Homeಮುಖಪುಟಸಂಭಾಲ್ ಹಿಂಸಾಚಾರ | ಆರೋಪಿಗಳ ಪೋಸ್ಟರ್‌ ಪ್ರದರ್ಶನಕ್ಕೆ ಸಜ್ಜಾದ ಜಿಲ್ಲಾಡಳಿತ

ಸಂಭಾಲ್ ಹಿಂಸಾಚಾರ | ಆರೋಪಿಗಳ ಪೋಸ್ಟರ್‌ ಪ್ರದರ್ಶನಕ್ಕೆ ಸಜ್ಜಾದ ಜಿಲ್ಲಾಡಳಿತ

- Advertisement -
- Advertisement -

ಸಂಭಾಲ್‌ನ ಮಸೀದಿಯ ಸಮೀಕ್ಷೆಯ ಮೇಲೆ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವವರ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಹಾಕಲಾಗುವುದು ಎಂದು ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ 400 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಮತ್ತು 32 ಮಂದಿಯನ್ನು ಬಂಧಿಸಲಾಗಿದೆ. ಅವರ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗುತ್ತಿದೆ ಮತ್ತು ಶೀಘ್ರದಲ್ಲೇ ಹಾಕಲಾಗುವುದು” ಎಂದು ಪೆನ್ಸಿಯಾ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ನವೆಂಬರ್ 24 ರಂದು, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮುಸ್ಲಿಮರ ಗುಂಪು ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ವಿರೋಧಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. 1526 ರ ಮೊಘಲ್ ಕಾಲದ ಮಸೀದಿಯನ್ನು ದೇವಾಲಯದ ಮೇಲೆ ಕಟ್ಟಲಾಗಿದೆ ಎಂದು ಬಿಜೆಪಿ ಪರ ಸಂಘಟನೆಗಳು ಅರೋಪಿಸಿ ಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶ ನೀಡಿತ್ತು. ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 27 ರಂದು ಉತ್ತರ ಪ್ರದೇಶ ಸರ್ಕಾರವು, ಹಿಂಸಾಚಾರ ನಡೆಸಿದ ವ್ಯಕ್ತಿಗಳು ಸಾರ್ವಜನಿಕ ಆಸ್ತಿಯ ಹಾನಿಯನ್ನು ಪಾವತಿಸುವಂತೆ ಮತ್ತು ಸಾರ್ವಜನಿಕ ಗೋಡೆಗಳ ಮೇಲೆ ಅವರ ಚಿತ್ರಗಳನ್ನು ಪ್ರದರ್ಶಿಸುವಂತೆ ಮಾಡುವುದಾಗಿ ಹೇಳಿತ್ತು. ಇದನ್ನು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬುಧವಾರ ಪುನರುಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸಂಭಾಲ್ ಹಿಂಸಾಚಾರ

“ತೊಂದರೆ ಉಂಟುಮಾಡುವವರಿಂದ ಉಂಟಾದ ಸಾರ್ವಜನಿಕ ಆಸ್ತಿ ಹಾನಿಯನ್ನು ಸರಿಪಡಿಸುವ ವೆಚ್ಚವನ್ನು ಅವರಿಂದ ವಸೂಲಿ ಮಾಡಬೇಕು. ಅಶಾಂತಿ ಸೃಷ್ಟಿಸಲು ಕಾರಣರಾದವರನ್ನು ಗುರುತಿಸಿ, ಅವರ ಪೋಸ್ಟರ್‌ಗಳನ್ನು ಹಾಕಿ. ಸಾರ್ವಜನಿಕ ಬೆಂಬಲವನ್ನು ಪಡೆದು ವ್ಯಾಪಕ ಶೋಧ ಕಾರ್ಯಾಚರಣೆಗಳನ್ನು ನಡೆಸಿ. ಯಾವುದೇ ಅಪರಾಧಿ ತಪ್ಪಿಸಿಕೊಳ್ಳಬಾರದು” ಎಂದು ” ಎಂದು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಆದಿತ್ಯನಾಥ್ ಹೇಳಿದ್ದಾರೆ.

ಗುರುವಾರ ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಅಯೋಧ್ಯೆ, ಸಂಭಾಲ್ ಮತ್ತು ಬಾಂಗ್ಲಾದೇಶದ ಹಿಂಸಾಚಾರದ ನಡುವೆ ಸಾಮ್ಯತೆಯಿದೆ. ಮೂವರ ಸ್ವಭಾವ ಮತ್ತು ಡಿಎನ್‌ಎ ಒಂದೇ ಆಗಿದೆ” ಎಂದು ಆದಿತ್ಯನಾಥ್ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

2020 ರಲ್ಲಿ ಕೂಡಾ ಉತ್ತರ ಪ್ರದೇಶ ಸರ್ಕಾರವು ವಿವಾದಾಸ್ಪದ ನಾಗರಿಕ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರ ನಡೆಸಿದ ಆರೋಪಿಗಳ  ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿತ್ತು. ಆದರೆ, ನಂತರ ಅಲಹಾಬಾದ್ ಹೈಕೋರ್ಟ್ ಅದನ್ನು ತೆಗೆದುಹಾಕುವಂತೆ ನಿರ್ದೇಶನ ನೀಡಿತ್ತು.

ಇದನ್ನೂ ಓದಿ: ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...