Homeಮುಖಪುಟಸಂಭಾಲ್  ಶಾಹಿ ಮಸೀದಿಯ ಸಮೀಕ್ಷಾ ವರದಿ ಸಿದ್ದ: ಕಮೀಷನರ್

ಸಂಭಾಲ್  ಶಾಹಿ ಮಸೀದಿಯ ಸಮೀಕ್ಷಾ ವರದಿ ಸಿದ್ದ: ಕಮೀಷನರ್

- Advertisement -
- Advertisement -

ಲಕ್ನೋ:  ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ  ಸಂಭಾಲ್ ನ  ಶಾಹಿ ಮಸೀದಿಯ ಸಮೀಕ್ಷಾ ವರದಿಯನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನು ಅಡ್ವೋಕೇಟ್ ಕಮಿಷನರ್ ರಮೇಶ್ ರಾಘವ್ ಅವರು ನ್ಯಾಯಾಲಯವನ್ನು ಕೋರಿರುವುದರಿಂದ ಸಂಭಾಲ್‌ನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು (ಹಿರಿಯ ವಿಭಾಗ)  ಮಾನ್ಯಮಾಡಿದ್ದಾರೆ.

ಸಂಭಾಲ್ ಮಸೀದಿ ಪ್ರಕರಣದಲ್ಲಿ ಯಾವುದೇ ಆದೇಶವನ್ನು ನೀಡದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ನ್ಯಾಯಾಲಯ ನಿರಾಕರಿಸಿದೆ ಮತ್ತು ಜನವರಿ 8ಕ್ಕೆ ವಿಚಾರಣೆಯ ಮುಂದಿನ ದಿನಾಂಕವನ್ನು ನಿಗದಿಪಡಿಸಿದೆ.

ವಕೀಲ ಕಮಿಷನರ್‌ರ ಸಮೀಕ್ಷಾ ವರದಿಯನ್ನು  ತಿರಸ್ಕರಿಸುವಂತೆ ಸಲ್ಲಿಸಿದ ಶಾಹಿ ಮಸೀದಿ ಸಮಿತಿಯ ಅರ್ಜಿಯನ್ನೂ ನ್ಯಾಯಾಲಯವು ಒಪ್ಪಿಕೊಂಡಿದೆ.

ನಾನು ಸಂಭಾಲ್ ಮಸೀದಿಯ ಕುರಿತು ಸಮೀಕ್ಷೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಕ್ಕೆ 15 ದಿನಗಳ ಕಾಲಾವಕಾಶ ಕೇಳಿದ್ದೇನೆ. ಆದರೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ನನ್ನ ಅರ್ಜಿಯನ್ನು ಕಡತದಲ್ಲಿ ಇರಿಸುವುದಕ್ಕೆ ಪರಿಗಣಿಸಲಾಗಿದೆ ಎಂದು ಕಮೀಷನರ್ ತಿಳಿಸಿದ್ದಾರೆ.

ಸಮೀಕ್ಷೆಯ ಅಂತಿಮ ವರದಿ ಸಿದ್ಧವಾಗಿದ್ದು, ಅಂತಿಮ ಹಂತದಲ್ಲಿದೆ. ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದಲ್ಲಿ  ಪ್ರಸ್ತುತಪಡಿಸಲಾಗುವುದು.  ಆದರೆ ಆರೋಗ್ಯ ಸಮಸ್ಯೆಗಳ ಕಾರಣ, ನಾನು ನ್ಯಾಯಾಲಯದಿಂದ 15 ದಿನಗಳ ಕಾಲಾವಕಾಶವನ್ನು ಕೇಳಿದ್ದೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಮೀಷನರ್ ಅವರು ಹೇಳಿದ್ದಾರೆ.

ನನಗೆ ಕಳೆದ ಮೂರು ದಿನಗಳಿಂದ ಜ್ವರವಿದೆ. ವರದಿಯನ್ನು ವಿಶ್ಲೇಷಿಸಲು ನನಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯವು ಅಡ್ವೋಕೇಟ್ ಕಮಿಷನರ್ ಮತ್ತು ಮಸೀದಿ ಸಮಿತಿಯ ಅರ್ಜಿಗಳನ್ನು ಸ್ವೀಕರಿಸಿದೆ. ಆದರೆ ಸಂಭಾಲ್ ಮಸೀದಿಯ ಸಮೀಕ್ಷೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಕಾರಣ ಯಾವುದೇ ಆದೇಶವನ್ನು ನೀಡಲಿಲ್ಲ ಎಂದು ಸಂಭಾಲ್‌ನ ಜಿಲ್ಲಾ ಸರ್ಕಾರಿ ವಕೀಲ ಪ್ರಿನ್ಸ್ ಶರ್ಮಾ ಹೇಳಿದರು.

ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂದು ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಸಮೀಕ್ಷೆಗೆ ನ್ಯಾಯಾಲಯವು ಆದೇಶ ನೀಡಿತ್ತು. ನಂತರ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ನವೆಂಬರ್ 19 ರಂದು ನಡೆಸಲಾಗಿತ್ತು.

ನವೆಂಬರ್ 24ರಂದು ಮತ್ತೆ ಮಸೀದಿ ಸಮೀಕ್ಷೆ ನಡೆಸುತ್ತಿದ್ದಾಗ ಹಿಂಸಾಚಾರ ನಡೆದಿತ್ತು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು. ಸುಮಾರು 29 ನಮ್ಮ ಸಿಬ್ಬಂದಿ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದರು.

ಹಿಂಸಾಚಾರದ ನಂತರ,  ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ  ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತು.  ನವೆಂಬರ್ 29 ರಂದು ಸುಪ್ರೀಂ ಕೋರ್ಟ್, ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಸಂಬಂಧಿಸಿದ ಯಾವುದೇ ಆದೇಶವನ್ನು ನೀಡದಂತೆ ಸಂಭಾಲ್ ವಿಚಾರಣಾ ನ್ಯಾಯಾಲಯಕ್ಕೆ ಆದೇಶ ನೀಡಿತ್ತು.

ಅಲಹಾಬಾದ್ ಹೈಕೋರ್ಟ್  ಮಸೀದಿ ಸಮಿತಿಯ ಅರ್ಜಿಯನ್ನು ವಿಚಾರಣೆ ನಡೆಸುವವರೆಗೂ ಸಮೀಕ್ಷೆಯ  ವರದಿಯನ್ನು ಸೀಲ್ ಮಾಡಿ ಇಡುವಂತೆ  ಸುಪ್ರೀಂ ಕೋರ್ಟ್ ಆದೇಶಿಸಿದೆ.

ಸಂಭಾಲ್ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು (ಹಿರಿಯ ವಿಭಾಗ) ನವೆಂಬರ್ 19 ರಂದು ಜೈನ್ ಅವರು ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಶಾಹಿ ಮಸೀದಿಯ ಸಮೀಕ್ಷೆಯನ್ನು ನಡೆಸಲು ಅಡ್ವೋಕೆಟ್ ಕಮಿಷನರ್ ಅನ್ನು ನೇಮಿಸುವಂತೆ ಆದೇಶಿಸಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ರಮೇಶ್ ರಾಘವ್ ಅವರನ್ನು ಅಡ್ವೋಕೆಟ್ ಕಮಿಷನರ್ ಆಗಿ ನೇಮಿಸಲಾಯಿತು. ಅದೇ ದಿನ ಸಂಜೆ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕ್ರಿಶನ್ ಕುಮಾರ್ ಅವರ ಸಮ್ಮುಖದಲ್ಲಿ ಮಸೀದಿಯ ಆರಂಭಿಕ ಸಮೀಕ್ಷೆಯನ್ನು ನಡೆಸಲಾಯಿತು.

ಎರಡನೇ ಸುತ್ತಿನ ಸಮೀಕ್ಷೆಯು ನವೆಂಬರ್ 24 ರಂದು ಪ್ರಾರಂಭವಾಯಿತು. ನವೆಂಬರ್ 29 ರಂದು ಮುಂದಿನ ವಿಚಾರಣೆಯಲ್ಲಿ, ವಿಚಾರಣಾ ನ್ಯಾಯಾಲಯವು ವರದಿಯನ್ನು ಪೂರ್ಣಗೊಳಿಸಲು 10 ದಿನಗಳ ಕಾಲಾವಕಾಶ ನೀಡಿತ್ತು. ಗಡುವು ಸೋಮವಾರ  (ಡಿ.10) ಕೊನೆಗೊಂಡಿತು.

ಇದನ್ನೂ ಓದಿ…ಆಂಧ್ರ ಸಂಪುಟಕ್ಕೆ ಪವನ್ ಕಲ್ಯಾಣ್ ಸಹೋದರ ನಾಗಬಾಬು ಸೇರ್ಪಡೆ; ಸಿಎಂ ನಾಯ್ಡು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...