Homeಮುಖಪುಟ'ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ' - ಸಂಸತ್ತಿನಲ್ಲಿ ಅಖಿಲೇಶ್ ಯಾದವ್

‘ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ’ – ಸಂಸತ್ತಿನಲ್ಲಿ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಐದು ಜನರ ಸಾವಿಗೆ ಕಾರಣವಾದ ಹಿಂಸಾಚಾರದ ವಿಚಾರವು ಮಂಗಳವಾರ ಸಂಸತ್ತಿನಲ್ಲಿ ಪ್ರತಿಧ್ವನಿಸಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಅಖಿಲೇಶ್ ಯಾದವ್ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಹಿಂಸಾಚಾರವನ್ನು “ಯೋಜಿತ ಪಿತೂರಿ” ಎಂದು ಕರೆದಿರುವ ಅಖಿಲೇಶ್ ಅವರು, ಪ್ರದೇಶದಲ್ಲಿ ಸಹೋದರತ್ವದ ಮೇಲೆ “ಗುಂಡು ಹಾರಿಸುವ” ಗುರಿಯನ್ನು ಈ ಪಿತೂರಿ ಹೊಂದಿತ್ತು ಎಂದು ಹೇಳಿದ್ದಾರೆ. ಇಂತಹ ಮಸೀದಿ ಸಮೀಕ್ಷೆಗಳ ಮೂಲಕ ಬಿಜೆಪಿಯು ದೇಶದ “ಗಂಗಾ-ಜಮುನಾ ತೆಹಜೀಬ್” (ಧರ್ಮ ಸಮನ್ವಯ ಸಂಸ್ಕೃತಿ) ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಂಭಾಲ್ ಹಿಂಸಾಚಾರ

“ಸಂಭಾಲ್ ತನ್ನ ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ವರ್ಷಗಳಿಂದ ಜನರು ಈ ಸಹೋದರತ್ವದೊಂದಿಗೆ ವಾಸಿಸುತ್ತಿದ್ದಾರೆ. ಈ ಸಹೋದರತ್ವವನ್ನು ಸಂಭಾಲ್‌ನಲ್ಲಿ ಶೂಟ್ ಮಾಡಲು ಯೋಜಿತ ಸಂಚು ಈಗ ನಡೆದಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ನವೆಂಬರ್ 24 ರಂದು, ಸಂಭಾಲ್‌ನ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಮುಸ್ಲಿಮರ ಸಾವಿಗೀಡಾಗಿದ್ದರು. ಘಟನೆಯ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ಮತ್ತು ಹಲವಾರು ವಾಹನಗಳನ್ನು ಸುಟ್ಟುಹಾಕಲಾಯಿತು ಅಥವಾ ಹಾನಿಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಮತ್ತು ಅದರ ಹಿತೈಷಿಗಳು ಸಂಭಾಲ್‌ನಲ್ಲಿ ನಡೆಸುತ್ತಿರುವ ಉತ್ಖನನವು ದೇಶದ ಸಹೋದರತ್ವಕ್ಕೆ ವಿರುದ್ಧವಾಗಿದೆ. ಇದು ನಮ್ಮ ಗಂಗಾ-ಜಮುನಾ ತೆಹಜೀಬ್ ಅನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಯೋಜಿತ ಪಿತೂರಿಯಾಗಿದ್ದು, ಏಕೆಂದರೆ ಉತ್ತರ ಪ್ರದೇಶದ ಚುನಾವಣೆಯನ್ನು 13 ರಂದು ನಡೆಸಬೇಕಾಗಿತ್ತು, ಅದು 20 ಕ್ಕೆ ಬದಲಾಗಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪುರಾತನ ಹಿಂದೂ ದೇವಾಲಯ ಇದೆಯೆ ಎಂದು ವಕೀಲ ಕಮಿಷನರ್ ಮೂಲಕ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಆದೇಶಿಸಿದ್ದ ಸಂಭಾಲ್ ನ್ಯಾಯಾಲಯದ ತೀರ್ಪಿನ ವಿರುದ್ಧ ಶಾಹಿ ಜಾಮಾ ಮಸೀದಿಯ ಉಸ್ತುವಾರಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಕ್ಕೆ ಮೊದಲು ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಆರಾಧನಾ ಸ್ಥಳಗಳ ಕಾಯಿದೆ (1991) ಜಾರಿಯಲ್ಲಿದ್ದರೂ ಮಸೀದಿಯ ಸಮೀಕ್ಷೆಗೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ಲೋಕಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಸರ್ಕಾರಕ್ಕೆ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ನಾವು ಸುಮ್ಮನೆ ಹೇಳುತ್ತಿಲ್ಲ. ಆರಾಧನಾ ಸ್ಥಳಗಳ ಕಾಯಿದೆ ಇರುವಾಗ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ವಿರುದ್ಧ ಅರ್ಜಿ ಸಲ್ಲಿಸಲಾಯಿತು. ನವೆಂಬರ್ 19 ರಂದು, ಅದೇ ದಿನ ಇನ್ನೊಂದು ಕಡೆ ಅರ್ಜಿ ಸಲ್ಲಿಸುವ ಮೊದಲೇ ಮಸೀದಿಯ ಸಮೀಕ್ಷೆಯ ಆದೇಶವನ್ನು ರವಾನಿಸಲಾಯಿತು. ಅದಾಗಿ ಸಂಭಾಲ್ ಜಿಲ್ಲಾಡಳಿತ ಮತ್ತು ಪೊಲೀಸರು ಎರಡೇ ಎರಡು ಗಂಟೆಗಳ ಅಂತರದಲ್ಲಿ ಸಮೀಕ್ಷೆಗೆ ಆಗಮಿಸಿರುವುದು ಆಘಾತಕಾರಿಯಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

“ಜಾಮಾ ಮಸೀದಿ ಸಮಿತಿ ಮತ್ತು ಇತರ ಮಧ್ಯಸ್ಥಗಾರರು ಸಮೀಕ್ಷೆಗೆ ಸಹಕರಿಸಿದ್ದಾರೆ. 2.5 ಗಂಟೆಗಳ ನಂತರ ಸರ್ವೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಆದರೆ ನವೆಂಬರ್ 22 ರಂದು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಜನರು ಬಂದಾಗ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ಒಳಗೆ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಜನರು ಶಾಂತರಾಗಿ ಪ್ರಾರ್ಥನೆ ಸಲ್ಲಿಸಿದರು. ನವೆಂಬರ್ 29 ರಂದು ನ್ಯಾಯಾಲಯದ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಮತ್ತು ಶಾಹಿ ಜಾಮಾ ಮಸೀದಿ ಸಮಿತಿಯು ಪ್ರಕರಣಕ್ಕೆ ಸಿದ್ಧತೆ ನಡೆಸಿದೆ. ಆದಾಗ್ಯೂ, ನವೆಂಬರ್ 23 ರ ರಾತ್ರಿ, ಮರುದಿನ [ನವೆಂಬರ್ 24] ಮತ್ತೊಂದು ಸಮೀಕ್ಷೆ ನಡೆಸಲಾಗುವುದು ಎಂದು ಆಡಳಿತ ಹೇಳಿದೆ.”

“ಒಂದು ಸಮೀಕ್ಷೆ ಪೂರ್ಣಗೊಂಡಿರುವಾಗ ಮತ್ತೊಂದು ಸಮೀಕ್ಷೆ ಏಕೆ ಬೇಕು ಎಂದು ಮಸೀದಿ ಸಮಿತಿ ಕೇಳಿದ್ದು, ಎರಡನೆಯದನ್ನು ಮಾಡಬೇಕಾದರೆ ನ್ಯಾಯಾಲಯದ ಆದೇಶವನ್ನು ಪಡೆಯಬೇಕು ಎಂದು ಹೇಳಿತ್ತು. ಆದರೆ ಜಿಲ್ಲಾಡಳಿತ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸರ್ವಾಧಿಕಾರಿ ಧೋರಣೆ ಅನುಸರಿಸಿ ಮರುದಿನವೇ ಮಸೀದಿಗೆ ಬಂದಿತ್ತು. ಅವರನ್ನು ಮತ್ತೆ ಮಸೀದಿ ಸಮಿತಿ ಸದಸ್ಯರು ಸಮೀಕ್ಷೆಗಾಗಿ ಒಳಗೆ ಕರೆದೊಯ್ದರು. ಸಮೀಕ್ಷೆ ನಡೆಸಿದ ನಂತರ, ಸಮೀಕ್ಷೆಯ ಕಾರಣವನ್ನು ತಿಳಿಯಲು ಜನರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ” ಎಂದು ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

“ಆದರೆ ಸುಮಾರು 1.5 ಗಂಟೆಗಳ ನಂತರ ಜನರು ಅಲ್ಲಿ ಜಮಾಯಿಸಿದರು ಮತ್ತು ಸಮೀಕ್ಷೆಯ ಕಾರಣವನ್ನು ತಿಳಿಯಲು ಪ್ರಯತ್ನಿಸಿದರು. ಅಲ್ಲಿ ನೆರೆದಿದ್ದ ಜನರನ್ನು ಸರ್ಕಲ್ ಆಫೀಸರ್ ನಿಂದಿಸಿ ಲಾಠಿ ಚಾರ್ಜ್ ಮಾಡಿ ಗಾಯಗೊಳಿಸಿದ್ದಾರೆ. ಇದನ್ನು ವಿರೋಧಿಸಿ ಕೆಲವರು ಕಲ್ಲು ತೂರಾಟ ನಡೆಸಿದರು, ನಂತರ ಪೊಲೀಸರು ತಮ್ಮ ಸರ್ಕಾರಿ ಮತ್ತು ಖಾಸಗಿ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು – ಅದರ ವೀಡಿಯೊ ರೆಕಾರ್ಡಿಂಗ್‌ಗಳಿವೆ – ಮತ್ತು ಇದರಿಂದಾಗಿ ಹತ್ತಾರು ಜನರು ಗಾಯಗೊಂಡರು. ಅಗತ್ಯ ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟ 5 ಅಮಾಯಕರು ಕೊಂದರು. ಸಂಭಾಲ್‌ನಲ್ಲಿ ಶಾಂತಿ ಕದಡಲು ಅರ್ಜಿ ಸಲ್ಲಿಸಿದವರಷ್ಟೇ ಪೊಲೀಸರು ಮತ್ತು ಜಿಲ್ಲಾಡಳಿತ ಕಾರಣ. ಅವರನ್ನು ಅಮಾನತುಗೊಳಿಸಬೇಕು ಮತ್ತು ಪೊಲೀಸರು ಮತ್ತು ಜಿಲ್ಲಾಡಳಿತದ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು. ಹೀಗೆ ಮಾಡಿದರೆ ಜನರಿಗೆ ನ್ಯಾಯ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಕಾನೂನುಬಾಹಿರ ಘಟನೆಗಳು ನಡೆಯುವುದಿಲ್ಲ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಮಂಗಳವಾರ ಸದನದ ಕಲಾಪ ಆರಂಭವಾದಾಗ ಪ್ರತಿಪಕ್ಷಗಳು ಸಂಭಾಲ್ ಕುರಿತು ಚರ್ಚೆಗೆ ಒತ್ತಾಯಿಸಿದ ನಂತರ ಶೂನ್ಯ ವೇಳೆಯಲ್ಲಿ ಅಖಿಲೇಶ್ ಯಾದವ್ ಈ ಭಾಷಣ ಮಾಡಿದ್ದಾರೆ. ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಪ್ರತಿಪಕ್ಷ ಸದಸ್ಯರು ಸಂಭಾಲ್ ಕುರಿತು ಚರ್ಚೆ ನಡೆಸುವಂತೆ ಘೋಷಣೆ ಕೂಗಿದರು. ಆದರೆ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಪ್ರತಿಪಕ್ಷದ ಸದಸ್ಯರು ಕೆಲಕಾಲ ಸಭಾತ್ಯಾಗ ಮಾಡಿದರೂ, ಪ್ರಶ್ನೋತ್ತರ ಅವಧಿಯ ಕೆಲ ಹೊತ್ತಿನಲ್ಲೇ ಸದನಕ್ಕೆ ಮರಳಿದರು.

ಸಂಭಾಲ್ ಘಟನೆಯನ್ನು ಅಖಿಲೇಶ್ ಯಾದವ್ ಮಾತ್ರವಲ್ಲದೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಸದ ಇ.ಟಿ. ಮೊಹಮ್ಮದ್ ಬಶೀರ್, ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ವೇಳೆ ಅವರು, 1991 ರ ಪೂಜಾ ಸ್ಥಳಗಳ ಕಾಯಿದೆಯು ಈಗ ಬೆದರಿಕೆಯಲ್ಲಿದೆ ಎಂದು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

“ಆ ಪ್ರಮುಖ ಕಾನೂನು (ಆರಾಧನೆಯ ಸ್ಥಳಗಳ ಕಾಯಿದೆ) ಈಗ ಜೀವನ್ಮರಣದ ನಡುವೆ ಇದೆ. ಸಂಭಾಲ್ ಮಸೀದಿ ಪ್ರಕರಣದಲ್ಲಿ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದೇಶದಲ್ಲಿ ಶಾಂತಿಯುತ ಸಹಬಾಳ್ವೆ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿರುವುದು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತತೆಯನ್ನು ಹೊಡೆದುಹಾಕಲು ಈ ರೀತಿಯ ಕೆಲಸಗಳು ನಡೆಯುತ್ತಿವೆ” ಎಂದು ಬಶೀರ್ ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸದ ನಂತರದ ಹಿಂಸಾಚಾರವನ್ನು ಉಲ್ಲೇಖಿಸಿದ ಬಶೀರ್, “ಒಂದು ಬಾಬರಿ ಮಸೀದಿಯ ಬದಲಿಗೆ, ಈಗ ಈ ರೀತಿಯ ದುಷ್ಟರು ಹೆಚ್ಚು ಹೆಚ್ಚು ಬಾಬರಿ ಮಸೀದಿಯ ಪರಿಸ್ಥಿತಿಯನ್ನು ನಿರ್ಮಿಸಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಸಮಾಜವಾದಿ ಸಂಸದ ರಾಮ್ ಗೋಪಾಲ್ ಯಾದವ್ ಅವರು ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಮತದಾನ ಮಾಡದಂತೆ ತಡೆಹಿಡಿಯಲಾಗಿದೆ ಎಂದು ಆರೋಪದ ಗಮನ ಬೇರೆಡೆ ಸೆಳೆಯಲು ಸಂಭಾಲ್ ಮಸೀದಿಯಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಮೊನ್ನೆ ನಡೆದ ಚುನಾವಣೆಗಳಲ್ಲಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪೊಲೀಸರು ಯಾರಿಗೂ ಮತದಾನ ಮಾಡಲು ಅವಕಾಶ ನೀಡಲಿಲ್ಲ. ಅವರು ಬಲವಂತವಾಗಿ ಚುನಾವಣೆಯನ್ನು ಕೈಗೆತ್ತಿಕೊಂಡರು ಎಂದು ನಾನು ಮತ್ತು ಅನೇಕ ಜನರು ನಂಬಿದ್ದೇವೆ. ಅದರಿಂದ ಗಮನ ಬೇರೆಡೆ ಸೆಳೆಯಲು ಇದೆಲ್ಲವನ್ನೂ ಯೋಜನಾಬದ್ಧವಾಗಿ ಮಾಡಲಾಗಿದೆ” ಎಂದರು. ಈ ವೇಳೆ ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಗೋಪಾಲ್ ಯಾದವ್ ಅವರನ್ನು ಅಡ್ಡಿಪಡಿಸಿ, ಚುನಾವಣೆಯ ಕುರಿತು ಅವರ ಹೇಳಿಕೆಗಳು ದಾಖಲೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...