Homeಮುಖಪುಟ'ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ' - ಸಂಸತ್ತಿನಲ್ಲಿ ಅಖಿಲೇಶ್ ಯಾದವ್

‘ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ’ – ಸಂಸತ್ತಿನಲ್ಲಿ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಐದು ಜನರ ಸಾವಿಗೆ ಕಾರಣವಾದ ಹಿಂಸಾಚಾರದ ವಿಚಾರವು ಮಂಗಳವಾರ ಸಂಸತ್ತಿನಲ್ಲಿ ಪ್ರತಿಧ್ವನಿಸಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಅಖಿಲೇಶ್ ಯಾದವ್ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಹಿಂಸಾಚಾರವನ್ನು “ಯೋಜಿತ ಪಿತೂರಿ” ಎಂದು ಕರೆದಿರುವ ಅಖಿಲೇಶ್ ಅವರು, ಪ್ರದೇಶದಲ್ಲಿ ಸಹೋದರತ್ವದ ಮೇಲೆ “ಗುಂಡು ಹಾರಿಸುವ” ಗುರಿಯನ್ನು ಈ ಪಿತೂರಿ ಹೊಂದಿತ್ತು ಎಂದು ಹೇಳಿದ್ದಾರೆ. ಇಂತಹ ಮಸೀದಿ ಸಮೀಕ್ಷೆಗಳ ಮೂಲಕ ಬಿಜೆಪಿಯು ದೇಶದ “ಗಂಗಾ-ಜಮುನಾ ತೆಹಜೀಬ್” (ಧರ್ಮ ಸಮನ್ವಯ ಸಂಸ್ಕೃತಿ) ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಂಭಾಲ್ ಹಿಂಸಾಚಾರ

“ಸಂಭಾಲ್ ತನ್ನ ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ವರ್ಷಗಳಿಂದ ಜನರು ಈ ಸಹೋದರತ್ವದೊಂದಿಗೆ ವಾಸಿಸುತ್ತಿದ್ದಾರೆ. ಈ ಸಹೋದರತ್ವವನ್ನು ಸಂಭಾಲ್‌ನಲ್ಲಿ ಶೂಟ್ ಮಾಡಲು ಯೋಜಿತ ಸಂಚು ಈಗ ನಡೆದಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ನವೆಂಬರ್ 24 ರಂದು, ಸಂಭಾಲ್‌ನ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಮುಸ್ಲಿಮರ ಸಾವಿಗೀಡಾಗಿದ್ದರು. ಘಟನೆಯ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ಮತ್ತು ಹಲವಾರು ವಾಹನಗಳನ್ನು ಸುಟ್ಟುಹಾಕಲಾಯಿತು ಅಥವಾ ಹಾನಿಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಮತ್ತು ಅದರ ಹಿತೈಷಿಗಳು ಸಂಭಾಲ್‌ನಲ್ಲಿ ನಡೆಸುತ್ತಿರುವ ಉತ್ಖನನವು ದೇಶದ ಸಹೋದರತ್ವಕ್ಕೆ ವಿರುದ್ಧವಾಗಿದೆ. ಇದು ನಮ್ಮ ಗಂಗಾ-ಜಮುನಾ ತೆಹಜೀಬ್ ಅನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಯೋಜಿತ ಪಿತೂರಿಯಾಗಿದ್ದು, ಏಕೆಂದರೆ ಉತ್ತರ ಪ್ರದೇಶದ ಚುನಾವಣೆಯನ್ನು 13 ರಂದು ನಡೆಸಬೇಕಾಗಿತ್ತು, ಅದು 20 ಕ್ಕೆ ಬದಲಾಗಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪುರಾತನ ಹಿಂದೂ ದೇವಾಲಯ ಇದೆಯೆ ಎಂದು ವಕೀಲ ಕಮಿಷನರ್ ಮೂಲಕ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಆದೇಶಿಸಿದ್ದ ಸಂಭಾಲ್ ನ್ಯಾಯಾಲಯದ ತೀರ್ಪಿನ ವಿರುದ್ಧ ಶಾಹಿ ಜಾಮಾ ಮಸೀದಿಯ ಉಸ್ತುವಾರಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಕ್ಕೆ ಮೊದಲು ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಆರಾಧನಾ ಸ್ಥಳಗಳ ಕಾಯಿದೆ (1991) ಜಾರಿಯಲ್ಲಿದ್ದರೂ ಮಸೀದಿಯ ಸಮೀಕ್ಷೆಗೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ಲೋಕಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಸರ್ಕಾರಕ್ಕೆ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ನಾವು ಸುಮ್ಮನೆ ಹೇಳುತ್ತಿಲ್ಲ. ಆರಾಧನಾ ಸ್ಥಳಗಳ ಕಾಯಿದೆ ಇರುವಾಗ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ವಿರುದ್ಧ ಅರ್ಜಿ ಸಲ್ಲಿಸಲಾಯಿತು. ನವೆಂಬರ್ 19 ರಂದು, ಅದೇ ದಿನ ಇನ್ನೊಂದು ಕಡೆ ಅರ್ಜಿ ಸಲ್ಲಿಸುವ ಮೊದಲೇ ಮಸೀದಿಯ ಸಮೀಕ್ಷೆಯ ಆದೇಶವನ್ನು ರವಾನಿಸಲಾಯಿತು. ಅದಾಗಿ ಸಂಭಾಲ್ ಜಿಲ್ಲಾಡಳಿತ ಮತ್ತು ಪೊಲೀಸರು ಎರಡೇ ಎರಡು ಗಂಟೆಗಳ ಅಂತರದಲ್ಲಿ ಸಮೀಕ್ಷೆಗೆ ಆಗಮಿಸಿರುವುದು ಆಘಾತಕಾರಿಯಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

“ಜಾಮಾ ಮಸೀದಿ ಸಮಿತಿ ಮತ್ತು ಇತರ ಮಧ್ಯಸ್ಥಗಾರರು ಸಮೀಕ್ಷೆಗೆ ಸಹಕರಿಸಿದ್ದಾರೆ. 2.5 ಗಂಟೆಗಳ ನಂತರ ಸರ್ವೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಆದರೆ ನವೆಂಬರ್ 22 ರಂದು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಜನರು ಬಂದಾಗ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ಒಳಗೆ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಜನರು ಶಾಂತರಾಗಿ ಪ್ರಾರ್ಥನೆ ಸಲ್ಲಿಸಿದರು. ನವೆಂಬರ್ 29 ರಂದು ನ್ಯಾಯಾಲಯದ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಮತ್ತು ಶಾಹಿ ಜಾಮಾ ಮಸೀದಿ ಸಮಿತಿಯು ಪ್ರಕರಣಕ್ಕೆ ಸಿದ್ಧತೆ ನಡೆಸಿದೆ. ಆದಾಗ್ಯೂ, ನವೆಂಬರ್ 23 ರ ರಾತ್ರಿ, ಮರುದಿನ [ನವೆಂಬರ್ 24] ಮತ್ತೊಂದು ಸಮೀಕ್ಷೆ ನಡೆಸಲಾಗುವುದು ಎಂದು ಆಡಳಿತ ಹೇಳಿದೆ.”

“ಒಂದು ಸಮೀಕ್ಷೆ ಪೂರ್ಣಗೊಂಡಿರುವಾಗ ಮತ್ತೊಂದು ಸಮೀಕ್ಷೆ ಏಕೆ ಬೇಕು ಎಂದು ಮಸೀದಿ ಸಮಿತಿ ಕೇಳಿದ್ದು, ಎರಡನೆಯದನ್ನು ಮಾಡಬೇಕಾದರೆ ನ್ಯಾಯಾಲಯದ ಆದೇಶವನ್ನು ಪಡೆಯಬೇಕು ಎಂದು ಹೇಳಿತ್ತು. ಆದರೆ ಜಿಲ್ಲಾಡಳಿತ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸರ್ವಾಧಿಕಾರಿ ಧೋರಣೆ ಅನುಸರಿಸಿ ಮರುದಿನವೇ ಮಸೀದಿಗೆ ಬಂದಿತ್ತು. ಅವರನ್ನು ಮತ್ತೆ ಮಸೀದಿ ಸಮಿತಿ ಸದಸ್ಯರು ಸಮೀಕ್ಷೆಗಾಗಿ ಒಳಗೆ ಕರೆದೊಯ್ದರು. ಸಮೀಕ್ಷೆ ನಡೆಸಿದ ನಂತರ, ಸಮೀಕ್ಷೆಯ ಕಾರಣವನ್ನು ತಿಳಿಯಲು ಜನರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ” ಎಂದು ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

“ಆದರೆ ಸುಮಾರು 1.5 ಗಂಟೆಗಳ ನಂತರ ಜನರು ಅಲ್ಲಿ ಜಮಾಯಿಸಿದರು ಮತ್ತು ಸಮೀಕ್ಷೆಯ ಕಾರಣವನ್ನು ತಿಳಿಯಲು ಪ್ರಯತ್ನಿಸಿದರು. ಅಲ್ಲಿ ನೆರೆದಿದ್ದ ಜನರನ್ನು ಸರ್ಕಲ್ ಆಫೀಸರ್ ನಿಂದಿಸಿ ಲಾಠಿ ಚಾರ್ಜ್ ಮಾಡಿ ಗಾಯಗೊಳಿಸಿದ್ದಾರೆ. ಇದನ್ನು ವಿರೋಧಿಸಿ ಕೆಲವರು ಕಲ್ಲು ತೂರಾಟ ನಡೆಸಿದರು, ನಂತರ ಪೊಲೀಸರು ತಮ್ಮ ಸರ್ಕಾರಿ ಮತ್ತು ಖಾಸಗಿ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು – ಅದರ ವೀಡಿಯೊ ರೆಕಾರ್ಡಿಂಗ್‌ಗಳಿವೆ – ಮತ್ತು ಇದರಿಂದಾಗಿ ಹತ್ತಾರು ಜನರು ಗಾಯಗೊಂಡರು. ಅಗತ್ಯ ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟ 5 ಅಮಾಯಕರು ಕೊಂದರು. ಸಂಭಾಲ್‌ನಲ್ಲಿ ಶಾಂತಿ ಕದಡಲು ಅರ್ಜಿ ಸಲ್ಲಿಸಿದವರಷ್ಟೇ ಪೊಲೀಸರು ಮತ್ತು ಜಿಲ್ಲಾಡಳಿತ ಕಾರಣ. ಅವರನ್ನು ಅಮಾನತುಗೊಳಿಸಬೇಕು ಮತ್ತು ಪೊಲೀಸರು ಮತ್ತು ಜಿಲ್ಲಾಡಳಿತದ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು. ಹೀಗೆ ಮಾಡಿದರೆ ಜನರಿಗೆ ನ್ಯಾಯ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಕಾನೂನುಬಾಹಿರ ಘಟನೆಗಳು ನಡೆಯುವುದಿಲ್ಲ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಮಂಗಳವಾರ ಸದನದ ಕಲಾಪ ಆರಂಭವಾದಾಗ ಪ್ರತಿಪಕ್ಷಗಳು ಸಂಭಾಲ್ ಕುರಿತು ಚರ್ಚೆಗೆ ಒತ್ತಾಯಿಸಿದ ನಂತರ ಶೂನ್ಯ ವೇಳೆಯಲ್ಲಿ ಅಖಿಲೇಶ್ ಯಾದವ್ ಈ ಭಾಷಣ ಮಾಡಿದ್ದಾರೆ. ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಪ್ರತಿಪಕ್ಷ ಸದಸ್ಯರು ಸಂಭಾಲ್ ಕುರಿತು ಚರ್ಚೆ ನಡೆಸುವಂತೆ ಘೋಷಣೆ ಕೂಗಿದರು. ಆದರೆ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಪ್ರತಿಪಕ್ಷದ ಸದಸ್ಯರು ಕೆಲಕಾಲ ಸಭಾತ್ಯಾಗ ಮಾಡಿದರೂ, ಪ್ರಶ್ನೋತ್ತರ ಅವಧಿಯ ಕೆಲ ಹೊತ್ತಿನಲ್ಲೇ ಸದನಕ್ಕೆ ಮರಳಿದರು.

ಸಂಭಾಲ್ ಘಟನೆಯನ್ನು ಅಖಿಲೇಶ್ ಯಾದವ್ ಮಾತ್ರವಲ್ಲದೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಸದ ಇ.ಟಿ. ಮೊಹಮ್ಮದ್ ಬಶೀರ್, ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ವೇಳೆ ಅವರು, 1991 ರ ಪೂಜಾ ಸ್ಥಳಗಳ ಕಾಯಿದೆಯು ಈಗ ಬೆದರಿಕೆಯಲ್ಲಿದೆ ಎಂದು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

“ಆ ಪ್ರಮುಖ ಕಾನೂನು (ಆರಾಧನೆಯ ಸ್ಥಳಗಳ ಕಾಯಿದೆ) ಈಗ ಜೀವನ್ಮರಣದ ನಡುವೆ ಇದೆ. ಸಂಭಾಲ್ ಮಸೀದಿ ಪ್ರಕರಣದಲ್ಲಿ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದೇಶದಲ್ಲಿ ಶಾಂತಿಯುತ ಸಹಬಾಳ್ವೆ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿರುವುದು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತತೆಯನ್ನು ಹೊಡೆದುಹಾಕಲು ಈ ರೀತಿಯ ಕೆಲಸಗಳು ನಡೆಯುತ್ತಿವೆ” ಎಂದು ಬಶೀರ್ ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸದ ನಂತರದ ಹಿಂಸಾಚಾರವನ್ನು ಉಲ್ಲೇಖಿಸಿದ ಬಶೀರ್, “ಒಂದು ಬಾಬರಿ ಮಸೀದಿಯ ಬದಲಿಗೆ, ಈಗ ಈ ರೀತಿಯ ದುಷ್ಟರು ಹೆಚ್ಚು ಹೆಚ್ಚು ಬಾಬರಿ ಮಸೀದಿಯ ಪರಿಸ್ಥಿತಿಯನ್ನು ನಿರ್ಮಿಸಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಸಮಾಜವಾದಿ ಸಂಸದ ರಾಮ್ ಗೋಪಾಲ್ ಯಾದವ್ ಅವರು ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಮತದಾನ ಮಾಡದಂತೆ ತಡೆಹಿಡಿಯಲಾಗಿದೆ ಎಂದು ಆರೋಪದ ಗಮನ ಬೇರೆಡೆ ಸೆಳೆಯಲು ಸಂಭಾಲ್ ಮಸೀದಿಯಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಮೊನ್ನೆ ನಡೆದ ಚುನಾವಣೆಗಳಲ್ಲಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪೊಲೀಸರು ಯಾರಿಗೂ ಮತದಾನ ಮಾಡಲು ಅವಕಾಶ ನೀಡಲಿಲ್ಲ. ಅವರು ಬಲವಂತವಾಗಿ ಚುನಾವಣೆಯನ್ನು ಕೈಗೆತ್ತಿಕೊಂಡರು ಎಂದು ನಾನು ಮತ್ತು ಅನೇಕ ಜನರು ನಂಬಿದ್ದೇವೆ. ಅದರಿಂದ ಗಮನ ಬೇರೆಡೆ ಸೆಳೆಯಲು ಇದೆಲ್ಲವನ್ನೂ ಯೋಜನಾಬದ್ಧವಾಗಿ ಮಾಡಲಾಗಿದೆ” ಎಂದರು. ಈ ವೇಳೆ ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಗೋಪಾಲ್ ಯಾದವ್ ಅವರನ್ನು ಅಡ್ಡಿಪಡಿಸಿ, ಚುನಾವಣೆಯ ಕುರಿತು ಅವರ ಹೇಳಿಕೆಗಳು ದಾಖಲೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...