Homeಮುಖಪುಟಸಂಭಾಲ್ ಹಿಂಸಾಚಾರ | ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಸ್ಪಿ ಸಂಸದ

ಸಂಭಾಲ್ ಹಿಂಸಾಚಾರ | ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಎಸ್ಪಿ ಸಂಸದ

- Advertisement -
- Advertisement -

ಸಂಭಾಲ್‌ ಹಿಂಸಾಚಾರದಲ್ಲಿ ದಾಖಲಾಗಿರುವ ಪ್ರಕರಣದ ಬಂಧನದಿಂದ ರಕ್ಷಣೆ ಕೋರಿ ಸಮಾಜವಾದಿ ನಾಯಕ ಮತ್ತು ಸಂಭಾಲ್ ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಅವರು ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ನವೆಂಬರ್ 24 ರಂದು ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ಸಂಭಾಲ್‌ನಲ್ಲಿ ಭುಗಿಲೆದ್ದ ಹಿಂಸಾಚಾರಕ್ಕಾಗಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಿಂಸಾಚಾರದಲ್ಲಿ ಐದು ಮುಸ್ಲಿಮರು ಪ್ರಾಣ ಕಳೆದುಕೊಂಡಿದ್ದರು ಮತ್ತು ಅನೇಕ ಪೊಲೀಸರು ಗಾಯಗೊಂಡಿದ್ದರು. ಸಂಭಾಲ್ ಹಿಂಸಾಚಾರ

ಬಂಧನದಿಂದ ರಕ್ಷಣೆ ಕೋರಿ ಮಾಡಿದ ಮನವಿಯ ಜೊತೆಗೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಜಿಯಾ ಅವರು ಒತ್ತಾಯಿಸಿದ್ದಾರೆ. ಸಂಭಾಲ್ ಹಿಂಸಾಚಾರ ಪ್ರಕರಣದಲ್ಲಿ, ಶಾಹಿ ಜಾಮಾ ಮಸೀದಿಯಲ್ಲಿ ಸಮೀಕ್ಷೆ ವೇಳೆ ಹಿಂಸಾಚಾರಕ್ಕೆ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನ್ನ ವಿರುದ್ಧದ ಆರೋಪಗಳು ರಾಜಕೀಯ ಪ್ರೇರಿತ ಎಂದು ಬಾರ್ಕ್ ತನ್ನ ಅರ್ಜಿಯಲ್ಲಿ ವಾದಿಸಿದ್ದಾರೆ. ಹಿಂಸಾಚಾರದಲ್ಲಿ ತನ್ನ ಪಾತ್ರವನ್ನು ನಿರಾಕರಿಸಿರುವ ಅವರು, ಆಡಳಿತಾರೂಢ ಬಿಜೆಪಿ ತನ್ನ ವಿರುದ್ಧ “ಸೇಡು ತೀರಿಸಿಕೊಳ್ಳುತ್ತಿದೆ” ಎಂದು ಆರೋಪಿಸಿದ್ದು, ಸುಳ್ಳು ಆರೋಪಗಳ ಮೂಲಕ ಕಿರುಕುಳ ಮತ್ತು ಬೆದರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹಿಂಸಾಚಾರ ಪ್ರಕರಣದಲ್ಲಿ, ಜಿಯಾ ಅವರನ್ನು ಹೊರತುಪಡಿಸಿ, ಯುಪಿ ಪೊಲೀಸರು ಸ್ಥಳೀಯ ಶಾಸಕ ಇಕ್ಬಾಲ್ ಮೆಹಮೂದ್ ಅವರ ಪುತ್ರ ಸೊಹೈಲ್ ಇಕ್ಬಾಲ್ ಅವರನ್ನು ಹೆಸರಿಸಿದ್ದಾರೆ. ಹಿಂಸಾಚಾರಕ್ಕೆ ಕೆಲವೇ ದಿನಗಳ ಮೊದಲು ಶಾಹಿ ಜಾಮಾ ಮಸೀದಿಗೆ ಭೇಟಿ ನೀಡಿದ್ದ ಜಿಯಾ ಅವರು, ಅಲ್ಲಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಹೇಳಿಕೆಯನ್ನು ನಿರಾಕರಿಸಿರುವ ಸಂಸದ ಜಿಯಾ ಅವರು ಘಟನೆ ಮತ್ತು ಸಮೀಕ್ಷೆಯ ವೇಳೆ ತಾನು ಬೆಂಗಳೂರಿನಲ್ಲಿದ್ದೆ ಎಂದು ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಸಮುದಾಯದ ಸದಸ್ಯರನ್ನು ಸಮಾಧಾನಪಡಿಸಲು ಸಂಭಾಲ್‌ಗೆ ಮರಳಲು ಉದ್ದೇಶಿಸಿದ್ದೆ. ಆದರೆ ತನ್ನ ವಿರುದ್ಧದ ಎಫ್‌ಐಆರ್ ಬಗ್ಗೆ ತಿಳಿದ ನಂತರ ದೆಹಲಿಯಲ್ಲಿ ಉಳಿಯಲು ನಿರ್ಧರಿಸಿದೆ ಎಂದು ಅವರು ಹೇಳಿದ್ದಾರೆ. ಆದಾಗ್ಯೂ, ಜಿಯಾ ಅವೆರು ತಾನು ಫೋನ್ ಮೂಲಕ ಜನರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೆ ಎಂದು ಹೇಳಿದ್ದಾರೆ.

ನವೆಂಬರ್ 19 ರಂದು, ಸಂಭಾಲ್‌ನ ಸಿವಿಲ್ ನ್ಯಾಯಾಲಯವು ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ಅವಕಾಶ ನೀಡಿತ್ತು. ಮಸೀದಿಯು ಹರಿಹರ ದೇವಾಲಯವಾಗಿತ್ತು ಎಂದು ಪ್ರತಿಪಾದಿಸಿ ವಕೀಲ ಹರಿಶಂಕರ್ ಜೈನ್ ಮತ್ತು ಇತರ ಏಳು ಮಂದಿ ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ನ್ಯಾಯಾಲಯ ಈ ಆದೇಶ ನೀಡಿತ್ತು. ಅದಾಗಿ, ನವೆಂಬರ್ 24 ರಂದು ಮಸೀದಿಯ ಸಮೀಕ್ಷೆಯನ್ನು ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಹಿಂಸಾಚಾರ ನಡೆದಿತ್ತು.

ಕಲ್ಲು ತೂರಾಟ, ವಿಧ್ವಂಸಕ ಕೃತ್ಯಗಳು ಮತ್ತು ಬೆಂಕಿ ಹಚ್ಚುವಿಕೆಯ ನಡುವೆ ನಾಲ್ವರು ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು. ಐದನೇ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಗಲಭೆಯಲ್ಲಿ ನಾಲ್ವರು ವ್ಯಕ್ತಿಗಳ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...