Homeಮುಖಪುಟಸಂಭಾಲ್ ಹಿಂಸಾಚಾರ | 74 ಶಂಕಿತರ ಫೋಟೋವನ್ನು ಸಾರ್ವಜನಿಕವಾಗಿ ಅಂಟಿಸಿದ ಯುಪಿ ಸರ್ಕಾರ

ಸಂಭಾಲ್ ಹಿಂಸಾಚಾರ | 74 ಶಂಕಿತರ ಫೋಟೋವನ್ನು ಸಾರ್ವಜನಿಕವಾಗಿ ಅಂಟಿಸಿದ ಯುಪಿ ಸರ್ಕಾರ

- Advertisement -
- Advertisement -

ಕಳೆದ ವರ್ಷ ನವೆಂಬರ್‌ನಲ್ಲಿ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಶಂಕಿತ 74 ಜನರ ಫೋಟೋಗಳನ್ನು ಹೊಂದಿರುವ ಪೋಸ್ಟರ್‌ಗಳನ್ನು ಶುಕ್ರವಾರ ಹಾಕಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ವಿಶ್ವಾಸಾರ್ಹ ಪುರಾವೆಗಳನ್ನು ನೀಡುವ ವ್ಯಕ್ತಿಗಳಿಗೆ ನಗದು ಬಹುಮಾನ ನೀಡಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಪ್ರಕರಣದಲ್ಲಿ ಆರೋಪಿಗಳನ್ನು ಗುರುತಿಸಲು ಮತ್ತು ಅಧಿಕಾರಿಗಳಿಗೆ ಅವರನ್ನು ಹುಡುಕಲು ಸಹಾಯ ಮಾಡಲು ನಾಗರಿಕರಿಗಾಗಿ ಈ ಫೋಟೋಗಳನ್ನು ಪ್ರದೇಶದ ಹಲವಾರು ಸ್ಥಳಗಳಲ್ಲಿ ಪ್ರದರ್ಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೋಸ್ಟರ್‌ಗಳಲ್ಲಿ ಶಂಕಿತರು ತಮ್ಮ ಕೈಯಲ್ಲಿ ಕಲ್ಲುಗಳನ್ನು ಹಿಡಿದುಕೊಂಡಿರುವ ಛಾಯಾಚಿತ್ರಗಳಿವೆ. ಡ್ರೋನ್ ಕ್ಯಾಮೆರಾಗಳ ಸಿಸಿಟಿವಿ ಮೂಲಕ, ಕ್ಲೋಸ್ಡ್-ಸರ್ಕ್ಯೂಟ್ ಟೆಲಿವಿಷನ್ ಮತ್ತು ಮೊಬೈಲ್ ಫೋನ್‌ಗಳಲ್ಲಿ ಮಾಡಿದ ವೀಡಿಯೊಗಳ ಮೂಲಕ ಶಂಕಿತರು ಹಿಂಸಾಚಾರದಲ್ಲಿ ನೇರವಾಗಿ ಭಾಗಿಯಾಗಿರು ದೃಶ್ಯಾವಳಿಗಳಿವೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 24 ರಂದು, ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ನ್ಯಾಯಾಲಯದ ಆದೇಶದ ಮೇರೆಗೆ ನಡೆಸಲಾಗಿದ್ದ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ್ದು. ಇದರ ನಂತರ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಶತಮಾನಗಳಷ್ಟು ಹಳೆಯದಾದ ಶ್ರೀ ಹರಿಹರ ದೇವಸ್ಥಾನದ ಸ್ಥಳದಲ್ಲಿ ಮೊಘಲ್ ದೊರೆ ಬಾಬರ್ 1526 ರಲ್ಲಿ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಬಿಜೆಪಿ ಬೆಂಬಲಿಗರು ಮೊಕದ್ದಮೆ ದಾಖಲು ಮಾಡಿದ್ದು, ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದರು.

ಡಿಸೆಂಬರ್‌ನಲ್ಲಿ ವೇಳೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದವರ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಹಾಕಲಾಗುವುದು ಎಂದು ಜಿಲ್ಲಾಡಳಿತ ಹೇಳಿತ್ತು.

ಮಸೀದಿಯ ಮುಖ್ಯ ದ್ವಾರದ ಎದುರು ಹೊಸದಾಗಿ ಸ್ಥಾಪಿಸಲಾದ ಔಟ್‌ಪೋಸ್ಟ್‌ನಲ್ಲಿ ಹೊಸ ಪೋಸ್ಟರ್‌ಗಳನ್ನು ತೆಗೆದುಹಾಕದಂತೆ ಅಥವಾ ಹರಿದು ಹಾಕದಂತೆ ನೋಡಿಕೊಳ್ಳಲು ಪೊಲೀಸರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ಸಂಭಾಲ್ ಹಿಂಸಾಚಾರ

ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ 150 ವ್ಯಕ್ತಿಗಳು ಮತ್ತು 2,500 ಇತರ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪೊಲೀಸರು 8 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಹಿಂಸಾಚಾರದ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ಎಸೆದ ಆರೋಪದ ಮೇಲೆ ಈವರೆಗೆ ಎಪ್ಪತ್ತಾರು ಜನರನ್ನು ಬಂಧಿಸಲಾಗಿದೆ. ಬಂಧಿತರಿಗೆ ಜಾಮೀನು ಸಿಕ್ಕಿಲ್ಲ.

ಜಾಮಿಯಾ ಪ್ರತಿಭಟನಾಕಾರರ ಪೋಸ್ಟರ್‌ಗಳು

ಪ್ರತ್ಯೇಕ ಘಟನೆಯಲ್ಲಿ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಶುಕ್ರವಾರ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ 17 ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ವಿದ್ಯಾರ್ಥಿಗಳಿಗೆ ಆಡಳಿತವು ಶೋ-ಕಾಸ್ ನೋಟಿಸ್‌ಗಳನ್ನು ನೀಡಿರುವುದನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ ವಿಶ್ವವಿದ್ಯಾಲಯದ ಹಲವಾರು ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಸುಮಾರು 12 ಗಂಟೆಗಳ ಬಂಧನದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಚಳವಳಿಯ ಸಂದರ್ಭದಲ್ಲಿ ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದ ಐದನೇ ವರ್ಷದ ನೆನಪಿಗಾಗಿ ಡಿಸೆಂಬರ್ 15 ರಂದು ಪ್ರತಿಭಟನೆ ನಡೆಸಿದ್ದಕ್ಕಾಗಿ ಇಬ್ಬರು ಪಿಎಚ್‌ಡಿ ಸಂಶೋದಕರಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೋಟಿಸ್ ನೀಡಲಾಗಿತ್ತು. ಈ ಪ್ರತಿಭಟನೆಯನ್ನು “ಜಾಮಿಯಾ ಪ್ರತಿರೋಧ ದಿನ” ಎಂಬ ವೇದಿಕೆ ಅಡಿಯಲ್ಲಿ ನಡೆಸಲಾಗಿತ್ತು.

ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆಸ್ತಿಯನ್ನು ಧ್ವಂಸ ಮಾಡಿದ್ದಾರೆ ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಆರೋಪಿಸಿದ್ದು, ವಿದ್ಯಾರ್ಥಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂಓದಿ:  ಡಿ.ಕೆ. ಶಿವಕುಮಾರ್ ಅವಧಿ ಮುಗಿದಿದ್ದು ಹೈಕಮಾಂಡ್‌ಗೆ ಗೊತ್ತು – ಸಚಿವ ರಾಜಣ್ಣ

ಡಿ.ಕೆ. ಶಿವಕುಮಾರ್ ಅವಧಿ ಮುಗಿದಿದ್ದು ಹೈಕಮಾಂಡ್‌ಗೆ ಗೊತ್ತು – ಸಚಿವ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...