Homeಮುಖಪುಟಸಂಭಾಲ್‌ | ಆಸ್ತಿ ಧ್ವಂಸ ಮಾಡಿದ ಅಧಿಕಾರಿಗಳ ವಿರುದ್ಧ ವಿಚಾರಣೆ ಆರಂಭಿಸಲಿರುವ ಸುಪ್ರೀಂಕೋರ್ಟ್‌

ಸಂಭಾಲ್‌ | ಆಸ್ತಿ ಧ್ವಂಸ ಮಾಡಿದ ಅಧಿಕಾರಿಗಳ ವಿರುದ್ಧ ವಿಚಾರಣೆ ಆರಂಭಿಸಲಿರುವ ಸುಪ್ರೀಂಕೋರ್ಟ್‌

- Advertisement -
- Advertisement -

ಆಸ್ತಿಗಳನ್ನು ಕೆಡವುವ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಂಭಾಲ್‌ನಲ್ಲಿ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆಯನ್ನು ಪ್ರಾರಂಭಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಒಂದು ವಾರದ ನಂತರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ. ಸಂಭಾಲ್‌ 

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠದ ಮುಂದೆ ಈ ಅರ್ಜಿ ವಿಚಾರಣೆಗೆ ಬಂದಿದೆ. ಸಂಭಾಲ್‌ 

ಅರ್ಜಿದಾರರಾದ ಮೊಹಮ್ಮದ್ ಘಯೂರ್ ಪರ ವಕೀಲರು, ಪ್ರಕರಣದಲ್ಲಿ ವಾದಿಸುವ ವಕೀಲರು ವೈಯಕ್ತಿಕ ತೊಂದರೆಯಲ್ಲಿದ್ದು, ಸ್ವಲ್ಪ ಸಮಯ ಪ್ರಕರಣವನ್ನು ಮುಂದೂಡುವಂತೆ ಕೋರಿದ್ದಾರೆ. ಒಂದು ವಾರದ ನಂತರ ವಿಚಾರಣೆಯನ್ನು ಮುಂದೂಡುವಂತೆ ಅವರು ಪೀಠವನ್ನು ಕೋರಿದ್ದು, ಹಾಗಾಗಿ ಅರ್ಜಿಯು ಒಂದು ವಾರದ ನಂತರ ವಿಚಾರಣೆಗೆ ಬರಲಿದೆ ಎಂದು ಪೀಠ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕೀಲ ಚಂದ್ ಖುರೇಷಿ ಮೂಲಕ ಸಲ್ಲಿಸಿದ ಅರ್ಜಿಯಲ್ಲಿ, ಕಳೆದ ವರ್ಷದ ನವೆಂಬರ್ 13 ರಂದು ಸುಪ್ರೀಂ ಕೋರ್ಟ್ ನೀಡಿದ ಭಾರತದಾದ್ಯಂತ ಅನ್ವಯಿಸುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ. ಆ ವೇಳೆ ಸುಪ್ರಿಂಕೋರ್ಟ್‌ ನೀಡಿದ್ದ ಆದೇಶದಲ್ಲಿ, ಪೂರ್ವ ಕಾರಣ ಸೂಚನೆ ಇಲ್ಲದೆ ಯಾವುದೇ ಆಸ್ತಿಯನ್ನು ಕೆಡವಬಾರದು ಮತ್ತು ಪೀಡಿತರಿಗೆ ಪ್ರತಿಕ್ರಿಯಿಸಲು 15 ದಿನಗಳ ಕಾಲಾವಕಾಶ ನೀಡಬೇಕು ಎಂದು ಹೇಳಿತ್ತು.

ಜನವರಿ 10-11 ರಂದು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಅಧಿಕಾರಿಗಳು ಅರ್ಜಿದಾರರ ಆಸ್ತಿಯ ಒಂದು ಭಾಗವನ್ನು ತನಗೆ ಅಥವಾ ತನ್ನ ಕುಟುಂಬ ಸದಸ್ಯರಿಗೆ ಯಾವುದೇ ಪೂರ್ವ ಸೂಚನೆ ಮತ್ತು ಪ್ರತಿಕ್ರಿಯಿಸಲು ಅವಕಾಶ ನೀಡದೆ ನೆಲಸಮ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

“ಅರ್ಜಿದಾರರು ತಮ್ಮ ಮತ್ತು ತಮ್ಮ ಕುಟುಂಬ ಸದಸ್ಯರ ಬಳಿ ಆಸ್ತಿಯ ಎಲ್ಲಾ ಅಗತ್ಯ ದಾಖಲೆಗಳು, ಅನುಮೋದಿತ ನಕ್ಷೆಗಳು ಮತ್ತು ಇತರ ಸಂಬಂಧಿತ ದಾಖಲೆಗಳಿವೆ ಎಂದು ಹೇಳಿಕೊಂಡಿದ್ದಾರೆ. ಆದದೂ ಅಧಿಕಾರಿಗಳು ಅರ್ಜಿದಾರರ ಆಸ್ತಿಯ ಆವರಣಕ್ಕೆ ಬಂದು ಸದರಿ ಆಸ್ತಿಯನ್ನು ಕೆಡವಲು ಪ್ರಾರಂಭಿಸಿದರು” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

2024ರ ನವೆಂಬರ್ ತೀರ್ಪಿನ ವೇಳೆ ಹಲವಾರು ನಿರ್ದೇಶನಗಳನ್ನು ನೀಡಿದ್ದ ಸುಪ್ರೀಂ ಕೋರ್ಟ್, ರಸ್ತೆ, ಪಾದಚಾರಿ ಮಾರ್ಗ, ರೈಲು ಮಾರ್ಗ ಅಥವಾ ಯಾವುದೇ ನದಿ ಅಥವಾ ಜಲಮೂಲಗಳಂತಹ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತ ರಚನೆ ಇದ್ದರೆ ಮತ್ತು ನ್ಯಾಯಾಲಯದಿಂದ ಕೆಡವಲು ಆದೇಶವಿದ್ದರೆ ಅವುಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಇದನ್ನೂಓದಿ:  ‘ಜೆಪಿಸಿ’ಯಲ್ಲಿ ಭಾರಿ ಗದ್ದಲ; ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು

‘ಜೆಪಿಸಿ’ಯಲ್ಲಿ ಭಾರಿ ಗದ್ದಲ; ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...