Homeಮುಖಪುಟ'ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ' - ಸಂಸತ್ತಿನಲ್ಲಿ ಅಖಿಲೇಶ್ ಯಾದವ್

‘ಸಂಭಾಲ್ ಹಿಂಸಾಚಾರ ಬಿಜೆಪಿಯ ಯೋಜಿತ ಪಿತೂರಿ’ – ಸಂಸತ್ತಿನಲ್ಲಿ ಅಖಿಲೇಶ್ ಯಾದವ್

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಐದು ಜನರ ಸಾವಿಗೆ ಕಾರಣವಾದ ಹಿಂಸಾಚಾರದ ವಿಚಾರವು ಮಂಗಳವಾರ ಸಂಸತ್ತಿನಲ್ಲಿ ಪ್ರತಿಧ್ವನಿಸಿದ್ದು, ಸಮಾಜವಾದಿ ಪಕ್ಷದ (ಎಸ್‌ಪಿ) ಸಂಸದ ಅಖಿಲೇಶ್ ಯಾದವ್ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಹಿಂಸಾಚಾರವನ್ನು “ಯೋಜಿತ ಪಿತೂರಿ” ಎಂದು ಕರೆದಿರುವ ಅಖಿಲೇಶ್ ಅವರು, ಪ್ರದೇಶದಲ್ಲಿ ಸಹೋದರತ್ವದ ಮೇಲೆ “ಗುಂಡು ಹಾರಿಸುವ” ಗುರಿಯನ್ನು ಈ ಪಿತೂರಿ ಹೊಂದಿತ್ತು ಎಂದು ಹೇಳಿದ್ದಾರೆ. ಇಂತಹ ಮಸೀದಿ ಸಮೀಕ್ಷೆಗಳ ಮೂಲಕ ಬಿಜೆಪಿಯು ದೇಶದ “ಗಂಗಾ-ಜಮುನಾ ತೆಹಜೀಬ್” (ಧರ್ಮ ಸಮನ್ವಯ ಸಂಸ್ಕೃತಿ) ಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ. ಸಂಭಾಲ್ ಹಿಂಸಾಚಾರ

“ಸಂಭಾಲ್ ತನ್ನ ಸಹೋದರತ್ವಕ್ಕೆ ಹೆಸರುವಾಸಿಯಾಗಿದೆ. ವರ್ಷಗಳಿಂದ ಜನರು ಈ ಸಹೋದರತ್ವದೊಂದಿಗೆ ವಾಸಿಸುತ್ತಿದ್ದಾರೆ. ಈ ಸಹೋದರತ್ವವನ್ನು ಸಂಭಾಲ್‌ನಲ್ಲಿ ಶೂಟ್ ಮಾಡಲು ಯೋಜಿತ ಸಂಚು ಈಗ ನಡೆದಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ನವೆಂಬರ್ 24 ರಂದು, ಸಂಭಾಲ್‌ನ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಮುಸ್ಲಿಮರ ಸಾವಿಗೀಡಾಗಿದ್ದರು. ಘಟನೆಯ ವೇಳೆ ಹಲವಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು ಮತ್ತು ಹಲವಾರು ವಾಹನಗಳನ್ನು ಸುಟ್ಟುಹಾಕಲಾಯಿತು ಅಥವಾ ಹಾನಿಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಬಿಜೆಪಿ ಮತ್ತು ಅದರ ಹಿತೈಷಿಗಳು ಸಂಭಾಲ್‌ನಲ್ಲಿ ನಡೆಸುತ್ತಿರುವ ಉತ್ಖನನವು ದೇಶದ ಸಹೋದರತ್ವಕ್ಕೆ ವಿರುದ್ಧವಾಗಿದೆ. ಇದು ನಮ್ಮ ಗಂಗಾ-ಜಮುನಾ ತೆಹಜೀಬ್ ಅನ್ನು ಕಳೆದುಕೊಳ್ಳುವಂತೆ ಮಾಡುತ್ತದೆ. ಇದು ಯೋಜಿತ ಪಿತೂರಿಯಾಗಿದ್ದು, ಏಕೆಂದರೆ ಉತ್ತರ ಪ್ರದೇಶದ ಚುನಾವಣೆಯನ್ನು 13 ರಂದು ನಡೆಸಬೇಕಾಗಿತ್ತು, ಅದು 20 ಕ್ಕೆ ಬದಲಾಗಿದೆ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಕಳೆದ ವಾರ ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪುರಾತನ ಹಿಂದೂ ದೇವಾಲಯ ಇದೆಯೆ ಎಂದು ವಕೀಲ ಕಮಿಷನರ್ ಮೂಲಕ ಮಸೀದಿಯಲ್ಲಿ ಸಮೀಕ್ಷೆ ನಡೆಸಲು ಆದೇಶಿಸಿದ್ದ ಸಂಭಾಲ್ ನ್ಯಾಯಾಲಯದ ತೀರ್ಪಿನ ವಿರುದ್ಧ ಶಾಹಿ ಜಾಮಾ ಮಸೀದಿಯ ಉಸ್ತುವಾರಿಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಕ್ಕೆ ಮೊದಲು ಉತ್ತರ ಪ್ರದೇಶ ಸರ್ಕಾರ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಆರಾಧನಾ ಸ್ಥಳಗಳ ಕಾಯಿದೆ (1991) ಜಾರಿಯಲ್ಲಿದ್ದರೂ ಮಸೀದಿಯ ಸಮೀಕ್ಷೆಗೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದೆ ಎಂದು ಲೋಕಸಭೆಯಲ್ಲಿ ನೀಡಿದ ಹೇಳಿಕೆಯಲ್ಲಿ ಅಖಿಲೇಶ್ ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

ಈ ಸರ್ಕಾರಕ್ಕೆ ಸಂವಿಧಾನದಲ್ಲಿ ನಂಬಿಕೆ ಇಲ್ಲ ಎಂದು ನಾವು ಸುಮ್ಮನೆ ಹೇಳುತ್ತಿಲ್ಲ. ಆರಾಧನಾ ಸ್ಥಳಗಳ ಕಾಯಿದೆ ಇರುವಾಗ, ಸಂಭಾಲ್‌ನಲ್ಲಿರುವ ಶಾಹಿ ಜಾಮಾ ಮಸೀದಿ ವಿರುದ್ಧ ಅರ್ಜಿ ಸಲ್ಲಿಸಲಾಯಿತು. ನವೆಂಬರ್ 19 ರಂದು, ಅದೇ ದಿನ ಇನ್ನೊಂದು ಕಡೆ ಅರ್ಜಿ ಸಲ್ಲಿಸುವ ಮೊದಲೇ ಮಸೀದಿಯ ಸಮೀಕ್ಷೆಯ ಆದೇಶವನ್ನು ರವಾನಿಸಲಾಯಿತು. ಅದಾಗಿ ಸಂಭಾಲ್ ಜಿಲ್ಲಾಡಳಿತ ಮತ್ತು ಪೊಲೀಸರು ಎರಡೇ ಎರಡು ಗಂಟೆಗಳ ಅಂತರದಲ್ಲಿ ಸಮೀಕ್ಷೆಗೆ ಆಗಮಿಸಿರುವುದು ಆಘಾತಕಾರಿಯಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

“ಜಾಮಾ ಮಸೀದಿ ಸಮಿತಿ ಮತ್ತು ಇತರ ಮಧ್ಯಸ್ಥಗಾರರು ಸಮೀಕ್ಷೆಗೆ ಸಹಕರಿಸಿದ್ದಾರೆ. 2.5 ಗಂಟೆಗಳ ನಂತರ ಸರ್ವೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುವುದಾಗಿ ಜಿಲ್ಲಾಡಳಿತ ತಿಳಿಸಿದೆ. ಆದರೆ ನವೆಂಬರ್ 22 ರಂದು ಶುಕ್ರವಾರ ಪ್ರಾರ್ಥನೆ ಸಲ್ಲಿಸಲು ಜನರು ಬಂದಾಗ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ಒಳಗೆ ಪ್ರಾರ್ಥನೆ ಸಲ್ಲಿಸಲು ಸಾಧ್ಯವಾಗಲಿಲ್ಲ. ಜನರು ಶಾಂತರಾಗಿ ಪ್ರಾರ್ಥನೆ ಸಲ್ಲಿಸಿದರು. ನವೆಂಬರ್ 29 ರಂದು ನ್ಯಾಯಾಲಯದ ದಿನಾಂಕವನ್ನು ನಿಗದಿಪಡಿಸಲಾಗಿತ್ತು ಮತ್ತು ಶಾಹಿ ಜಾಮಾ ಮಸೀದಿ ಸಮಿತಿಯು ಪ್ರಕರಣಕ್ಕೆ ಸಿದ್ಧತೆ ನಡೆಸಿದೆ. ಆದಾಗ್ಯೂ, ನವೆಂಬರ್ 23 ರ ರಾತ್ರಿ, ಮರುದಿನ [ನವೆಂಬರ್ 24] ಮತ್ತೊಂದು ಸಮೀಕ್ಷೆ ನಡೆಸಲಾಗುವುದು ಎಂದು ಆಡಳಿತ ಹೇಳಿದೆ.”

“ಒಂದು ಸಮೀಕ್ಷೆ ಪೂರ್ಣಗೊಂಡಿರುವಾಗ ಮತ್ತೊಂದು ಸಮೀಕ್ಷೆ ಏಕೆ ಬೇಕು ಎಂದು ಮಸೀದಿ ಸಮಿತಿ ಕೇಳಿದ್ದು, ಎರಡನೆಯದನ್ನು ಮಾಡಬೇಕಾದರೆ ನ್ಯಾಯಾಲಯದ ಆದೇಶವನ್ನು ಪಡೆಯಬೇಕು ಎಂದು ಹೇಳಿತ್ತು. ಆದರೆ ಜಿಲ್ಲಾಡಳಿತ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಸರ್ವಾಧಿಕಾರಿ ಧೋರಣೆ ಅನುಸರಿಸಿ ಮರುದಿನವೇ ಮಸೀದಿಗೆ ಬಂದಿತ್ತು. ಅವರನ್ನು ಮತ್ತೆ ಮಸೀದಿ ಸಮಿತಿ ಸದಸ್ಯರು ಸಮೀಕ್ಷೆಗಾಗಿ ಒಳಗೆ ಕರೆದೊಯ್ದರು. ಸಮೀಕ್ಷೆ ನಡೆಸಿದ ನಂತರ, ಸಮೀಕ್ಷೆಯ ಕಾರಣವನ್ನು ತಿಳಿಯಲು ಜನರು ಜಮಾಯಿಸಿದ್ದು, ಈ ವೇಳೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ” ಎಂದು ಯಾದವ್ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ

“ಆದರೆ ಸುಮಾರು 1.5 ಗಂಟೆಗಳ ನಂತರ ಜನರು ಅಲ್ಲಿ ಜಮಾಯಿಸಿದರು ಮತ್ತು ಸಮೀಕ್ಷೆಯ ಕಾರಣವನ್ನು ತಿಳಿಯಲು ಪ್ರಯತ್ನಿಸಿದರು. ಅಲ್ಲಿ ನೆರೆದಿದ್ದ ಜನರನ್ನು ಸರ್ಕಲ್ ಆಫೀಸರ್ ನಿಂದಿಸಿ ಲಾಠಿ ಚಾರ್ಜ್ ಮಾಡಿ ಗಾಯಗೊಳಿಸಿದ್ದಾರೆ. ಇದನ್ನು ವಿರೋಧಿಸಿ ಕೆಲವರು ಕಲ್ಲು ತೂರಾಟ ನಡೆಸಿದರು, ನಂತರ ಪೊಲೀಸರು ತಮ್ಮ ಸರ್ಕಾರಿ ಮತ್ತು ಖಾಸಗಿ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿದರು – ಅದರ ವೀಡಿಯೊ ರೆಕಾರ್ಡಿಂಗ್‌ಗಳಿವೆ – ಮತ್ತು ಇದರಿಂದಾಗಿ ಹತ್ತಾರು ಜನರು ಗಾಯಗೊಂಡರು. ಅಗತ್ಯ ವಸ್ತುಗಳನ್ನು ಖರೀದಿಸಲು ಮನೆಯಿಂದ ಹೊರಟ 5 ಅಮಾಯಕರು ಕೊಂದರು. ಸಂಭಾಲ್‌ನಲ್ಲಿ ಶಾಂತಿ ಕದಡಲು ಅರ್ಜಿ ಸಲ್ಲಿಸಿದವರಷ್ಟೇ ಪೊಲೀಸರು ಮತ್ತು ಜಿಲ್ಲಾಡಳಿತ ಕಾರಣ. ಅವರನ್ನು ಅಮಾನತುಗೊಳಿಸಬೇಕು ಮತ್ತು ಪೊಲೀಸರು ಮತ್ತು ಜಿಲ್ಲಾಡಳಿತದ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಬೇಕು. ಹೀಗೆ ಮಾಡಿದರೆ ಜನರಿಗೆ ನ್ಯಾಯ ಸಿಗುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಕಾನೂನುಬಾಹಿರ ಘಟನೆಗಳು ನಡೆಯುವುದಿಲ್ಲ” ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಮಂಗಳವಾರ ಸದನದ ಕಲಾಪ ಆರಂಭವಾದಾಗ ಪ್ರತಿಪಕ್ಷಗಳು ಸಂಭಾಲ್ ಕುರಿತು ಚರ್ಚೆಗೆ ಒತ್ತಾಯಿಸಿದ ನಂತರ ಶೂನ್ಯ ವೇಳೆಯಲ್ಲಿ ಅಖಿಲೇಶ್ ಯಾದವ್ ಈ ಭಾಷಣ ಮಾಡಿದ್ದಾರೆ. ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಪ್ರತಿಪಕ್ಷ ಸದಸ್ಯರು ಸಂಭಾಲ್ ಕುರಿತು ಚರ್ಚೆ ನಡೆಸುವಂತೆ ಘೋಷಣೆ ಕೂಗಿದರು. ಆದರೆ ಶೂನ್ಯವೇಳೆಯಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಪ್ರತಿಪಕ್ಷದ ಸದಸ್ಯರು ಕೆಲಕಾಲ ಸಭಾತ್ಯಾಗ ಮಾಡಿದರೂ, ಪ್ರಶ್ನೋತ್ತರ ಅವಧಿಯ ಕೆಲ ಹೊತ್ತಿನಲ್ಲೇ ಸದನಕ್ಕೆ ಮರಳಿದರು.

ಸಂಭಾಲ್ ಘಟನೆಯನ್ನು ಅಖಿಲೇಶ್ ಯಾದವ್ ಮಾತ್ರವಲ್ಲದೆ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಂಸದ ಇ.ಟಿ. ಮೊಹಮ್ಮದ್ ಬಶೀರ್, ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ. ಈ ವೇಳೆ ಅವರು, 1991 ರ ಪೂಜಾ ಸ್ಥಳಗಳ ಕಾಯಿದೆಯು ಈಗ ಬೆದರಿಕೆಯಲ್ಲಿದೆ ಎಂದು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.

“ಆ ಪ್ರಮುಖ ಕಾನೂನು (ಆರಾಧನೆಯ ಸ್ಥಳಗಳ ಕಾಯಿದೆ) ಈಗ ಜೀವನ್ಮರಣದ ನಡುವೆ ಇದೆ. ಸಂಭಾಲ್ ಮಸೀದಿ ಪ್ರಕರಣದಲ್ಲಿ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಈ ದೇಶದಲ್ಲಿ ಶಾಂತಿಯುತ ಸಹಬಾಳ್ವೆ ದಿನದಿಂದ ದಿನಕ್ಕೆ ಕಷ್ಟಕರವಾಗುತ್ತಿರುವುದು ಆಘಾತಕಾರಿಯಾಗಿದೆ. ನಮ್ಮ ಜಾತ್ಯತೀತತೆಯನ್ನು ಹೊಡೆದುಹಾಕಲು ಈ ರೀತಿಯ ಕೆಲಸಗಳು ನಡೆಯುತ್ತಿವೆ” ಎಂದು ಬಶೀರ್ ಹೇಳಿದ್ದಾರೆ.

ಬಾಬರಿ ಮಸೀದಿ ಧ್ವಂಸದ ನಂತರದ ಹಿಂಸಾಚಾರವನ್ನು ಉಲ್ಲೇಖಿಸಿದ ಬಶೀರ್, “ಒಂದು ಬಾಬರಿ ಮಸೀದಿಯ ಬದಲಿಗೆ, ಈಗ ಈ ರೀತಿಯ ದುಷ್ಟರು ಹೆಚ್ಚು ಹೆಚ್ಚು ಬಾಬರಿ ಮಸೀದಿಯ ಪರಿಸ್ಥಿತಿಯನ್ನು ನಿರ್ಮಿಸಲು ಹೊರಟಿದ್ದಾರೆ” ಎಂದು ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಸಮಾಜವಾದಿ ಸಂಸದ ರಾಮ್ ಗೋಪಾಲ್ ಯಾದವ್ ಅವರು ರಾಜ್ಯಸಭೆಯಲ್ಲೂ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಮತದಾರರನ್ನು ಮತದಾನ ಮಾಡದಂತೆ ತಡೆಹಿಡಿಯಲಾಗಿದೆ ಎಂದು ಆರೋಪದ ಗಮನ ಬೇರೆಡೆ ಸೆಳೆಯಲು ಸಂಭಾಲ್ ಮಸೀದಿಯಲ್ಲಿ ಸಮೀಕ್ಷೆ ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಮೊನ್ನೆ ನಡೆದ ಚುನಾವಣೆಗಳಲ್ಲಿ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪೊಲೀಸರು ಯಾರಿಗೂ ಮತದಾನ ಮಾಡಲು ಅವಕಾಶ ನೀಡಲಿಲ್ಲ. ಅವರು ಬಲವಂತವಾಗಿ ಚುನಾವಣೆಯನ್ನು ಕೈಗೆತ್ತಿಕೊಂಡರು ಎಂದು ನಾನು ಮತ್ತು ಅನೇಕ ಜನರು ನಂಬಿದ್ದೇವೆ. ಅದರಿಂದ ಗಮನ ಬೇರೆಡೆ ಸೆಳೆಯಲು ಇದೆಲ್ಲವನ್ನೂ ಯೋಜನಾಬದ್ಧವಾಗಿ ಮಾಡಲಾಗಿದೆ” ಎಂದರು. ಈ ವೇಳೆ ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಗೋಪಾಲ್ ಯಾದವ್ ಅವರನ್ನು ಅಡ್ಡಿಪಡಿಸಿ, ಚುನಾವಣೆಯ ಕುರಿತು ಅವರ ಹೇಳಿಕೆಗಳು ದಾಖಲೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ಹಿಂಸಾಚಾರ ಪೀಡಿತ ಸಂಭಾಲ್‌ಗೆ ಭೇಟಿ ನೀಡಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...