Homeಮುಖಪುಟಸಂಭಾಲ್ ಪೊಲೀಸ್  ವೃತ್ತ ಅಧಿಕಾರಿ ಬಿಜೆಪಿ ಏಜೆಂಟ್: ಸಮಾಜವಾದಿ ವಕ್ತಾರ ಬಿಕ್ರಮ್ ಆರೋಪ

ಸಂಭಾಲ್ ಪೊಲೀಸ್  ವೃತ್ತ ಅಧಿಕಾರಿ ಬಿಜೆಪಿ ಏಜೆಂಟ್: ಸಮಾಜವಾದಿ ವಕ್ತಾರ ಬಿಕ್ರಮ್ ಆರೋಪ

- Advertisement -
- Advertisement -

ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಅನುಜ್ ಚೌಧರಿ ಇತ್ತೀಚೆಗೆ, ಹೋಳಿ ಆಚರಣೆಯಲ್ಲಿ ಮುಸ್ಲಿಮರಿಗೆ ಸಮಸ್ಯೆಗಳಿದ್ದರೆ ಅವರು ಮನೆಯೊಳಗೆ ಇರಬೇಕು ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಸಮಾಜವಾದಿ ಪಕ್ಷದ (ಎಸ್‌ಪಿ) ವಕ್ತಾರ ಶರ್ವೇಂದ್ರ ಬಿಕ್ರಮ್ ಸಿಂಗ್ ಅವರು “ಬಿಜೆಪಿ ಏಜೆಂಟ್” ನಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ವೃತ್ತ ಅಧಿಕಾರಿ (CO) ಚೌಧರಿ, ತಮ್ಮ ಕಾರ್ಯಗಳು ಮತ್ತು ಹೇಳಿಕೆಗಳಿಂದಾಗಿ ಆಗಾಗ್ಗೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಸಂಭಾಲ್ ಹಿಂಸಾಚಾರವನ್ನು ಅವರು ನಿಭಾಯಿಸುವುದರಿಂದ ಹಿಡಿದು ಹೋಳಿ ಹಬ್ಬದ ಸಮಯದಲ್ಲಿ ಮುಸ್ಲಿಮರಿಗೆ ಅವರು ನೀಡಿದ ಎಚ್ಚರಿಕೆಯವರೆಗೆ, ಅವರ ಹೇಳಿಕೆಗಳು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿವೆ.

ಚೌಧರಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಂಘ ಪರಿವಾರದೊಂದಿಗೆ ಕುಟುಂಬ ಮತ್ತು ಸೈದ್ಧಾಂತಿಕ ಸಂಬಂಧಗಳನ್ನು ಹೊಂದಿದ್ದಾರೆ ಎಂದು ವರದಿಯಾಗಿದೆ.

ಚೌಧರಿಯವರ ಕುಟುಂಬವು ಮುಜಫರ್ ನಗರ ಜಿಲ್ಲೆಯ ಬಹೇದಿ ಗ್ರಾಮದವರು. ಅವರ ಸಹೋದರ ಅಮಿತ್ ಚೌಧರಿ, ಮುಜಫರ್‌ನಗರದಲ್ಲಿ ಬಿಜೆಪಿಯ ಉಪ ಜಿಲ್ಲಾ ಅಧ್ಯಕ್ಷ ಸ್ಥಾನವನ್ನು ಹೊಂದಿದ್ದಾರೆ ಮತ್ತು ಈ ಹಿಂದೆ ಕುಕ್ರಾದಲ್ಲಿ ಬ್ಲಾಕ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅಮಿತ್ ಅವರ ಪತ್ನಿ ಕೂಡ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಮುಜಫರ್ ನಗರದಲ್ಲಿ ಬ್ಲಾಕ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜೊತೆಗೆ, ಅಮಿತ್ ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸಂಜೀವ್ ಬಲ್ಯಾನ್ ಅವರ ಆಪ್ತರು ಎಂದು ಆಜ್ ತಕ್  ವರದಿ ಮಾಡಿದೆ.

ಚೌಧರಿಯವರ ಮನೆಯ ಒಂದು ಛಾಯಾಚಿತ್ರವು ಕಾಣಿಸಿಕೊಂಡಿದ್ದು, ಅದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕರ ಭಾವಚಿತ್ರಗಳು ಕೋಣೆಯೊಂದರಲ್ಲಿ ನೇತಾಡುತ್ತಿರುವುದನ್ನು ತೋರಿಸಲಾಗಿದೆ. ಪತ್ರಕರ್ತ ಪುನೀತ್ ಕುಮಾರ್ ಸಿಂಗ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಈ ಚಿತ್ರವನ್ನು ಹಂಚಿಕೊಂಡಿದ್ದು, ಆರ್‌ಎಸ್‌ಎಸ್ ನ ಹೆಡ್ಗೆವಾರ್ ಮತ್ತು ಮಾಜಿ ಆರ್‌ಎಸ್‌ಎಸ್ ಮುಖ್ಯಸ್ಥ ಎಂ.ಎಸ್. ಗೋಲ್ವಾಲ್ಕರ್ ಅವರ ಭಾವಚಿತ್ರಗಳ ಉಪಸ್ಥಿತಿಯನ್ನು ಎತ್ತಿ ತೋರಿಸಿದ್ದಾರೆ.

“ಅನುಜ್ ಚೌಧರಿ ಅವರ ಮನೆಯಲ್ಲಿರುವ ಚಿತ್ರಗಳನ್ನು ಎಚ್ಚರಿಕೆಯಿಂದ ನೋಡಿ. ಮೊದಲ ಛಾಯಾಚಿತ್ರ – ಕೇಶವ್ ಬಲಿರಾಮ್ ಹೆಡ್ಗೆವಾರ್ (ಆರ್‌ಎಸ್‌ಎಸ್ ಸ್ಥಾಪಕ), ಎರಡನೇ ಛಾಯಾಚಿತ್ರ – ಮಾಧವ ಸದಾಶಿವ ರಾವ್ ಗೋಲ್ವಾಲ್ಕರ್ (ಆರ್‌ಎಸ್‌ಎಸ್‌ನ ಎರಡನೇ ಸರಸಂಘಚಾಲಕ್). ನಾನು ನಿಮಗೆ ಇನ್ನೂ ಏನಾದರೂ ಹೇಳಬೇಕಾಗಿದೆಯೇ? ” ಎಂದು ಸಿಂಗ್ X ನಲ್ಲಿ ಬರೆದಿದ್ದಾರೆ.

ಈ ಬಹಿರಂಗಪಡಿಸುವಿಕೆಗಳು ಗಮನ ಸೆಳೆಯುತ್ತಿದ್ದಂತೆ, ಉತ್ತರ ಪ್ರದೇಶದಲ್ಲಿ ಸೂಕ್ಷ್ಮ ಕಾನೂನು ಜಾರಿ ವಿಷಯಗಳನ್ನು ನಿರ್ವಹಿಸುವಲ್ಲಿ ಚೌಧರಿ ಅವರ ನಿಷ್ಪಕ್ಷಪಾತತೆಯ ಬಗ್ಗೆ ಪ್ರಶ್ನೆಗಳು ಏಳುತ್ತಿವೆ. ಅನುಜ್ ಚೌಧರಿ ಪ್ರಮಾಣಿತ ನೇಮಕಾತಿ ಪ್ರಕ್ರಿಯೆಯ ಮೂಲಕ ಪೊಲೀಸ್ ಸೇವೆಗೆ ಪ್ರವೇಶಿಸಲಿಲ್ಲ. ಬದಲಾಗಿ, ಅವರನ್ನು ಕ್ರೀಡಾ ಕೋಟಾದ ಮೂಲಕ ಪೊಲೀಸ್ ಅಧಿಕಾರಿಯಾಗಿ ನೇಮಿಸಲಾಗಿದೆ.

ಪೊಲೀಸ್ ಪಡೆಗೆ ಸೇರುವ ಮೊದಲು, ಚೌಧರಿ ಒಬ್ಬ ಕುಸ್ತಿಪಟುವಾಗಿದ್ದು, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. 1997 ಮತ್ತು 2014ರ ನಡುವೆ ಅವರು ರಾಷ್ಟ್ರೀಯ ಚಾಂಪಿಯನ್ ಆಗಿದ್ದರು ಮತ್ತು ರಾಷ್ಟ್ರೀಯ ಕ್ರೀಡಾಕೂಟದಲ್ಲಿ (2002೨, 2010) ಎರಡು ಬೆಳ್ಳಿ ಪದಕಗಳನ್ನು ಮತ್ತು ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದರು. ಅವರ ಸಾಧನೆಗಳನ್ನು ಗುರುತಿಸಿ, ಅವರು 2001ರಲ್ಲಿ ಲಕ್ಷ್ಮಣ್ ಪ್ರಶಸ್ತಿ ಮತ್ತು 2005 ರಲ್ಲಿ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಪಡೆದರು.

ಕ್ರೀಡಾ ಕೋಟಾದ ಮೂಲಕ, ಅವರನ್ನು ಉತ್ತರ ಪ್ರದೇಶ ಪೊಲೀಸ್ ಇಲಾಖೆಗೆ ಸೇರಿಸಲಾಯಿತು ಮತ್ತು 2012ರ ಬ್ಯಾಚ್‌ನಲ್ಲಿ ಉಪಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಆಗಿದ್ದಾರೆ. ಚೌಧರಿ ಅವರು ರಾಂಪುರದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಸಮಾಜವಾದಿ ಪಕ್ಷದ ನಾಯಕ ಅಜಮ್ ಖಾನ್ ಅವರೊಂದಿಗೆ ನಡೆದ ವಾಗ್ವಾದ ಸೇರಿದಂತೆ ಹಲವಾರು ವಿವಾದಗಳಲ್ಲಿ ಸಿಲುಕಿದ್ದಾರೆ.

ಇತ್ತೀಚೆಗೆ, ಸಂಭಾಲ್ ಹಿಂಸಾಚಾರದ ಸಂದರ್ಭದಲ್ಲಿ ಐದು ಮುಸ್ಲಿಮರ ಹತ್ಯೆಯ ನಂತರ ಅವರು ತಮ್ಮ ಹೇಳಿಕೆಗಳಿಗಾಗಿ ಟೀಕೆಗಳನ್ನು ಎದುರಿಸಿದರು. ಕಳೆದ ವರ್ಷ ನವೆಂಬರ್‌ನಲ್ಲಿ ಸಂಭಾಲ್ ಜಾಮಾ ಮಸೀದಿಯ ಸಮೀಕ್ಷೆಯ ಸಂದರ್ಭದಲ್ಲಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದಾಗ ಈ ಸಾವುಗಳು ಸಂಭವಿಸಿದ್ದವು.

ನಾಗರಿಕರ ಸಾವುನೋವುಗಳ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ ಹಿಂಸಾಚಾರದ ನಡುವೆ, ಚೌಧರಿ ವಿವಾದಾತ್ಮಕ ಹೇಳಿಕೆಯೊಂದಿಗೆ ಪ್ರತಿಕ್ರಿಯಿಸಿದರು: “ಏಕ್ ಪಧೇ ಲಿಖೆ ಆದ್ಮಿ ಕೋ, ಇಸ್ ತರಹ್ ಕೆ ಜಾಹಿಲ್ ಮಾರ್ ದೇಂಗೆ?” “ಹಮ್ ಕೋಯಿ ಮರ್ನೇ ಕೆ ಲಿಯೇ ಥೋಡೆ ಹಿ ಭರ್ತಿ ಹೇ ಹೈ ಪೊಲೀಸ್ ಮಿ” (ಇಂತಹ ಅನಾಗರಿಕ ಜನರಿಂದ ವಿದ್ಯಾವಂತ ವ್ಯಕ್ತಿ ಕೊಲ್ಲಲ್ಪಡುತ್ತಾನಾ? ನಾವು ಹೀಗೆ ಸಾಯಲು ಪೊಲೀಸ್ ಪಡೆಗೆ ಸೇರಲಿಲ್ಲ) ಎಂದು ಪ್ರತಿಕ್ರಿಯಿಸಿದ್ದಾರೆ.

ಈ ವರ್ಷದ ಜನವರಿಯಲ್ಲಿ ಅನುಜ್ ಕುಮಾರ್ ಚೌಧರಿ ಅವರು ಸಮವಸ್ತ್ರದಲ್ಲಿ ಹಿಂದೂ ಯಾತ್ರೆಯಲ್ಲಿ (ಮೆರವಣಿಗೆ) ಭಾಗವಹಿಸಿದಾಗ ಸಮವಸ್ತ್ರ ನಿಯಮಗಳು ಮತ್ತು ನೀತಿಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಅಧಿಕೃತ ತನಿಖೆಯನ್ನು ಪ್ರಾರಂಭಿಸಲಾಯಿತು.

ಆಜಾದ್ ಅಧಿಕಾರ್ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಅಮಿತಾಭ್ ಠಾಕೂರ್ ಅವರು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ವರದಿ ಮಾಡಿದ ಔಪಚಾರಿಕ ದೂರಿನ ಮೇರೆಗೆ ತನಿಖೆ ನಡೆಸಲಾಗಿದೆ.

ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...