Homeಮುಖಪುಟಸಂಭಾಲ್ ಹಿಂಸಾಚಾರ | ಆರೋಪಿಗಳ ಪೋಸ್ಟರ್‌ ಪ್ರದರ್ಶನಕ್ಕೆ ಸಜ್ಜಾದ ಜಿಲ್ಲಾಡಳಿತ

ಸಂಭಾಲ್ ಹಿಂಸಾಚಾರ | ಆರೋಪಿಗಳ ಪೋಸ್ಟರ್‌ ಪ್ರದರ್ಶನಕ್ಕೆ ಸಜ್ಜಾದ ಜಿಲ್ಲಾಡಳಿತ

- Advertisement -
- Advertisement -

ಸಂಭಾಲ್‌ನ ಮಸೀದಿಯ ಸಮೀಕ್ಷೆಯ ಮೇಲೆ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವವರ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಹಾಕಲಾಗುವುದು ಎಂದು ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ 400 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಮತ್ತು 32 ಮಂದಿಯನ್ನು ಬಂಧಿಸಲಾಗಿದೆ. ಅವರ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗುತ್ತಿದೆ ಮತ್ತು ಶೀಘ್ರದಲ್ಲೇ ಹಾಕಲಾಗುವುದು” ಎಂದು ಪೆನ್ಸಿಯಾ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ನವೆಂಬರ್ 24 ರಂದು, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮುಸ್ಲಿಮರ ಗುಂಪು ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ವಿರೋಧಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. 1526 ರ ಮೊಘಲ್ ಕಾಲದ ಮಸೀದಿಯನ್ನು ದೇವಾಲಯದ ಮೇಲೆ ಕಟ್ಟಲಾಗಿದೆ ಎಂದು ಬಿಜೆಪಿ ಪರ ಸಂಘಟನೆಗಳು ಅರೋಪಿಸಿ ಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶ ನೀಡಿತ್ತು. ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 27 ರಂದು ಉತ್ತರ ಪ್ರದೇಶ ಸರ್ಕಾರವು, ಹಿಂಸಾಚಾರ ನಡೆಸಿದ ವ್ಯಕ್ತಿಗಳು ಸಾರ್ವಜನಿಕ ಆಸ್ತಿಯ ಹಾನಿಯನ್ನು ಪಾವತಿಸುವಂತೆ ಮತ್ತು ಸಾರ್ವಜನಿಕ ಗೋಡೆಗಳ ಮೇಲೆ ಅವರ ಚಿತ್ರಗಳನ್ನು ಪ್ರದರ್ಶಿಸುವಂತೆ ಮಾಡುವುದಾಗಿ ಹೇಳಿತ್ತು. ಇದನ್ನು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬುಧವಾರ ಪುನರುಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸಂಭಾಲ್ ಹಿಂಸಾಚಾರ

“ತೊಂದರೆ ಉಂಟುಮಾಡುವವರಿಂದ ಉಂಟಾದ ಸಾರ್ವಜನಿಕ ಆಸ್ತಿ ಹಾನಿಯನ್ನು ಸರಿಪಡಿಸುವ ವೆಚ್ಚವನ್ನು ಅವರಿಂದ ವಸೂಲಿ ಮಾಡಬೇಕು. ಅಶಾಂತಿ ಸೃಷ್ಟಿಸಲು ಕಾರಣರಾದವರನ್ನು ಗುರುತಿಸಿ, ಅವರ ಪೋಸ್ಟರ್‌ಗಳನ್ನು ಹಾಕಿ. ಸಾರ್ವಜನಿಕ ಬೆಂಬಲವನ್ನು ಪಡೆದು ವ್ಯಾಪಕ ಶೋಧ ಕಾರ್ಯಾಚರಣೆಗಳನ್ನು ನಡೆಸಿ. ಯಾವುದೇ ಅಪರಾಧಿ ತಪ್ಪಿಸಿಕೊಳ್ಳಬಾರದು” ಎಂದು ” ಎಂದು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಆದಿತ್ಯನಾಥ್ ಹೇಳಿದ್ದಾರೆ.

ಗುರುವಾರ ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಅಯೋಧ್ಯೆ, ಸಂಭಾಲ್ ಮತ್ತು ಬಾಂಗ್ಲಾದೇಶದ ಹಿಂಸಾಚಾರದ ನಡುವೆ ಸಾಮ್ಯತೆಯಿದೆ. ಮೂವರ ಸ್ವಭಾವ ಮತ್ತು ಡಿಎನ್‌ಎ ಒಂದೇ ಆಗಿದೆ” ಎಂದು ಆದಿತ್ಯನಾಥ್ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

2020 ರಲ್ಲಿ ಕೂಡಾ ಉತ್ತರ ಪ್ರದೇಶ ಸರ್ಕಾರವು ವಿವಾದಾಸ್ಪದ ನಾಗರಿಕ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರ ನಡೆಸಿದ ಆರೋಪಿಗಳ  ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿತ್ತು. ಆದರೆ, ನಂತರ ಅಲಹಾಬಾದ್ ಹೈಕೋರ್ಟ್ ಅದನ್ನು ತೆಗೆದುಹಾಕುವಂತೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...