Homeಮುಖಪುಟ'ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ' - ಸಂಸತ್ತಿನಲ್ಲಿ ಅಖಿಲೇಶ್ ಯಾದವ್

‘ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ’ – ಸಂಸತ್ತಿನಲ್ಲಿ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಐದು ಜನರ ಸಾವಿಗೆ ಕಾರಣವಾದ ಹಿಂಸಾಚಾರದ ವಿಚಾರವು ಮಂಗಳವಾರ ಸಂಸತ್ತಿನಲ್ಲಿ ಪ್ರತಿಧ್ವನಿಸಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಅಖಿಲೇಶ್ ಯಾದವ್ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಹಿಂಸಾಚಾರವನ್ನು “ಯೋಜಿತ ಪಿತೂರಿ” ಎಂದು ಕರೆದಿರುವ ಅಖಿಲೇಶ್ ಅವರು, ಪ್ರದೇಶದಲ್ಲಿ ಸಹೋದರತ್ವದ ಮೇಲೆ “ಗುಂಡು ಹಾರಿಸುವ” ಗುರಿಯನ್ನು ಈ ಪಿತೂರಿ ಹೊಂದಿತ್ತು ಎಂದು ಹೇಳಿದ್ದಾರೆ. ಇಂತಹ ಮಸೀದಿ ಸಮೀಕ್ಷೆಗಳ ಮೂಲಕ ಬಿಜೆಪಿಯು ದೇಶದ “ಗಂಗಾ-ಜಮುನಾ ತೆಹಜೀಬ್” (ಧರ್ಮ ಸಮನ್ವಯ ಸಂಸ್ಕೃತಿ) ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಂಭಾಲ್ ಹಿಂಸಾಚಾರ

“ಸಂಭಾಲ್ ತನ್ನ ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ವರ್ಷಗಳಿಂದ ಜನರು ಈ ಸಹೋದರತ್ವದೊಂದಿಗೆ ವಾಸಿಸುತ್ತಿದ್ದಾರೆ. ಈ ಸಹೋದರತ್ವವನ್ನು ಸಂಭಾಲ್‌ನಲ್ಲಿ ಶೂಟ್ ಮಾಡಲು ಯೋಜಿತ ಸಂಚು ಈಗ ನಡೆದಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ನವೆಂಬರ್ 24 ರಂದು, ಸಂಭಾಲ್‌ನ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಮುಸ್ಲಿಮರ ಸಾವಿಗೀಡಾಗಿದ್ದರು. ಘಟನೆಯ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ಮತ್ತು ಹಲವಾರು ವಾಹನಗಳನ್ನು ಸುಟ್ಟುಹಾಕಲಾಯಿತು ಅಥವಾ ಹಾನಿಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಮತ್ತು ಅದರ ಹಿತೈಷಿಗಳು ಸಂಭಾಲ್‌ನಲ್ಲಿ ನಡೆಸುತ್ತಿರುವ ಉತ್ಖನನವು ದೇಶದ ಸಹೋದರತ್ವಕ್ಕೆ ವಿರುದ್ಧವಾಗಿದೆ. ಇದು ನಮ್ಮ ಗಂಗಾ-ಜಮುನಾ ತೆಹಜೀಬ್ ಅನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಯೋಜಿತ ಪಿತೂರಿಯಾಗಿದ್ದು, ಏಕೆಂದರೆ ಉತ್ತರ ಪ್ರದೇಶದ ಚುನಾವಣೆಯನ್ನು 13 ರಂದು ನಡೆಸಬೇಕಾಗಿತ್ತು, ಅದು 20 ಕ್ಕೆ ಬದಲಾಗಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪುರಾತನ ಹಿಂದೂ ದೇವಾಲಯ ಇದೆಯೆ ಎಂದು ವಕೀಲ ಕಮಿಷನರ್ ಮೂಲಕ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಆದೇಶಿಸಿದ್ದ ಸಂಭಾಲ್ ನ್ಯಾಯಾಲಯದ ತೀರ್ಪಿನ ವಿರುದ್ಧ ಶಾಹಿ ಜಾಮಾ ಮಸೀದಿಯ ಉಸ್ತುವಾರಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಕ್ಕೆ ಮೊದಲು ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಆರಾಧನಾ ಸ್ಥಳಗಳ ಕಾಯಿದೆ (1991) ಜಾರಿಯಲ್ಲಿದ್ದರೂ ಮಸೀದಿಯ ಸಮೀಕ್ಷೆಗೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ಲೋಕಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಸರ್ಕಾರಕ್ಕೆ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ನಾವು ಸುಮ್ಮನೆ ಹೇಳುತ್ತಿಲ್ಲ. ಆರಾಧನಾ ಸ್ಥಳಗಳ ಕಾಯಿದೆ ಇರುವಾಗ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ವಿರುದ್ಧ ಅರ್ಜಿ ಸಲ್ಲಿಸಲಾಯಿತು. ನವೆಂಬರ್ 19 ರಂದು, ಅದೇ ದಿನ ಇನ್ನೊಂದು ಕಡೆ ಅರ್ಜಿ ಸಲ್ಲಿಸುವ ಮೊದಲೇ ಮಸೀದಿಯ ಸಮೀಕ್ಷೆಯ ಆದೇಶವನ್ನು ರವಾನಿಸಲಾಯಿತು. ಅದಾಗಿ ಸಂಭಾಲ್ ಜಿಲ್ಲಾಡಳಿತ ಮತ್ತು ಪೊಲೀಸರು ಎರಡೇ ಎರಡು ಗಂಟೆಗಳ ಅಂತರದಲ್ಲಿ ಸಮೀಕ್ಷೆಗೆ ಆಗಮಿಸಿರುವುದು ಆಘಾತಕಾರಿಯಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

“ಜಾಮಾ ಮಸೀದಿ ಸಮಿತಿ ಮತ್ತು ಇತರ ಮಧ್ಯಸ್ಥಗಾರರು ಸಮೀಕ್ಷೆಗೆ ಸಹಕರಿಸಿದ್ದಾರೆ. 2.5 ಗಂಟೆಗಳ ನಂತರ ಸರ್ವೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಆದರೆ ನವೆಂಬರ್ 22 ರಂದು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಜನರು ಬಂದಾಗ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ಒಳಗೆ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಜನರು ಶಾಂತರಾಗಿ ಪ್ರಾರ್ಥನೆ ಸಲ್ಲಿಸಿದರು. ನವೆಂಬರ್ 29 ರಂದು ನ್ಯಾಯಾಲಯದ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಮತ್ತು ಶಾಹಿ ಜಾಮಾ ಮಸೀದಿ ಸಮಿತಿಯು ಪ್ರಕರಣಕ್ಕೆ ಸಿದ್ಧತೆ ನಡೆಸಿದೆ. ಆದಾಗ್ಯೂ, ನವೆಂಬರ್ 23 ರ ರಾತ್ರಿ, ಮರುದಿನ [ನವೆಂಬರ್ 24] ಮತ್ತೊಂದು ಸಮೀಕ್ಷೆ ನಡೆಸಲಾಗುವುದು ಎಂದು ಆಡಳಿತ ಹೇಳಿದೆ.”

“ಒಂದು ಸಮೀಕ್ಷೆ ಪೂರ್ಣಗೊಂಡಿರುವಾಗ ಮತ್ತೊಂದು ಸಮೀಕ್ಷೆ ಏಕೆ ಬೇಕು ಎಂದು ಮಸೀದಿ ಸಮಿತಿ ಕೇಳಿದ್ದು, ಎರಡನೆಯದನ್ನು ಮಾಡಬೇಕಾದರೆ ನ್ಯಾಯಾಲಯದ ಆದೇಶವನ್ನು ಪಡೆಯಬೇಕು ಎಂದು ಹೇಳಿತ್ತು. ಆದರೆ ಜಿಲ್ಲಾಡಳಿತ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸರ್ವಾಧಿಕಾರಿ ಧೋರಣೆ ಅನುಸರಿಸಿ ಮರುದಿನವೇ ಮಸೀದಿಗೆ ಬಂದಿತ್ತು. ಅವರನ್ನು ಮತ್ತೆ ಮಸೀದಿ ಸಮಿತಿ ಸದಸ್ಯರು ಸಮೀಕ್ಷೆಗಾಗಿ ಒಳಗೆ ಕರೆದೊಯ್ದರು. ಸಮೀಕ್ಷೆ ನಡೆಸಿದ ನಂತರ, ಸಮೀಕ್ಷೆಯ ಕಾರಣವನ್ನು ತಿಳಿಯಲು ಜನರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ” ಎಂದು ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

“ಆದರೆ ಸುಮಾರು 1.5 ಗಂಟೆಗಳ ನಂತರ ಜನರು ಅಲ್ಲಿ ಜಮಾಯಿಸಿದರು ಮತ್ತು ಸಮೀಕ್ಷೆಯ ಕಾರಣವನ್ನು ತಿಳಿಯಲು ಪ್ರಯತ್ನಿಸಿದರು. ಅಲ್ಲಿ ನೆರೆದಿದ್ದ ಜನರನ್ನು ಸರ್ಕಲ್ ಆಫೀಸರ್ ನಿಂದಿಸಿ ಲಾಠಿ ಚಾರ್ಜ್ ಮಾಡಿ ಗಾಯಗೊಳಿಸಿದ್ದಾರೆ. ಇದನ್ನು ವಿರೋಧಿಸಿ ಕೆಲವರು ಕಲ್ಲು ತೂರಾಟ ನಡೆಸಿದರು, ನಂತರ ಪೊಲೀಸರು ತಮ್ಮ ಸರ್ಕಾರಿ ಮತ್ತು ಖಾಸಗಿ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು – ಅದರ ವೀಡಿಯೊ ರೆಕಾರ್ಡಿಂಗ್‌ಗಳಿವೆ – ಮತ್ತು ಇದರಿಂದಾಗಿ ಹತ್ತಾರು ಜನರು ಗಾಯಗೊಂಡರು. ಅಗತ್ಯ ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟ 5 ಅಮಾಯಕರು ಕೊಂದರು. ಸಂಭಾಲ್‌ನಲ್ಲಿ ಶಾಂತಿ ಕದಡಲು ಅರ್ಜಿ ಸಲ್ಲಿಸಿದವರಷ್ಟೇ ಪೊಲೀಸರು ಮತ್ತು ಜಿಲ್ಲಾಡಳಿತ ಕಾರಣ. ಅವರನ್ನು ಅಮಾನತುಗೊಳಿಸಬೇಕು ಮತ್ತು ಪೊಲೀಸರು ಮತ್ತು ಜಿಲ್ಲಾಡಳಿತದ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು. ಹೀಗೆ ಮಾಡಿದರೆ ಜನರಿಗೆ ನ್ಯಾಯ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಕಾನೂನುಬಾಹಿರ ಘಟನೆಗಳು ನಡೆಯುವುದಿಲ್ಲ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಮಂಗಳವಾರ ಸದನದ ಕಲಾಪ ಆರಂಭವಾದಾಗ ಪ್ರತಿಪಕ್ಷಗಳು ಸಂಭಾಲ್ ಕುರಿತು ಚರ್ಚೆಗೆ ಒತ್ತಾಯಿಸಿದ ನಂತರ ಶೂನ್ಯ ವೇಳೆಯಲ್ಲಿ ಅಖಿಲೇಶ್ ಯಾದವ್ ಈ ಭಾಷಣ ಮಾಡಿದ್ದಾರೆ. ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಪ್ರತಿಪಕ್ಷ ಸದಸ್ಯರು ಸಂಭಾಲ್ ಕುರಿತು ಚರ್ಚೆ ನಡೆಸುವಂತೆ ಘೋಷಣೆ ಕೂಗಿದರು. ಆದರೆ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಪ್ರತಿಪಕ್ಷದ ಸದಸ್ಯರು ಕೆಲಕಾಲ ಸಭಾತ್ಯಾಗ ಮಾಡಿದರೂ, ಪ್ರಶ್ನೋತ್ತರ ಅವಧಿಯ ಕೆಲ ಹೊತ್ತಿನಲ್ಲೇ ಸದನಕ್ಕೆ ಮರಳಿದರು.

ಸಂಭಾಲ್ ಘಟನೆಯನ್ನು ಅಖಿಲೇಶ್ ಯಾದವ್ ಮಾತ್ರವಲ್ಲದೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಸದ ಇ.ಟಿ. ಮೊಹಮ್ಮದ್ ಬಶೀರ್, ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ವೇಳೆ ಅವರು, 1991 ರ ಪೂಜಾ ಸ್ಥಳಗಳ ಕಾಯಿದೆಯು ಈಗ ಬೆದರಿಕೆಯಲ್ಲಿದೆ ಎಂದು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

“ಆ ಪ್ರಮುಖ ಕಾನೂನು (ಆರಾಧನೆಯ ಸ್ಥಳಗಳ ಕಾಯಿದೆ) ಈಗ ಜೀವನ್ಮರಣದ ನಡುವೆ ಇದೆ. ಸಂಭಾಲ್ ಮಸೀದಿ ಪ್ರಕರಣದಲ್ಲಿ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದೇಶದಲ್ಲಿ ಶಾಂತಿಯುತ ಸಹಬಾಳ್ವೆ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿರುವುದು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತತೆಯನ್ನು ಹೊಡೆದುಹಾಕಲು ಈ ರೀತಿಯ ಕೆಲಸಗಳು ನಡೆಯುತ್ತಿವೆ” ಎಂದು ಬಶೀರ್ ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸದ ನಂತರದ ಹಿಂಸಾಚಾರವನ್ನು ಉಲ್ಲೇಖಿಸಿದ ಬಶೀರ್, “ಒಂದು ಬಾಬರಿ ಮಸೀದಿಯ ಬದಲಿಗೆ, ಈಗ ಈ ರೀತಿಯ ದುಷ್ಟರು ಹೆಚ್ಚು ಹೆಚ್ಚು ಬಾಬರಿ ಮಸೀದಿಯ ಪರಿಸ್ಥಿತಿಯನ್ನು ನಿರ್ಮಿಸಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಸಮಾಜವಾದಿ ಸಂಸದ ರಾಮ್ ಗೋಪಾಲ್ ಯಾದವ್ ಅವರು ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಮತದಾನ ಮಾಡದಂತೆ ತಡೆಹಿಡಿಯಲಾಗಿದೆ ಎಂದು ಆರೋಪದ ಗಮನ ಬೇರೆಡೆ ಸೆಳೆಯಲು ಸಂಭಾಲ್ ಮಸೀದಿಯಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಮೊನ್ನೆ ನಡೆದ ಚುನಾವಣೆಗಳಲ್ಲಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪೊಲೀಸರು ಯಾರಿಗೂ ಮತದಾನ ಮಾಡಲು ಅವಕಾಶ ನೀಡಲಿಲ್ಲ. ಅವರು ಬಲವಂತವಾಗಿ ಚುನಾವಣೆಯನ್ನು ಕೈಗೆತ್ತಿಕೊಂಡರು ಎಂದು ನಾನು ಮತ್ತು ಅನೇಕ ಜನರು ನಂಬಿದ್ದೇವೆ. ಅದರಿಂದ ಗಮನ ಬೇರೆಡೆ ಸೆಳೆಯಲು ಇದೆಲ್ಲವನ್ನೂ ಯೋಜನಾಬದ್ಧವಾಗಿ ಮಾಡಲಾಗಿದೆ” ಎಂದರು. ಈ ವೇಳೆ ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಗೋಪಾಲ್ ಯಾದವ್ ಅವರನ್ನು ಅಡ್ಡಿಪಡಿಸಿ, ಚುನಾವಣೆಯ ಕುರಿತು ಅವರ ಹೇಳಿಕೆಗಳು ದಾಖಲೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...