Homeಮುಖಪುಟಸಂಭಾಲ್  ಶಾಹಿ ಮಸೀದಿಯ ಸಮೀಕ್ಷಾ ವರದಿ ಸಿದ್ದ: ಕಮೀಷನರ್

ಸಂಭಾಲ್  ಶಾಹಿ ಮಸೀದಿಯ ಸಮೀಕ್ಷಾ ವರದಿ ಸಿದ್ದ: ಕಮೀಷನರ್

- Advertisement -
- Advertisement -

ಲಕ್ನೋ:  ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ  ಸಂಭಾಲ್ ನ  ಶಾಹಿ ಮಸೀದಿಯ ಸಮೀಕ್ಷಾ ವರದಿಯನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನು ಅಡ್ವೋಕೇಟ್ ಕಮಿಷನರ್ ರಮೇಶ್ ರಾಘವ್ ಅವರು ನ್ಯಾಯಾಲಯವನ್ನು ಕೋರಿರುವುದರಿಂದ ಸಂಭಾಲ್‌ನ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು (ಹಿರಿಯ ವಿಭಾಗ)  ಮಾನ್ಯಮಾಡಿದ್ದಾರೆ.

ಸಂಭಾಲ್ ಮಸೀದಿ ಪ್ರಕರಣದಲ್ಲಿ ಯಾವುದೇ ಆದೇಶವನ್ನು ನೀಡದಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ನ್ಯಾಯಾಲಯ ನಿರಾಕರಿಸಿದೆ ಮತ್ತು ಜನವರಿ 8ಕ್ಕೆ ವಿಚಾರಣೆಯ ಮುಂದಿನ ದಿನಾಂಕವನ್ನು ನಿಗದಿಪಡಿಸಿದೆ.

ವಕೀಲ ಕಮಿಷನರ್‌ರ ಸಮೀಕ್ಷಾ ವರದಿಯನ್ನು  ತಿರಸ್ಕರಿಸುವಂತೆ ಸಲ್ಲಿಸಿದ ಶಾಹಿ ಮಸೀದಿ ಸಮಿತಿಯ ಅರ್ಜಿಯನ್ನೂ ನ್ಯಾಯಾಲಯವು ಒಪ್ಪಿಕೊಂಡಿದೆ.

ನಾನು ಸಂಭಾಲ್ ಮಸೀದಿಯ ಕುರಿತು ಸಮೀಕ್ಷೆಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಕ್ಕೆ 15 ದಿನಗಳ ಕಾಲಾವಕಾಶ ಕೇಳಿದ್ದೇನೆ. ಆದರೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ನನ್ನ ಅರ್ಜಿಯನ್ನು ಕಡತದಲ್ಲಿ ಇರಿಸುವುದಕ್ಕೆ ಪರಿಗಣಿಸಲಾಗಿದೆ ಎಂದು ಕಮೀಷನರ್ ತಿಳಿಸಿದ್ದಾರೆ.

ಸಮೀಕ್ಷೆಯ ಅಂತಿಮ ವರದಿ ಸಿದ್ಧವಾಗಿದ್ದು, ಅಂತಿಮ ಹಂತದಲ್ಲಿದೆ. ಈ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯದಲ್ಲಿ  ಪ್ರಸ್ತುತಪಡಿಸಲಾಗುವುದು.  ಆದರೆ ಆರೋಗ್ಯ ಸಮಸ್ಯೆಗಳ ಕಾರಣ, ನಾನು ನ್ಯಾಯಾಲಯದಿಂದ 15 ದಿನಗಳ ಕಾಲಾವಕಾಶವನ್ನು ಕೇಳಿದ್ದೇನೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಕಮೀಷನರ್ ಅವರು ಹೇಳಿದ್ದಾರೆ.

ನನಗೆ ಕಳೆದ ಮೂರು ದಿನಗಳಿಂದ ಜ್ವರವಿದೆ. ವರದಿಯನ್ನು ವಿಶ್ಲೇಷಿಸಲು ನನಗೆ ಇನ್ನೂ ಸಾಧ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯವು ಅಡ್ವೋಕೇಟ್ ಕಮಿಷನರ್ ಮತ್ತು ಮಸೀದಿ ಸಮಿತಿಯ ಅರ್ಜಿಗಳನ್ನು ಸ್ವೀಕರಿಸಿದೆ. ಆದರೆ ಸಂಭಾಲ್ ಮಸೀದಿಯ ಸಮೀಕ್ಷೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ಕಾರಣ ಯಾವುದೇ ಆದೇಶವನ್ನು ನೀಡಲಿಲ್ಲ ಎಂದು ಸಂಭಾಲ್‌ನ ಜಿಲ್ಲಾ ಸರ್ಕಾರಿ ವಕೀಲ ಪ್ರಿನ್ಸ್ ಶರ್ಮಾ ಹೇಳಿದರು.

ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂದು ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಸಮೀಕ್ಷೆಗೆ ನ್ಯಾಯಾಲಯವು ಆದೇಶ ನೀಡಿತ್ತು. ನಂತರ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ನವೆಂಬರ್ 19 ರಂದು ನಡೆಸಲಾಗಿತ್ತು.

ನವೆಂಬರ್ 24ರಂದು ಮತ್ತೆ ಮಸೀದಿ ಸಮೀಕ್ಷೆ ನಡೆಸುತ್ತಿದ್ದಾಗ ಹಿಂಸಾಚಾರ ನಡೆದಿತ್ತು. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು. ಸುಮಾರು 29 ನಮ್ಮ ಸಿಬ್ಬಂದಿ ಗಾಯಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದರು.

ಹಿಂಸಾಚಾರದ ನಂತರ,  ಪಟ್ಟಣದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ  ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತು.  ನವೆಂಬರ್ 29 ರಂದು ಸುಪ್ರೀಂ ಕೋರ್ಟ್, ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಸಂಬಂಧಿಸಿದ ಯಾವುದೇ ಆದೇಶವನ್ನು ನೀಡದಂತೆ ಸಂಭಾಲ್ ವಿಚಾರಣಾ ನ್ಯಾಯಾಲಯಕ್ಕೆ ಆದೇಶ ನೀಡಿತ್ತು.

ಅಲಹಾಬಾದ್ ಹೈಕೋರ್ಟ್  ಮಸೀದಿ ಸಮಿತಿಯ ಅರ್ಜಿಯನ್ನು ವಿಚಾರಣೆ ನಡೆಸುವವರೆಗೂ ಸಮೀಕ್ಷೆಯ  ವರದಿಯನ್ನು ಸೀಲ್ ಮಾಡಿ ಇಡುವಂತೆ  ಸುಪ್ರೀಂ ಕೋರ್ಟ್ ಆದೇಶಿಸಿದೆ.

ಸಂಭಾಲ್ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು (ಹಿರಿಯ ವಿಭಾಗ) ನವೆಂಬರ್ 19 ರಂದು ಜೈನ್ ಅವರು ಸಲ್ಲಿಸಿದ ಅರ್ಜಿಯ ಹಿನ್ನೆಲೆಯಲ್ಲಿ ಶಾಹಿ ಮಸೀದಿಯ ಸಮೀಕ್ಷೆಯನ್ನು ನಡೆಸಲು ಅಡ್ವೋಕೆಟ್ ಕಮಿಷನರ್ ಅನ್ನು ನೇಮಿಸುವಂತೆ ಆದೇಶಿಸಿತ್ತು. ನ್ಯಾಯಾಲಯದ ಆದೇಶದ ಮೇರೆಗೆ ರಮೇಶ್ ರಾಘವ್ ಅವರನ್ನು ಅಡ್ವೋಕೆಟ್ ಕಮಿಷನರ್ ಆಗಿ ನೇಮಿಸಲಾಯಿತು. ಅದೇ ದಿನ ಸಂಜೆ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಮತ್ತು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕ್ರಿಶನ್ ಕುಮಾರ್ ಅವರ ಸಮ್ಮುಖದಲ್ಲಿ ಮಸೀದಿಯ ಆರಂಭಿಕ ಸಮೀಕ್ಷೆಯನ್ನು ನಡೆಸಲಾಯಿತು.

ಎರಡನೇ ಸುತ್ತಿನ ಸಮೀಕ್ಷೆಯು ನವೆಂಬರ್ 24 ರಂದು ಪ್ರಾರಂಭವಾಯಿತು. ನವೆಂಬರ್ 29 ರಂದು ಮುಂದಿನ ವಿಚಾರಣೆಯಲ್ಲಿ, ವಿಚಾರಣಾ ನ್ಯಾಯಾಲಯವು ವರದಿಯನ್ನು ಪೂರ್ಣಗೊಳಿಸಲು 10 ದಿನಗಳ ಕಾಲಾವಕಾಶ ನೀಡಿತ್ತು. ಗಡುವು ಸೋಮವಾರ  (ಡಿ.10) ಕೊನೆಗೊಂಡಿತು.

ಇದನ್ನೂ ಓದಿ…ಆಂಧ್ರ ಸಂಪುಟಕ್ಕೆ ಪವನ್ ಕಲ್ಯಾಣ್ ಸಹೋದರ ನಾಗಬಾಬು ಸೇರ್ಪಡೆ; ಸಿಎಂ ನಾಯ್ಡು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...