Homeಮುಖಪುಟಸಂಭಾಲ್ ಹಿಂಸಾಚಾರ | ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಸ್ಪಿ ಸಂಸದ

ಸಂಭಾಲ್ ಹಿಂಸಾಚಾರ | ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಸ್ಪಿ ಸಂಸದ

- Advertisement -
- Advertisement -

ಸಂಭಾಲ್‌ ಹಿಂಸಾಚಾರದಲ್ಲಿ ದಾಖಲಾಗಿರುವ ಪ್ರಕರಣದ ಬಂಧನದಿಂದ ರಕ್ಷಣೆ ಕೋರಿ ಸಮಾಜವಾದಿ ನಾಯಕ ಮತ್ತು ಸಂಭಾಲ್ ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಅವರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನವೆಂಬರ್ 24 ರಂದು ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ಸಂಭಾಲ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಿಂಸಾಚಾರದಲ್ಲಿ ಐದು ಮುಸ್ಲಿಮರು ಪ್ರಾಣ ಕಳೆದುಕೊಂಡಿದ್ದರು ಮತ್ತು ಅನೇಕ ಪೊಲೀಸರು ಗಾಯಗೊಂಡಿದ್ದರು. ಸಂಭಾಲ್ ಹಿಂಸಾಚಾರ

ಬಂಧನದಿಂದ ರಕ್ಷಣೆ ಕೋರಿ ಮಾಡಿದ ಮನವಿಯ ಜೊತೆಗೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಜಿಯಾ ಅವರು ಒತ್ತಾಯಿಸಿದ್ದಾರೆ. ಸಂಭಾಲ್ ಹಿಂಸಾಚಾರ ಪ್ರಕರಣದಲ್ಲಿ, ಶಾಹಿ ಜಾಮಾ ಮಸೀದಿಯಲ್ಲಿ ಸಮೀಕ್ಷೆ ವೇಳೆ ಹಿಂಸಾಚಾರಕ್ಕೆ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ ಎಂದು ಬಾರ್ಕ್ ತನ್ನ ಅರ್ಜಿಯಲ್ಲಿ ವಾದಿಸಿದ್ದಾರೆ. ಹಿಂಸಾಚಾರದಲ್ಲಿ ತನ್ನ ಪಾತ್ರವನ್ನು ನಿರಾಕರಿಸಿರುವ ಅವರು, ಆಡಳಿತಾರೂಢ ಬಿಜೆಪಿ ತನ್ನ ವಿರುದ್ಧ “ಸೇಡು ತೀರಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದ್ದು, ಸುಳ್ಳು ಆರೋಪಗಳ ಮೂಲಕ ಕಿರುಕುಳ ಮತ್ತು ಬೆದರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹಿಂಸಾಚಾರ ಪ್ರಕರಣದಲ್ಲಿ, ಜಿಯಾ ಅವರನ್ನು ಹೊರತುಪಡಿಸಿ, ಯುಪಿ ಪೊಲೀಸರು ಸ್ಥಳೀಯ ಶಾಸಕ ಇಕ್ಬಾಲ್ ಮೆಹಮೂದ್ ಅವರ ಪುತ್ರ ಸೊಹೈಲ್ ಇಕ್ಬಾಲ್ ಅವರನ್ನು ಹೆಸರಿಸಿದ್ದಾರೆ. ಹಿಂಸಾಚಾರಕ್ಕೆ ಕೆಲವೇ ದಿನಗಳ ಮೊದಲು ಶಾಹಿ ಜಾಮಾ ಮಸೀದಿಗೆ ಭೇಟಿ ನೀಡಿದ್ದ ಜಿಯಾ ಅವರು, ಅಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹೇಳಿಕೆಯನ್ನು ನಿರಾಕರಿಸಿರುವ ಸಂಸದ ಜಿಯಾ ಅವರು ಘಟನೆ ಮತ್ತು ಸಮೀಕ್ಷೆಯ ವೇಳೆ ತಾನು ಬೆಂಗಳೂರಿನಲ್ಲಿದ್ದೆ ಎಂದು ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಸಮುದಾಯದ ಸದಸ್ಯರನ್ನು ಸಮಾಧಾನಪಡಿಸಲು ಸಂಭಾಲ್‌ಗೆ ಮರಳಲು ಉದ್ದೇಶಿಸಿದ್ದೆ. ಆದರೆ ತನ್ನ ವಿರುದ್ಧದ ಎಫ್‌ಐಆರ್ ಬಗ್ಗೆ ತಿಳಿದ ನಂತರ ದೆಹಲಿಯಲ್ಲಿ ಉಳಿಯಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಜಿಯಾ ಅವೆರು ತಾನು ಫೋನ್ ಮೂಲಕ ಜನರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆ ಎಂದು ಹೇಳಿದ್ದಾರೆ.

ನವೆಂಬರ್ 19 ರಂದು, ಸಂಭಾಲ್‌ನ ಸಿವಿಲ್ ನ್ಯಾಯಾಲಯವು ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಅವಕಾಶ ನೀಡಿತ್ತು. ಮಸೀದಿಯು ಹರಿಹರ ದೇವಾಲಯವಾಗಿತ್ತು ಎಂದು ಪ್ರತಿಪಾದಿಸಿ ವಕೀಲ ಹರಿಶಂಕರ್ ಜೈನ್ ಮತ್ತು ಇತರ ಏಳು ಮಂದಿ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯ ಈ ಆದೇಶ ನೀಡಿತ್ತು. ಅದಾಗಿ, ನವೆಂಬರ್ 24 ರಂದು ಮಸೀದಿಯ ಸಮೀಕ್ಷೆಯನ್ನು ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹಿಂಸಾಚಾರ ನಡೆದಿತ್ತು.

ಕಲ್ಲು ತೂರಾಟ, ವಿಧ್ವಂಸಕ ಕೃತ್ಯಗಳು ಮತ್ತು ಬೆಂಕಿ ಹಚ್ಚುವಿಕೆಯ ನಡುವೆ ನಾಲ್ವರು ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಐದನೇ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಗಲಭೆಯಲ್ಲಿ ನಾಲ್ವರು ವ್ಯಕ್ತಿಗಳ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...