Homeಮುಖಪುಟ'ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ' - ಸಂಸತ್ತಿನಲ್ಲಿ ಅಖಿಲೇಶ್ ಯಾದವ್

‘ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ’ – ಸಂಸತ್ತಿನಲ್ಲಿ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಐದು ಜನರ ಸಾವಿಗೆ ಕಾರಣವಾದ ಹಿಂಸಾಚಾರದ ವಿಚಾರವು ಮಂಗಳವಾರ ಸಂಸತ್ತಿನಲ್ಲಿ ಪ್ರತಿಧ್ವನಿಸಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಅಖಿಲೇಶ್ ಯಾದವ್ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಹಿಂಸಾಚಾರವನ್ನು “ಯೋಜಿತ ಪಿತೂರಿ” ಎಂದು ಕರೆದಿರುವ ಅಖಿಲೇಶ್ ಅವರು, ಪ್ರದೇಶದಲ್ಲಿ ಸಹೋದರತ್ವದ ಮೇಲೆ “ಗುಂಡು ಹಾರಿಸುವ” ಗುರಿಯನ್ನು ಈ ಪಿತೂರಿ ಹೊಂದಿತ್ತು ಎಂದು ಹೇಳಿದ್ದಾರೆ. ಇಂತಹ ಮಸೀದಿ ಸಮೀಕ್ಷೆಗಳ ಮೂಲಕ ಬಿಜೆಪಿಯು ದೇಶದ “ಗಂಗಾ-ಜಮುನಾ ತೆಹಜೀಬ್” (ಧರ್ಮ ಸಮನ್ವಯ ಸಂಸ್ಕೃತಿ) ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಂಭಾಲ್ ಹಿಂಸಾಚಾರ

“ಸಂಭಾಲ್ ತನ್ನ ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ವರ್ಷಗಳಿಂದ ಜನರು ಈ ಸಹೋದರತ್ವದೊಂದಿಗೆ ವಾಸಿಸುತ್ತಿದ್ದಾರೆ. ಈ ಸಹೋದರತ್ವವನ್ನು ಸಂಭಾಲ್‌ನಲ್ಲಿ ಶೂಟ್ ಮಾಡಲು ಯೋಜಿತ ಸಂಚು ಈಗ ನಡೆದಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ನವೆಂಬರ್ 24 ರಂದು, ಸಂಭಾಲ್‌ನ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಮುಸ್ಲಿಮರ ಸಾವಿಗೀಡಾಗಿದ್ದರು. ಘಟನೆಯ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ಮತ್ತು ಹಲವಾರು ವಾಹನಗಳನ್ನು ಸುಟ್ಟುಹಾಕಲಾಯಿತು ಅಥವಾ ಹಾನಿಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಮತ್ತು ಅದರ ಹಿತೈಷಿಗಳು ಸಂಭಾಲ್‌ನಲ್ಲಿ ನಡೆಸುತ್ತಿರುವ ಉತ್ಖನನವು ದೇಶದ ಸಹೋದರತ್ವಕ್ಕೆ ವಿರುದ್ಧವಾಗಿದೆ. ಇದು ನಮ್ಮ ಗಂಗಾ-ಜಮುನಾ ತೆಹಜೀಬ್ ಅನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಯೋಜಿತ ಪಿತೂರಿಯಾಗಿದ್ದು, ಏಕೆಂದರೆ ಉತ್ತರ ಪ್ರದೇಶದ ಚುನಾವಣೆಯನ್ನು 13 ರಂದು ನಡೆಸಬೇಕಾಗಿತ್ತು, ಅದು 20 ಕ್ಕೆ ಬದಲಾಗಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪುರಾತನ ಹಿಂದೂ ದೇವಾಲಯ ಇದೆಯೆ ಎಂದು ವಕೀಲ ಕಮಿಷನರ್ ಮೂಲಕ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಆದೇಶಿಸಿದ್ದ ಸಂಭಾಲ್ ನ್ಯಾಯಾಲಯದ ತೀರ್ಪಿನ ವಿರುದ್ಧ ಶಾಹಿ ಜಾಮಾ ಮಸೀದಿಯ ಉಸ್ತುವಾರಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಕ್ಕೆ ಮೊದಲು ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಆರಾಧನಾ ಸ್ಥಳಗಳ ಕಾಯಿದೆ (1991) ಜಾರಿಯಲ್ಲಿದ್ದರೂ ಮಸೀದಿಯ ಸಮೀಕ್ಷೆಗೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ಲೋಕಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಸರ್ಕಾರಕ್ಕೆ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ನಾವು ಸುಮ್ಮನೆ ಹೇಳುತ್ತಿಲ್ಲ. ಆರಾಧನಾ ಸ್ಥಳಗಳ ಕಾಯಿದೆ ಇರುವಾಗ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ವಿರುದ್ಧ ಅರ್ಜಿ ಸಲ್ಲಿಸಲಾಯಿತು. ನವೆಂಬರ್ 19 ರಂದು, ಅದೇ ದಿನ ಇನ್ನೊಂದು ಕಡೆ ಅರ್ಜಿ ಸಲ್ಲಿಸುವ ಮೊದಲೇ ಮಸೀದಿಯ ಸಮೀಕ್ಷೆಯ ಆದೇಶವನ್ನು ರವಾನಿಸಲಾಯಿತು. ಅದಾಗಿ ಸಂಭಾಲ್ ಜಿಲ್ಲಾಡಳಿತ ಮತ್ತು ಪೊಲೀಸರು ಎರಡೇ ಎರಡು ಗಂಟೆಗಳ ಅಂತರದಲ್ಲಿ ಸಮೀಕ್ಷೆಗೆ ಆಗಮಿಸಿರುವುದು ಆಘಾತಕಾರಿಯಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

“ಜಾಮಾ ಮಸೀದಿ ಸಮಿತಿ ಮತ್ತು ಇತರ ಮಧ್ಯಸ್ಥಗಾರರು ಸಮೀಕ್ಷೆಗೆ ಸಹಕರಿಸಿದ್ದಾರೆ. 2.5 ಗಂಟೆಗಳ ನಂತರ ಸರ್ವೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಆದರೆ ನವೆಂಬರ್ 22 ರಂದು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಜನರು ಬಂದಾಗ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ಒಳಗೆ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಜನರು ಶಾಂತರಾಗಿ ಪ್ರಾರ್ಥನೆ ಸಲ್ಲಿಸಿದರು. ನವೆಂಬರ್ 29 ರಂದು ನ್ಯಾಯಾಲಯದ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಮತ್ತು ಶಾಹಿ ಜಾಮಾ ಮಸೀದಿ ಸಮಿತಿಯು ಪ್ರಕರಣಕ್ಕೆ ಸಿದ್ಧತೆ ನಡೆಸಿದೆ. ಆದಾಗ್ಯೂ, ನವೆಂಬರ್ 23 ರ ರಾತ್ರಿ, ಮರುದಿನ [ನವೆಂಬರ್ 24] ಮತ್ತೊಂದು ಸಮೀಕ್ಷೆ ನಡೆಸಲಾಗುವುದು ಎಂದು ಆಡಳಿತ ಹೇಳಿದೆ.”

“ಒಂದು ಸಮೀಕ್ಷೆ ಪೂರ್ಣಗೊಂಡಿರುವಾಗ ಮತ್ತೊಂದು ಸಮೀಕ್ಷೆ ಏಕೆ ಬೇಕು ಎಂದು ಮಸೀದಿ ಸಮಿತಿ ಕೇಳಿದ್ದು, ಎರಡನೆಯದನ್ನು ಮಾಡಬೇಕಾದರೆ ನ್ಯಾಯಾಲಯದ ಆದೇಶವನ್ನು ಪಡೆಯಬೇಕು ಎಂದು ಹೇಳಿತ್ತು. ಆದರೆ ಜಿಲ್ಲಾಡಳಿತ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸರ್ವಾಧಿಕಾರಿ ಧೋರಣೆ ಅನುಸರಿಸಿ ಮರುದಿನವೇ ಮಸೀದಿಗೆ ಬಂದಿತ್ತು. ಅವರನ್ನು ಮತ್ತೆ ಮಸೀದಿ ಸಮಿತಿ ಸದಸ್ಯರು ಸಮೀಕ್ಷೆಗಾಗಿ ಒಳಗೆ ಕರೆದೊಯ್ದರು. ಸಮೀಕ್ಷೆ ನಡೆಸಿದ ನಂತರ, ಸಮೀಕ್ಷೆಯ ಕಾರಣವನ್ನು ತಿಳಿಯಲು ಜನರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ” ಎಂದು ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

“ಆದರೆ ಸುಮಾರು 1.5 ಗಂಟೆಗಳ ನಂತರ ಜನರು ಅಲ್ಲಿ ಜಮಾಯಿಸಿದರು ಮತ್ತು ಸಮೀಕ್ಷೆಯ ಕಾರಣವನ್ನು ತಿಳಿಯಲು ಪ್ರಯತ್ನಿಸಿದರು. ಅಲ್ಲಿ ನೆರೆದಿದ್ದ ಜನರನ್ನು ಸರ್ಕಲ್ ಆಫೀಸರ್ ನಿಂದಿಸಿ ಲಾಠಿ ಚಾರ್ಜ್ ಮಾಡಿ ಗಾಯಗೊಳಿಸಿದ್ದಾರೆ. ಇದನ್ನು ವಿರೋಧಿಸಿ ಕೆಲವರು ಕಲ್ಲು ತೂರಾಟ ನಡೆಸಿದರು, ನಂತರ ಪೊಲೀಸರು ತಮ್ಮ ಸರ್ಕಾರಿ ಮತ್ತು ಖಾಸಗಿ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು – ಅದರ ವೀಡಿಯೊ ರೆಕಾರ್ಡಿಂಗ್‌ಗಳಿವೆ – ಮತ್ತು ಇದರಿಂದಾಗಿ ಹತ್ತಾರು ಜನರು ಗಾಯಗೊಂಡರು. ಅಗತ್ಯ ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟ 5 ಅಮಾಯಕರು ಕೊಂದರು. ಸಂಭಾಲ್‌ನಲ್ಲಿ ಶಾಂತಿ ಕದಡಲು ಅರ್ಜಿ ಸಲ್ಲಿಸಿದವರಷ್ಟೇ ಪೊಲೀಸರು ಮತ್ತು ಜಿಲ್ಲಾಡಳಿತ ಕಾರಣ. ಅವರನ್ನು ಅಮಾನತುಗೊಳಿಸಬೇಕು ಮತ್ತು ಪೊಲೀಸರು ಮತ್ತು ಜಿಲ್ಲಾಡಳಿತದ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು. ಹೀಗೆ ಮಾಡಿದರೆ ಜನರಿಗೆ ನ್ಯಾಯ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಕಾನೂನುಬಾಹಿರ ಘಟನೆಗಳು ನಡೆಯುವುದಿಲ್ಲ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಮಂಗಳವಾರ ಸದನದ ಕಲಾಪ ಆರಂಭವಾದಾಗ ಪ್ರತಿಪಕ್ಷಗಳು ಸಂಭಾಲ್ ಕುರಿತು ಚರ್ಚೆಗೆ ಒತ್ತಾಯಿಸಿದ ನಂತರ ಶೂನ್ಯ ವೇಳೆಯಲ್ಲಿ ಅಖಿಲೇಶ್ ಯಾದವ್ ಈ ಭಾಷಣ ಮಾಡಿದ್ದಾರೆ. ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಪ್ರತಿಪಕ್ಷ ಸದಸ್ಯರು ಸಂಭಾಲ್ ಕುರಿತು ಚರ್ಚೆ ನಡೆಸುವಂತೆ ಘೋಷಣೆ ಕೂಗಿದರು. ಆದರೆ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಪ್ರತಿಪಕ್ಷದ ಸದಸ್ಯರು ಕೆಲಕಾಲ ಸಭಾತ್ಯಾಗ ಮಾಡಿದರೂ, ಪ್ರಶ್ನೋತ್ತರ ಅವಧಿಯ ಕೆಲ ಹೊತ್ತಿನಲ್ಲೇ ಸದನಕ್ಕೆ ಮರಳಿದರು.

ಸಂಭಾಲ್ ಘಟನೆಯನ್ನು ಅಖಿಲೇಶ್ ಯಾದವ್ ಮಾತ್ರವಲ್ಲದೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಸದ ಇ.ಟಿ. ಮೊಹಮ್ಮದ್ ಬಶೀರ್, ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ವೇಳೆ ಅವರು, 1991 ರ ಪೂಜಾ ಸ್ಥಳಗಳ ಕಾಯಿದೆಯು ಈಗ ಬೆದರಿಕೆಯಲ್ಲಿದೆ ಎಂದು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

“ಆ ಪ್ರಮುಖ ಕಾನೂನು (ಆರಾಧನೆಯ ಸ್ಥಳಗಳ ಕಾಯಿದೆ) ಈಗ ಜೀವನ್ಮರಣದ ನಡುವೆ ಇದೆ. ಸಂಭಾಲ್ ಮಸೀದಿ ಪ್ರಕರಣದಲ್ಲಿ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದೇಶದಲ್ಲಿ ಶಾಂತಿಯುತ ಸಹಬಾಳ್ವೆ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿರುವುದು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತತೆಯನ್ನು ಹೊಡೆದುಹಾಕಲು ಈ ರೀತಿಯ ಕೆಲಸಗಳು ನಡೆಯುತ್ತಿವೆ” ಎಂದು ಬಶೀರ್ ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸದ ನಂತರದ ಹಿಂಸಾಚಾರವನ್ನು ಉಲ್ಲೇಖಿಸಿದ ಬಶೀರ್, “ಒಂದು ಬಾಬರಿ ಮಸೀದಿಯ ಬದಲಿಗೆ, ಈಗ ಈ ರೀತಿಯ ದುಷ್ಟರು ಹೆಚ್ಚು ಹೆಚ್ಚು ಬಾಬರಿ ಮಸೀದಿಯ ಪರಿಸ್ಥಿತಿಯನ್ನು ನಿರ್ಮಿಸಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಸಮಾಜವಾದಿ ಸಂಸದ ರಾಮ್ ಗೋಪಾಲ್ ಯಾದವ್ ಅವರು ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಮತದಾನ ಮಾಡದಂತೆ ತಡೆಹಿಡಿಯಲಾಗಿದೆ ಎಂದು ಆರೋಪದ ಗಮನ ಬೇರೆಡೆ ಸೆಳೆಯಲು ಸಂಭಾಲ್ ಮಸೀದಿಯಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಮೊನ್ನೆ ನಡೆದ ಚುನಾವಣೆಗಳಲ್ಲಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪೊಲೀಸರು ಯಾರಿಗೂ ಮತದಾನ ಮಾಡಲು ಅವಕಾಶ ನೀಡಲಿಲ್ಲ. ಅವರು ಬಲವಂತವಾಗಿ ಚುನಾವಣೆಯನ್ನು ಕೈಗೆತ್ತಿಕೊಂಡರು ಎಂದು ನಾನು ಮತ್ತು ಅನೇಕ ಜನರು ನಂಬಿದ್ದೇವೆ. ಅದರಿಂದ ಗಮನ ಬೇರೆಡೆ ಸೆಳೆಯಲು ಇದೆಲ್ಲವನ್ನೂ ಯೋಜನಾಬದ್ಧವಾಗಿ ಮಾಡಲಾಗಿದೆ” ಎಂದರು. ಈ ವೇಳೆ ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಗೋಪಾಲ್ ಯಾದವ್ ಅವರನ್ನು ಅಡ್ಡಿಪಡಿಸಿ, ಚುನಾವಣೆಯ ಕುರಿತು ಅವರ ಹೇಳಿಕೆಗಳು ದಾಖಲೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...