Homeಮುಖಪುಟಸಂಭಾಲ್ ಹಿಂಸಾಚಾರ | 74 ಶಂಕಿತರ ಫೋಟೋವನ್ನು ಸಾರ್ವಜನಿಕವಾಗಿ ಅಂಟಿಸಿದ ಯುಪಿ ಸರ್ಕಾರ

ಸಂಭಾಲ್ ಹಿಂಸಾಚಾರ | 74 ಶಂಕಿತರ ಫೋಟೋವನ್ನು ಸಾರ್ವಜನಿಕವಾಗಿ ಅಂಟಿಸಿದ ಯುಪಿ ಸರ್ಕಾರ

- Advertisement -
- Advertisement -

ಕಳೆದ ವರ್ಷ ನವೆಂಬರ್‌ನಲ್ಲಿ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಶಂಕಿತ 74 ಜನರ ಫೋಟೋಗಳನ್ನು ಹೊಂದಿರುವ ಪೋಸ್ಟರ್‌ಗಳನ್ನು ಶುಕ್ರವಾರ ಹಾಕಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ವಿಶ್ವಾಸಾರ್ಹ ಪುರಾವೆಗಳನ್ನು ನೀಡುವ ವ್ಯಕ್ತಿಗಳಿಗೆ ನಗದು ಬಹುಮಾನ ನೀಡಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಪ್ರಕರಣದಲ್ಲಿ ಆರೋಪಿಗಳನ್ನು ಗುರುತಿಸಲು ಮತ್ತು ಅಧಿಕಾರಿಗಳಿಗೆ ಅವರನ್ನು ಹುಡುಕಲು ಸಹಾಯ ಮಾಡಲು ನಾಗರಿಕರಿಗಾಗಿ ಈ ಫೋಟೋಗಳನ್ನು ಪ್ರದೇಶದ ಹಲವಾರು ಸ್ಥಳಗಳಲ್ಲಿ ಪ್ರದರ್ಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೋಸ್ಟರ್‌ಗಳಲ್ಲಿ ಶಂಕಿತರು ತಮ್ಮ ಕೈಯಲ್ಲಿ ಕಲ್ಲುಗಳನ್ನು ಹಿಡಿದುಕೊಂಡಿರುವ ಛಾಯಾಚಿತ್ರಗಳಿವೆ. ಡ್ರೋನ್ ಕ್ಯಾಮೆರಾಗಳ ಸಿಸಿಟಿವಿ ಮೂಲಕ, ಕ್ಲೋಸ್ಡ್-ಸರ್ಕ್ಯೂಟ್ ಟೆಲಿವಿಷನ್ ಮತ್ತು ಮೊಬೈಲ್ ಫೋನ್‌ಗಳಲ್ಲಿ ಮಾಡಿದ ವೀಡಿಯೊಗಳ ಮೂಲಕ ಶಂಕಿತರು ಹಿಂಸಾಚಾರದಲ್ಲಿ ನೇರವಾಗಿ ಭಾಗಿಯಾಗಿರು ದೃಶ್ಯಾವಳಿಗಳಿವೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 24 ರಂದು, ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ನ್ಯಾಯಾಲಯದ ಆದೇಶದ ಮೇರೆಗೆ ನಡೆಸಲಾಗಿದ್ದ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ್ದು. ಇದರ ನಂತರ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಶತಮಾನಗಳಷ್ಟು ಹಳೆಯದಾದ ಶ್ರೀ ಹರಿಹರ ದೇವಸ್ಥಾನದ ಸ್ಥಳದಲ್ಲಿ ಮೊಘಲ್ ದೊರೆ ಬಾಬರ್ 1526 ರಲ್ಲಿ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಬಿಜೆಪಿ ಬೆಂಬಲಿಗರು ಮೊಕದ್ದಮೆ ದಾಖಲು ಮಾಡಿದ್ದು, ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದರು.

ಡಿಸೆಂಬರ್‌ನಲ್ಲಿ ವೇಳೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದವರ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಹಾಕಲಾಗುವುದು ಎಂದು ಜಿಲ್ಲಾಡಳಿತ ಹೇಳಿತ್ತು.

ಮಸೀದಿಯ ಮುಖ್ಯ ದ್ವಾರದ ಎದುರು ಹೊಸದಾಗಿ ಸ್ಥಾಪಿಸಲಾದ ಔಟ್‌ಪೋಸ್ಟ್‌ನಲ್ಲಿ ಹೊಸ ಪೋಸ್ಟರ್‌ಗಳನ್ನು ತೆಗೆದುಹಾಕದಂತೆ ಅಥವಾ ಹರಿದು ಹಾಕದಂತೆ ನೋಡಿಕೊಳ್ಳಲು ಪೊಲೀಸರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ಸಂಭಾಲ್ ಹಿಂಸಾಚಾರ

ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ 150 ವ್ಯಕ್ತಿಗಳು ಮತ್ತು 2,500 ಇತರ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪೊಲೀಸರು 8 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಹಿಂಸಾಚಾರದ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ಎಸೆದ ಆರೋಪದ ಮೇಲೆ ಈವರೆಗೆ ಎಪ್ಪತ್ತಾರು ಜನರನ್ನು ಬಂಧಿಸಲಾಗಿದೆ. ಬಂಧಿತರಿಗೆ ಜಾಮೀನು ಸಿಕ್ಕಿಲ್ಲ.

ಜಾಮಿಯಾ ಪ್ರತಿಭಟನಾಕಾರರ ಪೋಸ್ಟರ್‌ಗಳು

ಪ್ರತ್ಯೇಕ ಘಟನೆಯಲ್ಲಿ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಶುಕ್ರವಾರ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ 17 ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ವಿದ್ಯಾರ್ಥಿಗಳಿಗೆ ಆಡಳಿತವು ಶೋ-ಕಾಸ್ ನೋಟಿಸ್‌ಗಳನ್ನು ನೀಡಿರುವುದನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ ವಿಶ್ವವಿದ್ಯಾಲಯದ ಹಲವಾರು ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಸುಮಾರು 12 ಗಂಟೆಗಳ ಬಂಧನದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಚಳವಳಿಯ ಸಂದರ್ಭದಲ್ಲಿ ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದ ಐದನೇ ವರ್ಷದ ನೆನಪಿಗಾಗಿ ಡಿಸೆಂಬರ್ 15 ರಂದು ಪ್ರತಿಭಟನೆ ನಡೆಸಿದ್ದಕ್ಕಾಗಿ ಇಬ್ಬರು ಪಿಎಚ್‌ಡಿ ಸಂಶೋದಕರಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೋಟಿಸ್ ನೀಡಲಾಗಿತ್ತು. ಈ ಪ್ರತಿಭಟನೆಯನ್ನು “ಜಾಮಿಯಾ ಪ್ರತಿರೋಧ ದಿನ” ಎಂಬ ವೇದಿಕೆ ಅಡಿಯಲ್ಲಿ ನಡೆಸಲಾಗಿತ್ತು.

ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆಸ್ತಿಯನ್ನು ಧ್ವಂಸ ಮಾಡಿದ್ದಾರೆ ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಆರೋಪಿಸಿದ್ದು, ವಿದ್ಯಾರ್ಥಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂಓದಿ:  ಡಿ.ಕೆ. ಶಿವಕುಮಾರ್ ಅವಧಿ ಮುಗಿದಿದ್ದು ಹೈಕಮಾಂಡ್‌ಗೆ ಗೊತ್ತು – ಸಚಿವ ರಾಜಣ್ಣ

ಡಿ.ಕೆ. ಶಿವಕುಮಾರ್ ಅವಧಿ ಮುಗಿದಿದ್ದು ಹೈಕಮಾಂಡ್‌ಗೆ ಗೊತ್ತು – ಸಚಿವ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...