Homeಮುಖಪುಟಸಂಭಾಲ್‌ | ಆಸ್ತಿ ಧ್ವಂಸ ಮಾಡಿದ ಅಧಿಕಾರಿಗಳ ವಿರುದ್ಧ ವಿಚಾರಣೆ ಆರಂಭಿಸಲಿರುವ ಸುಪ್ರೀಂಕೋರ್ಟ್‌

ಸಂಭಾಲ್‌ | ಆಸ್ತಿ ಧ್ವಂಸ ಮಾಡಿದ ಅಧಿಕಾರಿಗಳ ವಿರುದ್ಧ ವಿಚಾರಣೆ ಆರಂಭಿಸಲಿರುವ ಸುಪ್ರೀಂಕೋರ್ಟ್‌

- Advertisement -
- Advertisement -

ಆಸ್ತಿಗಳನ್ನು ಕೆಡವುವ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಂಭಾಲ್‌ನಲ್ಲಿ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಒಂದು ವಾರದ ನಂತರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ. ಸಂಭಾಲ್‌ 

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಿದೆ. ಸಂಭಾಲ್‌ 

ಅರ್ಜಿದಾರರಾದ ಮೊಹಮ್ಮದ್ ಘಯೂರ್ ಪರ ವಕೀಲರು, ಪ್ರಕರಣದಲ್ಲಿ ವಾದಿಸುವ ವಕೀಲರು ವೈಯಕ್ತಿಕ ತೊಂದರೆಯಲ್ಲಿದ್ದು, ಸ್ವಲ್ಪ ಸಮಯ ಪ್ರಕರಣವನ್ನು ಮುಂದೂಡುವಂತೆ ಕೋರಿದ್ದಾರೆ. ಒಂದು ವಾರದ ನಂತರ ವಿಚಾರಣೆಯನ್ನು ಮುಂದೂಡುವಂತೆ ಅವರು ಪೀಠವನ್ನು ಕೋರಿದ್ದು, ಹಾಗಾಗಿ ಅರ್ಜಿಯು ಒಂದು ವಾರದ ನಂತರ ವಿಚಾರಣೆಗೆ ಬರಲಿದೆ ಎಂದು ಪೀಠ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕೀಲ ಚಂದ್ ಖುರೇಷಿ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ಕಳೆದ ವರ್ಷದ ನವೆಂಬರ್ 13 ರಂದು ಸುಪ್ರೀಂ ಕೋರ್ಟ್ ನೀಡಿದ ಭಾರತದಾದ್ಯಂತ ಅನ್ವಯಿಸುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ. ಆ ವೇಳೆ ಸುಪ್ರಿಂಕೋರ್ಟ್‌ ನೀಡಿದ್ದ ಆದೇಶದಲ್ಲಿ, ಪೂರ್ವ ಕಾರಣ ಸೂಚನೆ ಇಲ್ಲದೆ ಯಾವುದೇ ಆಸ್ತಿಯನ್ನು ಕೆಡವಬಾರದು ಮತ್ತು ಪೀಡಿತರಿಗೆ ಪ್ರತಿಕ್ರಿಯಿಸಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಹೇಳಿತ್ತು.

ಜನವರಿ 10-11 ರಂದು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಅಧಿಕಾರಿಗಳು ಅರ್ಜಿದಾರರ ಆಸ್ತಿಯ ಒಂದು ಭಾಗವನ್ನು ತನಗೆ ಅಥವಾ ತನ್ನ ಕುಟುಂಬ ಸದಸ್ಯರಿಗೆ ಯಾವುದೇ ಪೂರ್ವ ಸೂಚನೆ ಮತ್ತು ಪ್ರತಿಕ್ರಿಯಿಸಲು ಅವಕಾಶ ನೀಡದೆ ನೆಲಸಮ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

“ಅರ್ಜಿದಾರರು ತಮ್ಮ ಮತ್ತು ತಮ್ಮ ಕುಟುಂಬ ಸದಸ್ಯರ ಬಳಿ ಆಸ್ತಿಯ ಎಲ್ಲಾ ಅಗತ್ಯ ದಾಖಲೆಗಳು, ಅನುಮೋದಿತ ನಕ್ಷೆಗಳು ಮತ್ತು ಇತರ ಸಂಬಂಧಿತ ದಾಖಲೆಗಳಿವೆ ಎಂದು ಹೇಳಿಕೊಂಡಿದ್ದಾರೆ. ಆದದೂ ಅಧಿಕಾರಿಗಳು ಅರ್ಜಿದಾರರ ಆಸ್ತಿಯ ಆವರಣಕ್ಕೆ ಬಂದು ಸದರಿ ಆಸ್ತಿಯನ್ನು ಕೆಡವಲು ಪ್ರಾರಂಭಿಸಿದರು” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

2024ರ ನವೆಂಬರ್ ತೀರ್ಪಿನ ವೇಳೆ ಹಲವಾರು ನಿರ್ದೇಶನಗಳನ್ನು ನೀಡಿದ್ದ ಸುಪ್ರೀಂ ಕೋರ್ಟ್, ರಸ್ತೆ, ಪಾದಚಾರಿ ಮಾರ್ಗ, ರೈಲು ಮಾರ್ಗ ಅಥವಾ ಯಾವುದೇ ನದಿ ಅಥವಾ ಜಲಮೂಲಗಳಂತಹ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತ ರಚನೆ ಇದ್ದರೆ ಮತ್ತು ನ್ಯಾಯಾಲಯದಿಂದ ಕೆಡವಲು ಆದೇಶವಿದ್ದರೆ ಅವುಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಇದನ್ನೂಓದಿ:  ‘ಜೆಪಿಸಿ’ಯಲ್ಲಿ ಭಾರಿ ಗದ್ದಲ; ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು

‘ಜೆಪಿಸಿ’ಯಲ್ಲಿ ಭಾರಿ ಗದ್ದಲ; ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...