ ಮೊಘಲ್ ಯುಗದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯನ್ನು 100 ವರ್ಷಗಳಿಗೂ ಹೆಚ್ಚು ಕಾಲ ಮಸೀದಿಯಾಗಿ ಬಳಸಲಾಗುತ್ತಿತ್ತು ಎಂದು ತೀರ್ಪು ನೀಡಿದ್ದರು. ಇದು ಮೂಲತಃ ಹಿಂದೂ ದೇವಾಲಯವಾಗಿತ್ತು ಎಂಬ ವಾದವನ್ನು ಅವರು ತಿರಸ್ಕರಿಸಿದ್ದರು. ಮಸೀದಿ ಸಮಿತಿಯ ಪರವಾಗಿ ಬಂದ ತೀರ್ಪು, ಮುಸ್ಲಿಂ ಅರ್ಜಿದಾರರು 12 ವರ್ಷಗಳಿಗೂ ಹೆಚ್ಚು ಸಮಯದಿಂದ ಮಸೀದಿ ಮೇಲೆ ನಿಯಂತ್ರಣ ಹೊಂದಿದ್ದಾರೆ ಎಂಬುವುದಾಗಿ ಹೇಳಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

1875ರಲ್ಲಿ ಚೆಡಾ ಸಿಂಗ್ ಎಂಬ ಅರ್ಚಕ ಮತ್ತು ಇತರರು ಮಸೀದಿ ವಾಸ್ತವವಾಗಿ ದೇವಾಲಯವಾಗಿದ್ದು, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಅಲ್ಲಿ ಪೂಜೆ ಸಲ್ಲಿಸುತ್ತಿದ್ದರು ಎಂದು ವಾದಿಸಿ ಪ್ರಕರಣ ದಾಖಲಿಸಿದಾಗ ಕಾನೂನು ವಿವಾದ ಪ್ರಾರಂಭವಾಯಿತು. ಈ ಸ್ಥಳವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯ ವಶಕ್ಕೆ ಬರುವ ಮೊದಲು, ಪ್ರಕರಣವು ನ್ಯಾಯಾಲಯಗಳ ಮೂಲಕ ಹೋಗಿ 1878ರ ತೀರ್ಪಿನಲ್ಲಿ ಕೊನೆಗೊಂಡಿತು. ನ್ಯಾಯಾಲಯದಲ್ಲಿ, ಹಳೆಯ ಕಟ್ಟಡವು ರಾಜ್ಯದ ಆಸ್ತಿಯಾಗಿದೆ. ಆದರೆ, ಮುಸ್ಲಿಮರು ಅದನ್ನು ಮಸೀದಿಯಾಗಿ ಬಳಸುತ್ತಿದ್ದಾರೆ ಎಂದು ಎರಡೂ ಪಕ್ಷಗಳು ಒಪ್ಪಿಕೊಂಡಿತ್ತು ಎಂದು ವರದಿ ವಿವರಿಸಿದೆ.

“ಹಳೆಯ ಕಟ್ಟಡ (ಮಸೀದಿ) ಯನ್ನು ಹಿಜರಿ 933 (ಕ್ರಿ.ಶ. 1526) ರಲ್ಲಿ ದೆಹಲಿಯ ಬಾಬರ್ ಬಾದ್‌ಶಾ (ರಾಜ) ಅವಧಿಯಲ್ಲಿ ಮತ್ತು ಅವರ ಆದೇಶದ ಮೇರೆಗೆ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ್ದಾರೆ. ಸಂಭಾಲ್ ಕೋಟೆಯು ಸುಮಾರು 450 ವರ್ಷಗಳ ಹಿಂದೆ ಪೃಥ್ವಿರಾಜನ ಕಾಲದಿಂದಲೂ ಅಸ್ತಿತ್ವದಲ್ಲಿತ್ತು. ಅಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು. ಅಂದಿನಿಂದ ಅದನ್ನು ಪಟ್ಟಣದ ಜುಮ್ಮಾ ಮಸೀದಿಯಾಗಿಯೇ ಬಳಸಲಾಗುತ್ತಿದೆ. ಅದರಲ್ಲಿ ಹಿಂದೂಗಳಿಗೆ ಯಾವುದೇ ಹಕ್ಕಿಲ್ಲ ಅಥವಾ ಅದನ್ನು ಎಂದಿಗೂ ದೇವಾಲಯವಾಗಿ ಬಳಸಿಲ್ಲ” ಎಂದು ಹೈಕೋರ್ಟ್ ತೀರ್ಪು ಹೇಳಿತ್ತು ಎಂದು ವರದಿ ತಿಳಿಸಿದೆ.

ತೀರ್ಪು ನೀಡುವಾಗ ಮಸೀದಿಗೆ ಸಂಬಂಧಿಸಿದ ಐತಿಹಾಸಿಕ ಶಾಸನಗಳು ಮತ್ತು ದಾಖಲೆಗಳನ್ನು ಸಹ ಕೋರ್ಟ್ ಉಲ್ಲೇಖಿಸಿತ್ತು. ಅದರಲ್ಲಿ ಕಟ್ಟಡದ (ಮಸೀದಿಯ) ಗೋಡೆಗಳಲ್ಲಿನ ಕಲ್ಲಿನ ಶಾಸನಗಳ ಜೊತೆಗೆ, ದೆಹಲಿ ನ್ಯಾಯಾಲಯದಿಂದ ಹೊರಡಿಸಲಾದ ಪರ್ವಾನಗಳು (ಲಿಖಿತ ಸಂದೇಶಗಳು) ಮತ್ತು ಪರ್ಷಿಯನ್ ಭಾಷೆಯಲ್ಲಿರುವ ಸರಣಿ ಆದೇಶಗಳು ಒಳಗೊಂಡಿವೆ. ಈ ಆದೇಶಗಳಲ್ಲಿ ಸಂಭಾಲ್‌ನ ಪೃಥ್ವಿರಾಜ್ ಕೋಟೆಯಲ್ಲಿರುವ ಜಾಮಾ ಮಸೀದಿಯ ನಿರ್ವಹಣೆ ಕುರಿತ ನಿಬಂಧನೆಗಳಿವೆ ಎಂದು ವರದಿ ಹೇಳಿದೆ.

“ಪೃಥ್ವಿರಾಜನ ಕಾಲದ ಯಾವುದೋ ಹಳೆಯ ಹಿಂದೂ ದೇವಾಲಯವನ್ನು ಕೆಡವಿ ಅದರ ಸ್ಥಳದಲ್ಲಿ ಬಾಬರ್ ಆಡಳಿತಾವಧಿಯಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು ಅಥವಾ ಹಳೆಯ ದೇವಾಲಯವನ್ನು ಮಸೀದಿಯ ಉದ್ದೇಶಕ್ಕೆ ಬಳಸಲಾಯಿತು. ಅಂದಿನಿಂದ ಅದನ್ನು ಹಾಗೆಯೇ ಬಳಸಲಾಗುತ್ತಿದೆ. ಈ ರೀತಿ ಏನೇ ವಾದಗಳಿರಲಿ, 100 ವರ್ಷಗಳ ಕಾಲ ಅದು ಮೊಹಮ್ಮದೀಯ (ಮುಸ್ಲಿಂ) ಮಸೀದಿಯಾಗಿತ್ತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ನ್ಯಾಯಾಲಯ ಹೇಳಿತ್ತು ಎಂದು ವರದಿ ತಿಳಿಸಿದೆ.

“ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ಪ್ರಮಾಣೀಕೃತ ಪ್ರತಿಯನ್ನು ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ಸಮಿತಿಯು ನಮ್ಮೊಂದಿಗೆ ಹಂಚಿಕೊಂಡಿದೆ. ಮಸೀದಿಯ ಸದರ್ ಜಾಫರ್ ಅಲಿ, “1878ರಲ್ಲಿ ಅಲಹಾಬಾದ್ ಹೈಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿತ್ತು. ಈ ಸತ್ಯ ಗೊತ್ತಿಲ್ಲದೆ ಜಾಮಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಹೇಳುತ್ತಿರುವುದು ನಮಗೆ ಬೇಸರ ತರಿಸಿದೆ. ಮಸೀದಿಯ ಬಗ್ಗೆ ಯಾರೂ ತಪ್ಪು ಕಲ್ಪನೆಗಳನ್ನು ಹರಡದಂತೆ ನೋಡಿಕೊಳ್ಳಲು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

“1878ರಲ್ಲಿ, ಜಾಮಾ ಮಸೀದಿ ಪ್ರಕರಣದಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಅಲಹಾಬಾದ್‌ ಹೈಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿತ್ತು. ಹಾಗಾಗಿ, ಮಸೀದಿಯ ಸಮೀಕ್ಷೆಗೆ ಆದೇಶಿಸುವ ಅಧಿಕಾರ ಸಂಭಾಲ್ ನ್ಯಾಯಾಲಯಕ್ಕೆ ಇರಲಿಲ್ಲ. 1877ರಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ನೀಡಿದ ಆದೇಶಗಳ ಪ್ರಮಾಣೀಕೃತ ಪ್ರತಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ. ಆ ಸಮಯದಲ್ಲಿ, ಆಗಿನ ಮೊರಾದಾಬಾದ್‌ನ ಜಿಲ್ಲಾ ನ್ಯಾಯಾಧೀಶರು (ಆಗ ಸಂಭಾಲ್ ಮೊರಾದಾಬಾದ್‌ನ ಭಾಗವಾಗಿತ್ತು) ತಮ್ಮ ಆದೇಶವನ್ನು ನೀಡುವ ಮೊದಲು ಶಾಹಿ ಜಾಮಾ ಮಸೀದಿಗೆ ವೈಯಕ್ತಿಕವಾಗಿ ಭೇಟಿ ನೀಡಿದ್ದರು. ಆಗ ನ್ಯಾಯಾಲಯವು ಹಿಂದೂ ಪಕ್ಷಕಾರರಿಗೆ ದಂಡ ವಿಧಿಸಿತ್ತು” ಎಂದು ಮಸೀದಿ ಸಮಿತಿಯ ವಕೀಲ ತೌಫೀಕ್ ಅಹ್ಮದ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...