Homeಮುಖಪುಟಸಂಭಾಲ್ ಹಿಂಸಾಚಾರ | 74 ಶಂಕಿತರ ಫೋಟೋವನ್ನು ಸಾರ್ವಜನಿಕವಾಗಿ ಅಂಟಿಸಿದ ಯುಪಿ ಸರ್ಕಾರ

ಸಂಭಾಲ್ ಹಿಂಸಾಚಾರ | 74 ಶಂಕಿತರ ಫೋಟೋವನ್ನು ಸಾರ್ವಜನಿಕವಾಗಿ ಅಂಟಿಸಿದ ಯುಪಿ ಸರ್ಕಾರ

- Advertisement -
- Advertisement -

ಕಳೆದ ವರ್ಷ ನವೆಂಬರ್‌ನಲ್ಲಿ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವ ಶಂಕಿತ 74 ಜನರ ಫೋಟೋಗಳನ್ನು ಹೊಂದಿರುವ ಪೋಸ್ಟರ್‌ಗಳನ್ನು ಶುಕ್ರವಾರ ಹಾಕಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ವಿಶ್ವಾಸಾರ್ಹ ಪುರಾವೆಗಳನ್ನು ನೀಡುವ ವ್ಯಕ್ತಿಗಳಿಗೆ ನಗದು ಬಹುಮಾನ ನೀಡಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಶ್ ಚಂದ್ರ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಪ್ರಕರಣದಲ್ಲಿ ಆರೋಪಿಗಳನ್ನು ಗುರುತಿಸಲು ಮತ್ತು ಅಧಿಕಾರಿಗಳಿಗೆ ಅವರನ್ನು ಹುಡುಕಲು ಸಹಾಯ ಮಾಡಲು ನಾಗರಿಕರಿಗಾಗಿ ಈ ಫೋಟೋಗಳನ್ನು ಪ್ರದೇಶದ ಹಲವಾರು ಸ್ಥಳಗಳಲ್ಲಿ ಪ್ರದರ್ಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪೋಸ್ಟರ್‌ಗಳಲ್ಲಿ ಶಂಕಿತರು ತಮ್ಮ ಕೈಯಲ್ಲಿ ಕಲ್ಲುಗಳನ್ನು ಹಿಡಿದುಕೊಂಡಿರುವ ಛಾಯಾಚಿತ್ರಗಳಿವೆ. ಡ್ರೋನ್ ಕ್ಯಾಮೆರಾಗಳ ಸಿಸಿಟಿವಿ ಮೂಲಕ, ಕ್ಲೋಸ್ಡ್-ಸರ್ಕ್ಯೂಟ್ ಟೆಲಿವಿಷನ್ ಮತ್ತು ಮೊಬೈಲ್ ಫೋನ್‌ಗಳಲ್ಲಿ ಮಾಡಿದ ವೀಡಿಯೊಗಳ ಮೂಲಕ ಶಂಕಿತರು ಹಿಂಸಾಚಾರದಲ್ಲಿ ನೇರವಾಗಿ ಭಾಗಿಯಾಗಿರು ದೃಶ್ಯಾವಳಿಗಳಿವೆ.” ಎಂದು ಅವರು ಹೇಳಿದ್ದಾರೆ.

ನವೆಂಬರ್ 24 ರಂದು, ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ನ್ಯಾಯಾಲಯದ ಆದೇಶದ ಮೇರೆಗೆ ನಡೆಸಲಾಗಿದ್ದ ಸಮೀಕ್ಷೆಗೆ ಮುಸ್ಲಿಮರ ಗುಂಪೊಂದು ಆಕ್ಷೇಪ ವ್ಯಕ್ತಪಡಿಸಿದ್ದು. ಇದರ ನಂತರ ಸಂಭಾಲ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿತು.

ಶತಮಾನಗಳಷ್ಟು ಹಳೆಯದಾದ ಶ್ರೀ ಹರಿಹರ ದೇವಸ್ಥಾನದ ಸ್ಥಳದಲ್ಲಿ ಮೊಘಲ್ ದೊರೆ ಬಾಬರ್ 1526 ರಲ್ಲಿ ಮಸೀದಿಯನ್ನು ನಿರ್ಮಿಸಿದ್ದಾನೆ ಎಂದು ಬಿಜೆಪಿ ಬೆಂಬಲಿಗರು ಮೊಕದ್ದಮೆ ದಾಖಲು ಮಾಡಿದ್ದು, ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು. ಸಮೀಕ್ಷೆಯ ಸಮಯದಲ್ಲಿ ನಡೆದ ಹಿಂಸಾಚಾರದಲ್ಲಿ ಐದು ಜನರು ಸಾವನ್ನಪ್ಪಿದ್ದರು.

ಡಿಸೆಂಬರ್‌ನಲ್ಲಿ ವೇಳೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಹೇಳಲಾದವರ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಹಾಕಲಾಗುವುದು ಎಂದು ಜಿಲ್ಲಾಡಳಿತ ಹೇಳಿತ್ತು.

ಮಸೀದಿಯ ಮುಖ್ಯ ದ್ವಾರದ ಎದುರು ಹೊಸದಾಗಿ ಸ್ಥಾಪಿಸಲಾದ ಔಟ್‌ಪೋಸ್ಟ್‌ನಲ್ಲಿ ಹೊಸ ಪೋಸ್ಟರ್‌ಗಳನ್ನು ತೆಗೆದುಹಾಕದಂತೆ ಅಥವಾ ಹರಿದು ಹಾಕದಂತೆ ನೋಡಿಕೊಳ್ಳಲು ಪೊಲೀಸರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ಸಂಭಾಲ್ ಹಿಂಸಾಚಾರ

ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿರುವ 150 ವ್ಯಕ್ತಿಗಳು ಮತ್ತು 2,500 ಇತರ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪೊಲೀಸರು 8 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಹಿಂಸಾಚಾರದ ಸಮಯದಲ್ಲಿ ಪೊಲೀಸರ ಮೇಲೆ ಕಲ್ಲು ಎಸೆದ ಆರೋಪದ ಮೇಲೆ ಈವರೆಗೆ ಎಪ್ಪತ್ತಾರು ಜನರನ್ನು ಬಂಧಿಸಲಾಗಿದೆ. ಬಂಧಿತರಿಗೆ ಜಾಮೀನು ಸಿಕ್ಕಿಲ್ಲ.

ಜಾಮಿಯಾ ಪ್ರತಿಭಟನಾಕಾರರ ಪೋಸ್ಟರ್‌ಗಳು

ಪ್ರತ್ಯೇಕ ಘಟನೆಯಲ್ಲಿ, ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಶುಕ್ರವಾರ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ 17 ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿದೆ.

ವಿದ್ಯಾರ್ಥಿಗಳಿಗೆ ಆಡಳಿತವು ಶೋ-ಕಾಸ್ ನೋಟಿಸ್‌ಗಳನ್ನು ನೀಡಿರುವುದನ್ನು ವಿರೋಧಿಸಿ ದೆಹಲಿ ಪೊಲೀಸರು ಗುರುವಾರ ವಿಶ್ವವಿದ್ಯಾಲಯದ ಹಲವಾರು ವಿದ್ಯಾರ್ಥಿಗಳನ್ನು ಬಂಧಿಸಿದ್ದರು. ಸುಮಾರು 12 ಗಂಟೆಗಳ ಬಂಧನದ ನಂತರ ಅವರನ್ನು ಬಿಡುಗಡೆ ಮಾಡಲಾಯಿತು.

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಚಳವಳಿಯ ಸಂದರ್ಭದಲ್ಲಿ ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದ ಐದನೇ ವರ್ಷದ ನೆನಪಿಗಾಗಿ ಡಿಸೆಂಬರ್ 15 ರಂದು ಪ್ರತಿಭಟನೆ ನಡೆಸಿದ್ದಕ್ಕಾಗಿ ಇಬ್ಬರು ಪಿಎಚ್‌ಡಿ ಸಂಶೋದಕರಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೋಟಿಸ್ ನೀಡಲಾಗಿತ್ತು. ಈ ಪ್ರತಿಭಟನೆಯನ್ನು “ಜಾಮಿಯಾ ಪ್ರತಿರೋಧ ದಿನ” ಎಂಬ ವೇದಿಕೆ ಅಡಿಯಲ್ಲಿ ನಡೆಸಲಾಗಿತ್ತು.

ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಆಸ್ತಿಯನ್ನು ಧ್ವಂಸ ಮಾಡಿದ್ದಾರೆ ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಆರೋಪಿಸಿದ್ದು, ವಿದ್ಯಾರ್ಥಿಗಳು ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂಓದಿ:  ಡಿ.ಕೆ. ಶಿವಕುಮಾರ್ ಅವಧಿ ಮುಗಿದಿದ್ದು ಹೈಕಮಾಂಡ್‌ಗೆ ಗೊತ್ತು – ಸಚಿವ ರಾಜಣ್ಣ

ಡಿ.ಕೆ. ಶಿವಕುಮಾರ್ ಅವಧಿ ಮುಗಿದಿದ್ದು ಹೈಕಮಾಂಡ್‌ಗೆ ಗೊತ್ತು – ಸಚಿವ ರಾಜಣ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...