Homeಮುಖಪುಟಸಂಭಾಲ್ | ಮಸೀದಿ, ಈದ್ಗಾಗಳ ಒಳಗೆ ಈದ್ ಪ್ರಾರ್ಥನೆ ನಡೆಸುವಂತೆ ಪೊಲೀಸರ ಸೂಚನೆ

ಸಂಭಾಲ್ | ಮಸೀದಿ, ಈದ್ಗಾಗಳ ಒಳಗೆ ಈದ್ ಪ್ರಾರ್ಥನೆ ನಡೆಸುವಂತೆ ಪೊಲೀಸರ ಸೂಚನೆ

- Advertisement -
- Advertisement -

ಈದ್-ಉಲ್-ಫಿತರ್ ಮತ್ತು ಅಲ್ವಿದ ಜುಮ್ಮಾ ಪ್ರಾರ್ಥನೆಗಳನ್ನು ಮಸೀದಿಗಳು ಅಥವಾ ಈದ್ಗಾಗಳ ಒಳಗೆ ಮಾತ್ರ ಅನುಮತಿಸಲಾಗುವುದು ಎಂದು ಉತ್ತರ ಪ್ರದೇಶದ ಸಂಭಾಲ್ ಪೊಲೀಸರು ಬುಧವಾರ ಹೇಳಿದ್ದಾರೆ. ಈ ಪ್ರಾರ್ಥನೆಗಳನ್ನು ಬೀದಿಗಳಲ್ಲಿ ಅಥವಾ ಛಾವಣಿಗಳ ನಡೆಸಬಾರದು ಎಂದು ಅವರು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಹಬ್ಬಗಳ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಗೆ ಅನುಮತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ವಿದ ಜುಮ್ಮಾ ಪ್ರಾರ್ಥನೆಯು ರಂಜಾನ್ ತಿಂಗಳ ಕೊನೆಯ ಶುಕ್ರವಾರ ಮಾರ್ಚ್ 28 ರಂದು ನಡೆಯುತ್ತದೆ. ಈದ್‌ ಉಲ್ ಫಿತರ್‌ ಮಾರ್ಚ್ 31 ರಂದು ಆಚರಿಸಲಾಗುತ್ತದೆ. ಈದ್ಗಾಗಳು ಎಂದರೆ ಸಾಮಾನ್ಯವಾಗಿ ನಗರದ ಹೊರಗೆ ಅಥವಾ ಅದರ ಹೊರವಲಯದಲ್ಲಿರುವ ಈದ್ ಪ್ರಾರ್ಥನೆಗಳಿಗಾಗಿ ಕಾಯ್ದಿರಿಸಿದ ತೆರೆದ ಮೈದಾನಗಳಾಗಿವೆ.

ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ ನಂತರ ನವೆಂಬರ್ 24 ರಂದು ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಅದಾಗಿ ತಿಂಗಳುಗಳ ನಂತರ ಈ ನಿರ್ದೇಶನಗಳನ್ನು ಪೊಲೀಸರು ಹೊರಡಿಸಿದ್ದಾರೆ. ಈ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದರು.

ಈದ್-ಉಲ್-ಫಿತರ್‌ಗೆ ಮುಂಚಿತವಾಗಿ, ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪ್ರಾರ್ಥನೆಗಳನ್ನು ಶಾಂತಿಯುತವಾಗಿ ಮತ್ತು ಸಾಮರಸ್ಯದಿಂದ ಸಲ್ಲಿಸಲು ಅವಕಾಶ ನೀಡುವಂತೆ ಕೆಲವು ಗುಂಪುಗಳು ಜಿಲ್ಲಾ ಅಧಿಕಾರಿಗಳಿಗೆ ಮನವಿ ಮಾಡಿದ್ದವು ಎಂದು ಇಟಿವಿ ಭಾರತ್ ವರದಿ ಮಾಡಿದೆ.

ಬುಧವಾರ, ಜಿಲ್ಲೆಯ ಸರ್ದಾರ್ ಕೊತ್ವಾಲಿಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ವಂದನಾ ಮಿಶ್ರಾ ಮತ್ತು ವೃತ್ತ ಅಧಿಕಾರಿ ಅನುಜ್ ಚೌಧರಿ ಭಾಗವಹಿಸಿದ್ದರು.

“ಎಲ್ಲಾ ಧರ್ಮಗಳು ಮತ್ತು ಸಮುದಾಯಗಳ ಜನರೊಂದಿಗೆ ಶಾಂತಿ ಸಭೆ ನಡೆಸಲಾಯಿತು. ಅಲ್ಲಿ ಮಸೀದಿಗಳು ಮತ್ತು ಈದ್ಗಾ ಒಳಗೆ ಮಾತ್ರ ಪ್ರಾರ್ಥನೆಗಳನ್ನು ನಡೆಸುವಂತೆ ಎಂದು ತಿಳಿಸಲಾಯಿತು” ಎಂದು ಚಂದ್ರ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ಉಲ್ಲೇಖಿಸಿದೆ. ಹಬ್ಬಗಳ ಸಮಯದಲ್ಲಿ ಸಾಕಷ್ಟು ಭದ್ರತೆಯನ್ನು ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

“ನಾವು ವಾಸಿಸುವ ಸ್ಥಳದ ಶಾಂತಿ ಮತ್ತು ಸುವ್ಯವಸ್ಥೆಗೆ ತೊಂದರೆಯಾಗಬಾರದು ಎಂಬುದು ನಮ್ಮ ಗುರಿ. ಆದ್ದರಿಂದ, ಪ್ರತಿಯೊಬ್ಬರೂ ನಮ್ಮ ಮೇಲೆ ನಂಬಿಕೆ ಇಟ್ಟಿದ್ದಾರೆ… ನೀವು ಈದ್‌ನ ಸೇವಿಯನ್ ಅನ್ನು ಪೂರೈಸಲು ಬಯಸಿದರೆ, [ಹಿಂದೂ ಹಬ್ಬ] ಹೋಳಿಯ ಗುಜಿಯಾವನ್ನು ಸಹ ತಿನ್ನಬೇಕಾಗುತ್ತದೆ.” ಎಂದು ಹೇಳಿದ್ದಾರೆ.

ಈದ್, ನವರಾತ್ರಿ ಮತ್ತು ರಾಮ ನವಮಿಯ ಹಬ್ಬಗಳ ಸಮಯದಲ್ಲಿ ಪರಸ್ಪರ ಸಾಮರಸ್ಯವನ್ನು ಕಾಪಾಡಿಕೊಳ್ಳಲು ಮತ್ತು ಪರಸ್ಪರ ಸಹಾಯ ಮಾಡಲು ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ ಎಂದು ಮ್ಯಾಜಿಸ್ಟ್ರೇಟ್ ವಂದನಾ ಮಿಶ್ರಾ ವರದಿಗಾರರಿಗೆ ತಿಳಿಸಿದ್ದಾರೆ. ನವರಾತ್ರಿ ಮಾರ್ಚ್ 30 ರಂದು ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳುತ್ತದೆ. ರಾಮ ನವಮಿ ಏಪ್ರಿಲ್ 6 ರಂದು ನಡೆಯುತ್ತದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್

ಹನಿಟ್ರ್ಯಾಪ್ ಆರೋಪ | ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಮಾಡಿದ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...