Homeಮುಖಪುಟಸಂಭಾಲ್ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ : ಶಾಂತಿ, ಸೌಹಾರ್ದತೆ ಕಾಪಾಡಲು ಸೂಚನೆ

ಸಂಭಾಲ್ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ : ಶಾಂತಿ, ಸೌಹಾರ್ದತೆ ಕಾಪಾಡಲು ಸೂಚನೆ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯ ಚಂದೌಸಿಯಲ್ಲಿರುವ ಶಾಹಿ ಜಾಮಾ ಮಸೀದಿ ಆವರಣದಲ್ಲಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ಇಂದು (ನ.29) ತಡೆ ನೀಡಿದ್ದು, ಶಾಂತಿ, ಸೌಹಾರ್ದತೆ ಕಾಪಾಡುವಂತೆ ಸರ್ಕಾರಕ್ಕೆ ಸೂಚಿಸಿದೆ.

ಸಮೀಕ್ಷೆ ಆದೇಶವನ್ನು ಪ್ರಶ್ನಿಸಿ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಪಟ್ಟಿ ಮಾಡುವವರೆಗೆ ಸಮೀಕ್ಷೆ ವಿಚಾರದಲ್ಲಿ ಮುಂದುವರೆಯದಂತೆ ವಿಚಾರಣಾ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

“ಮಸೀದಿ ಸಮೀಕ್ಷೆಗೆ ಸಂಬಂಧಿಸಿದ ಅಡ್ವೊಕೇಟ್ ಕಮಿಷನರ್ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇಡಬೇಕು. ಮುಂದಿನ ಆದೇಶದವರೆಗೆ ತೆರಯಬಾರದು. ಯಾವುದೇ ಬೆಲೆ ತೆತ್ತಾದರೂ ಸರ್ಕಾರ ಶಾಂತಿ, ಸೌಹಾರ್ದತೆ ಕಾಪಾಡಬೇಕು” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠ ನಿರ್ದೇಶಿಸಿದೆ.

“ಮಸೀದಿಯ ಸಮೀಕ್ಷೆಗೆ ಆದೇಶ ನೀಡಿರುವ ವಿಚಾರಣಾ ನ್ಯಾಯಾಲಯ ಮುಂದಿನ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು. ಮಸೀದಿ ಸಮಿತಿ ಹೈಕೋರ್ಟ್‌ಗೆ ತೆರಳುವವರೆಗೆ ಏನೂ ಆಗಬಾರದು ಎಂದು ನಾವು ಬಯಸುತ್ತೇವೆ. ವಿಚಾರಣಾ ನ್ಯಾಯಾಲಯ ತನ್ನ ಆದೇಶವನ್ನು ಜಾರಿಗೆ ತರಬಾರದು” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಮಸೀದಿ ಈ ಹಿಂದೆ ದೇವಾಲಯವಾಗಿತ್ತು ಎಂದು ಅರ್ಜಿ ಸಲ್ಲಿಕೆಯಾದ ಕೂಡಲೇ ಜಿಲ್ಲಾ ನ್ಯಾಯಾಲಯ ತರಾತುರಿಯಲ್ಲಿ ಸಮೀಕ್ಷೆಗೆ ಆದೇಶ ನೀಡಿದೆ. ಜಿಲ್ಲಾ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರು ನವೆಂಬರ್ 19ರಂದು ಸಮೀಕ್ಷೆಗೆ ಆದೇಶಿಸಿ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಸಂಭಾಲ್‌ನ ಶಾಹಿ ಜಾಮಾ ಮಸೀದಿ ಸಮಿತಿ (ಎಸ್‌ಎಸ್‌ಜೆಂಸಿ) ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಮಸೀದಿ ಸಮಿತಿ ತನ್ನ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಕೋರಿತ್ತು. ಅದಕ್ಕೆ ಒಪ್ಪಿದ್ದ ಸುಪ್ರೀಂ ಕೋರ್ಟ್, ಇಂದು ವಿಚಾರಣೆ ನಿಗದಿ ಮಾಡಿತ್ತು.

ನವೆಂಬರ್ 19 ರಂದು, ಸಂಭಾಲ್‌ನ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಆದಿತ್ಯ ಸಿಂಗ್ ಅವರು ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ನಡೆಸುವಂತೆ ಅಡ್ವೊಕೇಟ್‌ ಕಮಿಷನರ್‌ಗೆ ನಿರ್ದೇಶನ ನೀಡಿದ್ದರು. ನ.29ರೊಳಗೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿ, ರಮೇಶ್ ರಾಘವ್ ಅವರನ್ನು ಅಡ್ವೊಕೇಟ್ ಕಮಿಷನರ್ ಆಗಿ ನೇಮಿಸಿದ್ದರು.

ಮೊಘಲರ ಕಾಲದಲ್ಲಿ ಧ್ವಂಸಗೊಂಡ ದೇವಾಲಯದ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿ ವಕೀಲ ಹರಿಶಂಕರ್ ಜೈನ್ ಮತ್ತು ಇತರ ಏಳು ಮಂದಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಸಮೀಕ್ಷೆಗೆ ಆದೇಶಿಸಿದ್ದರು.

ನ್ಯಾಯಾಲಯದ ಆದೇಶದಂತೆ ಮಸೀದಿಯ ಸಮೀಕ್ಷೆ ಮುಂದಾದಾಗ ಭುಗಿಲೆದ್ದ ಹಿಂಸಾಚಾರದಲ್ಲಿ ಕನಿಷ್ಠ ಆರು ಮುಸ್ಲಿಂ ಯುವಕರು ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂ ಓದಿ : ವಕ್ಫ್‌ ಮಸೂದೆ | ಸಂಸದೀಯ ಸಮಿತಿ ಕಾರ್ಯಾವಧಿ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...