Homeಮುಖಪುಟಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

ಸಂಭಾಲ್‌ ಮಸೀದಿ ವಿವಾದ : 1878ರ ಹೈಕೋರ್ಟ್ ತೀರ್ಪು ಹೇಳಿದ್ದೇನು?

- Advertisement -
- Advertisement -

1878ರಲ್ಲಿ, ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸರ್ ರಾಬರ್ಟ್ ಸ್ಟುವರ್ಟ್ ಅವರು, 16ನೇ ಶತಮಾನದ ಮೊಘಲ್ ಯುಗದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯನ್ನು 100 ವರ್ಷಗಳಿಗೂ ಹೆಚ್ಚು ಕಾಲ ಮಸೀದಿಯಾಗಿ ಬಳಸಲಾಗುತ್ತಿತ್ತು ಎಂದು ತೀರ್ಪು ನೀಡಿದ್ದರು. ಇದು ಮೂಲತಃ ಹಿಂದೂ ದೇವಾಲಯವಾಗಿತ್ತು ಎಂಬ ವಾದವನ್ನು ಅವರು ತಿರಸ್ಕರಿಸಿದ್ದರು. ಮಸೀದಿ ಸಮಿತಿಯ ಪರವಾಗಿ ಬಂದ ತೀರ್ಪು, ಮುಸ್ಲಿಂ ಅರ್ಜಿದಾರರು 12 ವರ್ಷಗಳಿಗೂ ಹೆಚ್ಚು ಸಮಯದಿಂದ ಮಸೀದಿ ಮೇಲೆ ನಿಯಂತ್ರಣ ಹೊಂದಿದ್ದಾರೆ ಎಂಬುವುದಾಗಿ ಹೇಳಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

1875ರಲ್ಲಿ ಚೆಡಾ ಸಿಂಗ್ ಎಂಬ ಅರ್ಚಕ ಮತ್ತು ಇತರರು ಮಸೀದಿ ವಾಸ್ತವವಾಗಿ ದೇವಾಲಯವಾಗಿದ್ದು, ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಅಲ್ಲಿ ಪೂಜೆ ಸಲ್ಲಿಸುತ್ತಿದ್ದರು ಎಂದು ವಾದಿಸಿ ಪ್ರಕರಣ ದಾಖಲಿಸಿದಾಗ ಕಾನೂನು ವಿವಾದ ಪ್ರಾರಂಭವಾಯಿತು. ಈ ಸ್ಥಳವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಯ ವಶಕ್ಕೆ ಬರುವ ಮೊದಲು, ಪ್ರಕರಣವು ನ್ಯಾಯಾಲಯಗಳ ಮೂಲಕ ಹೋಗಿ 1878ರ ತೀರ್ಪಿನಲ್ಲಿ ಕೊನೆಗೊಂಡಿತು. ನ್ಯಾಯಾಲಯದಲ್ಲಿ, ಹಳೆಯ ಕಟ್ಟಡವು ರಾಜ್ಯದ ಆಸ್ತಿಯಾಗಿದೆ. ಆದರೆ, ಮುಸ್ಲಿಮರು ಅದನ್ನು ಮಸೀದಿಯಾಗಿ ಬಳಸುತ್ತಿದ್ದಾರೆ ಎಂದು ಎರಡೂ ಪಕ್ಷಗಳು ಒಪ್ಪಿಕೊಂಡಿತ್ತು ಎಂದು ವರದಿ ವಿವರಿಸಿದೆ.

“ಹಳೆಯ ಕಟ್ಟಡ (ಮಸೀದಿ) ಯನ್ನು ಹಿಜರಿ 933 (ಕ್ರಿ.ಶ. 1526) ರಲ್ಲಿ ದೆಹಲಿಯ ಬಾಬರ್ ಬಾದ್‌ಶಾ (ರಾಜ) ಅವಧಿಯಲ್ಲಿ ಮತ್ತು ಅವರ ಆದೇಶದ ಮೇರೆಗೆ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ್ದಾರೆ. ಸಂಭಾಲ್ ಕೋಟೆಯು ಸುಮಾರು 450 ವರ್ಷಗಳ ಹಿಂದೆ ಪೃಥ್ವಿರಾಜನ ಕಾಲದಿಂದಲೂ ಅಸ್ತಿತ್ವದಲ್ಲಿತ್ತು. ಅಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು. ಅಂದಿನಿಂದ ಅದನ್ನು ಪಟ್ಟಣದ ಜುಮ್ಮಾ ಮಸೀದಿಯಾಗಿಯೇ ಬಳಸಲಾಗುತ್ತಿದೆ. ಅದರಲ್ಲಿ ಹಿಂದೂಗಳಿಗೆ ಯಾವುದೇ ಹಕ್ಕಿಲ್ಲ ಅಥವಾ ಅದನ್ನು ಎಂದಿಗೂ ದೇವಾಲಯವಾಗಿ ಬಳಸಿಲ್ಲ” ಎಂದು ಹೈಕೋರ್ಟ್ ತೀರ್ಪು ಹೇಳಿತ್ತು ಎಂದು ವರದಿ ತಿಳಿಸಿದೆ.

ತೀರ್ಪು ನೀಡುವಾಗ ಮಸೀದಿಗೆ ಸಂಬಂಧಿಸಿದ ಐತಿಹಾಸಿಕ ಶಾಸನಗಳು ಮತ್ತು ದಾಖಲೆಗಳನ್ನು ಸಹ ಕೋರ್ಟ್ ಉಲ್ಲೇಖಿಸಿತ್ತು. ಅದರಲ್ಲಿ ಕಟ್ಟಡದ (ಮಸೀದಿಯ) ಗೋಡೆಗಳಲ್ಲಿನ ಕಲ್ಲಿನ ಶಾಸನಗಳ ಜೊತೆಗೆ, ದೆಹಲಿ ನ್ಯಾಯಾಲಯದಿಂದ ಹೊರಡಿಸಲಾದ ಪರ್ವಾನಗಳು (ಲಿಖಿತ ಸಂದೇಶಗಳು) ಮತ್ತು ಪರ್ಷಿಯನ್ ಭಾಷೆಯಲ್ಲಿರುವ ಸರಣಿ ಆದೇಶಗಳು ಒಳಗೊಂಡಿವೆ. ಈ ಆದೇಶಗಳಲ್ಲಿ ಸಂಭಾಲ್‌ನ ಪೃಥ್ವಿರಾಜ್ ಕೋಟೆಯಲ್ಲಿರುವ ಜಾಮಾ ಮಸೀದಿಯ ನಿರ್ವಹಣೆ ಕುರಿತ ನಿಬಂಧನೆಗಳಿವೆ ಎಂದು ವರದಿ ಹೇಳಿದೆ.

“ಪೃಥ್ವಿರಾಜನ ಕಾಲದ ಯಾವುದೋ ಹಳೆಯ ಹಿಂದೂ ದೇವಾಲಯವನ್ನು ಕೆಡವಿ ಅದರ ಸ್ಥಳದಲ್ಲಿ ಬಾಬರ್ ಆಡಳಿತಾವಧಿಯಲ್ಲಿ ಮಸೀದಿಯನ್ನು ನಿರ್ಮಿಸಲಾಯಿತು ಅಥವಾ ಹಳೆಯ ದೇವಾಲಯವನ್ನು ಮಸೀದಿಯ ಉದ್ದೇಶಕ್ಕೆ ಬಳಸಲಾಯಿತು. ಅಂದಿನಿಂದ ಅದನ್ನು ಹಾಗೆಯೇ ಬಳಸಲಾಗುತ್ತಿದೆ. ಈ ರೀತಿ ಏನೇ ವಾದಗಳಿರಲಿ, 100 ವರ್ಷಗಳ ಕಾಲ ಅದು ಮೊಹಮ್ಮದೀಯ (ಮುಸ್ಲಿಂ) ಮಸೀದಿಯಾಗಿತ್ತು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ” ಎಂದು ನ್ಯಾಯಾಲಯ ಹೇಳಿತ್ತು ಎಂದು ವರದಿ ತಿಳಿಸಿದೆ.

“ಅಲಹಾಬಾದ್ ಹೈಕೋರ್ಟ್‌ ತೀರ್ಪಿನ ಪ್ರಮಾಣೀಕೃತ ಪ್ರತಿಯನ್ನು ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ಸಮಿತಿಯು ನಮ್ಮೊಂದಿಗೆ ಹಂಚಿಕೊಂಡಿದೆ. ಮಸೀದಿಯ ಸದರ್ ಜಾಫರ್ ಅಲಿ, “1878ರಲ್ಲಿ ಅಲಹಾಬಾದ್ ಹೈಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿತ್ತು. ಈ ಸತ್ಯ ಗೊತ್ತಿಲ್ಲದೆ ಜಾಮಾ ಮಸೀದಿಯನ್ನು ‘ವಿವಾದಿತ ರಚನೆ’ ಎಂದು ಹೇಳುತ್ತಿರುವುದು ನಮಗೆ ಬೇಸರ ತರಿಸಿದೆ. ಮಸೀದಿಯ ಬಗ್ಗೆ ಯಾರೂ ತಪ್ಪು ಕಲ್ಪನೆಗಳನ್ನು ಹರಡದಂತೆ ನೋಡಿಕೊಳ್ಳಲು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ” ಎಂದು ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

“1878ರಲ್ಲಿ, ಜಾಮಾ ಮಸೀದಿ ಪ್ರಕರಣದಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಅಲಹಾಬಾದ್‌ ಹೈಕೋರ್ಟ್ ಮುಸ್ಲಿಮರ ಪರವಾಗಿ ತೀರ್ಪು ನೀಡಿತ್ತು. ಹಾಗಾಗಿ, ಮಸೀದಿಯ ಸಮೀಕ್ಷೆಗೆ ಆದೇಶಿಸುವ ಅಧಿಕಾರ ಸಂಭಾಲ್ ನ್ಯಾಯಾಲಯಕ್ಕೆ ಇರಲಿಲ್ಲ. 1877ರಲ್ಲಿ ಮೊರಾದಾಬಾದ್ ಜಿಲ್ಲಾ ನ್ಯಾಯಾಲಯ ಮತ್ತು ಹೈಕೋರ್ಟ್ ನೀಡಿದ ಆದೇಶಗಳ ಪ್ರಮಾಣೀಕೃತ ಪ್ರತಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ. ಆ ಸಮಯದಲ್ಲಿ, ಆಗಿನ ಮೊರಾದಾಬಾದ್‌ನ ಜಿಲ್ಲಾ ನ್ಯಾಯಾಧೀಶರು (ಆಗ ಸಂಭಾಲ್ ಮೊರಾದಾಬಾದ್‌ನ ಭಾಗವಾಗಿತ್ತು) ತಮ್ಮ ಆದೇಶವನ್ನು ನೀಡುವ ಮೊದಲು ಶಾಹಿ ಜಾಮಾ ಮಸೀದಿಗೆ ವೈಯಕ್ತಿಕವಾಗಿ ಭೇಟಿ ನೀಡಿದ್ದರು. ಆಗ ನ್ಯಾಯಾಲಯವು ಹಿಂದೂ ಪಕ್ಷಕಾರರಿಗೆ ದಂಡ ವಿಧಿಸಿತ್ತು” ಎಂದು ಮಸೀದಿ ಸಮಿತಿಯ ವಕೀಲ ತೌಫೀಕ್ ಅಹ್ಮದ್ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ತಿಳಿಸಿದೆ.

ಮನೆಗೆ ನುಗ್ಗಿ ಪೊಲೀಸ್ ದಾಳಿ ಸಂದರ್ಭ ತುಳಿದು ಒಂದು ತಿಂಗಳ ಮುಸ್ಲಿಂ ಶಿಶು ಸಾವು: ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...